Homeಮುಖಪುಟಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ‘ಶೀಶ್ ಮಹಲ್ ಮತ್ತು ರಾಜ್‌ಮಹಲ್‘ ಎಂಬ ಎರಡು ಬಂಗಲೆಗಳನ್ನು ಮುಂದಿಟ್ಟುಕೊಂಡು ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಕಿತ್ತಾಟ ಶುರು ಮಾಡಿದ್ದಾರೆ.

ಶೀಶ್ ಮಹಲ್ ಮತ್ತು ರಾಜ್‌ಮಹಲ್ ಎಂಬ ಎರಡು ಬಂಗಲೆಗಳೇ ಪ್ರಸ್ತುತ ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿವಾಸವನ್ನು ‘ರಾಜ್‌ಮಹಲ್’ ಎಂದು ಕರೆದಿರುವ ದೆಹಲಿಯ ಆಡಳಿತರೂಢ ಎಎಪಿ, ಅ ಬಂಗಲೆಯ ನವೀಕರಣಕ್ಕೆ ಬರೋಬ್ಬರಿ 2,700 ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ, ಅವರ ಅಧಿಕೃತ ನಿವಾಸ ಶೀಶ್‌ ಮಹಲ್‌ನ ನವೀಕರಣಕ್ಕೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಜ್ರಿವಾಲ್ ಬಂಗಲೆಯನ್ನು ಖಾಲಿ ಮಾಡಿದ ನಂತರ “ಗೋಲ್ಡನ್ ಕಮೋಡ್” ಸೇರಿದಂತೆ ಅಮೂಲ್ಯ ವಸ್ತುಗಳು ಕಾಣೆಯಾಗಿವೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಬಿಜೆಪಿಗರ ಈ ಆರೋಪಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿಯ ನಿವಾಸದ ವಿಚಾರವನ್ನು ಎಎಪಿ ಮುನ್ನಲೆಗೆ ತಂದಿದೆ.

ಜನವರಿ 8, 2025ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಾಕಿದ್ದ ಎಎಪಿ, “ಮೋದಿಯವರ ಅರಮನೆಯನ್ನು (ರಾಜ್‌ಮಹಲ್) ಜನರಿಗೆ ತೋರಿಸಬೇಕು” ಎಂದು ಬರೆದುಕೊಂಡಿದೆ.

“ಮೋದಿಯವರ ಅರಮನೆ ನಿರ್ಮಾಣಕ್ಕೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅದರ ಕಾರ್ಪೆಟ್‌ಗೆ 300 ಕೋಟಿ ರೂಪಾಯಿ ಮತ್ತು ಗೊಂಚಲು ದೀಪಗಳಿಗೆ 200 ಕೋಟಿ ರೂಪಾಯಿ ವ್ಯಯಿಸಲಾಗಿದೆ” ಎಂದು ಎಎಪಿ ಆರೋಪಿಸಿದೆ.

ಎಎಪಿ ನಾಯಕರ ಸಿಎಂ ಮನೆ ಪ್ರವೇಶಕ್ಕೆ ತಡೆ

ಭಾರೀ ಪ್ರಮಾಣದ ಹಣ ಖರ್ಚು ಮಾಡಲಾಗಿದೆ ಎಂದು ಬಿಜೆಪಿಗರು ಆರೋಪಿಸಿರುತ್ತಿರುವ ದೆಹಲಿ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ಶೀಶ್‌ಮಹಲ್’ ನಲ್ಲಿ ಪ್ರಸ್ತುತ ಸಿಎಂ ಅತಿಶಿ ಮರ್ಲೆನಾ ಅವರು ವಾಸವಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ, ನಿಯಮದ ಪ್ರಕಾರ ಅತಿಶಿ ಅವರಿಗೆ ಆ ಸರ್ಕಾರಿ ಬಂಗಲೆ ಹಂಚಿಕೆಯಾಗಿದೆ.

ಬಿಜೆಪಿಗರ ಆರೋಪ ಹಿನ್ನೆಲೆ, ಜನವರಿ 8ರಂದು ಮಾಧ್ಯಮದವರಿಗೆ ಶೀಶ್‌ಮಹಲ್ ತೋರಿಸಲು ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಸೌರಭ್ ಭಾರದ್ವಾಜ್ ಮುಂದಾಗಿದ್ದರು. ಆದರೆ, ಸಿಎಂ ಮನೆ ಗೇಟ್ ಬಳಿ ಅವರನ್ನು ಪೊಲೀಸರು ತಡೆದಿದ್ದಾರೆ. ಒಳಗೆ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ.

