Homeಮುಖಪುಟಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ‘ಶೀಶ್ ಮಹಲ್ ಮತ್ತು ರಾಜ್‌ಮಹಲ್‘ ಎಂಬ ಎರಡು ಬಂಗಲೆಗಳನ್ನು ಮುಂದಿಟ್ಟುಕೊಂಡು ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಕಿತ್ತಾಟ ಶುರು ಮಾಡಿದ್ದಾರೆ.

ಶೀಶ್ ಮಹಲ್ ಮತ್ತು ರಾಜ್‌ಮಹಲ್ ಎಂಬ ಎರಡು ಬಂಗಲೆಗಳೇ ಪ್ರಸ್ತುತ ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿವಾಸವನ್ನು ‘ರಾಜ್‌ಮಹಲ್’ ಎಂದು ಕರೆದಿರುವ ದೆಹಲಿಯ ಆಡಳಿತರೂಢ ಎಎಪಿ, ಅ ಬಂಗಲೆಯ ನವೀಕರಣಕ್ಕೆ ಬರೋಬ್ಬರಿ 2,700 ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ, ಅವರ ಅಧಿಕೃತ ನಿವಾಸ ಶೀಶ್‌ ಮಹಲ್‌ನ ನವೀಕರಣಕ್ಕೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಜ್ರಿವಾಲ್ ಬಂಗಲೆಯನ್ನು ಖಾಲಿ ಮಾಡಿದ ನಂತರ “ಗೋಲ್ಡನ್ ಕಮೋಡ್” ಸೇರಿದಂತೆ ಅಮೂಲ್ಯ ವಸ್ತುಗಳು ಕಾಣೆಯಾಗಿವೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಬಿಜೆಪಿಗರ ಈ ಆರೋಪಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿಯ ನಿವಾಸದ ವಿಚಾರವನ್ನು ಎಎಪಿ ಮುನ್ನಲೆಗೆ ತಂದಿದೆ.

ಜನವರಿ 8, 2025ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಾಕಿದ್ದ ಎಎಪಿ, “ಮೋದಿಯವರ ಅರಮನೆಯನ್ನು (ರಾಜ್‌ಮಹಲ್) ಜನರಿಗೆ ತೋರಿಸಬೇಕು” ಎಂದು ಬರೆದುಕೊಂಡಿದೆ.

“ಮೋದಿಯವರ ಅರಮನೆ ನಿರ್ಮಾಣಕ್ಕೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅದರ ಕಾರ್ಪೆಟ್‌ಗೆ 300 ಕೋಟಿ ರೂಪಾಯಿ ಮತ್ತು ಗೊಂಚಲು ದೀಪಗಳಿಗೆ 200 ಕೋಟಿ ರೂಪಾಯಿ ವ್ಯಯಿಸಲಾಗಿದೆ” ಎಂದು ಎಎಪಿ ಆರೋಪಿಸಿದೆ.

ಎಎಪಿ ನಾಯಕರ ಸಿಎಂ ಮನೆ ಪ್ರವೇಶಕ್ಕೆ ತಡೆ

ಭಾರೀ ಪ್ರಮಾಣದ ಹಣ ಖರ್ಚು ಮಾಡಲಾಗಿದೆ ಎಂದು ಬಿಜೆಪಿಗರು ಆರೋಪಿಸಿರುತ್ತಿರುವ ದೆಹಲಿ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ಶೀಶ್‌ಮಹಲ್’ ನಲ್ಲಿ ಪ್ರಸ್ತುತ ಸಿಎಂ ಅತಿಶಿ ಮರ್ಲೆನಾ ಅವರು ವಾಸವಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ, ನಿಯಮದ ಪ್ರಕಾರ ಅತಿಶಿ ಅವರಿಗೆ ಆ ಸರ್ಕಾರಿ ಬಂಗಲೆ ಹಂಚಿಕೆಯಾಗಿದೆ.

ಬಿಜೆಪಿಗರ ಆರೋಪ ಹಿನ್ನೆಲೆ, ಜನವರಿ 8ರಂದು ಮಾಧ್ಯಮದವರಿಗೆ ಶೀಶ್‌ಮಹಲ್ ತೋರಿಸಲು ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಸೌರಭ್ ಭಾರದ್ವಾಜ್ ಮುಂದಾಗಿದ್ದರು. ಆದರೆ, ಸಿಎಂ ಮನೆ ಗೇಟ್ ಬಳಿ ಅವರನ್ನು ಪೊಲೀಸರು ತಡೆದಿದ್ದಾರೆ. ಒಳಗೆ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ.

