Homeಕರ್ನಾಟಕಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

ಕೊಲೆ ಆರೋಪಿ, ರೌಡಿಶೀಟರ್ ಸುಹಾಸ್‌ ಹತ್ಯೆ: ಇಂದು ದ.ಕನ್ನಡ ಜಿಲ್ಲೆ ಬಂದ್‌ಗೆ ಕರೆ

- Advertisement -
- Advertisement -

ಮಂಗಳೂರು: 2022ರ ಜುಲೈ 26ರಂದು ನಡೆದ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ರೌಡಿಶೀಟರ್ ಕಾಟಿಪಳ್ಳ-ಕೋಡಿಕೆರೆ ನಿವಾಸಿ ಸುಹಾಸ್ ಶೆಟ್ಟಿ (42) ಎಂಬಾತನನ್ನು 6 ಮಂದಿಯ ತಂಡವೊಂದು ಬೆನ್ನಟ್ಟಿ ಭೀಭತ್ಸವಾಗಿ ಕೊಲೆಗೈದ ಘಟನೆ ಗುರುವಾರ ರಾತ್ರಿ ಬಜಪೆ ಕಿನ್ನಿಪದವು ಎಂಬಲ್ಲಿ ನಡೆದಿದೆ.

ಈ ಹಿಂದೆ ಸುಹಾಸ್ ಶೆಟ್ಟಿ ವಿರುದ್ಧ ಎರಡು ಕೊಲೆ ಪ್ರಕರಣಗಳೂ ಸೇರಿದಂತೆ ಐದು ಪ್ರಕರಣಗಳು ದಾಖಲಾಗಿದ್ದವು. ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಲಾಗಿದೆ.

ಫಾಝೀಲ್ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದಿದ್ದ ಸುಹಾಸ್, ಗುರುವಾರ ರಾತ್ರಿ ಕೆಲಸ ನಿಮಿತ್ತ ಬಜಪೆ ಕಡೆ ಕಾರಿನಲ್ಲಿ ತೆರಳುತ್ತಿದ್ದಾಗ ಕಾರು ಮತ್ತು ಒಂದು ಮೀನಿನ ಗಾಡಿಯಲ್ಲಿ 6 ಮಂದಿ ದುಷ್ಕರ್ಮಿಗಳ ಗುಂಪು ಬೆನ್ನಟ್ಟಿಕೊಂಡು ಬಂದಿದೆ. ಇದು ಸುಹಾಸ್ ಗೆ ತಿಳಿಯುತ್ತಿದ್ದಂತೆ ಆತ ಕಿನ್ನಿಪದವು ಜಂಕ್ಷನ್ ನಲ್ಲಿ ಇರುವ ಸಲೂನ್ ಒಂದಕ್ಕೆ ತನ್ನ ಕಾರನ್ನು ನುಗ್ಗಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ದುಷ್ಕರ್ಮಿಗಳು ಕೂಡಾ ಕಾರು ಮತ್ತು ಮೀನಿನ ಟೆಂಪೊವನ್ನು ಸಲೂನ್ ಒಳಗೆ ನುಗ್ಗಿಸಿದ್ದಾರೆ. ಬಳಿಕ ಸುಹಾಸ್ ನನ್ನು ಹೊರಗೆ ಎಳೆದು ಹಾಕಿ ತಲವಾರಿನಿಂದ ಭೀಕರವಾಗಿ ಕಡಿದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುಹಾಸ್ ಶೆಟ್ಟಿ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ. ಕಳೆದ ವರ್ಷ ಜಾಮೀನಿನ ಮೇಲೆ ಹೊರಗೆ ಬಂದಿದ್ದ. ಸುಹಾಸ್ ಶೆಟ್ಟಿ ಇನ್ನೊವಾ ಕಾರಿನಲ್ಲಿ ಸಹಚರರಾದ ಸಂಜಯ್, ಪ್ರಜ್ವಲ್, ಅನ್ವಿತ್, ಲತೀಶ್ ಹಾಗೂ ಶಶಾಂಕ್ ಜೊತೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ  ಎಂದು ಪೊಲೀಸರು ಹೇಳಿದ್ದಾರೆ.

ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಎ.ಜೆ.ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಅಷ್ಟರಲ್ಲೇ ಆತ ಅಸುನೀಗಿದ್ದ ಎಂದು ಮಂಗಳೂರಿನ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್  ಸುದ್ದಿಗಾರರಿಗೆ ತಿಳಿಸಿದರು.

ದಾಳಿಯ ವೇಳೆ ಸುಹಾಸ್ ಶೆಟ್ಟಿಯ ಸಹಚರನೊಬ್ಬ ಗಾಯಗೊಂಡಿದ್ದಾನೆ.  ಆತ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಬಿಜಪೆ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಎಸಿಪಿ ನೇತೃತ್ವದಲ್ಲಿ ನಾಲ್ಕು ವಿಶೇಷ ತಂಡಗಳನ್ನು ರಚಿಸಿದ್ದೇವೆ ಎಂದು ತಿಳಿಸಿದರು.

