Homeಮುಖಪುಟಶಾಸ್ತ್ರೀಯ 1: ಪರಂಪರೆಯ ವಸಾಹತೀಕರಣ ಮತ್ತು ಚರಿತ್ರೆಯ ಮರುಕಟ್ಟುವಿಕೆಯ ಅಗತ್ಯ

ಶಾಸ್ತ್ರೀಯ 1: ಪರಂಪರೆಯ ವಸಾಹತೀಕರಣ ಮತ್ತು ಚರಿತ್ರೆಯ ಮರುಕಟ್ಟುವಿಕೆಯ ಅಗತ್ಯ

ಲಿಖಿತ ಆಕರಗಳ ಒಡಲಲ್ಲಿ ಸುಪ್ತವಾಗಿರುವ ಇಂಜನಿಯರಿಂಗ್, ಕುಂಬಾರಿಕೆ, ಕಂಬಾರಿಕೆ, ಚಮ್ಮಾರಿಕೆ, ಬಡಿಗತನ, ಅಕ್ಕಸಾಲಿ ಇತ್ಯಾದಿ ಉದ್ಯಮಗಳನ್ನು ಮತ್ತು ಅವರ ಭೌದ್ದಿಕತೆಯನ್ನು ಯಾವ ಪೇಟೆಂಟ್ ಇಲ್ಲದೇ ಹೈಜಾಕ್ ಮಾಡಿದ ಕಾಲಘಟ್ಟದ ಸತ್ಯವನ್ನು ಈಗ ಪುನರುಜ್ಜೀವನಗೊಳಿಸಬೇಕಿದೆ.

- Advertisement -
- Advertisement -

ಭಾರತದಲ್ಲಿ ಆಧುನಿಕ ಕಾಲಘಟ್ಟದಲ್ಲಿ ಚರಿತ್ರೆ ರಚನೆಯಾಗಲು ಬಹುಮುಖ್ಯವಾದ ಆಕರಗಳೆಂದರೆ ಶಾಸನಗಳು. ಕರ್ನಾಟಕ ಚರಿತ್ರೆ ಮತ್ತು ಸಾಂಸ್ಕೃತಿಕ ಇತಿಹಾಸದ ನುಡಿ ನಿರೂಪಣೆಯೂ ವಸಾಹತೀಕರಣದ ಫಲ. ಬಿ.ಎಲ್.ರೈಸ್, ಇ.ಪಿ.ರೈಸ್, ಕರ್ನಲ್ ಮೆಕೆಂಝಿ ಮುಂತಾದ ಬ್ರಿಟಿಷ್ ಮಿಷನರಿಗಳಿಗೆ ಸೇರಿದ ಈ ವ್ಯಕ್ತಿಗಳಂತೆ ಹಲವರು ಸಂಗ್ರಹ ಮಾಡಿದ ಬಹುಸಂಖ್ಯೆಯ ಶಾಸನಗಳು ಮತ್ತು ಹಸ್ತಪ್ರತಿಗಳು ಕನ್ನಡ ನಾಡಿನ ಗತಕಾಲದ ಚಾರಿತ್ರಿಕ ಚಹರೆಯ ಮುಖ್ಯವಾದ ಸಾಮಗ್ರಿಗಳು.

ಬ್ರಿಟಿಷ್ ವಸಾಹತುಶಾಹಿ ರಚನೆಗಳು ಪರಂಪರೆಯೊಂದಿಗೆ ಶಾಸನ ಮತ್ತು ಹಸ್ತಪ್ರತಿಗಳನ್ನು ಮುಖಾಮುಖಿ ಮಾಡಿದವು. ಆದರ ಮೊದಲ ಅಧ್ಯಯನದ ಈ ಘಟ್ಟದಲ್ಲಿ ಸಂಗ್ರಹ, ಸಂಪಾದನೆ, ವಿವರಣೆ ನೆಲೆಯಲ್ಲಿ ತನ್ನ ಚಹರೆಯನ್ನು ಗುರುತಿಸಿಕೊಂಡಿತು. ಈ ಚರಿತ್ರೆಕಾರರ ಮಾದರಿಯಲ್ಲಿ ನಮ್ಮ ದೇಸಿ ವಿದ್ವಾಂಸರು ಎರಡನೇ ಕಾಲಘಟ್ಟದಲ್ಲಿ ಆಕರಮುಖಿ ಅಧ್ಯಯನಕ್ಕೆ ತೆರೆದುಕೊಂಡರು. ಆದರೆ ಬ್ರಿಟಿಷ್ ಸಾಮ್ರಾಜ್ಯಶಾಹಿ ಭೌದ್ದಿಕ ಅಹಂಕಾರಿಗಳು ನಮ್ಮ ನೆಲದ ನಿಜ ಚರಿತ್ರೆಯನ್ನು ರಾಜಕೀಯ ಕಾರಣಗಳಿಗಾಗಿ ಬಳಸಿಕೊಂಡವು.

