Homeಮುಖಪುಟಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ರಾಜತಾಂತ್ರಿಕ ಟಿಪ್ಪಣಿ - ಖಚಿತಪಡಿಸಿದ ಭಾರತ

ಶೇಖ್ ಹಸೀನಾ ಹಸ್ತಾಂತರಕ್ಕೆ ಬಾಂಗ್ಲಾದೇಶ ರಾಜತಾಂತ್ರಿಕ ಟಿಪ್ಪಣಿ – ಖಚಿತಪಡಿಸಿದ ಭಾರತ

- Advertisement -
- Advertisement -

ಬಾಂಗ್ಲಾದೇಶದ ಮಧ್ಯಂತರ ಸರ್ಕಾರದಿಂದ ದೇಶದ ಉಚ್ಛಾಟಿತ ಪ್ರಧಾನಿ ಶೇಖ್ ಹಸೀನಾ ಅವರ ಹಸ್ತಾಂತರ ಕೋರಿಕೆಗೆ ಸಂಬಂಧಿಸಿದ ಮೌಖಿಕ ಟಿಪ್ಪಣಿಯನ್ನು ಸ್ವೀಕರಿಸಿದೆ ಎಂದು ಭಾರತ ಸರ್ಕಾರದ ಮೂಲಗಳು ಸೋಮವಾರ ಖಚಿತಪಡಿಸಿದೆ. ಆದರೆ ಈ ಬಗ್ಗೆ ಯಾವುದೆ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮೂಲ ಹೇಳಿದೆ.

“ಹಸ್ತಾಂತರದ ವಿನಂತಿಗೆ ಸಂಬಂಧಿಸಿದಂತೆ ನಾವು ಇಂದು ಬಾಂಗ್ಲಾದೇಶ ಹೈಕಮಿಷನ್‌ನಿಂದ ಮೌಖಿಕ ಟಿಪ್ಪಣಿಯನ್ನು ಸ್ವೀಕರಿಸಿದ್ದೇವೆ ಎಂದು ನಾವು ಖಚಿತಪಡಿಸುತ್ತೇವೆ. ಈ ಸಮಯದಲ್ಲಿ, ಈ ವಿಷಯದ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆಯನ್ನು ನೀಡುವುದಿಲ್ಲ” ಎಂದು ಮೂಲವೊಂದು ತಿಳಿಸಿದೆ ಎಂದು ಎನ್‌ಡಿಟಿವಿ ಹೇಳಿದೆ.

ಸೋಮವಾರ ಭಾರತದ ಪ್ರತಿಕ್ರಿಯೆಗೂ ಮುನ್ನ, ಬಾಂಗ್ಲಾದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್ ತಮ್ಮ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, “ನ್ಯಾಯಾಂಗ ಪ್ರಕ್ರಿಯೆಗಾಗಿ ಬಾಂಗ್ಲಾದೇಶವು ಹಸೀನಾ ಅವರನ್ನು ಇಲ್ಲಿಗೆ ಹಿಂತಿರುಗಿಸಬೇಕು ಎಂದು ಬಯಸುತ್ತದೆ ಎಂದು ನಾವು ಭಾರತ ಸರ್ಕಾರಕ್ಕೆ ಮೌಖಿಕ ಟಿಪ್ಪಣಿ ಕಳುಹಿಸಿದ್ದೇವೆ” ಎಂದು ಹೇಳಿದ್ದರು. ಅದಾಗ್ಯೂ, ಈ ವರೆಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಈ ವಿಷಯದ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

77 ವರ್ಷದ ಹಸೀನಾ ಅವರ 16 ವರ್ಷಗಳ ಆಡಳಿತವು ವಿದ್ಯಾರ್ಥಿಗಳ ಭಾರಿ ಪ್ರತಿಭಟನೆಯ ಕಾರಣಕ್ಕೆ ಪತನಗೊಂಡಿತ್ತು. ಅದರ ನಂತರ ಅವರು ಆಗಸ್ಟ್ 5 ರಂದು ತಮ್ಮ ದೇಶವನ್ನು ತೊರೆದು ಭಾರತಕ್ಕೆ ಬಂದಿಳಿದಿದ್ದರು.

ಬಾಂಗ್ಲಾದೇಶ ಮೂಲದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ಹಸೀನಾ ಮತ್ತು ಅವರ ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು ಮತ್ತು ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ “ಮಾನವೀಯತೆ ಮತ್ತು ನರಮೇಧದ ವಿರುದ್ಧದ ಅಪರಾಧಗಳಿಗಾಗಿ” ಬಂಧನ ವಾರಂಟ್ ಹೊರಡಿಸಿದೆ.

