Homeಮುಖಪುಟಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

ಶೀಶ್ ಮಹಲ್ to ರಾಜ್‌ಮಹಲ್ : ಏನಿದು ದೆಹಲಿಯ ಬಂಗಲೆ ಗಲಾಟೆ?

- Advertisement -
- Advertisement -

ದೆಹಲಿ ವಿಧಾನಸಭೆ ಚುನಾವಣೆಗೂ ಮುನ್ನ ‘ಶೀಶ್ ಮಹಲ್ ಮತ್ತು ರಾಜ್‌ಮಹಲ್‘ ಎಂಬ ಎರಡು ಬಂಗಲೆಗಳನ್ನು ಮುಂದಿಟ್ಟುಕೊಂಡು ಆಮ್‌ ಆದ್ಮಿ ಪಕ್ಷ (ಎಎಪಿ) ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕರು ಕಿತ್ತಾಟ ಶುರು ಮಾಡಿದ್ದಾರೆ.

ಶೀಶ್ ಮಹಲ್ ಮತ್ತು ರಾಜ್‌ಮಹಲ್ ಎಂಬ ಎರಡು ಬಂಗಲೆಗಳೇ ಪ್ರಸ್ತುತ ದೆಹಲಿ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಮುಖ ಅಸ್ತ್ರವಾಗಿ ಮಾರ್ಪಟ್ಟಿದೆ.

ಪ್ರಧಾನಿ ನರೇಂದ್ರ ಮೋದಿಯವರ ನಿವಾಸವನ್ನು ‘ರಾಜ್‌ಮಹಲ್’ ಎಂದು ಕರೆದಿರುವ ದೆಹಲಿಯ ಆಡಳಿತರೂಢ ಎಎಪಿ, ಅ ಬಂಗಲೆಯ ನವೀಕರಣಕ್ಕೆ ಬರೋಬ್ಬರಿ 2,700 ಕೋಟಿ ರೂಪಾಯಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಆರೋಪಿಸಿದೆ.

ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮುಖ್ಯಮಂತ್ರಿಯಾಗಿದ್ದಾಗ, ಅವರ ಅಧಿಕೃತ ನಿವಾಸ ಶೀಶ್‌ ಮಹಲ್‌ನ ನವೀಕರಣಕ್ಕೆ ಭಾರೀ ಪ್ರಮಾಣದಲ್ಲಿ ಸಾರ್ವಜನಿಕರ ಹಣವನ್ನು ಖರ್ಚು ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.

ಕೇಜ್ರಿವಾಲ್ ಬಂಗಲೆಯನ್ನು ಖಾಲಿ ಮಾಡಿದ ನಂತರ “ಗೋಲ್ಡನ್ ಕಮೋಡ್” ಸೇರಿದಂತೆ ಅಮೂಲ್ಯ ವಸ್ತುಗಳು ಕಾಣೆಯಾಗಿವೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.

ಬಿಜೆಪಿಗರ ಈ ಆರೋಪಕ್ಕೆ ಪ್ರತ್ಯುತ್ತರವಾಗಿ ಪ್ರಧಾನಿಯ ನಿವಾಸದ ವಿಚಾರವನ್ನು ಎಎಪಿ ಮುನ್ನಲೆಗೆ ತಂದಿದೆ.

ಜನವರಿ 8, 2025ರಂದು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಒಂದನ್ನು ಹಾಕಿದ್ದ ಎಎಪಿ, “ಮೋದಿಯವರ ಅರಮನೆಯನ್ನು (ರಾಜ್‌ಮಹಲ್) ಜನರಿಗೆ ತೋರಿಸಬೇಕು” ಎಂದು ಬರೆದುಕೊಂಡಿದೆ.

“ಮೋದಿಯವರ ಅರಮನೆ ನಿರ್ಮಾಣಕ್ಕೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅದರ ಕಾರ್ಪೆಟ್‌ಗೆ 300 ಕೋಟಿ ರೂಪಾಯಿ ಮತ್ತು ಗೊಂಚಲು ದೀಪಗಳಿಗೆ 200 ಕೋಟಿ ರೂಪಾಯಿ ವ್ಯಯಿಸಲಾಗಿದೆ” ಎಂದು ಎಎಪಿ ಆರೋಪಿಸಿದೆ.

