Homeಮುಖಪುಟಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ‘ಶೀಶ್ ಮಹಲ್ ಮತ್ತು ರಾಜ್‌ಮಹಲ್‘ ಎಂಬ ಎರಡು ಬಂಗಲೆಗಳನ್ನು ಮುಂದಿಟ್ಟುಕೊಂಡು ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಕಿತ್ತಾಟ ಶುರು ಮಾಡಿದ್ದಾರೆ.

ಶೀಶ್ ಮಹಲ್ ಮತ್ತು ರಾಜ್‌ಮಹಲ್ ಎಂಬ ಎರಡು ಬಂಗಲೆಗಳೇ ಪ್ರಸ್ತುತ ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿವಾಸವನ್ನು ‘ರಾಜ್‌ಮಹಲ್’ ಎಂದು ಕರೆದಿರುವ ದೆಹಲಿಯ ಆಡಳಿತರೂಢ ಎಎಪಿ, ಅ ಬಂಗಲೆಯ ನವೀಕರಣಕ್ಕೆ ಬರೋಬ್ಬರಿ 2,700 ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ, ಅವರ ಅಧಿಕೃತ ನಿವಾಸ ಶೀಶ್‌ ಮಹಲ್‌ನ ನವೀಕರಣಕ್ಕೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಜ್ರಿವಾಲ್ ಬಂಗಲೆಯನ್ನು ಖಾಲಿ ಮಾಡಿದ ನಂತರ “ಗೋಲ್ಡನ್ ಕಮೋಡ್” ಸೇರಿದಂತೆ ಅಮೂಲ್ಯ ವಸ್ತುಗಳು ಕಾಣೆಯಾಗಿವೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಬಿಜೆಪಿಗರ ಈ ಆರೋಪಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿಯ ನಿವಾಸದ ವಿಚಾರವನ್ನು ಎಎಪಿ ಮುನ್ನಲೆಗೆ ತಂದಿದೆ.

ಜನವರಿ 8, 2025ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಾಕಿದ್ದ ಎಎಪಿ, “ಮೋದಿಯವರ ಅರಮನೆಯನ್ನು (ರಾಜ್‌ಮಹಲ್) ಜನರಿಗೆ ತೋರಿಸಬೇಕು” ಎಂದು ಬರೆದುಕೊಂಡಿದೆ.

“ಮೋದಿಯವರ ಅರಮನೆ ನಿರ್ಮಾಣಕ್ಕೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅದರ ಕಾರ್ಪೆಟ್‌ಗೆ 300 ಕೋಟಿ ರೂಪಾಯಿ ಮತ್ತು ಗೊಂಚಲು ದೀಪಗಳಿಗೆ 200 ಕೋಟಿ ರೂಪಾಯಿ ವ್ಯಯಿಸಲಾಗಿದೆ” ಎಂದು ಎಎಪಿ ಆರೋಪಿಸಿದೆ.

ಎಎಪಿ ನಾಯಕರ ಸಿಎಂ ಮನೆ ಪ್ರವೇಶಕ್ಕೆ ತಡೆ

ಭಾರೀ ಪ್ರಮಾಣದ ಹಣ ಖರ್ಚು ಮಾಡಲಾಗಿದೆ ಎಂದು ಬಿಜೆಪಿಗರು ಆರೋಪಿಸಿರುತ್ತಿರುವ ದೆಹಲಿ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ಶೀಶ್‌ಮಹಲ್’ ನಲ್ಲಿ ಪ್ರಸ್ತುತ ಸಿಎಂ ಅತಿಶಿ ಮರ್ಲೆನಾ ಅವರು ವಾಸವಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ, ನಿಯಮದ ಪ್ರಕಾರ ಅತಿಶಿ ಅವರಿಗೆ ಆ ಸರ್ಕಾರಿ ಬಂಗಲೆ ಹಂಚಿಕೆಯಾಗಿದೆ.

ಬಿಜೆಪಿಗರ ಆರೋಪ ಹಿನ್ನೆಲೆ, ಜನವರಿ 8ರಂದು ಮಾಧ್ಯಮದವರಿಗೆ ಶೀಶ್‌ಮಹಲ್ ತೋರಿಸಲು ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಸೌರಭ್ ಭಾರದ್ವಾಜ್ ಮುಂದಾಗಿದ್ದರು. ಆದರೆ, ಸಿಎಂ ಮನೆ ಗೇಟ್ ಬಳಿ ಅವರನ್ನು ಪೊಲೀಸರು ತಡೆದಿದ್ದಾರೆ. ಒಳಗೆ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ.

