Homeಮುಖಪುಟ‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ...’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

‘ಯುವತಿ ಸತ್ತಿರುವುದಕ್ಕೆ ಒಂದೇ ಕಾರಣ…’: ಉತ್ತರಾಖಂಡ್ ರೆಸಾರ್ಟ್‌‌ ಹತ್ಯೆ ಕುರಿತು ರಾಹುಲ್ ಗಾಂಧಿ

ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ ಎಂದು ಅವರು ಹೇಳಿದ್ದಾರೆ

- Advertisement -
- Advertisement -

ಉತ್ತರಾಖಂಡದಲ್ಲಿ ನಡೆದ 19 ವರ್ಷದ ಅಂಕಿತಾ ಭಂಡಾರಿ ಹತ್ಯೆಯನ್ನು ಉಲ್ಲೇಖಿಸಿ ಬಿಜೆಪಿ ಮತ್ತು ಆರೆಸ್ಸೆಸ್‌‌ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, “ಘಟನೆಯು ದೇಶಾದ್ಯಂತ ಆಘಾತ ಮತ್ತು ಆಕ್ರೋಶವನ್ನು ಉಂಟುಮಾಡಿದೆ” ಎಂದು ಹೇಳಿದ್ದಾರೆ. ಅವರು ಮಹಿಳೆಯರನ್ನು ‘ವಸ್ತು’ ಮತ್ತು ‘ಎರಡನೇ ದರ್ಜೆಯ ನಾಗರಿಕರು’ ಎಂದು ಪರಿಗಣಿಸುತ್ತಾರೆ ಎಂಬುದಕ್ಕೆ ಈ ಘಟನೆ ಒಂದು ಉದಾಹರಣೆಯಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿಯ ಸಿದ್ಧಾಂತದ ನಿಜರೂಪ ಇದುವೆ ಆಗಿದ್ದು, ಅವರು ಅಧಿಕಾರವನ್ನು ಹೊರತುಪಡಿಸಿ ಏನನ್ನೂ ಗೌರವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ರೆಸಾರ್ಟ್‌‌ಗೆ ಬರುವ ಗ್ರಾಹಕರಿಗೆ ‘ವಿಶೇಷ ಸೇವೆಗಳನ್ನು’ ನೀಡಲು ನಿರಾಕರಿಸಿದ್ದಕ್ಕಾಗಿ ಅಲ್ಲಿ ರಿಷಪ್ಷನಿಷ್ಟ್‌ ಆಗಿ ಕೆಲಸದಲ್ಲಿದ್ದ ಅಂಕಿತಾ ಭಂಡಾರಿ ಅವರನ್ನು ಬಿಜೆಪಿ-ಆರೆಸ್ಸೆಸ್‌ನ ನಾಯಕನ ಪುತ್ರ ಪುಲ್ಕಿತ್ ಆರ್ಯ ಮತ್ತು ಅವರ ಇಬ್ಬರು ಸಹಚರರು ಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ: ‘ನನ್ನನ್ನು ವೇಶ್ಯಾವಾಟಿಕೆಗೆ ಒತ್ತಾಯಿಸಲಾಗುತ್ತಿದೆ’: ಕೊಲೆಗೀಡಾದ ಉತ್ತರಾಖಂಡದ ಯುವತಿಯ ವಾಟ್ಸಾಪ್ ಚಾಟ್‌‌

ಹತ್ಯೆಯ ನಂತರ ಅವರ ದೇಹವನ್ನು ರಿಷಿಕೇಶ ಬಳಿಯ ಚಿಲ್ಲಾ ಕಾಲುವೆಗೆ ಎಸೆಯಲಾಗಿತ್ತು. ಪೊಲೀಸರು ಸೆಪ್ಟೆಂಬರ್ 24 ರಂದು ಮೃತದೇಹವನ್ನು ಪತ್ತೆ ಹೆಚ್ಚು ಅಲ್ಲಿಂದ ಹೊರತೆಗೆದಿದ್ದರು.

ತನ್ನನ್ನು ವೇಶ್ಯಾವಾಟಿಕೆಗೆ ತಳ್ಳುವ ಹೋಟೆಲ್ ಮ್ಯಾನೇಜರ್ ಮತ್ತು ಆತನ ಸಹಾಯಕರ ಪ್ರಯತ್ನವನ್ನು ಸಂತ್ರಸ್ತ ಯುವತಿ ವಿರೋಧಿಸಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಇದನ್ನು ಊಹಿಸಿ…ಬಿಜೆಪಿಯ ನಾಯಕರೊಬ್ಬರು ಹೋಟೆಲ್ ಹೊಂದಿದ್ದಾರೆ ಮತ್ತು ಅವರ ಮಗ ಒಬ್ಬ ಹುಡುಗಿಯನ್ನು ವೇಶ್ಯೆಯಾಗಲು ಒತ್ತಾಯಿಸುತ್ತಿದ್ದಾನೆ… ಆದರೆ ಅವರು ವೇಶ್ಯೆಯಾಗಲು ನಿರಾಕರಿಸಿದಾಗ, ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ” ಎಂದು ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಕೇರಳದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ ಯುವತಿ ಕೊಲೆ ಪ್ರಕರಣ: ಬಿಜೆಪಿ ಮುಖಂಡನ ಪುತ್ರನ ರೆಸಾರ್ಟ್, ಬಿಜೆಪಿ ಶಾಸಕನ ಕಾರಿಗೆ ಬೆಂಕಿ