ಗೃಹ ಸಲಹೆಗಾರ ಜಹಾಂಗೀರ್ ಆಲಂ ಅವರು ಭಾರತದಿಂದ ಹೊರಹಾಕಲ್ಪಟ್ಟ ಪ್ರಧಾನಿಯನ್ನು ಹಸ್ತಾಂತರಿಸಲು ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ. ಅವರ ಹಸ್ತಾಂತರದ ಕುರಿತು ನಾವು ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದೇವೆ. ಪ್ರಸ್ತುತ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಅವರು ಸುದ್ದಿಗಾರರಿಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಕಳೆದ ತಿಂಗಳು, ಮಧ್ಯಂತರ ಸರ್ಕಾರದ 100 ದಿನಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರುವುದಾಗಿ ಹೇಳಿದ್ದಾರೆ. “ನಾವು ಪ್ರತಿ ಹತ್ಯೆಯಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು. ಉರುಳಿ ಬಿದ್ದ ನಿರಂಕುಶಾಧಿಕಾರಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸುವಂತೆ ನಾವು ಭಾರತವನ್ನು ಕೇಳುತ್ತೇವೆ” ಎಂದು ಅವರು ಹೇಳಿದ್ದಾರೆ.

ಆಗಸ್ಟ್ 8 ರಂದು ಅಧಿಕಾರ ವಹಿಸಿಕೊಂಡ ಯೂನಸ್ ಅವರು, ಹಸೀನಾ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಸೇರಿದಂತೆ ಸುಮಾರು 1,500 ಜನರು ಸಾವನ್ನಪ್ಪಿದ್ದಾರೆ ಮತ್ತು 19,931 ಇತರರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ, ಕಾನೂನು ಸಲಹೆಗಾರ ಆಸಿಫ್ ನಜ್ರುಲ್ ಅವರು ಒಪ್ಪಂದದಲ್ಲಿ ಯಾವುದೇ ನಿಬಂಧನೆಗಳನ್ನು ಉಲ್ಲೇಖಿಸಿ ಹಸೀನಾ ಅವರನ್ನು ಹಸ್ತಾಂತರಿಸಲು ಭಾರತ ನಿರಾಕರಿಸಿದರೆ ಬಾಂಗ್ಲಾದೇಶವು ಬಲವಾಗಿ ಪ್ರತಿಭಟಿಸುತ್ತದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿತ್ತು.

ಸೆಪ್ಟೆಂಬರ್‌ ವೇಳೆ ಢಾಕಾದಲ್ಲಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಯೂನುಸ್ ಅವರು, ಹಸೀನಾ ಭಾರತದಲ್ಲಿ ಕೂತು ರಾಜಕೀಯ ಟೀಕೆಗಳನ್ನು ಮಾಡುವುದು “ಸ್ನೇಹಪರವಲ್ಲದ ಗೆಸ್ಚರ್” ಎಂದು ಹೇಳಿದ್ದರು ಮತ್ತು ಬಾಂಗ್ಲಾದೇಶ ಅವರ ಹಸ್ತಾಂತರಕ್ಕೆ ವಿನಂತಿಸುವವರೆಗೂ ಎರಡೂ ದೇಶಗಳ ನಡುವಿನ ಗೊಂದಲಗಳನ್ನು ತಡೆಯಲು ಅವರು ಮೌನವಾಗಿರಬೇಕು ಎಂದು ಪ್ರತಿಪಾದಿಸಿದ್ದರು.

ಇತ್ತೀಚೆಗಷ್ಟೆ ಭಾರತದಿಂದ ಹೇಳಿಕೆ ನೀಡಿದ್ದ ಹಸೀನಾ ಅವರು, ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು “ಹತ್ಯಾಕಾಂಡ” ನಡೆಸುತ್ತಿದೆ ಮತ್ತು ಅಲ್ಪಸಂಖ್ಯಾತರನ್ನು, ಅದರಲ್ಲೂ ವಿಶೇಷವಾಗಿ ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಡಿಜಿಟಲ್ ಅರೆಸ್ಟ್‌ ಪ್ರಕರಣ: ₹11.8 ಕೋಟಿ ಹಣ ಕಳೆದುಕೊಂಡ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ಡಿಜಿಟಲ್ ಅರೆಸ್ಟ್‌ ಪ್ರಕರಣ: ₹11.8 ಕೋಟಿ ಹಣ ಕಳೆದುಕೊಂಡ ಬೆಂಗಳೂರಿನ ಸಾಫ್ಟ್‌ವೇರ್ ಎಂಜಿನಿಯರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...