Homeಮುಖಪುಟಪಾಕಿಸ್ತಾನ: ಪ್ರಧಾನಿ ಅಭ್ಯರ್ಥಿಯಾಗಿ ಶೆಹಬಾಝ್ ಶರೀಫ್ ನಾಮನಿರ್ದೇಶನ

ಪಾಕಿಸ್ತಾನ: ಪ್ರಧಾನಿ ಅಭ್ಯರ್ಥಿಯಾಗಿ ಶೆಹಬಾಝ್ ಶರೀಫ್ ನಾಮನಿರ್ದೇಶನ

- Advertisement -
- Advertisement -

ಪಾಕಿಸ್ತಾನದ ಮಾಜಿ ಪ್ರಧಾನಿ ಶೆಹಬಾಝ್ ಷರೀಫ್ ಅವರನ್ನು ಮತ್ತೊಮ್ಮೆ ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲಾಗಿದೆ. ಕಳೆದ ವಾರ ನಡೆದ ಸಾರ್ವತ್ರಿಕ ಚುನಾವಣೆಯ ಬಳಿಕ ವಿವಿಧ ಪಕ್ಷಗಳ ನಡುವೆ ರಚಿಸಲಾಗಿರುವ ಹೊಸ ಮೈತ್ರಿಕೂಟ ಈ ಘೋಷಣೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್‌-ಎನ್‌) ವಕ್ತಾರೆ ಮರಿಯಂ ಔರಂಗಜೇಬ್ ಅವರು, “ಪಿಎಂಎಲ್‌-ಎನ್‌ ಮುಖ್ಯಸ್ಥ ನವಾಝ್ ಷರೀಫ್ ಅವರು, ತನ್ನ ಕಿರಿಯ ಸಹೋದರ, ಮಾಜಿ ಪ್ರಧಾನಿ ಶೆಹಬಾಝ್ ಷರೀಫ್ ಅವರನ್ನು ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಮತ್ತು ಅವರ ಮಗಳು ಮರಿಯಂ ನವಾಝ್ ಅವರನ್ನು ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿ ನಾಮ ನಿರ್ದೇಶನ ಮಾಡಿದ್ದಾರೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಪಿಎಂಎಲ್‌-ಎನ್‌ಗೆ ಹೊಸ ಸರ್ಕಾರ ರಚನೆಗೆ ಬೆಂಬಲ ನೀಡಿರುವ ರಾಜಕೀಯ ಪಕ್ಷಗಳಿಗೆ ನವಾಝ್ ಷರೀಫ್ ಧನ್ಯವಾದ ಸಲ್ಲಿಸಿದ್ದಾರೆ. ಈ ಪಕ್ಷಗಳ ನಿರ್ಧಾರದಿಂದ ಪಾಕಿಸ್ತಾನವು ಬಿಕ್ಕಟ್ಟಿನಿಂದ ಹೊರಬಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ” ಎಂದು ಮರಿಯಂ ಔರಂಗಜೇಬ್ ತಿಳಿಸಿದ್ದಾರೆ.

ಶೆಹಬಾಝ್ ಷರೀಫ್ ಸಹೋದರ ನವಾಝ್ ಷರೀಫ್ ನೇತೃತ್ವದ ಪಿಎಂಎಲ್‌-ಎನ್‌ ನಾಯಕರಾಗಿದ್ದಾರೆ. ಈ ಪಕ್ಷ ಚುನಾವಣೆಯಲ್ಲಿ 75 ಸಂಸತ್‌ ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ಹೆಚ್ಚು ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಬಿಲಾವಲ್ ಭುಟ್ಟೊ ಜರ್ದಾರಿ ನೇತೃತ್ವದ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಒಟ್ಟಾರೆಯಾಗಿ, ಈ ಎರಡು ಪಕ್ಷಗಳು 266 ಸ್ಥಾನಗಳ ಸಂಸತ್‌ನಲ್ಲಿ ಸರಳ ಬಹುಮತ ಸಾಧಿಸಿದೆ.

