Homeಮುಖಪುಟ'She Man': ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

‘She Man’: ನೋಯ್ಡಾ ಮೆಟ್ರೋ ಸ್ಟೇಷನ್ ಹೆಸರಿಗೆ ಟ್ರಾನ್ಸ್‌ಜೆಂಡರ್ ಸಮುದಾಯದ ವಿರೋಧ

- Advertisement -
- Advertisement -

ಟ್ರಾನ್ಸ್‌ಜೆಂಡರ್ ಹಕ್ಕುಗಳನ್ನು ಉತ್ತೇಜಿಸುವ ಉದ್ದೇಶದಿಂದ, ನೋಯ್ಡಾ ಮೆಟ್ರೋ ರೈಲು ನಿಗಮವು ಆಕ್ವಾ ಸಾಲಿನಲ್ಲಿರುವ ಸೆಕ್ಟರ್ 50 ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವುದಾಗಿ ಇತ್ತೀಚೆಗೆ ಘೋಷಿಸಿತು.

ಆದರೆ ದೆಹಲಿ-ಎನ್‌ಸಿಆರ್ ಪ್ರದೇಶದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಮೆಟ್ರೊ ನಿಗಮವು ತನ್ನ ಈ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತಿದ್ದು, ಇದನ್ನು “ಟ್ರಾನ್ಸ್‌ಫೋಬಿಕ್” ಮತ್ತು “ಸಂವೇದನೆಯಿಲ್ಲದ” ಕ್ರಮ ಎಂದು ದೂರಲಾಗಿದೆ.

ಡಾ. ಅಕ್ಸಾ ಶೇಖ್, ತನ್ನನ್ನು ತಾನು ಟ್ರಾನ್ಸ್ ಮಹಿಳೆ ಎಂದು ಗುರುತಿಸಿಕೊಳ್ಳುತ್ತಾಳೆ, ಮೆಟ್ರೊ ನಿಲ್ದಾಣವನ್ನು ‘She Man’ ಎಂದು ಮರುನಾಮಕರಣ ಮಾಡುವ ನಿರ್ಧಾರವು ಸಮುದಾಯಕ್ಕೆ ಅವಹೇಳನಕಾರಿ ಎಂಬುದು ಅವರ ಅಭಿಪ್ರಾಯವಾಗಿದೆ.

She Man ಎಂಬ ಪದವು ಅವಹೇಳನಕಾರಿಯಾಗಿದೆ. ಇದರರ್ಥ ಗಂಡು ಮತ್ತು ಹೆಣ್ಣಿನ ಮಿಶ್ರಣವಾಗಿರುವವರು ಎಂಬುದಾಗಿದೆ. ಅರ್ಧ ಗಂಡು ಮತ್ತು ಅರ್ಧ ಹೆಣ್ಣು ಎನ್ನುವುದು ಸರಿಯಲ್ಲ. ಮತ್ತು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ತಮ್ಮನ್ನು ಹೇಗೆ ವ್ಯಾಖ್ಯಾನಿಸಲು ಬಯಸುತ್ತಾರೆ ಎಂಬ ಮನೋಭಾವಕ್ಕೆ ವಿರುದ್ಧವಾಗಿದೆ ಎನ್ನುತ್ತಾರೆ ಡಾ.ಅಕ್ಸಾ ಶೇಖ್.

