Homeನ್ಯಾಯ ಪಥಆ ಸಮಾಜಮುಖೀ ಬದುಕಿನ ಹೆಸರು 'ಶೌಕತ್ ಕೈಫಿ' : ಡಿ.ಉಮಾಪತಿಯವರು ಬರೆದ ಪ್ರೇಮಕಥೆ

ಆ ಸಮಾಜಮುಖೀ ಬದುಕಿನ ಹೆಸರು ‘ಶೌಕತ್ ಕೈಫಿ’ : ಡಿ.ಉಮಾಪತಿಯವರು ಬರೆದ ಪ್ರೇಮಕಥೆ

ಅರಸೊತ್ತಿಗೆ ಮತ್ತು ಅನ್ಯಾಯದ ಮೇಲೆ ದಾಳಿ ನಡೆಸಿದ್ದ 'ತಾಜ್' (ಮುಕುಟ) ಎಂಬ ಮತ್ತೊಂದು ಶಕ್ತಿಶಾಲಿ ಕವಿತೆಯನ್ನು ಕೈಫಿ ವಾಚಿಸಿದ್ದರು. ನಿಜಾಮ್ ಆಳ್ವಿಕೆಯ ನಗರದಲ್ಲಿ ಈ ಕವಿತೆ ಓದಲು ಎಂಟೆದೆ ಬೇಕಿತ್ತು ಎಂಬ ಸಂಗತಿಯೇ ಶೌಕತ್ ಅವರನ್ನು ಬಹುವಾಗಿ ಪ್ರಭಾವಿಸಿತ್ತು.

- Advertisement -
- Advertisement -

ಕಳೆದ ವಾರ ಮುಂಬಯಿಯಲ್ಲಿ ನಿಧನರಾದ ಶೌಕತ್ ಕೈಫಿ ಹೈದರಾಬಾದಿನ ಸಂಪ್ರದಾಯವಾದಿ ಮುಸ್ಲಿಂ ಕುಟುಂಬವೊಂದರ ಹುಡುಗಿ. ಪ್ರೇಮಕ್ಕಾಗಿ, ಮೌಲ್ಯಗಳಿಗಾಗಿ, ಸಿದ್ಧಾಂತಗಳಿಗಾಗಿ ಹೂಡಿದ ಬಂಡಾಯ, ಮಾಡಿದ ತ್ಯಾಗ, ತುಳಿದ ಹೊಸ ದಾರಿಯ ಸಂಘರ್ಷದ ಬದುಕು ಅವರದು..

ಪ್ರಗತಿಪರ ರಂಗಭೂಮಿ ಚಳವಳಿಯ ಜೊತೆಜೊತೆಗೆ ಬೆಸಗೊಂಡಿದ್ದವರು.. ಪ್ರೇಮಿಯಾಗಿ ಪತಿಯಾದ ನಂತರವೂ ಪ್ರೇಮಿಯಾಗಿ, ಕಡೆತನಕ ಆತ್ಮೀಯ ಸಖನಾಗಿ ಉಳಿದ ಜನಪರ ಕವಿ ಕೈಫಿ ಆಜ್ಮಿ ಬಗೆಗಿನ ಅವರ ಪ್ರೀತಿಯ ಒರತೆ ತಾವು 93ರ ವಯಸ್ಸಿನಲ್ಲಿ ಕಡೆಯ ಉಸಿರೆಳೆವತನಕ ಬತ್ತಲಿಲ್ಲ.

1947ರ ಫೆಬ್ರವರಿಯಲ್ಲಿ ಹೈದರಾಬಾದಿನಲ್ಲಿ ನಡೆದ ಅಖಿಲ ಭಾರತ ಉರ್ದು ಪ್ರಗತಿಪರ ಬರೆಹಗಾರರ ಸಮ್ಮೇಳನದಲ್ಲಿ ಭಾಗವಹಿಸಲು ಜನಪರ ಕವಿಗಳನೇಕರು ಅಲ್ಲಿ ಸೇರಿದ್ದಾಗ ಶುರುವಾಗಿತ್ತು ಶೌಕತ್ ಪ್ರೇಮಗಾಥೆ. ಹಲವು ಕವಿಗಳನ್ನು ಶೌಕತ್ ಅವರ ಸಮೀಪ ಬಂಧುವಿನ ಮನೆಯಲ್ಲಿ ಉಳಿಸಲಾಗಿತ್ತು. ಈ ಕವಿಗಳ ವಿನಮ್ರತೆ ಎಳೆಹರೆಯದ ಶೌಕತ್ ಅವರನ್ನು ಮಂತ್ರಮುಗ್ಧಗೊಳಿಸಿತ್ತು.

