ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ ವಾಪಸ್ ಕಳುಹಿಸಲು ಭಾರತಕ್ಕೆ ರಾಜತಾಂತ್ರಿಕ ಟಿಪ್ಪಣಿ ಕಳುಹಿಸಲಾಗಿದೆ ಎಂದು ಬಾಂಗ್ಲಾದೇಶದ ಮಧ್ಯಂತರ ಸರ್ಕಾರ ಸೋಮವಾರ ತಿಳಿಸಿದೆ. 77 ವರ್ಷದ ಹಸೀನಾ ಅವರ 16 ವರ್ಷಗಳ ಆಡಳಿತ ಆಗಸ್ಟ್ 5ರಂದು ಪತನವಾದ ನಂತರ ಅವರು ಭಾರತಕ್ಕೆ ಪಲಾಯನ ಮಾಡಿದ್ದರು. ಭಾರತ ಮತ್ತು ಬಾಂಗ್ಲಾದೇಶದ ನಡುವೆ ಹಸ್ತಾಂತರ ಒಪ್ಪಂದ ಈಗಾಗಲೇ ಅಸ್ತಿತ್ವದಲ್ಲಿ ಇರುವುದರಿಂದ ಹಸೀನಾ ಅವರ ಹಸ್ತಾಂತರ ಆಗಲಿದೆ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶೇಖ್ ಹಸೀನಾ ಹಸ್ತಾಂತರಕ್ಕೆ
ಬಾಂಗ್ಲಾದೇಶ ಮೂಲದ ಅಂತರರಾಷ್ಟ್ರೀಯ ಅಪರಾಧಗಳ ನ್ಯಾಯಮಂಡಳಿ (ICT) ಹಸೀನಾ ಮತ್ತು ಅವರ ಹಲವಾರು ಮಾಜಿ ಕ್ಯಾಬಿನೆಟ್ ಮಂತ್ರಿಗಳು, ಸಲಹೆಗಾರರು ಮತ್ತು ಮಿಲಿಟರಿ ಮತ್ತು ನಾಗರಿಕ ಅಧಿಕಾರಿಗಳಿಗೆ “ಮಾನವೀಯತೆ ಮತ್ತು ನರಮೇಧದ ವಿರುದ್ಧದ ಅಪರಾಧಗಳಿಗಾಗಿ” ಬಂಧನ ವಾರಂಟ್ ಹೊರಡಿಸಿದೆ. ಶೇಖ್ ಹಸೀನಾ ಹಸ್ತಾಂತರಕ್ಕೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ನ್ಯಾಯಾಂಗ ಪ್ರಕ್ರಿಯೆಗಾಗಿ ಬಾಂಗ್ಲಾದೇಶವು ಹಸೀನಾ ಅವರನ್ನು ಇಲ್ಲಿಗೆ ಹಿಂತಿರುಗಿಸಬೇಕು ಎಂದು ಬಯಸುತ್ತದೆ ಎಂದು ನಾವು ಭಾರತ ಸರ್ಕಾರಕ್ಕೆ ಮೌಖಿಕ ಟಿಪ್ಪಣಿ ಕಳುಹಿಸಿದ್ದೇವೆ” ಎಂದು ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್ ತಮ್ಮ ಕಚೇರಿಯಲ್ಲಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಇದಕ್ಕೂ ಮುನ್ನ ಬೆಳಿಗ್ಗೆ, ಗೃಹ ಸಲಹೆಗಾರ ಜಹಾಂಗೀರ್ ಆಲಂ ಅವರು ಭಾರತದಿಂದ ಹೊರಹಾಕಲ್ಪಟ್ಟ ಪ್ರಧಾನಿಯನ್ನು ಹಸ್ತಾಂತರಿಸಲು ಅನುಕೂಲವಾಗುವಂತೆ ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದಾರೆ ಎಂದು ಹೇಳಿದ್ದಾರೆ. ಅವರ ಹಸ್ತಾಂತರದ ಕುರಿತು ನಾವು ವಿದೇಶಾಂಗ ಸಚಿವಾಲಯಕ್ಕೆ ಪತ್ರವನ್ನು ಕಳುಹಿಸಿದ್ದೇವೆ. ಪ್ರಸ್ತುತ ಪ್ರಕ್ರಿಯೆಯು ನಡೆಯುತ್ತಿದೆ ಎಂದು ಅವರು ಸುದ್ದಿಗಾರರಿಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.