ಈ ಕಾರಣಕ್ಕೆ ಪೊಲೀಸರು ಮತ್ತು ಎಎಪಿ ನಾಯಕರ ನಡುವೆ ಸಿಎಂ ಮನೆ ಗೇಟ್ ಬಳಿ ವಾಗ್ವಾದ ನಡೆದಿದೆ.

“ನಮ್ಮನ್ನು ತಡೆಯಲು ನಿಮಗೆ ಯಾರು ಸೂಚನೆ ನೀಡಿದ್ದಾರೆ? ನಾನೊಬ್ಬ ಸಚಿವ, ಪರಿಶೀಲನೆಗಾಗಿ ಇಲ್ಲಿಗೆ ಬಂದಿದ್ದೇನೆ. ನೀವು ನನ್ನನ್ನು ಹೇಗೆ ತಡೆಯುತ್ತೀರಿ? ಯಾರ ಆದೇಶದ ಮೇರೆಗೆ? ಲೆಫ್ಟಿನೆಂಟ್ ಗವರ್ನರ್ ಅವರಿಂದ ನಿಮಗೆ ನಿರ್ದೇಶನ ಬಂದಿದೆಯಾ? ಅವರು ನನ್ನ ಸ್ಥಾನಕ್ಕಿಂತ ಮೇಲೆ ಒಂದು ಅಧಿಕಾರ ಹೊಂದಿದ್ದಾರೆ ಅಷ್ಟೆ” ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಭಾರದ್ವಾಜ್ ಅವರು, “ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ, ಬಿಜೆಪಿ ಹೇಳಿಕೊಳ್ಳುತ್ತಿರುವ ಚಿನ್ನದ ಕಮೋಡ್, ಈಜುಕೊಳ ಮತ್ತು ಮಿನಿಬಾರ್ ಅನ್ನು ಹುಡುಕಲು ಪ್ರಯತ್ನಿಸುತ್ತೇವೆ” ಎಂದಿದ್ದರು.

“ಸಿಎಂ ಮನೆ ಸರ್ಕಾರದ ಆಸ್ತಿ ಎಂಬುವುದನ್ನು ಗಮನಿಸಬೇಕು. ಅವುಗಳನ್ನು ತೆರಿಗೆದಾರರ ಹಣದಿಂದ ನಿರ್ಮಿಸಲಾಗಿದೆ ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿರ್ಮಿಸಲಾಗಿದೆ. ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಗಳಿದ್ದರೆ ತನಿಖೆ ಮಾಡಬೇಕು” ಎಂದು ಭಾರದ್ವಾಜ್ ಹೇಳಿದ್ದರು.

ಪ್ರಧಾನ ಮಂತ್ರಿಯ ನಿವಾಸವನ್ನು ‘ರಾಜ್‌ಮಹಲ್‌’ ಎಂದು ಕರೆದ ಸಂಜಯ್‌ ಸಿಂಗ್ ಮತ್ತು ಸೌರಭ್ ಭಾರದ್ವಾಜ್, “ನಾವು 2,700 ಕೋಟಿಯಲ್ಲಿ ನಿರ್ಮಿಸಿದ ಪ್ರಧಾನಿ ನಿವಾಸಕ್ಕೆ ಮಾಧ್ಯಮದವರನ್ನು ಕರೆದುಕೊಂಡು ಹೋಗುತ್ತೇವೆ ಎಂದಿದ್ದರು.

ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯ ಮತದಾನ ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಪ್ರಮುಖ ಸ್ಪರ್ಧೆ ಏರ್ಪಡಲಿದೆ.

ಎಎಪಿ ಮೂರನೇ ಬಾರಿಗೆ ರಾಜಧಾನಿಯ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಬಿಜೆಪಿ ಎರಡು ದಶಕಗಳ ಬಳಿಕ ದೆಹಲಿ ಮೇಲೆ ಹಿಡಿತ ಸಾಧಿಸಲು ತಂತ್ರ ಹೆಣೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಎಎಪಿಯ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್, ಏಕಾಂಗಿ ಹೋರಾಟಕ್ಕೆ ಸಜ್ಜಾಗಿದೆ.

ಇದನ್ನೂ ಓದಿ : ಸಂಭಾಲ್ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ನಿಂದ ಸಿವಿಲ್ ನ್ಯಾಯಾಲಯದ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...