ಈ ದೇಶದಲ್ಲಿ ಬಿಜೆಪಿ ಮತ್ತು ಆರೆಸ್ಸೆಸ್ ಮಹಿಳೆಯರನ್ನು ಹೇಗೆ ನಡೆಸಿಕೊಳ್ಳುತ್ತದೆ ಎಂಬುದಕ್ಕೆ ಇದು ಅತ್ಯಂತ ಅಸಹ್ಯಕರ, ಅತ್ಯಂತ ನಾಚಿಕೆಗೇಡಿನ ಉದಾಹರಣೆಯಾಗಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಸಿದ್ಧಾಂತವು ಮಹಿಳೆಯರನ್ನು ವಸ್ತು ಮತ್ತು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುತ್ತದೆ. ಈ ಸಿದ್ಧಾಂತದಿಂದ ಭಾರತ ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

“ತನ್ನ ಮಹಿಳೆಯರನ್ನು ಗೌರವಿಸಲು ಕಲಿಯದೆ ಅಥವಾ ಅವರನ್ನು ಸಬಲೀಕರಣಗೊಳಿಸಲು ಕಲಿಯದೆ, ದೇಶವು ಎಂದಿಗೂ ಏನನ್ನೂ ಸಾಧಿಸಲು ಸಾಧ್ಯವಿಲ್ಲ… ತನ್ನ ಮಹಿಳೆಯರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ನೋಡುವ ದೇಶವು ವಿಫಲಗೊಂಡು ಅವನತಿ ಹೊಂದುತ್ತದೆ” ಎಂದು ಅವರು ಹೇಳಿದ್ದಾರೆ.

‘ಹೆಣ್ಣು ಮಗುವನ್ನು ಉಳಿಸಿ’ ಎಂಬ ಪ್ರಮುಖ ಅಭಿಯಾನವನ್ನು ಪ್ರಾರಂಭಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನೂ ರಾಹುಲ್ ಗಾಂಧಿ ಗುರಿಯಾಗಿಸಿದ್ದಾರೆ.

“ಹೆಣ್ಣು ಮಗುವನ್ನು ಉಳಿಸಿ ಎಂದು ಪ್ರಧಾನಿ ಘೋಷಣೆ ಮಾಡುತ್ತಾರೆ. ಆದರೆ ಬಿಜೆಪಿ ಅತ್ಯಾಚಾರಿಯನ್ನು ಉಳಿಸುವ ಕೆಲಸ ಮಾಡುತ್ತದೆ. ಅವರಯ ಕೇವಲ ಭಾಷಣಗಳು, ಸುಳ್ಳು ಮತ್ತು ಪೊಳ್ಳು ಭಾಷಣಗಳನ್ನು ಮಾಡಿದ ಭಾರತದ ಮೊದಲ ಪ್ರಧಾನಿಯಾಗಿದ್ದಾರೆ. ಅವರ ಆಡಳಿತವು ಅಪರಾಧಿಗಳಿಗೆ ಮೀಸಲಾಗಿದೆ. ಆದರೆ ಈಗ ಭಾರತವು ಮೌನವಾಗಿ ಕುಳಿತುಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಖಂಡ: 19 ವರ್ಷದ ಯುವತಿ ಕೊಲೆಗೈದ ಬಿಜೆಪಿ ಮುಖಂಡನ ಮಗನ ಬಂಧನ, ಬುಲ್ಡೋಜರ್ ಪ್ರಯೋಗ

ರಾಹುಲ್ ಗಾಂಧಿ ಅವರು ಈ ಹಿಂದೆಯೂ ಉತ್ತರಾಖಂಡ್ ಹತ್ಯೆಯ ಬಗ್ಗೆ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದರು.

“ಅಪರಾಧ ಮತ್ತು ದುರಹಂಕಾರ ಬಿಜೆಪಿಗೆ ಸಮಾನಾರ್ಥಕ ಪದವಾಗಿದೆ. ಘಟೆನೆಯ ಬಗ್ಗೆ ಯಾವುದೇ ಮುಜುಗರವಿಲ್ಲ, ಯಾವುದೇ ಪದಗಳಿಲ್ಲ, ಕೇವಲ ಮೌನ ಮಾತ್ರ. ‘ಮಹಿಳೆಯರು ನನ್ನಿಂದ ಏನನ್ನೂ ನಿರೀಕ್ಷಿಸಬಾರದು’ ಎಂಬುವುದು ​​ಪ್ರಧಾನಿಯ ಈ ಸಂದೇಶ ಸ್ಪಷ್ಟವಾಗಿದೆ” ಎಂದು ಅವರು ಹೇಳಿದ್ದರು.


ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

0
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಪ್ರಯೋಗಿಸುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನು ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...