ಯಾದ್ ಕೀ ರೆಹಗುಝಾರ್ ಎಂಬುದು ಅವರ ಆತ್ಮಚರಿತ್ರೆಯ ಹೊತ್ತಿಗೆ. ಅದರ ಇಂಗ್ಲಿಷ್ ಅನುವಾದಿತ ಅವತರಣಿಕೆ ’Kaifi and I’. ಈ ಪುಸ್ತಕದಲ್ಲಿ ತಮ್ಮ ಜೀವನ ಪಯಣದ ವಿವರಗಳನ್ನು ಅವರು ದಾಖಲಿಸಿದ್ದಾರೆ.

ಕೈಫಿ ಅಂದು ಸಂಜೆ ಓದಿದ ಕವಿತೆ ಔರತ್ (ಹೆಣ್ಣು). ಗಂಡಾಳಿಕೆಯನ್ನು ಪ್ರಶ್ನಿಸಿದ್ದ ಕವಿತೆ.

ನಾ ದಹಿಸುವ ಅದೇ ಬೆಂಕಿಯಲ್ಲಿ ಉರಿಯಬೇಕಿದೆ ನಿನಗೆ,
ಎದ್ದೇಳು ಜೀವದರಸಿಯೇ ನನ್ನ ಹೆಜ್ಜೆಯಲ್ಲೇ ಹೆಜ್ಜೆ ಇಡಬೇಕಿದೆ ನಿನಗೆ
(ಜಿಸ್ ಮೇಂ ಜಲ್ತಾ ಹೂಂ ಉಸೀ ಆಗ್ ಮೇ ಜಲ್ನಾ ಹೈ ತುಝೇ
ಉಠ್ ಮೇರೀ ಜಾಂ ಮೇರೇ ಸಾಥ್ ಹೀ ಚಲ್ನಾ ಹೈ ತುಝೇ)

ತನ್ನನ್ನೇ ಕುರಿತು ಕೈಫಿ ಬರೆದಿದ್ದ ಕವಿತೆಯಿದು ಎನ್ನಿಸಿಬಿಟ್ಟಿತ್ತು ಶೌಕತ್‍ಗೆ. ಮಹಿಳೆಯನ್ನು ಗೌರವಿಸುವ ಪುರುಷನೇ ತನಗೆ ಸೂಕ್ತ ಆತ್ಮಸಂಗಾತಿ ಎಂದು ಆ ಎಳೆ ಯುವತಿ ಭಾವಿಸಿದ್ದರು. ಮೊದಲ ನೋಟದಲ್ಲೇ ಅಂಕುರಿಸಿದ ಪ್ರೇಮ ಅದು. ಮುಷಯಿರಾದ ನಂತರ ಕವಿಗಳ ಹಸ್ತಾಕ್ಷರಗಳಿಗಾಗಿ ಬೇಟೆ ನಡೆದಿತ್ತು. ಕೈಫಿ ಆಜ್ಮಿಯ ಮುತ್ತಿದ್ದ ದೊಡ್ಡ ಗುಂಪು ಕರಗಲೆಂದು ಕಾದ ಶೌಕತ್, ಮತ್ತೊಬ್ಬ ಗಣ್ಯ ಕವಿ ಅಲಿ ಸರ್ದಾರ್ ಜಾಫ್ರಿ ಬಳಿ ನಡೆದರು. ಆ ದಿನಗಳಲ್ಲಿ ಜಾಫ್ರಿ ಅವರ ವರ್ಚಸ್ಸು ಯಾವುದೇ ಕ್ರಾಂತಿಕಾರಿಗಿಂತ ಕಡಿಮೆ ಇರಲಿಲ್ಲ. ಶೌಕತ್ ನಡೆಯನ್ನು ಕೈಫಿ ಕಣ್ಣಂಚು ಗಮನಿಸಿತ್ತು.

ಕಡೆಗೂ ತಮ್ಮೆಡೆ ಸಾರಿ ಬಂದ ಶೌಕತ್ ಕೈಯಲ್ಲಿನ ಡೈರಿಯಲ್ಲಿ ಕಳಪೆ ಕವಿತೆಯ ಎರಡು ಪಂಕ್ತಿಗಳನ್ನು ಗೀಚಿದರು ಕೈಫಿ. ಈ ಸಪ್ಪೆ ಸಾಲುಗಳ ಯಾಕೆ ಬರೆದಿರಿ ಎಂದು ಮುಖ ಊದಿಸಿ ಕೇಳಿದ ಶೌಕತ್ ಅವರೆಡೆಗೆ ತುಂಟ ನಗು ಚಿಮ್ಮಿಸಿದರು ಕೈಫಿ. ಮೊದಲೇ ತನ್ನ ಬಳಿಗೆ ಬಾರದೆ ಸರ್ದಾರ್ ಜಾಫ್ರಿ ಕಡೆ ಹೋದೆಯಲ್ಲ ಅದಕ್ಕೆ ಎಂದರು.