ಎಎಪಿ ನಾಯಕರ ಸಿಎಂ ಮನೆ ಪ್ರವೇಶಕ್ಕೆ ತಡೆ

ಭಾರೀ ಪ್ರಮಾಣದ ಹಣ ಖರ್ಚು ಮಾಡಲಾಗಿದೆ ಎಂದು ಬಿಜೆಪಿಗರು ಆರೋಪಿಸಿರುತ್ತಿರುವ ದೆಹಲಿ ಮುಖ್ಯಮಂತ್ರಿಯ ಅಧಿಕೃತ ನಿವಾಸ ‘ಶೀಶ್‌ಮಹಲ್’ ನಲ್ಲಿ ಪ್ರಸ್ತುತ ಸಿಎಂ ಅತಿಶಿ ಮರ್ಲೆನಾ ಅವರು ವಾಸವಿದ್ದಾರೆ. ಅರವಿಂದ್ ಕೇಜ್ರಿವಾಲ್ ಸಿಎಂ ಹುದ್ದೆಯಿಂದ ಕೆಳಗಿಳಿದ ಬಳಿಕ, ನಿಯಮದ ಪ್ರಕಾರ ಅತಿಶಿ ಅವರಿಗೆ ಆ ಸರ್ಕಾರಿ ಬಂಗಲೆ ಹಂಚಿಕೆಯಾಗಿದೆ.

ಬಿಜೆಪಿಗರ ಆರೋಪ ಹಿನ್ನೆಲೆ, ಜನವರಿ 8ರಂದು ಮಾಧ್ಯಮದವರಿಗೆ ಶೀಶ್‌ಮಹಲ್ ತೋರಿಸಲು ಎಎಪಿ ನಾಯಕರಾದ ಸಂಜಯ್ ಸಿಂಗ್ ಮತ್ತು ಸೌರಭ್ ಭಾರದ್ವಾಜ್ ಮುಂದಾಗಿದ್ದರು. ಆದರೆ, ಸಿಎಂ ಮನೆ ಗೇಟ್ ಬಳಿ ಅವರನ್ನು ಪೊಲೀಸರು ತಡೆದಿದ್ದಾರೆ. ಒಳಗೆ ಪ್ರವೇಶಿಸಲು ಅವಕಾಶ ಕೊಟ್ಟಿಲ್ಲ.

ಈ ಕಾರಣಕ್ಕೆ ಪೊಲೀಸರು ಮತ್ತು ಎಎಪಿ ನಾಯಕರ ನಡುವೆ ಸಿಎಂ ಮನೆ ಗೇಟ್ ಬಳಿ ವಾಗ್ವಾದ ನಡೆದಿದೆ.

“ನಮ್ಮನ್ನು ತಡೆಯಲು ನಿಮಗೆ ಯಾರು ಸೂಚನೆ ನೀಡಿದ್ದಾರೆ? ನಾನೊಬ್ಬ ಸಚಿವ, ಪರಿಶೀಲನೆಗಾಗಿ ಇಲ್ಲಿಗೆ ಬಂದಿದ್ದೇನೆ. ನೀವು ನನ್ನನ್ನು ಹೇಗೆ ತಡೆಯುತ್ತೀರಿ? ಯಾರ ಆದೇಶದ ಮೇರೆಗೆ? ಲೆಫ್ಟಿನೆಂಟ್ ಗವರ್ನರ್ ಅವರಿಂದ ನಿಮಗೆ ನಿರ್ದೇಶನ ಬಂದಿದೆಯಾ? ಅವರು ನನ್ನ ಸ್ಥಾನಕ್ಕಿಂತ ಮೇಲೆ ಒಂದು ಅಧಿಕಾರ ಹೊಂದಿದ್ದಾರೆ ಅಷ್ಟೆ” ಎಂದು ಎಎಪಿ ನಾಯಕ ಸೌರಭ್ ಭಾರದ್ವಾಜ್ ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಪತ್ರಿಕಾಗೋಷ್ಠಿ ನಡೆಸಿದ್ದ ಭಾರದ್ವಾಜ್ ಅವರು, “ಮುಖ್ಯಮಂತ್ರಿಯವರ ಅಧಿಕೃತ ನಿವಾಸಕ್ಕೆ ಭೇಟಿ ನೀಡಿ, ಬಿಜೆಪಿ ಹೇಳಿಕೊಳ್ಳುತ್ತಿರುವ ಚಿನ್ನದ ಕಮೋಡ್, ಈಜುಕೊಳ ಮತ್ತು ಮಿನಿಬಾರ್ ಅನ್ನು ಹುಡುಕಲು ಪ್ರಯತ್ನಿಸುತ್ತೇವೆ” ಎಂದಿದ್ದರು.

