Homeಮುಖಪುಟ'She Man': ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

- Advertisement -
- Advertisement -

ಟ್ರಾನ್ಸ್‌ಜೆಂಡರ್ ಹಕ್ಕುಗಳನ್ನು ಉತ್ತೇಜಿಸುವ ಉದ್ದೇಶದಿಂದ, ನೋಯ್ಡಾ ಮೆಟ್ರೋ ರೈಲು ನಿಗಮವು ಆಕ್ವಾ ಸಾಲಿನಲ್ಲಿರುವ ಸೆಕ್ಟರ್ 50 ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವುದಾಗಿ ಇತ್ತೀಚೆಗೆ ಘೋಷಿಸಿತು.

ಆದರೆ ದೆಹಲಿ-ಎನ್‌ಸಿಆರ್ ಪ್ರದೇಶದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಮೆಟ್ರೊ ನಿಗಮವು ತನ್ನ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದು, ಇದನ್ನು “ಟ್ರಾನ್ಸ್‌ಫೋಬಿಕ್” ಮತ್ತು “ಸಂವೇದನೆಯಿಲ್ಲದ” ಕ್ರಮ ಎಂದು ದೂರಲಾಗಿದೆ.

ಡಾ. ಅಕ್ಸಾ ಶೇಖ್, ತನ್ನನ್ನು ತಾನು ಟ್ರಾನ್ಸ್ ಮಹಿಳೆ ಎಂದು ಗುರುತಿಸಿಕೊಳ್ಳುತ್ತಾಳೆ, ಮೆಟ್ರೊ ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವ ನಿರ್ಧಾರವು ಸಮುದಾಯಕ್ಕೆ ಅವಹೇಳನಕಾರಿ ಎಂಬುದು ಅವರ ಅಭಿಪ್ರಾಯವಾಗಿದೆ.

She Man ಎಂಬ ಪದವು ಅವಹೇಳನಕಾರಿಯಾಗಿದೆ. ಇದರರ್ಥ ಗಂಡು ಮತ್ತು ಹೆಣ್ಣಿನ ಮಿಶ್ರಣವಾಗಿರುವವರು ಎಂಬುದಾಗಿದೆ. ಅರ್ಧ ಗಂಡು ಮತ್ತು ಅರ್ಧ ಹೆಣ್ಣು ಎನ್ನುವುದು ಸರಿಯಲ್ಲ. ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ತಮ್ಮನ್ನು ಹೇಗೆ ವ್ಯಾಖ್ಯಾನಿಸಲು ಬಯಸುತ್ತಾರೆ ಎಂಬ ಮನೋಭಾವಕ್ಕೆ ವಿರುದ್ಧವಾಗಿದೆ ಎನ್ನುತ್ತಾರೆ ಡಾ.ಅಕ್ಸಾ ಶೇಖ್.

She Male, She Man, Lady Boy ನಂತಹ ಪದಗಳನ್ನು ಸಮುದಾಯದ ಸದಸ್ಯರ ವಿರುದ್ಧ ಅಸಭ್ಯವಾಗಿ ಬಳಸಲಾಗುತ್ತಿದೆ. ಸರಳವಾದ ಗೂಗಲ್ ಹುಡುಕಾಟವು ಇದನ್ನು ಯಾರಿಗಾದರೂ ತಿಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ದಕ್ಷಿಣ ಭಾರತದಲ್ಲಿ ಸಮುದಾಯವು ಅಂಗೀಕರಿಸಿದ್ದ ತಿರುನಂಗೈ (ಪುರುಷ ಮತ್ತು ಮಹಿಳೆ) ಎಂಬ ಪದವನ್ನು 2019 ರಲ್ಲಿ ಹಿಂತೆಗೆದುಕೊಳ್ಳಲಾಯಿತು. ಹಿಂದಿ ಅನುವಾದವು ‘ಉಭೈಲಿಂಗಿ’ ಪದವನ್ನು ಬಳಸುತ್ತದೆ. ಇದು ಇಂಟರ್‌ಸೆಕ್ಸ್ ವ್ಯಕ್ತಿಗಳಿಗೆ ಸೂಕ್ತವಾಗಬಹುದು ಆದರೆ ಖಂಡಿತವಾಗಿಯೂ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಅಲ್ಲ ಎಂಬುದು ಅವರ ಅಭಿಪ್ರಾಯ.

ನಿಲ್ದಾಣವನ್ನು ಮರುಹೆಸರಿಸುವ ಉದ್ದೇಶವೇನು?

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ನೋಯ್ಡಾ ಮೆಟ್ರೋ ಅಧಿಕಾರಿಗಳು, “ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ” ಸಂಬಂಧಿಸಿದಂತೆ ನಿಲ್ದಾಣದ ಸಿಬ್ಬಂದಿಗೆ ಸಂವೇದನೆ ಮತ್ತು ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

“2011 ರ ಜನಗಣತಿ ಪ್ರಕಾರ ಭಾರತದಲ್ಲಿ 4.9 ಲಕ್ಷ ಟ್ರಾನ್ಸ್‌ಜೆಂಡರ್‌ಗಳಿದ್ದಾರೆ. ಅದರಲ್ಲಿ 30,000-35,000 ಜನರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಉಳಿದಿದ್ದಾರೆ. ಟ್ರಾನ್ಸ್‌ಜೆಂಡರ್ ಸಮುದಾಯದ ಅರ್ಥಪೂರ್ಣ ಸೇರ್ಪಡೆ ಮತ್ತು ಭಾಗವಹಿಸುವಿಕೆಯನ್ನು ನೀಡುವಲ್ಲಿ ಈ ಕ್ರಮವು ಒಂದು ಪ್ರಮುಖ ಹೆಜ್ಜೆಯಾಗಿದೆ. ನಿಲ್ದಾಣದ ಹೆಸರಿಡುವುದು ಜಾಗೃತಿ ಮತ್ತು ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ”ಎಂದು ಎನ್‌ಎಂಆರ್‌ಸಿಯ ಎಂಡಿ ರಿತು ಮಹೇಶ್ವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಸರಿನ ಬಗ್ಗೆ ಕೇಳಿದಾಗ, ‘She Man’ ಎಂಬ ಪದವನ್ನು ನಿರ್ದೇಶಕರ ಮಂಡಳಿ ಮತ್ತು ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಎನ್‌ಜಿಒಗಳು ಸೇರಿದಂತೆ ಹಲವರಿಂದ ಸೂಚಿಸಲ್ಪಟ್ಟಿದೆ ಎಂದು ಹೇಳಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ; ಸಫೂರಾ ಜರ್ಗರ್: ಗರ್ಭಿಣಿ ಮಾನದಂಡದಡಿ ಜಾಮೀನು ನೀಡಲಾಗುವುದಿಲ್ಲವೆಂದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...