ಮಂಗಳವಾರ, ಬಿಲಾವಲ್ ಭುಟ್ಟೊ ಜರ್ದಾರಿ ಅವರು ಪ್ರಧಾನಮಂತ್ರಿ ಸ್ಥಾನದ ವಿವಾದದಿಂದ ಹಿಂದೆ ಸರಿದಿದ್ದು, ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್ ನಾಮ ನಿರ್ದೇಶನ ಮಾಡುವ ಯಾವುದೇ ಅಭ್ಯರ್ಥಿಯನ್ನು ನಮ್ಮ ಪಕ್ಷ ಬೆಂಬಲಿಸಲಿದೆ ಎಂದು ಘೋಷಿಸಿದ್ದಾರೆ. ಅಲ್ಲದೆ ಯಾವುದೇ ಸಚಿವ ಬೇಡಿಕೆ ಇಲ್ಲ ಎಂದಿದ್ದಾರೆ.

ಫೆ.8ರಂದು ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕಟಗೊಂಡಾಗ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಈ ಬೆನ್ನಲ್ಲೆ ವಿವಿಧ ಪಕ್ಷಗಳು ಸರ್ಕಾರ ರಚನೆಯ ಕಸರತ್ತು ನಡೆಸಿತ್ತು. ಅಂತಿಮವಾಗಿ ನವಾಝ್ ಶರೀಫ್ ನೇತೃತ್ವದ ಪಿಎಂಎಲ್‌-ಎನ್‌ ಮತ್ತು ಬಿಲಾವಲ್ ಭುಟ್ಟೊ ನೇತೃತ್ವದ ಪಿಪಿಪಿ ಇತರ ಕೆಲ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಅಣಿಯಾಗಿದೆ.

ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು 92 ಸ್ಥಾನಗಳನ್ನು ಗೆದ್ದಿದ್ದಾರೆ. ಆದರೆ, ಅವರು ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲ. ಪಿಎಂಎಲ್‌-ಎನ್‌ ಅಥವಾ ಪಿಪಿಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿದೆ. ಈಗಾಗಲೇ ಆ ಎರಡು ಪಕ್ಷಗಳು ಒಂದಾಗಿರುವುದರಿಂದ, ಇಮ್ರಾನ್ ಖಾನ್ ಪಡೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಬೇಕಾದ ಅನಿವಾರ್ಯತೆ ಎದುರಾಗಿದೆ.

ಇಮ್ರಾನ್ ಖಾನ್ ಅವರ ಪಕ್ಷದ ಅಭ್ಯರ್ಥಿಗಳು ಮತ್ತು ಸ್ವತಂತ್ರರು ಸೇರಿ ನಮಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆದಿದ್ದಾರೆ. ಆದರೆ, ಅವರು ನಮ್ಮ ಪಿಪಿಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ನಿರಾಕರಿಸಿದ್ದಾರೆ. ಹಾಗಾಗಿ, ನಾವು ನವಾಝ್ ಶರೀಫ್ ಬಣ ಬೆಂಬಲಿಸಿದೆವು ಎಂದು ಪಿಪಿಪಿ ಮುಖ್ಯಸ್ಥ ಬಿಲಾವಲ್‌ ಭುಟ್ಟೋ ತಿಳಿಸಿದ್ದಾರೆ.

ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ, ಇಮ್ರಾನ್ ಖಾನ್‌ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು 101 ಸ್ಥಾನಗಳನ್ನು ಗಳಿಸಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) 75 ಸ್ಥಾನಗಳನ್ನು ಪಡೆದಿದೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನ ಮತ್ತು ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್-ಪಾಕಿಸ್ತಾನ (ಎಂಕ್ಯೂಎಂ-ಪಿ) 17 ಸ್ಥಾನಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ : ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಂಎಸ್‌ಪಿಗೆ ಕಾನೂನು ಖಾತರಿ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...