“ಸಿಎಂ ಮನೆ ಸರ್ಕಾರದ ಆಸ್ತಿ ಎಂಬುವುದನ್ನು ಗಮನಿಸಬೇಕು. ಅವುಗಳನ್ನು ತೆರಿಗೆದಾರರ ಹಣದಿಂದ ನಿರ್ಮಿಸಲಾಗಿದೆ ಮತ್ತು ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿರ್ಮಿಸಲಾಗಿದೆ. ಹಣವನ್ನು ದುರುಪಯೋಗಪಡಿಸಿಕೊಂಡ ಆರೋಪಗಳಿದ್ದರೆ ತನಿಖೆ ಮಾಡಬೇಕು” ಎಂದು ಭಾರದ್ವಾಜ್ ಹೇಳಿದ್ದರು.

ಪ್ರಧಾನ ಮಂತ್ರಿಯ ನಿವಾಸವನ್ನು ‘ರಾಜ್‌ಮಹಲ್‌’ ಎಂದು ಕರೆದ ಸಂಜಯ್‌ ಸಿಂಗ್ ಮತ್ತು ಸೌರಭ್ ಭಾರದ್ವಾಜ್, “ನಾವು 2,700 ಕೋಟಿಯಲ್ಲಿ ನಿರ್ಮಿಸಿದ ಪ್ರಧಾನಿ ನಿವಾಸಕ್ಕೆ ಮಾಧ್ಯಮದವರನ್ನು ಕರೆದುಕೊಂಡು ಹೋಗುತ್ತೇವೆ ಎಂದಿದ್ದರು.

ಫೆಬ್ರವರಿ 5ರಂದು ದೆಹಲಿಯ ವಿಧಾನಸಭೆ ಚುನಾವಣೆಯ ಮತದಾನ ಒಂದೇ ಹಂತದಲ್ಲಿ ನಡೆಯಲಿದೆ. ಫೆಬ್ರವರಿ 8ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಬಾರಿಯ ಚುನಾವಣೆಯಲ್ಲಿ ಎಎಪಿ, ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಪ್ರಮುಖ ಸ್ಪರ್ಧೆ ಏರ್ಪಡಲಿದೆ.

ಎಎಪಿ ಮೂರನೇ ಬಾರಿಗೆ ರಾಜಧಾನಿಯ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದೆ. ಬಿಜೆಪಿ ಎರಡು ದಶಕಗಳ ಬಳಿಕ ದೆಹಲಿ ಮೇಲೆ ಹಿಡಿತ ಸಾಧಿಸಲು ತಂತ್ರ ಹೆಣೆಯುತ್ತಿದೆ. ಈ ನಡುವೆ ಲೋಕಸಭೆ ಚುನಾವಣೆಯಲ್ಲಿ ಎಎಪಿಯ ಮಿತ್ರ ಪಕ್ಷವಾಗಿದ್ದ ಕಾಂಗ್ರೆಸ್, ಏಕಾಂಗಿ ಹೋರಾಟಕ್ಕೆ ಸಜ್ಜಾಗಿದೆ.

ಇದನ್ನೂ ಓದಿ : ಸಂಭಾಲ್ ಮಸೀದಿ ಪ್ರಕರಣ: ಅಲಹಾಬಾದ್ ಹೈಕೋರ್ಟ್ ನಿಂದ ಸಿವಿಲ್ ನ್ಯಾಯಾಲಯದ ವಿಚಾರಣೆಗೆ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...