Homeಅಂತರಾಷ್ಟ್ರೀಯಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

ಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

- Advertisement -
- Advertisement -

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ (ನವೆಂಬರ್) ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ.

ಹಸೀನಾ ಅವರ ಅವಾಮಿ ಲೀಗ್ ಸರ್ಕಾರದ ಪತನಕ್ಕೆ ಕಾರಣವಾದ, ಕಳೆದ ವರ್ಷದ ವಿದ್ಯಾರ್ಥಿ ನೇತೃತ್ವದ ಆಂದೋಲನದ ಸಂದರ್ಭದಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ಅವರು ದೋಷಿ ಎಂದು ನ್ಯಾಯಮಂಡಳಿ ಹೇಳಿದೆ.

ಮೂವರು ಸದಸ್ಯರ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು ಸಹಾಯಕರಾದ ಮಾಜಿ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ವಿರುದ್ಧವೂ ಇದೇ ಆರೋಪಗಳ ಮೇಲೆ ತೀರ್ಪು ನೀಡಿದೆ. ಅಲ್-ಮಾಮುನ್ ಅವರನ್ನು ನ್ಯಾಯಮಂಡಳಿಯ ಮುಂದೆ ಹಾಜರುಪಡಿಸಲಾಗಿತ್ತು.

ನ್ಯಾಯವನ್ನು ತಡೆಯುವುದು, ಪ್ರತಿಭಟನಾಕಾರರ ಹತ್ಯೆಗೆ ಆದೇಶಿಸುವುದು ಮತ್ತು ದಂಡನಾತ್ಮಕ ಹತ್ಯೆಗಳನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿರುವುದು ಸೇರಿದಂತೆ ಮೂರು ಆರೋಪಗಳಲ್ಲಿ ಹಸೀನಾ ತಪ್ಪಿತಸ್ಥರೆಂದು ಸಾಬೀತಾಗಿದೆ.

“ನಾವು ಅವರಿಗೆ (ಹಸೀನಾ) ಒಂದೇ ಒಂದು ಶಿಕ್ಷೆಯನ್ನು ವಿಧಿಸಲು ನಿರ್ಧರಿಸಿದ್ದೇವೆ, ಅದು ಮರಣದಂಡನೆ” ಎಂದು ನ್ಯಾಯಾಧೀಶ ಗೋಲಮ್ ಮೊರ್ತುಝಾ ಮೊಜುಂದಾರ್ ಢಾಕಾದ ಕಿಕ್ಕಿರಿದ ನ್ಯಾಯಾಲಯದಲ್ಲಿ ತೀರ್ಪು ಓದುವಾಗ ಹೇಳಿದ್ದಾರೆ. ಅಲ್-ಮಾಮುನ್ ಅವರು ಮರಣದಂಡನೆಯಿಂದ ಪಾರಾಗಿದ್ದಾರೆ.

(ಐಸಿಟಿ-ಬಿಡಿ) ಮುಖ್ಯ ನ್ಯಾಯಾಧೀಶರು, ಹಸೀನಾ ಪ್ರತಿಭಟನಾಕಾರರ ವಿರುದ್ಧ ಹೆಲಿಕಾಪ್ಟರ್‌, ಡ್ರೋನ್‌ ಮತ್ತು ಮಾರಕ ಆಯುಧಗಳನ್ನು ಬಳಸಲು ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ. ದಕ್ಷಿಣ ಢಾಕಾ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್ ಅವರೊಂದಿಗಿನ ಸಂಭಾಷಣೆಯಲ್ಲಿ ಈ ನಿರ್ದೇಶನ ಬಹಿರಂಗವಾಗಿದೆ. ವಿಧಿವಿಜ್ಞಾನ ಪರೀಕ್ಷೆಯು ಸಿಡಿ ಮತ್ತು ರೆಕಾರ್ಡಿಂಗ್ ನಿಜವೆಂದು ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಢಾಕಾ ವಿಶ್ವವಿದ್ಯಾಲಯದ ಕುಲಪತಿಯೊಂದಿಗಿನ ಅವರ ಸಂಭಾಷಣೆಯ ದಾಖಲೆಗಳು ಲಭ್ಯವಿರುವುದನ್ನು ತಿಳಿಸಿದ ನ್ಯಾಯಮಂಡಳಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕೊಲ್ಲಲು ಹಸೀನಾ ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ.

ಹಸೀನಾ ವಿದ್ಯಾರ್ಥಿ ಚಳವಳಿಯನ್ನು ದುರ್ಬಲಗೊಳಿಸಿದ್ದಾರೆ. ಅವರು ಢಾಕಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ‘ರಜಾಕರು’ ಎಂದು ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಗಳು ಪ್ರತಿಭಟನಾಕಾರರನ್ನು ಮತ್ತಷ್ಟು ಕೆರಳಿಸಿದೆ ಎಂದು ತಿಳಿಸಿದ್ದಾರೆ.

ಜುಲೈ 14, 2024ರ ರಾತ್ರಿ, ಢಾಕಾ ವಿಶ್ವವಿದ್ಯಾಲಯದ ಉಪಕುಲಪತಿಯೊಂದಿಗೆ ಮಾತನಾಡಿ ಹಸೀನಾ, “ನಾನು ರಜಾಕಾರರನ್ನು ಗಲ್ಲಿಗೇರಿಸಿದ್ದೇನೆ, ಅವರನ್ನು [ಪ್ರತಿಭಟನಾಕಾರರನ್ನು] ಕೂಡ ಗಲ್ಲಿಗೇರಿಸಲಾಗುವುದು. ಅವರಲ್ಲಿ ಯಾರನ್ನೂ ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಾನು ಅವರ ಬಂಧನ ಮತ್ತು ಕ್ರಮಕ್ಕೆ ಆದೇಶಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ ಎಂದು ನ್ಯಾಯಾಧೀಶರು ವಿವರಿಸಿದ್ದಾರೆ.

ಹಸೀನಾ, ಮಾಜಿ ಗೃಹ ಸಚಿವ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥರು ಪ್ರತಿಭಟನಾಕಾರರನ್ನು ಕೊಲ್ಲಲು ಮತ್ತು ನಿಗ್ರಹಿಸಲು ಜಂಟಿಯಾಗಿ ಕೆಲಸ ಮಾಡಿದ್ದಾರೆ. ಹಸೀನಾ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಶಕೀಲ್ ಎಂಬ ಸಹಾಯಕನಿಗೆ ಫೋನ್ ಕರೆ ಮಾಡಿ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದ 226 ಜನರನ್ನು ಕೊಲ್ಲುವಂತೆ ಕೇಳಿಕೊಂಡಿದ್ದಾರೆ ಎಂದು ನ್ಯಾಯಮಂಡಳಿ ತಿಳಿಸಿದೆ.

ಮಾನವೀಯತೆಯ ವಿರುದ್ಧದ ಅಪರಾಧ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೋಷಿ ಎಂದ ಬಾಂಗ್ಲಾ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...