Homeಮುಖಪುಟಪಾಕಿಸ್ತಾನ: ಪ್ರಧಾನಿ ಅಭ್ಯರ್ಥಿಯಾಗಿ ಶೆಹಬಾಝ್ ಶರೀಫ್ ನಾಮನಿರ್ದೇಶನ

ಪಾಕಿಸ್ತಾನ: ಪ್ರಧಾನಿ ಅಭ್ಯರ್ಥಿಯಾಗಿ ಶೆಹಬಾಝ್ ಶರೀಫ್ ನಾಮನಿರ್ದೇಶನ

- Advertisement -
- Advertisement -

ಪಾಕಿಸ್ತಾನದ ಮಾಜಿ ಪ್ರಧಾನಿ ಶೆಹಬಾಝ್ ಷರೀಫ್ ಅವರನ್ನು ಮತ್ತೊಮ್ಮೆ ಪ್ರಧಾನಿ ಅಭ್ಯರ್ಥಿಯಾಗಿ ನಾಮನಿರ್ದೇಶನ ಮಾಡಲಾಗಿದೆ. ಕಳೆದ ವಾರ ನಡೆದ ಸಾರ್ವತ್ರಿಕ ಚುನಾವಣೆಯ ಬಳಿಕ ವಿವಿಧ ಪಕ್ಷಗಳ ನಡುವೆ ರಚಿಸಲಾಗಿರುವ ಹೊಸ ಮೈತ್ರಿಕೂಟ ಈ ಘೋಷಣೆ ಮಾಡಿದೆ.

ಈ ಕುರಿತು ಮಾಹಿತಿ ನೀಡಿರುವ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್‌-ಎನ್‌) ವಕ್ತಾರೆ ಮರಿಯಂ ಔರಂಗಜೇಬ್ ಅವರು, “ಪಿಎಂಎಲ್‌-ಎನ್‌ ಮುಖ್ಯಸ್ಥ ನವಾಝ್ ಷರೀಫ್ ಅವರು, ತನ್ನ ಕಿರಿಯ ಸಹೋದರ, ಮಾಜಿ ಪ್ರಧಾನಿ ಶೆಹಬಾಝ್ ಷರೀಫ್ ಅವರನ್ನು ಮತ್ತೊಮ್ಮೆ ಪ್ರಧಾನಿ ಸ್ಥಾನಕ್ಕೆ ಮತ್ತು ಅವರ ಮಗಳು ಮರಿಯಂ ನವಾಝ್ ಅವರನ್ನು ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿ ನಾಮ ನಿರ್ದೇಶನ ಮಾಡಿದ್ದಾರೆ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

“ಪಿಎಂಎಲ್‌-ಎನ್‌ಗೆ ಹೊಸ ಸರ್ಕಾರ ರಚನೆಗೆ ಬೆಂಬಲ ನೀಡಿರುವ ರಾಜಕೀಯ ಪಕ್ಷಗಳಿಗೆ ನವಾಝ್ ಷರೀಫ್ ಧನ್ಯವಾದ ಸಲ್ಲಿಸಿದ್ದಾರೆ. ಈ ಪಕ್ಷಗಳ ನಿರ್ಧಾರದಿಂದ ಪಾಕಿಸ್ತಾನವು ಬಿಕ್ಕಟ್ಟಿನಿಂದ ಹೊರಬಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ” ಎಂದು ಮರಿಯಂ ಔರಂಗಜೇಬ್ ತಿಳಿಸಿದ್ದಾರೆ.

ಶೆಹಬಾಝ್ ಷರೀಫ್ ಸಹೋದರ ನವಾಝ್ ಷರೀಫ್ ನೇತೃತ್ವದ ಪಿಎಂಎಲ್‌-ಎನ್‌ ನಾಯಕರಾಗಿದ್ದಾರೆ. ಈ ಪಕ್ಷ ಚುನಾವಣೆಯಲ್ಲಿ 75 ಸಂಸತ್‌ ಸ್ಥಾನಗಳನ್ನು ಗೆಲ್ಲುವ ಮೂಲಕ ಅತಿ ಹೆಚ್ಚು ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರ ಹೊಮ್ಮಿದೆ. ಬಿಲಾವಲ್ ಭುಟ್ಟೊ ಜರ್ದಾರಿ ನೇತೃತ್ವದ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಒಟ್ಟಾರೆಯಾಗಿ, ಈ ಎರಡು ಪಕ್ಷಗಳು 266 ಸ್ಥಾನಗಳ ಸಂಸತ್‌ನಲ್ಲಿ ಸರಳ ಬಹುಮತ ಸಾಧಿಸಿದೆ.

