Homeಮುಖಪುಟಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ‘ಶೀಶ್ ಮಹಲ್ ಮತ್ತು ರಾಜ್‌ಮಹಲ್‘ ಎಂಬ ಎರಡು ಬಂಗಲೆಗಳನ್ನು ಮುಂದಿಟ್ಟುಕೊಂಡು ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಕಿತ್ತಾಟ ಶುರು ಮಾಡಿದ್ದಾರೆ.

ಶೀಶ್ ಮಹಲ್ ಮತ್ತು ರಾಜ್‌ಮಹಲ್ ಎಂಬ ಎರಡು ಬಂಗಲೆಗಳೇ ಪ್ರಸ್ತುತ ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿವಾಸವನ್ನು ‘ರಾಜ್‌ಮಹಲ್’ ಎಂದು ಕರೆದಿರುವ ದೆಹಲಿಯ ಆಡಳಿತರೂಢ ಎಎಪಿ, ಅ ಬಂಗಲೆಯ ನವೀಕರಣಕ್ಕೆ ಬರೋಬ್ಬರಿ 2,700 ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ, ಅವರ ಅಧಿಕೃತ ನಿವಾಸ ಶೀಶ್‌ ಮಹಲ್‌ನ ನವೀಕರಣಕ್ಕೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಜ್ರಿವಾಲ್ ಬಂಗಲೆಯನ್ನು ಖಾಲಿ ಮಾಡಿದ ನಂತರ “ಗೋಲ್ಡನ್ ಕಮೋಡ್” ಸೇರಿದಂತೆ ಅಮೂಲ್ಯ ವಸ್ತುಗಳು ಕಾಣೆಯಾಗಿವೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಬಿಜೆಪಿಗರ ಈ ಆರೋಪಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿಯ ನಿವಾಸದ ವಿಚಾರವನ್ನು ಎಎಪಿ ಮುನ್ನಲೆಗೆ ತಂದಿದೆ.

ಜನವರಿ 8, 2025ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಾಕಿದ್ದ ಎಎಪಿ, “ಮೋದಿಯವರ ಅರಮನೆಯನ್ನು (ರಾಜ್‌ಮಹಲ್) ಜನರಿಗೆ ತೋರಿಸಬೇಕು” ಎಂದು ಬರೆದುಕೊಂಡಿದೆ.

“ಮೋದಿಯವರ ಅರಮನೆ ನಿರ್ಮಾಣಕ್ಕೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅದರ ಕಾರ್ಪೆಟ್‌ಗೆ 300 ಕೋಟಿ ರೂಪಾಯಿ ಮತ್ತು ಗೊಂಚಲು ದೀಪಗಳಿಗೆ 200 ಕೋಟಿ ರೂಪಾಯಿ ವ್ಯಯಿಸಲಾಗಿದೆ” ಎಂದು ಎಎಪಿ ಆರೋಪಿಸಿದೆ.

ಎಎಪಿ ನಾಯಕರ ಸಿಎಂ ಮನೆ ಪ್ರವೇಶಕ್ಕೆ ತಡೆ

ಭಾರೀ ಪ್ರಮಾಣದ ಹಣ ಖರ್ಚು ಮಾಡಲಾಗಿದೆ ಎಂದು ಬಿಜೆಪಿಗರು ಆರೋಪಿಸಿರುತ್ತಿರುವ ದೆಹಲಿ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ಶೀಶ್‌ಮಹಲ್’ ನಲ್ಲಿ ಪ್ರಸ್ತುತ ಸಿಎಂ ಅತಿಶಿ ಮರ್ಲೆನಾ ಅವರು ವಾಸವಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ, ನಿಯಮದ ಪ್ರಕಾರ ಅತಿಶಿ ಅವರಿಗೆ ಆ ಸರ್ಕಾರಿ ಬಂಗಲೆ ಹಂಚಿಕೆಯಾಗಿದೆ.

ಬಿಜೆಪಿಗರ ಆರೋಪ ಹಿನ್ನೆಲೆ, ಜನವರಿ 8ರಂದು ಮಾಧ್ಯಮದವರಿಗೆ ಶೀಶ್‌ಮಹಲ್ ತೋರಿಸಲು ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಸೌರಭ್ ಭಾರದ್ವಾಜ್ ಮುಂದಾಗಿದ್ದರು. ಆದರೆ, ಸಿಎಂ ಮನೆ ಗೇಟ್ ಬಳಿ ಅವರನ್ನು ಪೊಲೀಸರು ತಡೆದಿದ್ದಾರೆ. ಒಳಗೆ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ.