ಅರಸೊತ್ತಿಗೆ ಮತ್ತು ಅನ್ಯಾಯದ ಮೇಲೆ ದಾಳಿ ನಡೆಸಿದ್ದ ‘ತಾಜ್’ (ಮುಕುಟ) ಎಂಬ ಮತ್ತೊಂದು ಶಕ್ತಿಶಾಲಿ ಕವಿತೆಯನ್ನು ಕೈಫಿ ವಾಚಿಸಿದ್ದರು. ನಿಜಾಮ್ ಆಳ್ವಿಕೆಯ ನಗರದಲ್ಲಿ ಈ ಕವಿತೆ ಓದಲು ಎಂಟೆದೆ ಬೇಕಿತ್ತು ಎಂಬ ಸಂಗತಿಯೇ ಶೌಕತ್ ಅವರನ್ನು ಬಹುವಾಗಿ ಪ್ರಭಾವಿಸಿತ್ತು.

ಮದುವೆ ಈಗಾಗಲೆ ಗೊತ್ತಾಗಿರುವ ಶೌಕತ್‍ಗೆ ಅಭಿನಂದನೆ ಹೇಳುವಂತೆ ಶೌಕತ್ ಅಕ್ಕ ಕೈಫಿ ಕಾಲೆಳೆದಿದ್ದರು. ಕವಿಯ ಮುಖ ಬಿಳುಚಿಕೊಂಡಿತು. ಕೈಫಿ ವಿವಾಹವೂ ಸಮೀಪಿಸಿತ್ತು. ಮದುವೆಯ ನಂತರ ನನ್ನನ್ನು ಮರೆತುಬಿಡುವಿ ಎಂದು ತಮಾಷೆ ಮಾಡಿದ ಕೈಫಿ ಮುಖ ಒಡನೆಯೇ ಗಂಭೀರವಾಯಿತು. ತಾನೂ ಮದುವೆಯಾಗುವುದಿಲ್ಲ ಎಂದು ಸಾರಿದರು. ಅಂದು ರಾತ್ರಿ ಇಬ್ಬರೂ ನಿದ್ರಿಸಲಿಲ್ಲ.

ಮರುದಿನ ಆಕೆಗೊಂದು ಭಾವತೀವ್ರ ಕವಿತೆ ಬರೆದು ಕಳಿಸಿದರು ಕೈಫಿ. ಅನುಮಾನ ಬಂದ ಶೌಕತ್ ತಾಯಿ ಇಬ್ಬರೂ ಕಲೆಯದಂತೆ ಕಣ್ಣಿಟ್ಟರು. ಭಾರ ಹೃದಯದಿಂದ ಮರುದಿನವೇ ಮುಂಬಯಿಗೆ ತೆರಳಿದರು ಕೈಫಿ. ದುಃಖದಿಂದ ಹುಚ್ಚಳಂತಾದರು ಶೌಕತ್. ಕೂಡಲೇ ಪತ್ರವೊಂದನ್ನು ಬರೆದರು- “ಕೈಫಿ, ಹೋಲಿಸಲಾಗದಷ್ಟು ಪ್ರೀತಿಸುತ್ತೇನೆ ನಿನ್ನನ್ನು. ಆಕಾಶ, ಪರ್ವತಗಳು, ನದಿಗಳು, ಜನರು, ದೇವದೂತರು ಕಡೆಗೆ ಪರಮೇಶ್ವರ ಸೇರಿದಂತೆ ಯಾರೆಂದರೆ ಯಾರೂ ಇದನ್ನು ಬದಲಾಯಿಸಲಾರರು… ನಿಮ್ಮವಳು ಮತ್ತು ಕೇವಲ ನಿಮ್ಮವಳಾದ ಶೌಕತ್”. ಕೈಫಿಯಿಂದ ಮಾರೋಲೆ ಬಂದಿತ್ತು. ತಮ್ಮ ರಕ್ತದಿಂದ ಬರೆದಿದ್ದರು.