ಇದರ ಮುಂದುವರಿಕೆಯಾಗಿ ಕನ್ನಡದ ಅಕ್ಷರ ಕಲಿತುಕೊಂಡ ಇಂಗ್ಲೀಷ್ ಶಿಕ್ಷಣ ಪಡೆದ ದೇಸಿ ವಿದ್ವಾಂಸರ ಪಡೆಯು ಸಾಮ್ರಾಜ್ಯಶಾಹಿ ಬೌದ್ಧಿಕ ರಾಜಕಾರಣದ ಜೊತೆ ಒಳರಾಜಿ ಮಾಡಿಕೊಂಡಂತೆ ಮೇಲ್‌ಚಹರೆಯ ಚರಿತ್ರೆಯ ಬರೆಹಕ್ಕೆ, ಇಲ್ಲವೇ ಧರ್ಮಾಧಾರಿತ ಚರಿತ್ರೆಯ ರಚನೆಗೆ ಮುಂದಾದರು. ಇದೊಂದು ಬಗೆಯಲ್ಲಿ ಒಂದು ಕೋಮಿನ ಚರಿತ್ರೆ, ಒಂದು ವರ್ಗದ ಚರಿತ್ರೆ ಆಗಿದ್ದುಕೊಂಡು ಸಂಸ್ಕೃತಿಯ ರೂಪದಂತೆ ನಮ್ಮೆದುರಿಗೆ ಕಾಣುತ್ತಿದೆ ಅಷ್ಟೇ.

ಕರ್ನಾಟಕದ ಶಾಸನ, ಹಸ್ತಪ್ರತಿ, ನಾಣ್ಯ ಮತ್ತು ಸ್ಮಾರಕಗಳ ಸಂಶೋಧನೆ ಅಧ್ಯಯನಗಳು ವಿಭಿನ್ನ ಆಯಾಮಗಳಲ್ಲಿ ನಡೆದಿಲ್ಲ. ಬಹುತೇಕ ಕೆಳ ಚಲನೆಯ ಸತ್ಯಗಳು ಗೈರುಹಾಜರಿಯಲ್ಲಿವೆ. ಶಾಸನದಂತಹ ರಾಜಶಾಹಿ ಕಾನೂನು ಬರಹದ ಒಳಗಡೆ ಸಂಸ್ಕೃತಿ ರೂಪಿಸುವ ಜನ ಸಮುದಾಯದ ಇತಿಹಾಸ ಇದೆಯೆಂಬುದು ಮುಖ್ಯ. ಸಬಾಲ್ಟ್ರನ್ ನೆಲೆಯಲ್ಲಿ ಅದು ಕೇವಲ ಸಾಹಿತ್ಯದ ಅಧ್ಯಯನವಾಗಿದೆಯೇ ಹೊರತು ಚರಿತ್ರೆಯ ಅಧ್ಯಯನವು ಈಗತಾನೆ ಆರಂಭವಾಗಿದೆ ಅಷ್ಟೇ. ಆದರೆ ಇದು ತೋರುಂಬ ಲಾಭ. ತಳಸಮುದಾಯ ಮತ್ತು ಹಿಂದುಳಿದ ವರ್ಗಗಳ ಲೋಕದಿಂದ ಬಂದ ಬೌದ್ಧಿಕ ಜಗತ್ತು ಶಾಸನ, ನಾಣ್ಯ, ಹಸ್ತಪ್ರತಿಗಳ ಸಬಾಲ್ಟ್ರನ್ ಮಾದರಿಯ ಫಲಿತಗಳನ್ನು ನಿರೂಪಿಸಬೇಕಾದ ತುರ್ತು ಇದೆ. ಶಾಸನದಂತಹ ಶಾಸ್ತ್ರೀಯ ಭೌತಿಕ ಆಕರಗಳಿಗೆ ಅಂತರ್‌ಶಿಸ್ತೀಯ ನೆಲೆಯಿಂದ, ಅವುಗಳ ಆಂತರಿಕ ಸಾಂಸ್ಕೃತಿಕ ರಾಜಕಾರಣದ ಸ್ವರೂಪವನ್ನು ಕಟ್ಟಿಕೊಡಬೇಕು.