ಈ ಕಾರಣಕ್ಕೆ ಪೊಲೀಸರು ಮತ್ತು ಎಎಪಿ ನಾಯಕರ ನಡುವೆ ಸಿಎಂ ಮನೆ ಗೇಟ್ ಬಳಿ ವಾಗ್ವಾದ ನಡೆದಿದೆ.

“ನಮ್ಮನ್ನು ತಡೆಯಲು ನಿಮಗೆ ಯಾರು ಸೂಚನೆ ನೀಡಿದ್ದಾರೆ? ನಾನೊಬ್ಬ ಸಚಿವ, ಪರಿಶೀಲನೆಗಾಗಿ ಇಲ್ಲಿಗೆ ಬಂದಿದ್ದೇನೆ. ನೀವು ನನ್ನನ್ನು ಹೇಗೆ ತಡೆಯುತ್ತೀರಿ? ಯಾರ ಆದೇಶದ ಮೇರೆಗೆ? ಲೆಫ್ಟಿನೆಂಟ್ ಗವರ್ನರ್ ಅವರಿಂದ ನಿಮಗೆ ನಿರ್ದೇಶನ ಬಂದಿದೆಯಾ? ಅವರು ನನ್ನ ಸ್ಥಾನಕ್ಕಿಂತ ಮೇಲೆ ಒಂದು ಅಧಿಕಾರ ಹೊಂದಿದ್ದಾರೆ ಅಷ್ಟೆ” ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಭಾರದ್ವಾಜ್ ಅವರು, “ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ, ಬಿಜೆಪಿ ಹೇಳಿಕೊಳ್ಳುತ್ತಿರುವ ಚಿನ್ನದ ಕಮೋಡ್, ಈಜುಕೊಳ ಮತ್ತು ಮಿನಿಬಾರ್ ಅನ್ನು ಹುಡುಕಲು ಪ್ರಯತ್ನಿಸುತ್ತೇವೆ” ಎಂದಿದ್ದರು.

“ಸಿಎಂ ಮನೆ ಸರ್ಕಾರದ ಆಸ್ತಿ ಎಂಬುವುದನ್ನು ಗಮನಿಸಬೇಕು. ಅವುಗಳನ್ನು ತೆರಿಗೆದಾರರ ಹಣದಿಂದ ನಿರ್ಮಿಸಲಾಗಿದೆ ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿರ್ಮಿಸಲಾಗಿದೆ. ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಗಳಿದ್ದರೆ ತನಿಖೆ ಮಾಡಬೇಕು” ಎಂದು ಭಾರದ್ವಾಜ್ ಹೇಳಿದ್ದರು.

ಪ್ರಧಾನ ಮಂತ್ರಿಯ ನಿವಾಸವನ್ನು ‘ರಾಜ್‌ಮಹಲ್‌’ ಎಂದು ಕರೆದ ಸಂಜಯ್‌ ಸಿಂಗ್ ಮತ್ತು ಸೌರಭ್ ಭಾರದ್ವಾಜ್, “ನಾವು 2,700 ಕೋಟಿಯಲ್ಲಿ ನಿರ್ಮಿಸಿದ ಪ್ರಧಾನಿ ನಿವಾಸಕ್ಕೆ ಮಾಧ್ಯಮದವರನ್ನು ಕರೆದುಕೊಂಡು ಹೋಗುತ್ತೇವೆ ಎಂದಿದ್ದರು.

ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯ ಮತದಾನ ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಪ್ರಮುಖ ಸ್ಪರ್ಧೆ ಏರ್ಪಡಲಿದೆ.

ಎಎಪಿ ಮೂರನೇ ಬಾರಿಗೆ ರಾಜಧಾನಿಯ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಬಿಜೆಪಿ ಎರಡು ದಶಕಗಳ ಬಳಿಕ ದೆಹಲಿ ಮೇಲೆ ಹಿಡಿತ ಸಾಧಿಸಲು ತಂತ್ರ ಹೆಣೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಎಎಪಿಯ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್, ಏಕಾಂಗಿ ಹೋರಾಟಕ್ಕೆ ಸಜ್ಜಾಗಿದೆ.

ಇದನ್ನೂ ಓದಿ : ಸಂಭಾಲ್ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ನಿಂದ ಸಿವಿಲ್ ನ್ಯಾಯಾಲಯದ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...