Homeಮುಖಪುಟಶುದ್ಧ ಅವಿಧೇಯತೆ: ಕೇಂದ್ರ ಸರಕಾರದ ವಿರುದ್ದ ಸುಪ್ರೀಂ ಕೋರ್ಟ್ ಕಿಡಿ...!!

ಶುದ್ಧ ಅವಿಧೇಯತೆ: ಕೇಂದ್ರ ಸರಕಾರದ ವಿರುದ್ದ ಸುಪ್ರೀಂ ಕೋರ್ಟ್ ಕಿಡಿ…!!

"ನಾವು ಬಯಸಿದರೆ ಟೆಲಿಕಾಂ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರನ್ನು ಜೈಲಿಗೆ ಕಳುಹಿಸಬಹುದು" ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದ್ದಾರೆ.

- Advertisement -
- Advertisement -

ಟೆಲಿಕಾಂ ಕಂಪೆನಿಗಳು ಎಜಿಆರ್ ಬಾಕಿ ಹಣವನ್ನು ವಾರ್ಷಿಕ ಕಂತುಗಳ ಆಧಾರದಲ್ಲಿ ಪಾವತಿಸಲು ಅನುಮೋದನೆ ಕೋರಿ ಮನವಿ ಸಲ್ಲಿಸಿದ್ದಕ್ಕಾಗಿ ಕೇಂದ್ರ ಸರಕಾರದ ವಿರುದ್ಧ ಸುಪ್ರೀಂ ಕೋರ್ಟ್ ಇದು “ಶುದ್ಧ ಅವಿಧೇಯತೆ” ಎಂದು ತೀವ್ರ ವಾಗ್ದಾಳಿ ನಡೆಸಿದೆ.

ಸರ್ಕಾರಿ ಇಲಾಖೆ ನಿರ್ಧರಿಸಿದ ಸ್ವ-ಮೌಲ್ಯಮಾಪನವು ನಮ್ಮ ಆದೇಶಗಳ ಉಲ್ಲಂಘನೆ ಮತ್ತು ಶುದ್ಧ ಅವಿಧೇಯತೆ ಎಂದು ನ್ಯಾಯಮೂರ್ತಿಗಳಾದ ಅರುಣ್ ಮಿಶ್ರಾ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ ಹೇಳಿದೆ.

ಟೆಲಿಕಾಂ ಕಂಪನಿಗಳು 20 ವರ್ಷಗಳಲ್ಲಿ ಹಣ ಮರುಪಾವತಿ ಮಾಡಲು ಅವಕಾಶ ನೀಡಬೇಕೆಂದು ಕೇಂದ್ರ ಸರ್ಕಾರ ಮನವಿ ಮಾಡಿತ್ತು. ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನಮ್ಮನ್ನು ಮೂರ್ಖರು ಎಂದುಕೊಂಡಿದ್ದೀರಾ? ಇದು ನ್ಯಾಯಾಲಯದ ಪ್ರತಿಷ್ಠೆಯ ಪ್ರಶ್ನೆಯಾಗಿದೆ ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದರು.

ಸರ್ಕಾರವು ಕೇವಲ ಸಮಯ ವಿಸ್ತರಣೆಯನ್ನು ಬಯಸುತ್ತಿದೆ, ದಂಡವನ್ನು ಕಡಿಮೆ ಮಾಡುವಂತಿಲ್ಲ ಎಂದು ಮೆಹ್ತಾ ಸ್ಪಷ್ಟಪಡಿಸಲು ಪ್ರಯತ್ನಿಸಿದರು ಆದರೆ ನ್ಯಾಯಮೂರ್ತಿ ಮಿಶ್ರಾ ಅವರು ಎಜಿಆರ್ ಬಾಕಿ ಸಾರ್ವಜನಿಕ ಹಣ ಎಂದು ಹೇಳಿದರು. ವೊಡಾಫೋನ್ ಮತ್ತು ಹ್ಯೂಸ್ ಟೆಲಿಕಾಂ ಕಂಪೆನಿಯು ಮರು ಲೆಕ್ಕಾಚಾರ ಮತ್ತು ಕಂತುಗಳ ಪಾವತಿಯನ್ನು ಕೋರಿತು. ಆದರೆ ನ್ಯಾಯಾಲಯವು ತೀರ್ಪಿನ್ನು ಹಿಂದೆ ತೆಗೆದುಕೊಳ್ಳುವುದಿಲ್ಲ ಎಂದು ಹೇಳಿ ಅವರ ಮನವಿಯನ್ನು ತಿರಸ್ಕರಿಸಿತು.

“ನಾವು ಬಯಸಿದರೆ ಟೆಲಿಕಾಂ ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರನ್ನು ಜೈಲಿಗೆ ಕಳುಹಿಸಬಹುದು” ಎಂದು ನ್ಯಾಯಮೂರ್ತಿ ಮಿಶ್ರಾ ಹೇಳಿದರು. ಟೆಲಿಕಾಂ ಕಂಪನಿಗಳು ತೀರ್ಪಿನ ಪ್ರಕಾರ ದಂಡ ಮತ್ತು ಬಡ್ಡಿಯನ್ನು ಪಾವತಿಸಬೇಕು ಮತ್ತು ಮೂರು ವಾರಗಳ ನಂತರ ವಿಚಾರಣೆಯನ್ನು ಮುಂದೂಡಿದೆ ಎಂದು ಕೋರ್ಟ್ ಹೇಳಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...