Homeಮುಖಪುಟಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ರಾಜತಾಂತ್ರಿಕ ಟಿಪ್ಪಣಿ - ಖಚಿತಪಡಿಸಿದ ಭಾರತ

ಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ರಾಜತಾಂತ್ರಿಕ ಟಿಪ್ಪಣಿ – ಖಚಿತಪಡಿಸಿದ ಭಾರತ

- Advertisement -
- Advertisement -

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದಿಂದ ದೇಶದ ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾ ಅವರ ಹಸ್ತಾಂತರ ಕೋರಿಕೆಗೆ ಸಂಬಂಧಿಸಿದ ಮೌಖಿಕ ಟಿಪ್ಪಣಿಯನ್ನು ಸ್ವೀಕರಿಸಿದೆ ಎಂದು ಭಾರತ ಸರ್ಕಾರದ ಮೂಲಗಳು ಸೋಮವಾರ ಖಚಿತಪಡಿಸಿದೆ. ಆದರೆ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮೂಲ ಹೇಳಿದೆ.

“ಹಸ್ತಾಂತರದ ವಿನಂತಿಗೆ ಸಂಬಂಧಿಸಿದಂತೆ ನಾವು ಇಂದು ಬಾಂಗ್ಲಾದೇಶ ಹೈಕಮಿಷನ್‌ನಿಂದ ಮೌಖಿಕ ಟಿಪ್ಪಣಿಯನ್ನು ಸ್ವೀಕರಿಸಿದ್ದೇವೆ ಎಂದು ನಾವು ಖಚಿತಪಡಿಸುತ್ತೇವೆ. ಈ ಸಮಯದಲ್ಲಿ, ಈ ವಿಷಯದ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ” ಎಂದು ಮೂಲವೊಂದು ತಿಳಿಸಿದೆ ಎಂದು ಎನ್‌ಡಿಟಿವಿ ಹೇಳಿದೆ.

ಸೋಮವಾರ ಭಾರತದ ಪ್ರತಿಕ್ರಿಯೆಗೂ ಮುನ್ನ, ಬಾಂಗ್ಲಾದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ನ್ಯಾಯಾಂಗ ಪ್ರಕ್ರಿಯೆಗಾಗಿ ಬಾಂಗ್ಲಾದೇಶವು ಹಸೀನಾ ಅವರನ್ನು ಇಲ್ಲಿಗೆ ಹಿಂತಿರುಗಿಸಬೇಕು ಎಂದು ಬಯಸುತ್ತದೆ ಎಂದು ನಾವು ಭಾರತ ಸರ್ಕಾರಕ್ಕೆ ಮೌಖಿಕ ಟಿಪ್ಪಣಿ ಕಳುಹಿಸಿದ್ದೇವೆ” ಎಂದು ಹೇಳಿದ್ದರು. ಅದಾಗ್ಯೂ, ಈ ವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

77 ವರ್ಷದ ಹಸೀನಾ ಅವರ 16 ವರ್ಷಗಳ ಆಡಳಿತವು ವಿದ್ಯಾರ್ಥಿಗಳ ಭಾರಿ ಪ್ರತಿಭಟನೆಯ ಕಾರಣಕ್ಕೆ ಪತನಗೊಂಡಿತ್ತು. ಅದರ ನಂತರ ಅವರು ಆಗಸ್ಟ್ 5 ರಂದು ತಮ್ಮ ದೇಶವನ್ನು ತೊರೆದು ಭಾರತಕ್ಕೆ ಬಂದಿಳಿದಿದ್ದರು.

ಬಾಂಗ್ಲಾದೇಶ ಮೂಲದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ಹಸೀನಾ ಮತ್ತು ಅವರ ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು ಮತ್ತು ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ “ಮಾನವೀಯತೆ ಮತ್ತು ನರಮೇಧದ ವಿರುದ್ಧದ ಅಪರಾಧಗಳಿಗಾಗಿ” ಬಂಧನ ವಾರಂಟ್ ಹೊರಡಿಸಿದೆ.