ಕಳೆದ ತಿಂಗಳು, ಮಧ್ಯಂತರ ಸರ್ಕಾರದ 100 ದಿನಗಳನ್ನು ಪೂರ್ಣಗೊಳಿಸಿದ ಸಂದರ್ಭದಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ, ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ಹಸೀನಾ ಅವರನ್ನು ಹಸ್ತಾಂತರಿಸುವಂತೆ ಕೋರುವುದಾಗಿ ಹೇಳಿದ್ದಾರೆ. “ನಾವು ಪ್ರತಿ ಹತ್ಯೆಯಲ್ಲಿ ನ್ಯಾಯವನ್ನು ಖಚಿತಪಡಿಸಿಕೊಳ್ಳಬೇಕು. ಉರುಳಿ ಬಿದ್ದ ನಿರಂಕುಶಾಧಿಕಾರಿ ಶೇಖ್ ಹಸೀನಾ ಅವರನ್ನು ವಾಪಸ್ ಕಳುಹಿಸುವಂತೆ ನಾವು ಭಾರತವನ್ನು ಕೇಳುತ್ತೇವೆ” ಎಂದು ಅವರು ಹೇಳಿದ್ದಾರೆ.
ಆಗಸ್ಟ್ 8 ರಂದು ಅಧಿಕಾರ ವಹಿಸಿಕೊಂಡ ಯೂನಸ್ ಅವರು, ಹಸೀನಾ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಮತ್ತು ಕಾರ್ಮಿಕರು ಸೇರಿದಂತೆ ಸುಮಾರು 1,500 ಜನರು ಸಾವನ್ನಪ್ಪಿದ್ದಾರೆ ಮತ್ತು 19,931 ಇತರರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ಅಕ್ಟೋಬರ್ನಲ್ಲಿ, ಕಾನೂನು ಸಲಹೆಗಾರ ಆಸಿಫ್ ನಜ್ರುಲ್ ಅವರು ಒಪ್ಪಂದದಲ್ಲಿ ಯಾವುದೇ ನಿಬಂಧನೆಗಳನ್ನು ಉಲ್ಲೇಖಿಸಿ ಹಸೀನಾ ಅವರನ್ನು ಹಸ್ತಾಂತರಿಸಲು ಭಾರತ ನಿರಾಕರಿಸಿದರೆ ಬಾಂಗ್ಲಾದೇಶವು ಬಲವಾಗಿ ಪ್ರತಿಭಟಿಸುತ್ತದೆ ಎಂದು ಹೇಳಿದ್ದಾರೆ ಎಂದು ವರದಿಯಾಗಿತ್ತು.
ಸೆಪ್ಟೆಂಬರ್ ವೇಳೆ ಢಾಕಾದಲ್ಲಿ ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಯೂನುಸ್ ಅವರು, ಹಸೀನಾ ಭಾರತದಲ್ಲಿ ಕೂತು ರಾಜಕೀಯ ಟೀಕೆಗಳನ್ನು ಮಾಡುವುದು “ಸ್ನೇಹಪರವಲ್ಲದ ಗೆಸ್ಚರ್” ಎಂದು ಹೇಳಿದ್ದರು ಮತ್ತು ಬಾಂಗ್ಲಾದೇಶ ಅವರ ಹಸ್ತಾಂತರಕ್ಕೆ ವಿನಂತಿಸುವವರೆಗೂ ಎರಡೂ ದೇಶಗಳ ನಡುವಿನ ಗೊಂದಲಗಳನ್ನು ತಡೆಯಲು ಅವರು ಮೌನವಾಗಿರಬೇಕು ಎಂದು ಪ್ರತಿಪಾದಿಸಿದ್ದರು.
ಇತ್ತೀಚೆಗಷ್ಟೆ ಭಾರತದಿಂದ ಹೇಳಿಕೆ ನೀಡಿದ್ದ ಹಸೀನಾ ಅವರು, ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರವು “ಹತ್ಯಾಕಾಂಡ” ನಡೆಸುತ್ತಿದೆ ಮತ್ತು ಅಲ್ಪಸಂಖ್ಯಾತರನ್ನು, ಅದರಲ್ಲೂ ವಿಶೇಷವಾಗಿ ಹಿಂದೂಗಳನ್ನು ರಕ್ಷಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ: ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!
ಒಂದೂವರೆ ವರ್ಷದಲ್ಲಿ 10 ಲಕ್ಷ ಉದ್ಯೋಗ ಎಂದು ಹೆಮ್ಮೆಪಟ್ಟುಕೊಂಡ ಪ್ರಧಾನಿ ಮೋದಿ!


