Homeಮುಖಪುಟ‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ...’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ…’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಉತ್ತರಾಖಂಡದಲ್ಲಿ ನಡೆದ 19 ವರ್ಷದ ಅಂಕಿತಾ ಭಂಡಾರಿ ಹತ್ಯೆಯನ್ನು ಉಲ್ಲೇಖಿಸಿ ಬಿಜೆಪಿ ಮತ್ತು ಆರೆಸ್ಸೆಸ್‌‌ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, “ಘಟನೆಯು ದೇಶಾದ್ಯಂತ ಆಘಾತ ಮತ್ತು ಆಕ್ರೋಶವನ್ನು ಉಂಟುಮಾಡಿದೆ” ಎಂದು ಹೇಳಿದ್ದಾರೆ. ಅವರು ಮಹಿಳೆಯರನ್ನು ‘ವಸ್ತು’ ಮತ್ತು ‘ಎರಡನೇ ದರ್ಜೆಯ ನಾಗರಿಕರು’ ಎಂದು ಪರಿಗಣಿಸುತ್ತಾರೆ ಎಂಬುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೆಸಾರ್ಟ್‌‌ಗೆ ಬರುವ ಗ್ರಾಹಕರಿಗೆ ‘ವಿಶೇಷ ಸೇವೆಗಳನ್ನು’ ನೀಡಲು ನಿರಾಕರಿಸಿದ್ದಕ್ಕಾಗಿ ಅಲ್ಲಿ ರಿಷಪ್ಷನಿಷ್ಟ್‌ ಆಗಿ ಕೆಲಸದಲ್ಲಿದ್ದ ಅಂಕಿತಾ ಭಂಡಾರಿ ಅವರನ್ನು ಬಿಜೆಪಿ-ಆರೆಸ್ಸೆಸ್‌ನ ನಾಯಕನ ಪುತ್ರ ಪುಲ್ಕಿತ್ ಆರ್ಯ ಮತ್ತು ಅವರ ಇಬ್ಬರು ಸಹಚರರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

ಹತ್ಯೆಯ ನಂತರ ಅವರ ದೇಹವನ್ನು ರಿಷಿಕೇಶ ಬಳಿಯ ಚಿಲ್ಲಾ ಕಾಲುವೆಗೆ ಎಸೆಯಲಾಗಿತ್ತು. ಪೊಲೀಸರು ಸೆಪ್ಟೆಂಬರ್ 24 ರಂದು ಮೃತದೇಹವನ್ನು ಪತ್ತೆ ಹೆಚ್ಚು ಅಲ್ಲಿಂದ ಹೊರತೆಗೆದಿದ್ದರು.

ತನ್ನನ್ನು ವೇಶ್ಯಾವಾಟಿಕೆಗೆ ತಳ್ಳುವ ಹೋಟೆಲ್ ಮ್ಯಾನೇಜರ್ ಮತ್ತು ಆತನ ಸಹಾಯಕರ ಪ್ರಯತ್ನವನ್ನು ಸಂತ್ರಸ್ತ ಯುವತಿ ವಿರೋಧಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇದನ್ನು ಊಹಿಸಿ…ಬಿಜೆಪಿಯ ನಾಯಕರೊಬ್ಬರು ಹೋಟೆಲ್ ಹೊಂದಿದ್ದಾರೆ ಮತ್ತು ಅವರ ಮಗ ಒಬ್ಬ ಹುಡುಗಿಯನ್ನು ವೇಶ್ಯೆಯಾಗಲು ಒತ್ತಾಯಿಸುತ್ತಿದ್ದಾನೆ… ಆದರೆ ಅವರು ವೇಶ್ಯೆಯಾಗಲು ನಿರಾಕರಿಸಿದಾಗ, ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ” ಎಂದು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೇರಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

ಈ ದೇಶದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದು ಅತ್ಯಂತ ಅಸಹ್ಯಕರ, ಅತ್ಯಂತ ನಾಚಿಕೆಗೇಡಿನ ಉದಾಹರಣೆಯಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತವು ಮಹಿಳೆಯರನ್ನು ವಸ್ತು ಮತ್ತು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುತ್ತದೆ. ಈ ಸಿದ್ಧಾಂತದಿಂದ ಭಾರತ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ತನ್ನ ಮಹಿಳೆಯರನ್ನು ಗೌರವಿಸಲು ಕಲಿಯದೆ ಅಥವಾ ಅವರನ್ನು ಸಬಲೀಕರಣಗೊಳಿಸಲು ಕಲಿಯದೆ, ದೇಶವು ಎಂದಿಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ… ತನ್ನ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುವ ದೇಶವು ವಿಫಲಗೊಂಡು ಅವನತಿ ಹೊಂದುತ್ತದೆ” ಎಂದು ಅವರು ಹೇಳಿದ್ದಾರೆ.

‘ಹೆಣ್ಣು ಮಗುವನ್ನು ಉಳಿಸಿ’ ಎಂಬ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನೂ ರಾಹುಲ್ ಗಾಂಧಿ ಗುರಿಯಾಗಿಸಿದ್ದಾರೆ.

“ಹೆಣ್ಣು ಮಗುವನ್ನು ಉಳಿಸಿ ಎಂದು ಪ್ರಧಾನಿ ಘೋಷಣೆ ಮಾಡುತ್ತಾರೆ. ಆದರೆ ಬಿಜೆಪಿ ಅತ್ಯಾಚಾರಿಯನ್ನು ಉಳಿಸುವ ಕೆಲಸ ಮಾಡುತ್ತದೆ. ಅವರಯ ಕೇವಲ ಭಾಷಣಗಳು, ಸುಳ್ಳು ಮತ್ತು ಪೊಳ್ಳು ಭಾಷಣಗಳನ್ನು ಮಾಡಿದ ಭಾರತದ ಮೊದಲ ಪ್ರಧಾನಿಯಾಗಿದ್ದಾರೆ. ಅವರ ಆಡಳಿತವು ಅಪರಾಧಿಗಳಿಗೆ ಮೀಸಲಾಗಿದೆ. ಆದರೆ ಈಗ ಭಾರತವು ಮೌನವಾಗಿ ಕುಳಿತುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ರಾಹುಲ್ ಗಾಂಧಿ ಅವರು ಈ ಹಿಂದೆಯೂ ಉತ್ತರಾಖಂಡ್ ಹತ್ಯೆಯ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

“ಅಪರಾಧ ಮತ್ತು ದುರಹಂಕಾರ ಬಿಜೆಪಿಗೆ ಸಮಾನಾರ್ಥಕ ಪದವಾಗಿದೆ. ಘಟೆನೆಯ ಬಗ್ಗೆ ಯಾವುದೇ ಮುಜುಗರವಿಲ್ಲ, ಯಾವುದೇ ಪದಗಳಿಲ್ಲ, ಕೇವಲ ಮೌನ ಮಾತ್ರ. ‘ಮಹಿಳೆಯರು ನನ್ನಿಂದ ಏನನ್ನೂ ನಿರೀಕ್ಷಿಸಬಾರದು’ ಎಂಬುವುದು ​​ಪ್ರಧಾನಿಯ ಈ ಸಂದೇಶ ಸ್ಪಷ್ಟವಾಗಿದೆ” ಎಂದು ಅವರು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...