ಗೃಹ ಸಲಹೆಗಾರ ಜಹಾಂಗೀರ್ ಆಲಂ ಅವರು ಭಾರತದಿಂದ ಹೊರಹಾಕಲ್ಪಟ್ಟ ಪ್ರಧಾನಿಯನ್ನು ಹಸ್ತಾಂತರಿಸಲು ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ. ಅವರ ಹಸ್ತಾಂತರದ ಕುರಿತು ನಾವು ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದೇವೆ. ಪ್ರಸ್ತುತ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಅವರು ಸುದ್ದಿಗಾರರಿಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಕಳೆದ ತಿಂಗಳು, ಮಧ್ಯಂತರ ಸರ್ಕಾರದ 100 ದಿನಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರುವುದಾಗಿ ಹೇಳಿದ್ದಾರೆ. “ನಾವು ಪ್ರತಿ ಹತ್ಯೆಯಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು. ಉರುಳಿ ಬಿದ್ದ ನಿರಂಕುಶಾಧಿಕಾರಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸುವಂತೆ ನಾವು ಭಾರತವನ್ನು ಕೇಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಆಗಸ್ಟ್ 8 ರಂದು ಅಧಿಕಾರ ವಹಿಸಿಕೊಂಡ ಯೂನಸ್ ಅವರು, ಹಸೀನಾ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಸೇರಿದಂತೆ ಸುಮಾರು 1,500 ಜನರು ಸಾವನ್ನಪ್ಪಿದ್ದಾರೆ ಮತ್ತು 19,931 ಇತರರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ, ಕಾನೂನು ಸಲಹೆಗಾರ ಆಸಿಫ್ ನಜ್ರುಲ್ ಅವರು ಒಪ್ಪಂದದಲ್ಲಿ ಯಾವುದೇ ನಿಬಂಧನೆಗಳನ್ನು ಉಲ್ಲೇಖಿಸಿ ಹಸೀನಾ ಅವರನ್ನು ಹಸ್ತಾಂತರಿಸಲು ಭಾರತ ನಿರಾಕರಿಸಿದರೆ ಬಾಂಗ್ಲಾದೇಶವು ಬಲವಾಗಿ ಪ್ರತಿಭಟಿಸುತ್ತದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿತ್ತು.

ಸೆಪ್ಟೆಂಬರ್‌ ವೇಳೆ ಢಾಕಾದಲ್ಲಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಯೂನುಸ್ ಅವರು, ಹಸೀನಾ ಭಾರತದಲ್ಲಿ ಕೂತು ರಾಜಕೀಯ ಟೀಕೆಗಳನ್ನು ಮಾಡುವುದು “ಸ್ನೇಹಪರವಲ್ಲದ ಗೆಸ್ಚರ್” ಎಂದು ಹೇಳಿದ್ದರು ಮತ್ತು ಬಾಂಗ್ಲಾದೇಶ ಅವರ ಹಸ್ತಾಂತರಕ್ಕೆ ವಿನಂತಿಸುವವರೆಗೂ ಎರಡೂ ದೇಶಗಳ ನಡುವಿನ ಗೊಂದಲಗಳನ್ನು ತಡೆಯಲು ಅವರು ಮೌನವಾಗಿರಬೇಕು ಎಂದು ಪ್ರತಿಪಾದಿಸಿದ್ದರು.

ಇತ್ತೀಚೆಗಷ್ಟೆ ಭಾರತದಿಂದ ಹೇಳಿಕೆ ನೀಡಿದ್ದ ಹಸೀನಾ ಅವರು, ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು “ಹತ್ಯಾಕಾಂಡ” ನಡೆಸುತ್ತಿದೆ ಮತ್ತು ಅಲ್ಪಸಂಖ್ಯಾತರನ್ನು, ಅದರಲ್ಲೂ ವಿಶೇಷವಾಗಿ ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಅರೆಸ್ಟ್‌ ಪ್ರಕರಣ: ₹11.8 ಕೋಟಿ ಹಣ ಕಳೆದುಕೊಂಡ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ಡಿಜಿಟಲ್ ಅರೆಸ್ಟ್‌ ಪ್ರಕರಣ: ₹11.8 ಕೋಟಿ ಹಣ ಕಳೆದುಕೊಂಡ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...