ಈ ಕಾರಣಕ್ಕೆ ಪೊಲೀಸರು ಮತ್ತು ಎಎಪಿ ನಾಯಕರ ನಡುವೆ ಸಿಎಂ ಮನೆ ಗೇಟ್ ಬಳಿ ವಾಗ್ವಾದ ನಡೆದಿದೆ.

“ನಮ್ಮನ್ನು ತಡೆಯಲು ನಿಮಗೆ ಯಾರು ಸೂಚನೆ ನೀಡಿದ್ದಾರೆ? ನಾನೊಬ್ಬ ಸಚಿವ, ಪರಿಶೀಲನೆಗಾಗಿ ಇಲ್ಲಿಗೆ ಬಂದಿದ್ದೇನೆ. ನೀವು ನನ್ನನ್ನು ಹೇಗೆ ತಡೆಯುತ್ತೀರಿ? ಯಾರ ಆದೇಶದ ಮೇರೆಗೆ? ಲೆಫ್ಟಿನೆಂಟ್ ಗವರ್ನರ್ ಅವರಿಂದ ನಿಮಗೆ ನಿರ್ದೇಶನ ಬಂದಿದೆಯಾ? ಅವರು ನನ್ನ ಸ್ಥಾನಕ್ಕಿಂತ ಮೇಲೆ ಒಂದು ಅಧಿಕಾರ ಹೊಂದಿದ್ದಾರೆ ಅಷ್ಟೆ” ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಭಾರದ್ವಾಜ್ ಅವರು, “ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ, ಬಿಜೆಪಿ ಹೇಳಿಕೊಳ್ಳುತ್ತಿರುವ ಚಿನ್ನದ ಕಮೋಡ್, ಈಜುಕೊಳ ಮತ್ತು ಮಿನಿಬಾರ್ ಅನ್ನು ಹುಡುಕಲು ಪ್ರಯತ್ನಿಸುತ್ತೇವೆ” ಎಂದಿದ್ದರು.

“ಸಿಎಂ ಮನೆ ಸರ್ಕಾರದ ಆಸ್ತಿ ಎಂಬುವುದನ್ನು ಗಮನಿಸಬೇಕು. ಅವುಗಳನ್ನು ತೆರಿಗೆದಾರರ ಹಣದಿಂದ ನಿರ್ಮಿಸಲಾಗಿದೆ ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿರ್ಮಿಸಲಾಗಿದೆ. ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಗಳಿದ್ದರೆ ತನಿಖೆ ಮಾಡಬೇಕು” ಎಂದು ಭಾರದ್ವಾಜ್ ಹೇಳಿದ್ದರು.

ಪ್ರಧಾನ ಮಂತ್ರಿಯ ನಿವಾಸವನ್ನು ‘ರಾಜ್‌ಮಹಲ್‌’ ಎಂದು ಕರೆದ ಸಂಜಯ್‌ ಸಿಂಗ್ ಮತ್ತು ಸೌರಭ್ ಭಾರದ್ವಾಜ್, “ನಾವು 2,700 ಕೋಟಿಯಲ್ಲಿ ನಿರ್ಮಿಸಿದ ಪ್ರಧಾನಿ ನಿವಾಸಕ್ಕೆ ಮಾಧ್ಯಮದವರನ್ನು ಕರೆದುಕೊಂಡು ಹೋಗುತ್ತೇವೆ ಎಂದಿದ್ದರು.

ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯ ಮತದಾನ ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಪ್ರಮುಖ ಸ್ಪರ್ಧೆ ಏರ್ಪಡಲಿದೆ.

ಎಎಪಿ ಮೂರನೇ ಬಾರಿಗೆ ರಾಜಧಾನಿಯ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಬಿಜೆಪಿ ಎರಡು ದಶಕಗಳ ಬಳಿಕ ದೆಹಲಿ ಮೇಲೆ ಹಿಡಿತ ಸಾಧಿಸಲು ತಂತ್ರ ಹೆಣೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಎಎಪಿಯ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್, ಏಕಾಂಗಿ ಹೋರಾಟಕ್ಕೆ ಸಜ್ಜಾಗಿದೆ.

ಇದನ್ನೂ ಓದಿ : ಸಂಭಾಲ್ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ನಿಂದ ಸಿವಿಲ್ ನ್ಯಾಯಾಲಯದ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...