She Male, She Man, Lady Boy ನಂತಹ ಪದಗಳನ್ನು ಸಮುದಾಯದ ಸದಸ್ಯರ ವಿರುದ್ಧ ಅಸಭ್ಯವಾಗಿ ಬಳಸಲಾಗುತ್ತಿದೆ. ಸರಳವಾದ ಗೂಗಲ್ ಹುಡುಕಾಟವು ಇದನ್ನು ಯಾರಿಗಾದರೂ ತಿಳಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಒಮ್ಮೆ ದಕ್ಷಿಣ ಭಾರತದಲ್ಲಿ ಸಮುದಾಯವು ಅಂಗೀಕರಿಸಿದ್ದ ತಿರುನಂಗೈ (ಪುರುಷ ಮತ್ತು ಮಹಿಳೆ) ಎಂಬ ಪದವನ್ನು 2019 ರಲ್ಲಿ ಹಿಂತೆಗೆದುಕೊಳ್ಳಲಾಯಿತು. ಹಿಂದಿ ಅನುವಾದವು ‘ಉಭೈಲಿಂಗಿ’ ಪದವನ್ನು ಬಳಸುತ್ತದೆ. ಇದು ಇಂಟರ್‌ಸೆಕ್ಸ್ ವ್ಯಕ್ತಿಗಳಿಗೆ ಸೂಕ್ತವಾಗಬಹುದು ಆದರೆ ಖಂಡಿತವಾಗಿಯೂ ಇಡೀ ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಅಲ್ಲ ಎಂಬುದು ಅವರ ಅಭಿಪ್ರಾಯ.

ನಿಲ್ದಾಣವನ್ನು ಮರುಹೆಸರಿಸುವ ಉದ್ದೇಶವೇನು?

ದಿ ಇಂಡಿಯನ್ ಎಕ್ಸ್‌ಪ್ರೆಸ್‌ನೊಂದಿಗೆ ಮಾತನಾಡಿದ ನೋಯ್ಡಾ ಮೆಟ್ರೋ ಅಧಿಕಾರಿಗಳು, “ಸಮುದಾಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ” ಸಂಬಂಧಿಸಿದಂತೆ ನಿಲ್ದಾಣದ ಸಿಬ್ಬಂದಿಗೆ ಸಂವೇದನೆ ಮತ್ತು ತರಬೇತಿ ನೀಡಲಾಗುವುದು ಎಂದು ಹೇಳಿದ್ದಾರೆ.

“2011 ರ ಜನಗಣತಿ ಪ್ರಕಾರ ಭಾರತದಲ್ಲಿ 4.9 ಲಕ್ಷ ಟ್ರಾನ್ಸ್‌ಜೆಂಡರ್‌ಗಳಿದ್ದಾರೆ. ಅದರಲ್ಲಿ 30,000-35,000 ಜನರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಉಳಿದಿದ್ದಾರೆ. ಟ್ರಾನ್ಸ್‌ಜೆಂಡರ್ ಸಮುದಾಯದ ಅರ್ಥಪೂರ್ಣ ಸೇರ್ಪಡೆ ಮತ್ತು ಭಾಗವಹಿಸುವಿಕೆಯನ್ನು ನೀಡುವಲ್ಲಿ ಈ ಕ್ರಮವು ಒಂದು ಪ್ರಮುಖ ಹೆಜ್ಜೆಯಾಗಿದೆ. ನಿಲ್ದಾಣದ ಹೆಸರಿಡುವುದು ಜಾಗೃತಿ ಮತ್ತು ಸೂಕ್ಷ್ಮತೆಯನ್ನು ಹೆಚ್ಚಿಸುತ್ತದೆ ”ಎಂದು ಎನ್‌ಎಂಆರ್‌ಸಿಯ ಎಂಡಿ ರಿತು ಮಹೇಶ್ವರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಸರಿನ ಬಗ್ಗೆ ಕೇಳಿದಾಗ, ‘She Man’ ಎಂಬ ಪದವನ್ನು ನಿರ್ದೇಶಕರ ಮಂಡಳಿ ಮತ್ತು ಈ ಕ್ಷೇತ್ರದಲ್ಲಿ ಕೆಲಸ ಮಾಡುವ ಎನ್‌ಜಿಒಗಳು ಸೇರಿದಂತೆ ಹಲವರಿಂದ ಸೂಚಿಸಲ್ಪಟ್ಟಿದೆ ಎಂದು ಹೇಳಿದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ; ಸಫೂರಾ ಜರ್ಗರ್: ಗರ್ಭಿಣಿ ಮಾನದಂಡದಡಿ ಜಾಮೀನು ನೀಡಲಾಗುವುದಿಲ್ಲವೆಂದ ದೆಹಲಿ ಪೊಲೀಸರು! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...