ಕೊಲೆ ಆರೋಪಿಯ ಮೃತದೇಹ ಇರುವ ನಗರದ ಎ.ಜೆ. ಆಸ್ಪತ್ರೆಯ ಬಳಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಭಾರಿ ಸಂಖ್ಯೆಯಲ್ಲಿ ಸೇರಿದ್ದರು. ಶಾಸಕರಾದ ಡಾ.ವೈ.ಭರತ್ ಶೆಟ್ಟಿ, ಡಿ.ವೇದವ್ಯಾಸ ಕಾಮತ್, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಎ.ಜೆ. ಅಸ್ಪತ್ರೆಗೆ ಭೇಟಿ ನೀಡಿದರು.

ತಂಡವಾಗಿ ಬಂದು ಹಿಂದೂ ಕಾರ್ಯಕರ್ತನನ್ನು ನಿರ್ದಿಷ್ಟವಾಗಿ ಗುರುತಿಸಿ ಹತ್ಯೆ ಮಾಡಲಾಗಿದೆ. ಇದು ಪೂರ್ವಯೋಜಿತ ಕೃತ್ಯ. ಸರಕಾರ ಆರೋಪಿಗಳನ್ನು ಬಂಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಬೇಕು. ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು.

ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ಆಗಿದೆ. ರಾಜ್ಯದಲ್ಲಿ ಹಿಂದೂಗಳಿಗೆ ಉಳಿಗಾಲ ಇಲ್ಲದ ಸ್ಥಿತಿ ಇದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆಗೆ ರಾಜ್ಯ ಕಾಂಗ್ರೆಸ್ ಸರಕಾರವೇ ನೇರ ಕಾರಣ.  ಎಸ್ ಡಿಪಿಐ, ಪಿಎಫ್ ಐ ನಂತಹ ಮತಾಂಧ ಶಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರಿಗೆ ಇನ್ನಷ್ಟು ದುಷ್ಕೃತ್ಯಕ್ಕೆ ಬೆಂಬಲಿಸಿದದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಎಂದು ಶಾಸಕ ವೇದವ್ಯಾಸ್ ಕಾಮತ್ ಆರೋಪಿಸಿದ್ದಾರೆ.

ದುಷ್ಕರ್ಮಿಗಳು ನಡೆಸಿದ ಭೀಕರ ಕೃತ್ಯವನ್ನು ಘಟನೆ ನಡೆದ ಎದುರು ಭಾಗದ ಕಟ್ಟಡದಿಂದ ಯಾರೋ ವಿಡಿಯೊ ಮಾಡಿದ್ದು, ಇದು ಕೆಲವೇ ಕ್ಷಣದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಗರ ಪೊಲೀಸ್‌ ಕಮಿಷನರ್‌ ವ್ಯಾಪ್ತಿಯಲ್ಲಿ ಸೆಕ್ಷನ್‌ 163 ಜಾರಿಗೊಳಿಸಿ, ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿಕೊಂಡು ದಿನಾಂಕ 2025ರ ಮೇ 2 ಬೆಳಗ್ಗೆ 6 ಗಂಟೆಯಿಂದ ಮೇ 6ರ ಸಂಜೆ 6ಗಂಟೆಯವರೆಗೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023, ಸೆಕ್ಷನ್ 163, ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕ ಶಾಂತಿ ಮತ್ತು ಸುರಕ್ಷತೆಯನ್ನು ಕಾಪಾಡಲು ಸಂಬಂಧಿಸಿದೆ. ಇದು ಸಾರ್ವಜನಿಕ ತೊಂದರೆ ಅಥವಾ ಅಪಾಯಕಾರಿ ಸಂದರ್ಭಗಳನ್ನು ತಡೆಗಟ್ಟಲು ಆದೇಶಗಳನ್ನು ಜಾರಿಗೊಳಿಸುವ ಅಧಿಕಾರವನ್ನು ಮ್ಯಾಜಿಸ್ಟ್ರೇಟ್‌ಗಳಿಗೆ ನೀಡುತ್ತದೆ. ಈ ವಿಭಾಗವು ಹಿಂದಿನ ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) 1973ರ ಸೆಕ್ಷನ್ 144ರ ಹೊಸ ರೂಪವಾಗಿದೆ.

 ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆಯನ್ನು ಖಂಡಿಸಿ ಇಂದು (ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆ ಬಂದ್‌ಗೆ ಹಿಂದೂ ಸಂಘಟನೆಗಳು ಕರೆ ಕೊಟ್ಟಿವೆ.

ಬಂದ್‌ಗೆ ವಿಶ್ವ ಹಿಂದೂ ಪರಿಷತ್‌ ಮತ್ತು ಬಜರಂಗದಳ ಕರೆ ನೀಡಿವೆ. ಈ ಬಗ್ಗೆ ವಿಹೆಚ್‌ಪಿ ದಕ್ಷಿಣ ಪ್ರಾಂತ ಕಾರ್ಯವಾಹ ಶರಣ್‌ ಪಂಪ್‌ ವೆಲ್‌ ತಮ್ಮ ಫೇಸ್‌ಬುಕ್‌ ಪುಟದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಉದ್ರಿಕ್ತ ಗುಂಪಿನಿಂದ ಬಸ್ಸಿಗೆ ಕಲ್ಲು ತೂರಾಟ ನಡೆಸಲಾಗಿದೆ. ಮೂರು ಬಸ್ಸಿಗೆ ಕಿಡಿಗೇಡಿಗಳ ಕಲ್ಲು ತೂರಾಟದಿಂದ ಹಾನಿಯಾಗಿದೆ.

Karnataka SSLC Result 2025 | ನಾಳೆ (ಮೇ 2) ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...