Homeಮುಖಪುಟ'She Man': ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

- Advertisement -
- Advertisement -

ಟ್ರಾನ್ಸ್‌ಜೆಂಡರ್ ಹಕ್ಕುಗಳನ್ನು ಉತ್ತೇಜಿಸುವ ಉದ್ದೇಶದಿಂದ, ನೋಯ್ಡಾ ಮೆಟ್ರೋ ರೈಲು ನಿಗಮವು ಆಕ್ವಾ ಸಾಲಿನಲ್ಲಿರುವ ಸೆಕ್ಟರ್ 50 ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವುದಾಗಿ ಇತ್ತೀಚೆಗೆ ಘೋಷಿಸಿತು.

ಆದರೆ ದೆಹಲಿ-ಎನ್‌ಸಿಆರ್ ಪ್ರದೇಶದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಮೆಟ್ರೊ ನಿಗಮವು ತನ್ನ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದು, ಇದನ್ನು “ಟ್ರಾನ್ಸ್‌ಫೋಬಿಕ್” ಮತ್ತು “ಸಂವೇದನೆಯಿಲ್ಲದ” ಕ್ರಮ ಎಂದು ದೂರಲಾಗಿದೆ.

ಡಾ. ಅಕ್ಸಾ ಶೇಖ್, ತನ್ನನ್ನು ತಾನು ಟ್ರಾನ್ಸ್ ಮಹಿಳೆ ಎಂದು ಗುರುತಿಸಿಕೊಳ್ಳುತ್ತಾಳೆ, ಮೆಟ್ರೊ ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವ ನಿರ್ಧಾರವು ಸಮುದಾಯಕ್ಕೆ ಅವಹೇಳನಕಾರಿ ಎಂಬುದು ಅವರ ಅಭಿಪ್ರಾಯವಾಗಿದೆ.

She Man ಎಂಬ ಪದವು ಅವಹೇಳನಕಾರಿಯಾಗಿದೆ. ಇದರರ್ಥ ಗಂಡು ಮತ್ತು ಹೆಣ್ಣಿನ ಮಿಶ್ರಣವಾಗಿರುವವರು ಎಂಬುದಾಗಿದೆ. ಅರ್ಧ ಗಂಡು ಮತ್ತು ಅರ್ಧ ಹೆಣ್ಣು ಎನ್ನುವುದು ಸರಿಯಲ್ಲ. ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ತಮ್ಮನ್ನು ಹೇಗೆ ವ್ಯಾಖ್ಯಾನಿಸಲು ಬಯಸುತ್ತಾರೆ ಎಂಬ ಮನೋಭಾವಕ್ಕೆ ವಿರುದ್ಧವಾಗಿದೆ ಎನ್ನುತ್ತಾರೆ ಡಾ.ಅಕ್ಸಾ ಶೇಖ್.

She Male, She Man, Lady Boy ನಂತಹ ಪದಗಳನ್ನು ಸಮುದಾಯದ ಸದಸ್ಯರ ವಿರುದ್ಧ ಅಸಭ್ಯವಾಗಿ ಬಳಸಲಾಗುತ್ತಿದೆ. ಸರಳವಾದ ಗೂಗಲ್ ಹುಡುಕಾಟವು ಇದನ್ನು ಯಾರಿಗಾದರೂ ತಿಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ದಕ್ಷಿಣ ಭಾರತದಲ್ಲಿ ಸಮುದಾಯವು ಅಂಗೀಕರಿಸಿದ್ದ ತಿರುನಂಗೈ (ಪುರುಷ ಮತ್ತು ಮಹಿಳೆ) ಎಂಬ ಪದವನ್ನು 2019 ರಲ್ಲಿ ಹಿಂತೆಗೆದುಕೊಳ್ಳಲಾಯಿತು. ಹಿಂದಿ ಅನುವಾದವು ‘ಉಭೈಲಿಂಗಿ’ ಪದವನ್ನು ಬಳಸುತ್ತದೆ. ಇದು ಇಂಟರ್‌ಸೆಕ್ಸ್ ವ್ಯಕ್ತಿಗಳಿಗೆ ಸೂಕ್ತವಾಗಬಹುದು ಆದರೆ ಖಂಡಿತವಾಗಿಯೂ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಅಲ್ಲ ಎಂಬುದು ಅವರ ಅಭಿಪ್ರಾಯ.

ನಿಲ್ದಾಣವನ್ನು ಮರುಹೆಸರಿಸುವ ಉದ್ದೇಶವೇನು?

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ನೋಯ್ಡಾ ಮೆಟ್ರೋ ಅಧಿಕಾರಿಗಳು, “ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ” ಸಂಬಂಧಿಸಿದಂತೆ ನಿಲ್ದಾಣದ ಸಿಬ್ಬಂದಿಗೆ ಸಂವೇದನೆ ಮತ್ತು ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

“2011 ರ ಜನಗಣತಿ ಪ್ರಕಾರ ಭಾರತದಲ್ಲಿ 4.9 ಲಕ್ಷ ಟ್ರಾನ್ಸ್‌ಜೆಂಡರ್‌ಗಳಿದ್ದಾರೆ. ಅದರಲ್ಲಿ 30,000-35,000 ಜನರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಉಳಿದಿದ್ದಾರೆ. ಟ್ರಾನ್ಸ್‌ಜೆಂಡರ್ ಸಮುದಾಯದ ಅರ್ಥಪೂರ್ಣ ಸೇರ್ಪಡೆ ಮತ್ತು ಭಾಗವಹಿಸುವಿಕೆಯನ್ನು ನೀಡುವಲ್ಲಿ ಈ ಕ್ರಮವು ಒಂದು ಪ್ರಮುಖ ಹೆಜ್ಜೆಯಾಗಿದೆ. ನಿಲ್ದಾಣದ ಹೆಸರಿಡುವುದು ಜಾಗೃತಿ ಮತ್ತು ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ”ಎಂದು ಎನ್‌ಎಂಆರ್‌ಸಿಯ ಎಂಡಿ ರಿತು ಮಹೇಶ್ವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಸರಿನ ಬಗ್ಗೆ ಕೇಳಿದಾಗ, ‘She Man’ ಎಂಬ ಪದವನ್ನು ನಿರ್ದೇಶಕರ ಮಂಡಳಿ ಮತ್ತು ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಎನ್‌ಜಿಒಗಳು ಸೇರಿದಂತೆ ಹಲವರಿಂದ ಸೂಚಿಸಲ್ಪಟ್ಟಿದೆ ಎಂದು ಹೇಳಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ; ಸಫೂರಾ ಜರ್ಗರ್: ಗರ್ಭಿಣಿ ಮಾನದಂಡದಡಿ ಜಾಮೀನು ನೀಡಲಾಗುವುದಿಲ್ಲವೆಂದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...