Homeಕರ್ನಾಟಕಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

ಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

- Advertisement -
- Advertisement -

ಮಂಗಳೂರು: 2022ರ ಜುಲೈ 26ರಂದು ನಡೆದ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ರೌಡಿಶೀಟರ್ ಕಾಟಿಪಳ್ಳ-ಕೋಡಿಕೆರೆ ನಿವಾಸಿ ಸುಹಾಸ್ ಶೆಟ್ಟಿ (42) ಎಂಬಾತನನ್ನು 6 ಮಂದಿಯ ತಂಡವೊಂದು ಬೆನ್ನಟ್ಟಿ ಭೀಭತ್ಸವಾಗಿ ಕೊಲೆಗೈದ ಘಟನೆ ಗುರುವಾರ ರಾತ್ರಿ ಬಜಪೆ ಕಿನ್ನಿಪದವು ಎಂಬಲ್ಲಿ ನಡೆದಿದೆ.

ಈ ಹಿಂದೆ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಲಾಗಿದೆ.

ಫಾಝೀಲ್ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಸುಹಾಸ್, ಗುರುವಾರ ರಾತ್ರಿ ಕೆಲಸ ನಿಮಿತ್ತ ಬಜಪೆ ಕಡೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ಮತ್ತು ಒಂದು ಮೀನಿನ ಗಾಡಿಯಲ್ಲಿ 6 ಮಂದಿ ದುಷ್ಕರ್ಮಿಗಳ ಗುಂಪು ಬೆನ್ನಟ್ಟಿಕೊಂಡು ಬಂದಿದೆ. ಇದು ಸುಹಾಸ್ ಗೆ ತಿಳಿಯುತ್ತಿದ್ದಂತೆ ಆತ ಕಿನ್ನಿಪದವು ಜಂಕ್ಷನ್ ನಲ್ಲಿ ಇರುವ ಸಲೂನ್ ಒಂದಕ್ಕೆ ತನ್ನ ಕಾರನ್ನು ನುಗ್ಗಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ದುಷ್ಕರ್ಮಿಗಳು ಕೂಡಾ ಕಾರು ಮತ್ತು ಮೀನಿನ ಟೆಂಪೊವನ್ನು ಸಲೂನ್ ಒಳಗೆ ನುಗ್ಗಿಸಿದ್ದಾರೆ. ಬಳಿಕ ಸುಹಾಸ್ ನನ್ನು ಹೊರಗೆ ಎಳೆದು ಹಾಕಿ ತಲವಾರಿನಿಂದ ಭೀಕರವಾಗಿ ಕಡಿದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುಹಾಸ್ ಶೆಟ್ಟಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಹಾಗೂ ಶಶಾಂಕ್ ಜೊತೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ  ಎಂದು ಪೊಲೀಸರು ಹೇಳಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಅಸುನೀಗಿದ್ದ ಎಂದು ಮಂಗಳೂರಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್  ಸುದ್ದಿಗಾರರಿಗೆ ತಿಳಿಸಿದರು.

ದಾಳಿಯ ವೇಳೆ ಸುಹಾಸ್ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದಾನೆ.  ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದೇವೆ ಎಂದು ತಿಳಿಸಿದರು.

ಕೊಲೆ ಆರೋಪಿಯ ಮೃತದೇಹ ಇರುವ ನಗರದ ಎ.ಜೆ. ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಎ.ಜೆ. ಅಸ್ಪತ್ರೆಗೆ ಭೇಟಿ ನೀಡಿದರು.

ತಂಡವಾಗಿ ಬಂದು ಹಿಂದೂ ಕಾರ್ಯಕರ್ತನನ್ನು ನಿರ್ದಿಷ್ಟವಾಗಿ ಗುರುತಿಸಿ ಹತ್ಯೆ ಮಾಡಲಾಗಿದೆ. ಇದು ಪೂರ್ವಯೋಜಿತ ಕೃತ್ಯ. ಸರಕಾರ ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು. ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು.

ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಆಗಿದೆ. ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲ ಇಲ್ಲದ ಸ್ಥಿತಿ ಇದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ.  ಎಸ್ ಡಿಪಿಐ, ಪಿಎಫ್ ಐ ನಂತಹ ಮತಾಂಧ ಶಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರಿಗೆ ಇನ್ನಷ್ಟು ದುಷ್ಕೃತ್ಯಕ್ಕೆ ಬೆಂಬಲಿಸಿದದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ದುಷ್ಕರ್ಮಿಗಳು ನಡೆಸಿದ ಭೀಕರ ಕೃತ್ಯವನ್ನು ಘಟನೆ ನಡೆದ ಎದುರು ಭಾಗದ ಕಟ್ಟಡದಿಂದ ಯಾರೋ ವಿಡಿಯೊ ಮಾಡಿದ್ದು, ಇದು ಕೆಲವೇ ಕ್ಷಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023, ಸೆಕ್ಷನ್ 163, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡಲು ಸಂಬಂಧಿಸಿದೆ. ಇದು ಸಾರ್ವಜನಿಕ ತೊಂದರೆ ಅಥವಾ ಅಪಾಯಕಾರಿ ಸಂದರ್ಭಗಳನ್ನು ತಡೆಗಟ್ಟಲು ಆದೇಶಗಳನ್ನು ಜಾರಿಗೊಳಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ಗಳಿಗೆ ನೀಡುತ್ತದೆ. ಈ ವಿಭಾಗವು ಹಿಂದಿನ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 1973ರ ಸೆಕ್ಷನ್ 144ರ ಹೊಸ ರೂಪವಾಗಿದೆ.

 ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇಂದು (ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.

ಬಂದ್‌ಗೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಕರೆ ನೀಡಿವೆ. ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್‌ ಪಂಪ್‌ ವೆಲ್‌ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಉದ್ರಿಕ್ತ ಗುಂಪಿನಿಂದ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ಬಸ್ಸಿಗೆ ಕಿಡಿಗೇಡಿಗಳ ಕಲ್ಲು ತೂರಾಟದಿಂದ ಹಾನಿಯಾಗಿದೆ.

Karnataka SSLC Result 2025 | ನಾಳೆ (ಮೇ 2) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...