Homeಮುಖಪುಟಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ‘ಶೀಶ್ ಮಹಲ್ ಮತ್ತು ರಾಜ್‌ಮಹಲ್‘ ಎಂಬ ಎರಡು ಬಂಗಲೆಗಳನ್ನು ಮುಂದಿಟ್ಟುಕೊಂಡು ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಕಿತ್ತಾಟ ಶುರು ಮಾಡಿದ್ದಾರೆ.

ಶೀಶ್ ಮಹಲ್ ಮತ್ತು ರಾಜ್‌ಮಹಲ್ ಎಂಬ ಎರಡು ಬಂಗಲೆಗಳೇ ಪ್ರಸ್ತುತ ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿವಾಸವನ್ನು ‘ರಾಜ್‌ಮಹಲ್’ ಎಂದು ಕರೆದಿರುವ ದೆಹಲಿಯ ಆಡಳಿತರೂಢ ಎಎಪಿ, ಅ ಬಂಗಲೆಯ ನವೀಕರಣಕ್ಕೆ ಬರೋಬ್ಬರಿ 2,700 ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ, ಅವರ ಅಧಿಕೃತ ನಿವಾಸ ಶೀಶ್‌ ಮಹಲ್‌ನ ನವೀಕರಣಕ್ಕೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಜ್ರಿವಾಲ್ ಬಂಗಲೆಯನ್ನು ಖಾಲಿ ಮಾಡಿದ ನಂತರ “ಗೋಲ್ಡನ್ ಕಮೋಡ್” ಸೇರಿದಂತೆ ಅಮೂಲ್ಯ ವಸ್ತುಗಳು ಕಾಣೆಯಾಗಿವೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಬಿಜೆಪಿಗರ ಈ ಆರೋಪಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿಯ ನಿವಾಸದ ವಿಚಾರವನ್ನು ಎಎಪಿ ಮುನ್ನಲೆಗೆ ತಂದಿದೆ.

ಜನವರಿ 8, 2025ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಾಕಿದ್ದ ಎಎಪಿ, “ಮೋದಿಯವರ ಅರಮನೆಯನ್ನು (ರಾಜ್‌ಮಹಲ್) ಜನರಿಗೆ ತೋರಿಸಬೇಕು” ಎಂದು ಬರೆದುಕೊಂಡಿದೆ.

“ಮೋದಿಯವರ ಅರಮನೆ ನಿರ್ಮಾಣಕ್ಕೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅದರ ಕಾರ್ಪೆಟ್‌ಗೆ 300 ಕೋಟಿ ರೂಪಾಯಿ ಮತ್ತು ಗೊಂಚಲು ದೀಪಗಳಿಗೆ 200 ಕೋಟಿ ರೂಪಾಯಿ ವ್ಯಯಿಸಲಾಗಿದೆ” ಎಂದು ಎಎಪಿ ಆರೋಪಿಸಿದೆ.

ಎಎಪಿ ನಾಯಕರ ಸಿಎಂ ಮನೆ ಪ್ರವೇಶಕ್ಕೆ ತಡೆ

ಭಾರೀ ಪ್ರಮಾಣದ ಹಣ ಖರ್ಚು ಮಾಡಲಾಗಿದೆ ಎಂದು ಬಿಜೆಪಿಗರು ಆರೋಪಿಸಿರುತ್ತಿರುವ ದೆಹಲಿ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ಶೀಶ್‌ಮಹಲ್’ ನಲ್ಲಿ ಪ್ರಸ್ತುತ ಸಿಎಂ ಅತಿಶಿ ಮರ್ಲೆನಾ ಅವರು ವಾಸವಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ, ನಿಯಮದ ಪ್ರಕಾರ ಅತಿಶಿ ಅವರಿಗೆ ಆ ಸರ್ಕಾರಿ ಬಂಗಲೆ ಹಂಚಿಕೆಯಾಗಿದೆ.

ಬಿಜೆಪಿಗರ ಆರೋಪ ಹಿನ್ನೆಲೆ, ಜನವರಿ 8ರಂದು ಮಾಧ್ಯಮದವರಿಗೆ ಶೀಶ್‌ಮಹಲ್ ತೋರಿಸಲು ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಸೌರಭ್ ಭಾರದ್ವಾಜ್ ಮುಂದಾಗಿದ್ದರು. ಆದರೆ, ಸಿಎಂ ಮನೆ ಗೇಟ್ ಬಳಿ ಅವರನ್ನು ಪೊಲೀಸರು ತಡೆದಿದ್ದಾರೆ. ಒಳಗೆ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ.