ಮಂಗಳವಾರ, ಬಿಲಾವಲ್ ಭುಟ್ಟೊ ಜರ್ದಾರಿ ಅವರು ಪ್ರಧಾನಮಂತ್ರಿ ಸ್ಥಾನದ ವಿವಾದದಿಂದ ಹಿಂದೆ ಸರಿದಿದ್ದು, ನವಾಜ್ ಷರೀಫ್ ನೇತೃತ್ವದ ಪಿಎಂಎಲ್-ಎನ್ ನಾಮ ನಿರ್ದೇಶನ ಮಾಡುವ ಯಾವುದೇ ಅಭ್ಯರ್ಥಿಯನ್ನು ನಮ್ಮ ಪಕ್ಷ ಬೆಂಬಲಿಸಲಿದೆ ಎಂದು ಘೋಷಿಸಿದ್ದಾರೆ. ಅಲ್ಲದೆ ಯಾವುದೇ ಸಚಿವ ಬೇಡಿಕೆ ಇಲ್ಲ ಎಂದಿದ್ದಾರೆ.

ಫೆ.8ರಂದು ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಪ್ರಕಟಗೊಂಡಾಗ ಅತಂತ್ರ ಸ್ಥಿತಿ ನಿರ್ಮಾಣವಾಗಿತ್ತು. ಈ ಬೆನ್ನಲ್ಲೆ ವಿವಿಧ ಪಕ್ಷಗಳು ಸರ್ಕಾರ ರಚನೆಯ ಕಸರತ್ತು ನಡೆಸಿತ್ತು. ಅಂತಿಮವಾಗಿ ನವಾಝ್ ಶರೀಫ್ ನೇತೃತ್ವದ ಪಿಎಂಎಲ್‌-ಎನ್‌ ಮತ್ತು ಬಿಲಾವಲ್ ಭುಟ್ಟೊ ನೇತೃತ್ವದ ಪಿಪಿಪಿ ಇತರ ಕೆಲ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಅಣಿಯಾಗಿದೆ.

ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು 92 ಸ್ಥಾನಗಳನ್ನು ಗೆದ್ದಿದ್ದಾರೆ. ಆದರೆ, ಅವರು ಸ್ವತಂತ್ರವಾಗಿ ಸರ್ಕಾರ ರಚಿಸಲು ಸಾಧ್ಯವಿಲ್ಲ. ಪಿಎಂಎಲ್‌-ಎನ್‌ ಅಥವಾ ಪಿಪಿಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿದೆ. ಈಗಾಗಲೇ ಆ ಎರಡು ಪಕ್ಷಗಳು ಒಂದಾಗಿರುವುದರಿಂದ, ಇಮ್ರಾನ್ ಖಾನ್ ಪಡೆ ವಿರೋಧ ಪಕ್ಷದ ಸ್ಥಾನದಲ್ಲಿ ಕೂರಬೇಕಾದ ಅನಿವಾರ್ಯತೆ ಎದುರಾಗಿದೆ.

ಇಮ್ರಾನ್ ಖಾನ್ ಅವರ ಪಕ್ಷದ ಅಭ್ಯರ್ಥಿಗಳು ಮತ್ತು ಸ್ವತಂತ್ರರು ಸೇರಿ ನಮಗಿಂತ ಹೆಚ್ಚಿನ ಸ್ಥಾನಗಳನ್ನು ಪಡೆದಿದ್ದಾರೆ. ಆದರೆ, ಅವರು ನಮ್ಮ ಪಿಪಿಪಿ ಜೊತೆ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ನಿರಾಕರಿಸಿದ್ದಾರೆ. ಹಾಗಾಗಿ, ನಾವು ನವಾಝ್ ಶರೀಫ್ ಬಣ ಬೆಂಬಲಿಸಿದೆವು ಎಂದು ಪಿಪಿಪಿ ಮುಖ್ಯಸ್ಥ ಬಿಲಾವಲ್‌ ಭುಟ್ಟೋ ತಿಳಿಸಿದ್ದಾರೆ.

ಪಾಕಿಸ್ತಾನದ ಚುನಾವಣಾ ಆಯೋಗದ ಪ್ರಕಾರ, ಇಮ್ರಾನ್ ಖಾನ್‌ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷ ಬೆಂಬಲಿತ ಸ್ವತಂತ್ರ ಅಭ್ಯರ್ಥಿಗಳು 101 ಸ್ಥಾನಗಳನ್ನು ಗಳಿಸಿದ್ದಾರೆ. ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (ಪಿಎಂಎಲ್-ಎನ್) 75 ಸ್ಥಾನಗಳನ್ನು ಪಡೆದಿದೆ. ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (ಪಿಪಿಪಿ) 54 ಸ್ಥಾನ ಮತ್ತು ಮುತ್ತಹಿದಾ ಕ್ವಾಮಿ ಮೂವ್‌ಮೆಂಟ್-ಪಾಕಿಸ್ತಾನ (ಎಂಕ್ಯೂಎಂ-ಪಿ) 17 ಸ್ಥಾನಗಳನ್ನು ಪಡೆದುಕೊಂಡಿದೆ.

ಇದನ್ನೂ ಓದಿ : ಕೇಂದ್ರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಎಂಎಸ್‌ಪಿಗೆ ಕಾನೂನು ಖಾತರಿ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...