ವೀರಗಲ್ಲು, ಮಾಸ್ತಿಗಲ್ಲು, ನಿಸಧಿಗಲ್ಲುಗಳನ್ನು ನಮ್ಮ ಪರಂಪರೆಯ ಚರಿತ್ರೆಯ ಹೆಮ್ಮೆ ಎಂದು ಕಳೆದ ಶತಮಾನದುದ್ದಕ್ಕೂ ಚರಿತ್ರೆ ಬರೆದವರು ಆಖ್ಯಾನ ಮಾಡಿದ್ದಾರೆ. ವೀರ ಮರಣವಾದವರು ಯಾವ ಸಾಮುದಾಯಿಕ ಹಿನ್ನಲೆಯಿಂದ ಬಂದವರು? ಅವರ ನೆಲೆ- ಹಿನ್ನಲೆಗಳೇನು? ಪ್ರಭುತ್ವದ ರಚನೆಗೆ ಅವರ ಕೊಡುಗೆ ಏನು? ಹಾಗೂ ಪ್ರಭುತ್ವದಲ್ಲಿ ಅವರಿಗಿದ್ದ ಸ್ಥಾನಮಾನಗಳೇನು? ಎಂಬ ಸತ್ಯಗಳು ಪರದೆಯ ಹಿಂದೆ ಉಳಿದಿವೆ. ಒಂದು ಪ್ರಭುತ್ವದ ರಚನೆಗೆ ಕಾರಣರಾದ ಈ ವೀರರ ಹೊಸ ಚರಿತ್ರೆಯನ್ನು ಕಟ್ಟಬೇಕಿದೆ. ನಾಡಿನ ತುಂಬ ಕಾಣುವ ಮಾಸ್ತಿಗಲ್ಲುಗಳು ಒಂದು ದೇಶದ ಹೆಮ್ಮೆ ಆಗಬಲ್ಲುವೇ?

ಅದೆಷ್ಟೋ ಮಹಿಳೆಯರ ಪ್ರಾಣಗಳು ಆಹುತಿಯಾದ ನೆಲೆಗಳನ್ನು ಮತ್ತೆ ಮತ್ತೆ ವರ್ತಮಾನದ ಸಂದರ್ಭದಲ್ಲಿಟ್ಟು “ರಿಚೆಕ್” ಮಾಡಬೇಕಿದೆ. ಧರ್ಮದ ಚೌಕಟ್ಟಿನೊಳಗಡೆ ನಿಸಧಿ ಮರಣ ಹೊಂದಿದ ಅಮಾಯಕ ಧರ್ಮ ಅನುಸರಣೆಕಾರರ ಹಿಂದಿರುವ ಪ್ರಲೋಭನೆಗಳನ್ನು ಈ ಕಾಲದಲ್ಲಿ ಅಧ್ಯಯನ ಮಾಡಬೇಕಿದೆ. ವಾಸ್ತವವಾಗಿ ಇಂತಹ ಸ್ಮಾರಕಗಳ ಆಂತರಿಕ ಕವಾಟದಲ್ಲಡಗಿದ ಶೋಷಣೆಯ ಸ್ವರೂಪವನ್ನು ಪ್ರತಿಪಾದಿಸಬೇಕಾಗಿದೆ. ಈ ನೆಲದಲ್ಲಿ ಶಾಸ್ತ್ರೀಯ (ಕ್ಲಾಸಿಕಲ್) ಆಗಿರಲು ಯಾವ ಆಕರಕ್ಕೆ ಸಾಧ್ಯವಿದೆ? ನಿಜವಾಗಿಯೂ ಅದು ಮೊದಲು ದೇಸಿ, ಜನಪದ, ಜನರೂಪಿತ. ಇಂತಹ ಸೈದ್ಧಾಂತಿಕ ಸಂಶ್ಲೇಷಣೆಯನ್ನು ನಮ್ಮ ಪಂಡಿತಮಾನ್ಯ ಚರಿತ್ರೆಕಾರರು ಗಮನಿಸಲೇ ಇಲ್ಲ. ಅಥವಾ ಮುಸುಕು ಹಾಕಿಟ್ಟಿರುವುದು ನಿಚ್ಚಳವಾಗಿದೆ.