ಈ ಉರ್ದು ಕವಿಗಳನ್ನು ನಂಬಬೇಡ ಕಣಮ್ಮ… ಕುರಿ ರಕ್ತದಿಂದಲೂ ಬರೆದಿರಬಹುದು ಎಂದು ಮಗಳ ಮನಸು ಬದಲಾಯಿಸಲು ನೋಡಿದ್ದರು ಶೌಕತ್ ತಂದೆ. ಆದರೆ ಮಗಳು ಜಗ್ಗಲಿಲ್ಲ. ಕಡೆಗೆ ಸೋತ ತಂದೆಯೇ ಯಾರಿಗೂ ಹೇಳದೆ ಮಗಳನ್ನು ಮುಂಬಯಿಗೆ ಕರೆದೊಯ್ದರು.

ಅಲ್ಲಿ ಕಾದಿತ್ತು ತೆರೆದ ತೋಳುಗಳ ಸ್ವಾಗತ. ತಡವಿಲ್ಲದೆ ನಡೆದಿತ್ತು ಮದುವೆ. ಭಾರತೀಯ ಕಮ್ಯುನಿಸ್ಟ್ ಪಾರ್ಟಿಯ (ಸಿಪಿಐ) ವತಿಯಿಂದ ಅದರ ನಾಯಕ ಬಿ.ಟಿ.ರಣದಿವೆ ಅವರು ನೂರು ರೂಪಾಯಿ ಉಡುಗೊರೆ ನೀಡಿದ್ದರು. ಈ ಲೈಲಾ ಮಜ್ನೂ ಜೋಡಿಯ ನಾಟಕ ಆರು ತಿಂಗಳೊಳಗೆ ಕೊನೆಯಾಗಿ ಪಕ್ಷಕ್ಕೆ ನೂರು ರುಪಾಯಿ ನಷ್ಟವಾಗುವಂತೆ ಆಗಕೂಡದು ಎಂಬ ಷರತ್ತನ್ನೂ ಅವರು ವಿಧಿಸಿದ್ದರು.

ಕೈಫಿ ಶಿಯಾ ಮತ್ತು ಶೌಕತ್ ಸುನ್ನಿ ಒಳಪಂಗಡಗಳಿಗೆ ಸೇರಿದ್ದರು. ಮದುವೆಗೆ ಎರಡೂ ಕಡೆಯ ಕಾಜಿಗಳ ಅಗತ್ಯವಿತ್ತು. ಆದರೆ ಇಬ್ಬರಿಗೆ ಕೊಡುವಷ್ಟು ಹಣವಿರಲಿಲ್ಲ. ಕೈಫಿ ತಾನೂ ಸುನ್ನಿ ಎಂದು ಸಾರಿದರು. ಒಬ್ಬ ಕಾಜಿಯೇ ಸಾಕಾಯಿತು. ಹಸಿದವರು, ತುಳಿಸಿಕೊಂಡವರಿಗಾಗಿ ಮಾನವೀಯ ತುಡಿತಗಳ ಹೊಸ ಸಮಾಜವನ್ನು ನಿರ್ಮಿಸಲು ಹೊರಟಿದ್ದ ಮುಂಬಯಿಯ ಅಂದಿನ ಎಲ್ಲ ಪ್ರಗತಿಪರರೂ ಈ ಮದುವೆಗೆ ಸಾಕ್ಷಿಗಳಾದರು.

ಮುರಿದ ಮಂಚ, ಪುಸ್ತಕಗಳು- ಪತ್ರಿಕೆಗಳ ಹರಡಿದ್ದ ಪುಟ್ಟ ಕೋಣೆಯಲ್ಲಿ ಮೊದಲ ರಾತ್ರಿ ಕಳೆಯಿತು. ಸಿಪಿಐ ಪೂರ್ಣಾವಧಿ ಕಾರ್ಯಕರ್ತರಾಗಿದ್ದ ಕೈಫಿಗೆ ತಿಂಗಳಿಗೆ ಸಿಗುತ್ತಿದ್ದ ಖರ್ಚಿನ ಹಣ ನಲವತ್ತೈದು ರೂಪಾಯಿ. ಮೂವತ್ತು ಅವರ ಊಟಕ್ಕೆ, ಹತ್ತು ಅವರ ಓಡಾಟಕ್ಕೆ.

