Homeಮುಖಪುಟ‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ...’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ…’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಉತ್ತರಾಖಂಡದಲ್ಲಿ ನಡೆದ 19 ವರ್ಷದ ಅಂಕಿತಾ ಭಂಡಾರಿ ಹತ್ಯೆಯನ್ನು ಉಲ್ಲೇಖಿಸಿ ಬಿಜೆಪಿ ಮತ್ತು ಆರೆಸ್ಸೆಸ್‌‌ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, “ಘಟನೆಯು ದೇಶಾದ್ಯಂತ ಆಘಾತ ಮತ್ತು ಆಕ್ರೋಶವನ್ನು ಉಂಟುಮಾಡಿದೆ” ಎಂದು ಹೇಳಿದ್ದಾರೆ. ಅವರು ಮಹಿಳೆಯರನ್ನು ‘ವಸ್ತು’ ಮತ್ತು ‘ಎರಡನೇ ದರ್ಜೆಯ ನಾಗರಿಕರು’ ಎಂದು ಪರಿಗಣಿಸುತ್ತಾರೆ ಎಂಬುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೆಸಾರ್ಟ್‌‌ಗೆ ಬರುವ ಗ್ರಾಹಕರಿಗೆ ‘ವಿಶೇಷ ಸೇವೆಗಳನ್ನು’ ನೀಡಲು ನಿರಾಕರಿಸಿದ್ದಕ್ಕಾಗಿ ಅಲ್ಲಿ ರಿಷಪ್ಷನಿಷ್ಟ್‌ ಆಗಿ ಕೆಲಸದಲ್ಲಿದ್ದ ಅಂಕಿತಾ ಭಂಡಾರಿ ಅವರನ್ನು ಬಿಜೆಪಿ-ಆರೆಸ್ಸೆಸ್‌ನ ನಾಯಕನ ಪುತ್ರ ಪುಲ್ಕಿತ್ ಆರ್ಯ ಮತ್ತು ಅವರ ಇಬ್ಬರು ಸಹಚರರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

ಹತ್ಯೆಯ ನಂತರ ಅವರ ದೇಹವನ್ನು ರಿಷಿಕೇಶ ಬಳಿಯ ಚಿಲ್ಲಾ ಕಾಲುವೆಗೆ ಎಸೆಯಲಾಗಿತ್ತು. ಪೊಲೀಸರು ಸೆಪ್ಟೆಂಬರ್ 24 ರಂದು ಮೃತದೇಹವನ್ನು ಪತ್ತೆ ಹೆಚ್ಚು ಅಲ್ಲಿಂದ ಹೊರತೆಗೆದಿದ್ದರು.

ತನ್ನನ್ನು ವೇಶ್ಯಾವಾಟಿಕೆಗೆ ತಳ್ಳುವ ಹೋಟೆಲ್ ಮ್ಯಾನೇಜರ್ ಮತ್ತು ಆತನ ಸಹಾಯಕರ ಪ್ರಯತ್ನವನ್ನು ಸಂತ್ರಸ್ತ ಯುವತಿ ವಿರೋಧಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇದನ್ನು ಊಹಿಸಿ…ಬಿಜೆಪಿಯ ನಾಯಕರೊಬ್ಬರು ಹೋಟೆಲ್ ಹೊಂದಿದ್ದಾರೆ ಮತ್ತು ಅವರ ಮಗ ಒಬ್ಬ ಹುಡುಗಿಯನ್ನು ವೇಶ್ಯೆಯಾಗಲು ಒತ್ತಾಯಿಸುತ್ತಿದ್ದಾನೆ… ಆದರೆ ಅವರು ವೇಶ್ಯೆಯಾಗಲು ನಿರಾಕರಿಸಿದಾಗ, ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ” ಎಂದು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೇರಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

ಈ ದೇಶದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದು ಅತ್ಯಂತ ಅಸಹ್ಯಕರ, ಅತ್ಯಂತ ನಾಚಿಕೆಗೇಡಿನ ಉದಾಹರಣೆಯಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತವು ಮಹಿಳೆಯರನ್ನು ವಸ್ತು ಮತ್ತು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುತ್ತದೆ. ಈ ಸಿದ್ಧಾಂತದಿಂದ ಭಾರತ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ತನ್ನ ಮಹಿಳೆಯರನ್ನು ಗೌರವಿಸಲು ಕಲಿಯದೆ ಅಥವಾ ಅವರನ್ನು ಸಬಲೀಕರಣಗೊಳಿಸಲು ಕಲಿಯದೆ, ದೇಶವು ಎಂದಿಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ… ತನ್ನ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುವ ದೇಶವು ವಿಫಲಗೊಂಡು ಅವನತಿ ಹೊಂದುತ್ತದೆ” ಎಂದು ಅವರು ಹೇಳಿದ್ದಾರೆ.

‘ಹೆಣ್ಣು ಮಗುವನ್ನು ಉಳಿಸಿ’ ಎಂಬ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನೂ ರಾಹುಲ್ ಗಾಂಧಿ ಗುರಿಯಾಗಿಸಿದ್ದಾರೆ.

“ಹೆಣ್ಣು ಮಗುವನ್ನು ಉಳಿಸಿ ಎಂದು ಪ್ರಧಾನಿ ಘೋಷಣೆ ಮಾಡುತ್ತಾರೆ. ಆದರೆ ಬಿಜೆಪಿ ಅತ್ಯಾಚಾರಿಯನ್ನು ಉಳಿಸುವ ಕೆಲಸ ಮಾಡುತ್ತದೆ. ಅವರಯ ಕೇವಲ ಭಾಷಣಗಳು, ಸುಳ್ಳು ಮತ್ತು ಪೊಳ್ಳು ಭಾಷಣಗಳನ್ನು ಮಾಡಿದ ಭಾರತದ ಮೊದಲ ಪ್ರಧಾನಿಯಾಗಿದ್ದಾರೆ. ಅವರ ಆಡಳಿತವು ಅಪರಾಧಿಗಳಿಗೆ ಮೀಸಲಾಗಿದೆ. ಆದರೆ ಈಗ ಭಾರತವು ಮೌನವಾಗಿ ಕುಳಿತುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ರಾಹುಲ್ ಗಾಂಧಿ ಅವರು ಈ ಹಿಂದೆಯೂ ಉತ್ತರಾಖಂಡ್ ಹತ್ಯೆಯ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

“ಅಪರಾಧ ಮತ್ತು ದುರಹಂಕಾರ ಬಿಜೆಪಿಗೆ ಸಮಾನಾರ್ಥಕ ಪದವಾಗಿದೆ. ಘಟೆನೆಯ ಬಗ್ಗೆ ಯಾವುದೇ ಮುಜುಗರವಿಲ್ಲ, ಯಾವುದೇ ಪದಗಳಿಲ್ಲ, ಕೇವಲ ಮೌನ ಮಾತ್ರ. ‘ಮಹಿಳೆಯರು ನನ್ನಿಂದ ಏನನ್ನೂ ನಿರೀಕ್ಷಿಸಬಾರದು’ ಎಂಬುವುದು ​​ಪ್ರಧಾನಿಯ ಈ ಸಂದೇಶ ಸ್ಪಷ್ಟವಾಗಿದೆ” ಎಂದು ಅವರು ಹೇಳಿದ್ದರು.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...