ಶಾಸನ ಇತ್ಯಾದಿ ಚರಿತ್ರೆಯ ಆಕರಗಳು ಎಡೆಪಡೆಯುವ ಹಿಂದಣ ಹುನ್ನಾರಗಳನ್ನು ವಸಾಹತು ಮತ್ತು ವಸಾಹತೋತ್ತರ ಸಾಮಾಜಿಕ ಸಂದರ್ಭಗಳ ಜೊತೆ ಹಾಜರುಪಡಿಸಬೇಕಾಗುತ್ತದೆ. ಆಕರ ಸಾಮಗ್ರಿಗಳ ಆಂತರಿಕ ಆರ್ತನಾದದ ಕ್ಷೀಣ ಸ್ವರವನ್ನು ಎಲ್ಲರಿಗೂ ಕೇಳಿಸುವಂತೆ ಮಾಡಬೇಕಿದೆ. ಪ್ರಭುತ್ವಶಾಹಿ, ಪುರೋಹಿತಶಾಹಿಗಳ ಒಡಲಾಗಿವೆಯೆಂಬಂತೆ ತೋರುವ ಆಕರಗಳ ಒಳಗೆ ಈ ನೆಲದ ಮಕ್ಕಳ, ಶ್ರಮಜೀವಿಗಳ ಬಹುಧ್ವನಿಗಳು ಅಡಗಿವೆ. ಇಲ್ಲಿಯವರೆಗೂ ಚರಿತ್ರೆಯ ಅಧ್ಯಯನಗಳನ್ನು “ಯಜಮಾನ ಮಾದರಿ”ಯಲ್ಲಿ ತಂದಿಟ್ಟ ಪಳಯುಳಿಕೆಯನ್ನೆ ವಿಶ್ವವಿದ್ಯಾಲಯಗಳು ಸಂಶೊಧನೆಯ ವೈಧಾನಿಕತೆಯನ್ನಾಗಿ ಮಾಡಿಕೊಂಡ ದುರಂತವು ನಮ್ಮೆದುರಿಗಿದೆ. ವರ್ತಮಾನದ ಸಂದರ್ಭದಲ್ಲಿ ಪರ್ಯಾಯವಾಗಿ ಧರ್ಮ, ವರ್ಗ, ವರ್ಣ, ಲಿಂಗ ನಿಯಂತ್ರಣದಲ್ಲಿರುವ ಮೀಡಿಯಾ ಕಂಟ್ರೋಲ್‌ನ್ನು ಕಳಚಿಕೊಂಡು ಹೊಸರೂಪ ಧರಿಸಬೇಕಿದೆ.

ವಿಕಾಸ ನಾಗರಿಕತೆ ಸಂಸ್ಕೃತಿಯನ್ನು ಈ ನೆಲದಲ್ಲಿ ಕಟ್ಟಿದ ಸಮುದಾಯಗಳ ಪ್ರಾತಿನಿಧಿಕ ಆಕರ ಸಾಮಗ್ರಿಗಳು ಕರ್ನಾಟಕದ ಬೆಟ್ಟ-ಗುಡ್ಡಗಳಲ್ಲಿ ಹೇರಳವಾಗಿವೆ. ಇವು ಅಡವಿ ಮಕ್ಕಳ ಚರಿತ್ರೆಗಳಲ್ಲವೇ? ಜೊತೆಗೆ ಈ ಸಮುದಾಯಗಳು ರೂಪಿಸಿಕೊಂಡ ಭಾಷಿಕ ಸಂಕಥನವು ರೋಚಕವಾಗಿದೆ. ಭಾಷೆಯು ಕ್ಲಾಸಿಕಲ್ ಎಂದು ಶಾಸನಗಳ ಮುಖೇನ ಹೇಳುವಾಗಲೂ ಜನ ಭಾಷೆಯ ಸ್ವರೂಪವನ್ನು ಮುಖ್ಯವಾಗಿ ಗಮನಿಸಬೇಕು. ಶಾಸನೋಕ್ತ ವೃತ್ತಿಗಳ ಸಮಗ್ರ ಅಧ್ಯಯನ ಮಾಡುವುದಿರಲೀ ಪ್ರಾಸ್ತಾವಿಕ ಬರಹಗಳೂ ಧರ್ಮ ನಿಯಂತ್ರಣವಾದಿ ಚೌಕಟ್ಟಿನಲ್ಲಿ ಬಂಧಿಸಲ್ಪಟ್ಟಿವೆ. ಭಾಷೆಯನ್ನು ಕಾಪಿಟ್ಟುಕೊಂಡು ಬಂದ ಅಕ್ಷರೋದ್ಯಮದ ಸಂವಹನಗಳಾದ ಹಸ್ತಪ್ರತಿ, ನಾಣ್ಯ, ಶಾಸನಗಳ ಹಿಂದಿನ ಜನರ ಶ್ರಮದ ನೆಲೆಯನ್ನು ಬಿಡಿಸಬೇಕು.