ನಟನೆಯಲ್ಲಿ ತರಬೇತಿ ಇಲ್ಲದ ಶೌಕತ್ ಅವರನ್ನು ಹುರಿದುಂಬಿಸಿ ಪೃಥ್ವೀ ಥಿಯೇಟರ್ ಕಡೆಗೆ ಕಳಿಸಿದವರು ಸಿಪಿಐ ಪ್ರಧಾನಕಾರ್ಯದರ್ಶಿ ಪಿ.ಸಿ.ಜೋಶಿ. ಹಕೀಕತ್, ಉಮ್ರಾವ್ ಜಾನ್, ಬಾಝಾರ್, ಗರಂ ಹವಾ, ಸಲಾಂ ಬಾಂಬೆ ಮುಂತಾದ ಚಿತ್ರಗಳಲ್ಲಿ ಅವರ ಅಭಿನಯ ಜೀವಂತವಾಗಿ ಮೂಡಿತ್ತು.

ಅವರು ಅಭಿನಯಿಸಿದ ಮೊದಲ ನಾಟಕ ಇಸ್ಮತ್ ಚುಗ್ತಾಯಿ ಅವರ ಧಾನಿ ಬಾಂಕೇ. ಹೊಸತಾಗಿ ಜನಿಸಿದ್ದ ಸ್ವತಂತ್ರ ದೇಶದ ಸಾಮಾಜಿಕ ನೇಯ್ಗೆಯನ್ನು ಛಿದ್ರಗೊಳಿಸತೊಡಗಿದ್ದ ಹಿಂದೂ-ಮುಸ್ಲಿಂ ದಂಗೆಗಳು ಅದರ ವಸ್ತು ವಿಷಯ. ಭೀಷ್ಮಸಹಾನಿ, ಪೃಥ್ವೀರಾಜ ಕಪೂರ್, ಉಜ್ರಾ ಭಟ್, ಜೊಹ್ರಾ ಸೆಹಗಲ್ ಮುಂತಾದ ಮಹಾರಥಿಗಳಿದ್ದ IPTA ಆಂದೋಲನದ ಭಾಗವಾದರು.

ರಂಗಭೂಮಿಯ ಹೊಸ ಪರಿಭಾಷೆ ಮತ್ತು ಸೌಂದರ್ಯಪ್ರಜ್ಞೆಯ ಶೋಧನೆಯಲ್ಲಿ ತೊಡಗಿದ್ದ ಪ್ರತಿಬದ್ಧ ಯುವನಟರನ್ನು ಬೆನ್ನಿಗಿರಿಸಿಕೊಂಡು ದೇಶಸಂಚಾರ ಮಾಡಿದರು. ಜಾತಿಧರ್ಮ ಪಂಗಡಗಳ ಮಿತಿಗಳನ್ನು ಮೀರಿದ ಕಲೆಯ ಪ್ರತಿಪಾದಕರಾದರು. ನಾಲ್ಕೂ ನಿಟ್ಟಿನ ಬದಲಾವಣೆಗಳನ್ನು ಗ್ರಹಿಸಿ ಅಳವಡಿಸಿಕೊಂಡರು. ಸಿರಿವಂತ ತೌರನ್ನು ತೊರೆದು ಬಡ ಕಮ್ಯುನಿಸ್ಟ್ ಕವಿಯ ಕೈ ಹಿಡಿದರು. ಧನ ದೌಲತ್ತುಗಳಿಗೆ ಬೆನ್ನು ತೋರಿಸಿ, ಸ್ತ್ರೀಪುರುಷರು ಸಮಾನ ಸಖರೆಂದು ತಿಳಿದು ಸಮಾಜಕ್ಕಾಗಿ ಬದುಕುವ ಹೊಸ ಜಗತ್ತನ್ನು ಪ್ರವೇಶಿಸಿದರು. ಅಭಾವ, ಬಡತನದ ನಡುವೆ ಒಲೆ ಉರಿಸುತ್ತ ಮಕ್ಕಳ ಬೆಳೆಸುತ್ತ ಕವಿತೆ, ಸಾಹಿತ್ಯ, ಕ್ರಾಂತಿಯ ಕುರಿತ ಚರ್ಚೆಗೆ ತೆರೆದುಕೊಂಡರು. ಒಂದು ಪೀಳಿಗೆಯ ಹೆಣ್ಣುಮಕ್ಕಳಿಗೆ ದಾರಿ ತೋರಿದ ಬದುಕನ್ನು ಜೀವಿಸಿದರು.

ಅಂದಹಾಗೆ ಸಮಾಜಮುಖೀ ನಟಿ ಶಬಾನಾ ಆಜ್ಮಿ ಮತ್ತು ಆಕೆಯ ಅಣ್ಣ ಚಲನಚಿತ್ರ ಛಾಯಾಗ್ರಾಹಕ ಬಾಬಾ ಆಜ್ಮಿ ಅವರು ಶೌಕತ್ ಮತ್ತು ಕೈಫಿಯವರ ಮಕ್ಕಳು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...