Homeಕರ್ನಾಟಕಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

ಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

- Advertisement -
- Advertisement -

ಮಂಗಳೂರು: 2022ರ ಜುಲೈ 26ರಂದು ನಡೆದ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ರೌಡಿಶೀಟರ್ ಕಾಟಿಪಳ್ಳ-ಕೋಡಿಕೆರೆ ನಿವಾಸಿ ಸುಹಾಸ್ ಶೆಟ್ಟಿ (42) ಎಂಬಾತನನ್ನು 6 ಮಂದಿಯ ತಂಡವೊಂದು ಬೆನ್ನಟ್ಟಿ ಭೀಭತ್ಸವಾಗಿ ಕೊಲೆಗೈದ ಘಟನೆ ಗುರುವಾರ ರಾತ್ರಿ ಬಜಪೆ ಕಿನ್ನಿಪದವು ಎಂಬಲ್ಲಿ ನಡೆದಿದೆ.

ಈ ಹಿಂದೆ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಲಾಗಿದೆ.

ಫಾಝೀಲ್ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಸುಹಾಸ್, ಗುರುವಾರ ರಾತ್ರಿ ಕೆಲಸ ನಿಮಿತ್ತ ಬಜಪೆ ಕಡೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ಮತ್ತು ಒಂದು ಮೀನಿನ ಗಾಡಿಯಲ್ಲಿ 6 ಮಂದಿ ದುಷ್ಕರ್ಮಿಗಳ ಗುಂಪು ಬೆನ್ನಟ್ಟಿಕೊಂಡು ಬಂದಿದೆ. ಇದು ಸುಹಾಸ್ ಗೆ ತಿಳಿಯುತ್ತಿದ್ದಂತೆ ಆತ ಕಿನ್ನಿಪದವು ಜಂಕ್ಷನ್ ನಲ್ಲಿ ಇರುವ ಸಲೂನ್ ಒಂದಕ್ಕೆ ತನ್ನ ಕಾರನ್ನು ನುಗ್ಗಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ದುಷ್ಕರ್ಮಿಗಳು ಕೂಡಾ ಕಾರು ಮತ್ತು ಮೀನಿನ ಟೆಂಪೊವನ್ನು ಸಲೂನ್ ಒಳಗೆ ನುಗ್ಗಿಸಿದ್ದಾರೆ. ಬಳಿಕ ಸುಹಾಸ್ ನನ್ನು ಹೊರಗೆ ಎಳೆದು ಹಾಕಿ ತಲವಾರಿನಿಂದ ಭೀಕರವಾಗಿ ಕಡಿದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುಹಾಸ್ ಶೆಟ್ಟಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಹಾಗೂ ಶಶಾಂಕ್ ಜೊತೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ  ಎಂದು ಪೊಲೀಸರು ಹೇಳಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಅಸುನೀಗಿದ್ದ ಎಂದು ಮಂಗಳೂರಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್  ಸುದ್ದಿಗಾರರಿಗೆ ತಿಳಿಸಿದರು.

ದಾಳಿಯ ವೇಳೆ ಸುಹಾಸ್ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದಾನೆ.  ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದೇವೆ ಎಂದು ತಿಳಿಸಿದರು.

ಕೊಲೆ ಆರೋಪಿಯ ಮೃತದೇಹ ಇರುವ ನಗರದ ಎ.ಜೆ. ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಎ.ಜೆ. ಅಸ್ಪತ್ರೆಗೆ ಭೇಟಿ ನೀಡಿದರು.

ತಂಡವಾಗಿ ಬಂದು ಹಿಂದೂ ಕಾರ್ಯಕರ್ತನನ್ನು ನಿರ್ದಿಷ್ಟವಾಗಿ ಗುರುತಿಸಿ ಹತ್ಯೆ ಮಾಡಲಾಗಿದೆ. ಇದು ಪೂರ್ವಯೋಜಿತ ಕೃತ್ಯ. ಸರಕಾರ ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು. ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು.

ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಆಗಿದೆ. ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲ ಇಲ್ಲದ ಸ್ಥಿತಿ ಇದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ.  ಎಸ್ ಡಿಪಿಐ, ಪಿಎಫ್ ಐ ನಂತಹ ಮತಾಂಧ ಶಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರಿಗೆ ಇನ್ನಷ್ಟು ದುಷ್ಕೃತ್ಯಕ್ಕೆ ಬೆಂಬಲಿಸಿದದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ದುಷ್ಕರ್ಮಿಗಳು ನಡೆಸಿದ ಭೀಕರ ಕೃತ್ಯವನ್ನು ಘಟನೆ ನಡೆದ ಎದುರು ಭಾಗದ ಕಟ್ಟಡದಿಂದ ಯಾರೋ ವಿಡಿಯೊ ಮಾಡಿದ್ದು, ಇದು ಕೆಲವೇ ಕ್ಷಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023, ಸೆಕ್ಷನ್ 163, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡಲು ಸಂಬಂಧಿಸಿದೆ. ಇದು ಸಾರ್ವಜನಿಕ ತೊಂದರೆ ಅಥವಾ ಅಪಾಯಕಾರಿ ಸಂದರ್ಭಗಳನ್ನು ತಡೆಗಟ್ಟಲು ಆದೇಶಗಳನ್ನು ಜಾರಿಗೊಳಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ಗಳಿಗೆ ನೀಡುತ್ತದೆ. ಈ ವಿಭಾಗವು ಹಿಂದಿನ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 1973ರ ಸೆಕ್ಷನ್ 144ರ ಹೊಸ ರೂಪವಾಗಿದೆ.

 ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇಂದು (ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.

ಬಂದ್‌ಗೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಕರೆ ನೀಡಿವೆ. ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್‌ ಪಂಪ್‌ ವೆಲ್‌ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಉದ್ರಿಕ್ತ ಗುಂಪಿನಿಂದ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ಬಸ್ಸಿಗೆ ಕಿಡಿಗೇಡಿಗಳ ಕಲ್ಲು ತೂರಾಟದಿಂದ ಹಾನಿಯಾಗಿದೆ.

Karnataka SSLC Result 2025 | ನಾಳೆ (ಮೇ 2) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...