ಹಾಗೆಯೇ ದೇವಾಲಯ ಮತ್ತು ರಥಗಳ ಮಹತ್ತರ ನಿರ್ಮಾಣ, ಕರಕುಶಲಗಾರಿಕೆ ಅಜ್ಞಾತ ಇಂಜಿನಿಯರಿಂಗ್ ಕುರಿತ ಯಾವ ಪಾಠಗಳನ್ನು ನಾವು ಕಲಿತಿದ್ದೇವೆ? ಹಾಗೆಯೇ ಕನ್ನಡ ರಾಜಮನೆತನಗಳ ಚರಿತ್ರೆಯಲ್ಲಿಯೂ ಕುಲದ ಕಾರಣಕ್ಕಾಗಿ ಪ್ರಸಿದ್ಧ ದೊರೆಗಳು ಅವರ ಲೋಕೋಪಯೋಗಿ ಕೆಲಸಗಳು ಪಠ್ಯಗಳಲ್ಲಿ ಗೈರುಹಾಜರಾದ ಕೆಲ ಪ್ರಸಂಗಗಳಿವೆ. ಇವೆಲ್ಲಾ ದೊಡ್ಡ ಪ್ರಶ್ನೆಗಳು.

ಭೂತ ಮತ್ತು ವರ್ತಮಾನದ ಸಂಬಂಧಗಳನ್ನು ಬೆಸೆಯುವ ತಳಸಮುದಾಯಗಳ ವೃತ್ತಿಪರತೆಯನ್ನು ಕಟ್ಟಿಕೊಡುವ ಕೆಲಸ ಸಾಕಷ್ಟಿದೆ. ನಮ್ಮ ಗತಕಾಲದ ಕೇಳು ಮತ್ತು ಹೇಳು ಪರಂಪರೆಯು ಶಾಸ್ತ್ರೀಯವಾದದ್ದು ಯಾವ ಸಂದರ್ಭದಲ್ಲಿ? ಎಂಬುದನ್ನು ಹುಡುಕಬೇಕು. ಲಿಖಿತ ಆಕರಗಳ ಒಡಲಲ್ಲಿ ಸುಪ್ತವಾಗಿರುವ ಇಂಜನಿಯರಿಂಗ್, ಕುಂಬಾರಿಕೆ, ಕಂಬಾರಿಕೆ, ಚಮ್ಮಾರಿಕೆ, ಬಡಿಗತನ, ಅಕ್ಕಸಾಲಿ ಇತ್ಯಾದಿ ಉದ್ಯಮಗಳನ್ನು ಮತ್ತು ಅವರ ಭೌದ್ದಿಕತೆಯನ್ನು ಯಾವ ಪೇಟೆಂಟ್ ಇಲ್ಲದೇ ಹೈಜಾಕ್ ಮಾಡಿದ ಕಾಲಘಟ್ಟದ ಸತ್ಯವನ್ನು ಈಗ ಪುನರುಜ್ಜೀವನಗೊಳಿಸಬೇಕಿದೆ. ಇಂತಹ ಕೆಲವು ಸಂಗತಿಗಳ ಕೆಲವು ಟಿಪ್ಪಣಿಗಳನ್ನು ಈ ಅಂಕಣದಲ್ಲಿ ಮಂಡಿಸುವ ಪ್ರಯತ್ನ ಮುಂದಿನ ಕಂತುಗಳಲ್ಲಿ ಮಾಡಲಾಗುತ್ತದೆ.

ಡಾ. ಜಾಜಿ ದೇವೇಂದ್ರಪ್ಪ, ಸಂಯೋಜಕರು, ಕನ್ನಡ ಸ್ನಾತಕೋತ್ತರ ಅಧ್ಯಯನ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗಂಗಾವತಿ


ಇದನ್ನೂ ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಚರಿತ್ರೆಯ ಮರು ಅವಲೋಕನ ಮಾಡುವ ವಿಧಾನ ಮತ್ತು ಸಬಾಲ್ಟ್ರನ್ ಅಧ್ಯಯನ ಇಂದಿನ ಅಗತ್ಯ… ಗತಕಾಲದ ಹೇಳು ಮತ್ತು ಕೇಳು ಸಂಪ್ರದಾಯ ಗಳು ಶಾಸ್ತ್ರೀಯ ಆದದ್ದು ಎಂದು ಎಂಬುದರ ಅವಲೋಕನ ಮತ್ತು ರೀಚೆಕ್… ಹೀಗೆ ಅನೇಕ ವಿಚಾರಗಳನ್ನು ಶಾಸನ ಚರಿತ್ರೆಯ ಕುರಿತ ಡಾ. ಜಾಜಿ ದೇವೇಂದ್ರಪ್ಪ ಅವರ ಬರಹ ಅರ್ಥಪೂರ್ಣ….

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...