ಈ ಕಾರಣಕ್ಕೆ ಪೊಲೀಸರು ಮತ್ತು ಎಎಪಿ ನಾಯಕರ ನಡುವೆ ಸಿಎಂ ಮನೆ ಗೇಟ್ ಬಳಿ ವಾಗ್ವಾದ ನಡೆದಿದೆ.

“ನಮ್ಮನ್ನು ತಡೆಯಲು ನಿಮಗೆ ಯಾರು ಸೂಚನೆ ನೀಡಿದ್ದಾರೆ? ನಾನೊಬ್ಬ ಸಚಿವ, ಪರಿಶೀಲನೆಗಾಗಿ ಇಲ್ಲಿಗೆ ಬಂದಿದ್ದೇನೆ. ನೀವು ನನ್ನನ್ನು ಹೇಗೆ ತಡೆಯುತ್ತೀರಿ? ಯಾರ ಆದೇಶದ ಮೇರೆಗೆ? ಲೆಫ್ಟಿನೆಂಟ್ ಗವರ್ನರ್ ಅವರಿಂದ ನಿಮಗೆ ನಿರ್ದೇಶನ ಬಂದಿದೆಯಾ? ಅವರು ನನ್ನ ಸ್ಥಾನಕ್ಕಿಂತ ಮೇಲೆ ಒಂದು ಅಧಿಕಾರ ಹೊಂದಿದ್ದಾರೆ ಅಷ್ಟೆ” ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಭಾರದ್ವಾಜ್ ಅವರು, “ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ, ಬಿಜೆಪಿ ಹೇಳಿಕೊಳ್ಳುತ್ತಿರುವ ಚಿನ್ನದ ಕಮೋಡ್, ಈಜುಕೊಳ ಮತ್ತು ಮಿನಿಬಾರ್ ಅನ್ನು ಹುಡುಕಲು ಪ್ರಯತ್ನಿಸುತ್ತೇವೆ” ಎಂದಿದ್ದರು.

“ಸಿಎಂ ಮನೆ ಸರ್ಕಾರದ ಆಸ್ತಿ ಎಂಬುವುದನ್ನು ಗಮನಿಸಬೇಕು. ಅವುಗಳನ್ನು ತೆರಿಗೆದಾರರ ಹಣದಿಂದ ನಿರ್ಮಿಸಲಾಗಿದೆ ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿರ್ಮಿಸಲಾಗಿದೆ. ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಗಳಿದ್ದರೆ ತನಿಖೆ ಮಾಡಬೇಕು” ಎಂದು ಭಾರದ್ವಾಜ್ ಹೇಳಿದ್ದರು.

ಪ್ರಧಾನ ಮಂತ್ರಿಯ ನಿವಾಸವನ್ನು ‘ರಾಜ್‌ಮಹಲ್‌’ ಎಂದು ಕರೆದ ಸಂಜಯ್‌ ಸಿಂಗ್ ಮತ್ತು ಸೌರಭ್ ಭಾರದ್ವಾಜ್, “ನಾವು 2,700 ಕೋಟಿಯಲ್ಲಿ ನಿರ್ಮಿಸಿದ ಪ್ರಧಾನಿ ನಿವಾಸಕ್ಕೆ ಮಾಧ್ಯಮದವರನ್ನು ಕರೆದುಕೊಂಡು ಹೋಗುತ್ತೇವೆ ಎಂದಿದ್ದರು.

ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯ ಮತದಾನ ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಪ್ರಮುಖ ಸ್ಪರ್ಧೆ ಏರ್ಪಡಲಿದೆ.

ಎಎಪಿ ಮೂರನೇ ಬಾರಿಗೆ ರಾಜಧಾನಿಯ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಬಿಜೆಪಿ ಎರಡು ದಶಕಗಳ ಬಳಿಕ ದೆಹಲಿ ಮೇಲೆ ಹಿಡಿತ ಸಾಧಿಸಲು ತಂತ್ರ ಹೆಣೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಎಎಪಿಯ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್, ಏಕಾಂಗಿ ಹೋರಾಟಕ್ಕೆ ಸಜ್ಜಾಗಿದೆ.

ಇದನ್ನೂ ಓದಿ : ಸಂಭಾಲ್ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ನಿಂದ ಸಿವಿಲ್ ನ್ಯಾಯಾಲಯದ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...