ಈ ಕಾರಣಕ್ಕೆ ಪೊಲೀಸರು ಮತ್ತು ಎಎಪಿ ನಾಯಕರ ನಡುವೆ ಸಿಎಂ ಮನೆ ಗೇಟ್ ಬಳಿ ವಾಗ್ವಾದ ನಡೆದಿದೆ.

“ನಮ್ಮನ್ನು ತಡೆಯಲು ನಿಮಗೆ ಯಾರು ಸೂಚನೆ ನೀಡಿದ್ದಾರೆ? ನಾನೊಬ್ಬ ಸಚಿವ, ಪರಿಶೀಲನೆಗಾಗಿ ಇಲ್ಲಿಗೆ ಬಂದಿದ್ದೇನೆ. ನೀವು ನನ್ನನ್ನು ಹೇಗೆ ತಡೆಯುತ್ತೀರಿ? ಯಾರ ಆದೇಶದ ಮೇರೆಗೆ? ಲೆಫ್ಟಿನೆಂಟ್ ಗವರ್ನರ್ ಅವರಿಂದ ನಿಮಗೆ ನಿರ್ದೇಶನ ಬಂದಿದೆಯಾ? ಅವರು ನನ್ನ ಸ್ಥಾನಕ್ಕಿಂತ ಮೇಲೆ ಒಂದು ಅಧಿಕಾರ ಹೊಂದಿದ್ದಾರೆ ಅಷ್ಟೆ” ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಭಾರದ್ವಾಜ್ ಅವರು, “ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ, ಬಿಜೆಪಿ ಹೇಳಿಕೊಳ್ಳುತ್ತಿರುವ ಚಿನ್ನದ ಕಮೋಡ್, ಈಜುಕೊಳ ಮತ್ತು ಮಿನಿಬಾರ್ ಅನ್ನು ಹುಡುಕಲು ಪ್ರಯತ್ನಿಸುತ್ತೇವೆ” ಎಂದಿದ್ದರು.

“ಸಿಎಂ ಮನೆ ಸರ್ಕಾರದ ಆಸ್ತಿ ಎಂಬುವುದನ್ನು ಗಮನಿಸಬೇಕು. ಅವುಗಳನ್ನು ತೆರಿಗೆದಾರರ ಹಣದಿಂದ ನಿರ್ಮಿಸಲಾಗಿದೆ ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿರ್ಮಿಸಲಾಗಿದೆ. ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಗಳಿದ್ದರೆ ತನಿಖೆ ಮಾಡಬೇಕು” ಎಂದು ಭಾರದ್ವಾಜ್ ಹೇಳಿದ್ದರು.

ಪ್ರಧಾನ ಮಂತ್ರಿಯ ನಿವಾಸವನ್ನು ‘ರಾಜ್‌ಮಹಲ್‌’ ಎಂದು ಕರೆದ ಸಂಜಯ್‌ ಸಿಂಗ್ ಮತ್ತು ಸೌರಭ್ ಭಾರದ್ವಾಜ್, “ನಾವು 2,700 ಕೋಟಿಯಲ್ಲಿ ನಿರ್ಮಿಸಿದ ಪ್ರಧಾನಿ ನಿವಾಸಕ್ಕೆ ಮಾಧ್ಯಮದವರನ್ನು ಕರೆದುಕೊಂಡು ಹೋಗುತ್ತೇವೆ ಎಂದಿದ್ದರು.

ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯ ಮತದಾನ ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಪ್ರಮುಖ ಸ್ಪರ್ಧೆ ಏರ್ಪಡಲಿದೆ.

ಎಎಪಿ ಮೂರನೇ ಬಾರಿಗೆ ರಾಜಧಾನಿಯ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಬಿಜೆಪಿ ಎರಡು ದಶಕಗಳ ಬಳಿಕ ದೆಹಲಿ ಮೇಲೆ ಹಿಡಿತ ಸಾಧಿಸಲು ತಂತ್ರ ಹೆಣೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಎಎಪಿಯ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್, ಏಕಾಂಗಿ ಹೋರಾಟಕ್ಕೆ ಸಜ್ಜಾಗಿದೆ.

ಇದನ್ನೂ ಓದಿ : ಸಂಭಾಲ್ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ನಿಂದ ಸಿವಿಲ್ ನ್ಯಾಯಾಲಯದ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...