Homeಮುಖಪುಟ'She Man': ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

- Advertisement -
- Advertisement -

ಟ್ರಾನ್ಸ್‌ಜೆಂಡರ್ ಹಕ್ಕುಗಳನ್ನು ಉತ್ತೇಜಿಸುವ ಉದ್ದೇಶದಿಂದ, ನೋಯ್ಡಾ ಮೆಟ್ರೋ ರೈಲು ನಿಗಮವು ಆಕ್ವಾ ಸಾಲಿನಲ್ಲಿರುವ ಸೆಕ್ಟರ್ 50 ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವುದಾಗಿ ಇತ್ತೀಚೆಗೆ ಘೋಷಿಸಿತು.

ಆದರೆ ದೆಹಲಿ-ಎನ್‌ಸಿಆರ್ ಪ್ರದೇಶದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಮೆಟ್ರೊ ನಿಗಮವು ತನ್ನ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದು, ಇದನ್ನು “ಟ್ರಾನ್ಸ್‌ಫೋಬಿಕ್” ಮತ್ತು “ಸಂವೇದನೆಯಿಲ್ಲದ” ಕ್ರಮ ಎಂದು ದೂರಲಾಗಿದೆ.

ಡಾ. ಅಕ್ಸಾ ಶೇಖ್, ತನ್ನನ್ನು ತಾನು ಟ್ರಾನ್ಸ್ ಮಹಿಳೆ ಎಂದು ಗುರುತಿಸಿಕೊಳ್ಳುತ್ತಾಳೆ, ಮೆಟ್ರೊ ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವ ನಿರ್ಧಾರವು ಸಮುದಾಯಕ್ಕೆ ಅವಹೇಳನಕಾರಿ ಎಂಬುದು ಅವರ ಅಭಿಪ್ರಾಯವಾಗಿದೆ.

She Man ಎಂಬ ಪದವು ಅವಹೇಳನಕಾರಿಯಾಗಿದೆ. ಇದರರ್ಥ ಗಂಡು ಮತ್ತು ಹೆಣ್ಣಿನ ಮಿಶ್ರಣವಾಗಿರುವವರು ಎಂಬುದಾಗಿದೆ. ಅರ್ಧ ಗಂಡು ಮತ್ತು ಅರ್ಧ ಹೆಣ್ಣು ಎನ್ನುವುದು ಸರಿಯಲ್ಲ. ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ತಮ್ಮನ್ನು ಹೇಗೆ ವ್ಯಾಖ್ಯಾನಿಸಲು ಬಯಸುತ್ತಾರೆ ಎಂಬ ಮನೋಭಾವಕ್ಕೆ ವಿರುದ್ಧವಾಗಿದೆ ಎನ್ನುತ್ತಾರೆ ಡಾ.ಅಕ್ಸಾ ಶೇಖ್.

She Male, She Man, Lady Boy ನಂತಹ ಪದಗಳನ್ನು ಸಮುದಾಯದ ಸದಸ್ಯರ ವಿರುದ್ಧ ಅಸಭ್ಯವಾಗಿ ಬಳಸಲಾಗುತ್ತಿದೆ. ಸರಳವಾದ ಗೂಗಲ್ ಹುಡುಕಾಟವು ಇದನ್ನು ಯಾರಿಗಾದರೂ ತಿಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ದಕ್ಷಿಣ ಭಾರತದಲ್ಲಿ ಸಮುದಾಯವು ಅಂಗೀಕರಿಸಿದ್ದ ತಿರುನಂಗೈ (ಪುರುಷ ಮತ್ತು ಮಹಿಳೆ) ಎಂಬ ಪದವನ್ನು 2019 ರಲ್ಲಿ ಹಿಂತೆಗೆದುಕೊಳ್ಳಲಾಯಿತು. ಹಿಂದಿ ಅನುವಾದವು ‘ಉಭೈಲಿಂಗಿ’ ಪದವನ್ನು ಬಳಸುತ್ತದೆ. ಇದು ಇಂಟರ್‌ಸೆಕ್ಸ್ ವ್ಯಕ್ತಿಗಳಿಗೆ ಸೂಕ್ತವಾಗಬಹುದು ಆದರೆ ಖಂಡಿತವಾಗಿಯೂ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಅಲ್ಲ ಎಂಬುದು ಅವರ ಅಭಿಪ್ರಾಯ.

ನಿಲ್ದಾಣವನ್ನು ಮರುಹೆಸರಿಸುವ ಉದ್ದೇಶವೇನು?

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ನೋಯ್ಡಾ ಮೆಟ್ರೋ ಅಧಿಕಾರಿಗಳು, “ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ” ಸಂಬಂಧಿಸಿದಂತೆ ನಿಲ್ದಾಣದ ಸಿಬ್ಬಂದಿಗೆ ಸಂವೇದನೆ ಮತ್ತು ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

“2011 ರ ಜನಗಣತಿ ಪ್ರಕಾರ ಭಾರತದಲ್ಲಿ 4.9 ಲಕ್ಷ ಟ್ರಾನ್ಸ್‌ಜೆಂಡರ್‌ಗಳಿದ್ದಾರೆ. ಅದರಲ್ಲಿ 30,000-35,000 ಜನರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಉಳಿದಿದ್ದಾರೆ. ಟ್ರಾನ್ಸ್‌ಜೆಂಡರ್ ಸಮುದಾಯದ ಅರ್ಥಪೂರ್ಣ ಸೇರ್ಪಡೆ ಮತ್ತು ಭಾಗವಹಿಸುವಿಕೆಯನ್ನು ನೀಡುವಲ್ಲಿ ಈ ಕ್ರಮವು ಒಂದು ಪ್ರಮುಖ ಹೆಜ್ಜೆಯಾಗಿದೆ. ನಿಲ್ದಾಣದ ಹೆಸರಿಡುವುದು ಜಾಗೃತಿ ಮತ್ತು ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ”ಎಂದು ಎನ್‌ಎಂಆರ್‌ಸಿಯ ಎಂಡಿ ರಿತು ಮಹೇಶ್ವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಸರಿನ ಬಗ್ಗೆ ಕೇಳಿದಾಗ, ‘She Man’ ಎಂಬ ಪದವನ್ನು ನಿರ್ದೇಶಕರ ಮಂಡಳಿ ಮತ್ತು ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಎನ್‌ಜಿಒಗಳು ಸೇರಿದಂತೆ ಹಲವರಿಂದ ಸೂಚಿಸಲ್ಪಟ್ಟಿದೆ ಎಂದು ಹೇಳಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ; ಸಫೂರಾ ಜರ್ಗರ್: ಗರ್ಭಿಣಿ ಮಾನದಂಡದಡಿ ಜಾಮೀನು ನೀಡಲಾಗುವುದಿಲ್ಲವೆಂದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...