Homeಅಂತರಾಷ್ಟ್ರೀಯಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

ಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

- Advertisement -
- Advertisement -

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ (ನವೆಂಬರ್) ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ.

ಹಸೀನಾ ಅವರ ಅವಾಮಿ ಲೀಗ್ ಸರ್ಕಾರದ ಪತನಕ್ಕೆ ಕಾರಣವಾದ, ಕಳೆದ ವರ್ಷದ ವಿದ್ಯಾರ್ಥಿ ನೇತೃತ್ವದ ಆಂದೋಲನದ ಸಂದರ್ಭದಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ಅವರು ದೋಷಿ ಎಂದು ನ್ಯಾಯಮಂಡಳಿ ಹೇಳಿದೆ.

ಮೂವರು ಸದಸ್ಯರ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು ಸಹಾಯಕರಾದ ಮಾಜಿ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ವಿರುದ್ಧವೂ ಇದೇ ಆರೋಪಗಳ ಮೇಲೆ ತೀರ್ಪು ನೀಡಿದೆ. ಅಲ್-ಮಾಮುನ್ ಅವರನ್ನು ನ್ಯಾಯಮಂಡಳಿಯ ಮುಂದೆ ಹಾಜರುಪಡಿಸಲಾಗಿತ್ತು.

ನ್ಯಾಯವನ್ನು ತಡೆಯುವುದು, ಪ್ರತಿಭಟನಾಕಾರರ ಹತ್ಯೆಗೆ ಆದೇಶಿಸುವುದು ಮತ್ತು ದಂಡನಾತ್ಮಕ ಹತ್ಯೆಗಳನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿರುವುದು ಸೇರಿದಂತೆ ಮೂರು ಆರೋಪಗಳಲ್ಲಿ ಹಸೀನಾ ತಪ್ಪಿತಸ್ಥರೆಂದು ಸಾಬೀತಾಗಿದೆ.

“ನಾವು ಅವರಿಗೆ (ಹಸೀನಾ) ಒಂದೇ ಒಂದು ಶಿಕ್ಷೆಯನ್ನು ವಿಧಿಸಲು ನಿರ್ಧರಿಸಿದ್ದೇವೆ, ಅದು ಮರಣದಂಡನೆ” ಎಂದು ನ್ಯಾಯಾಧೀಶ ಗೋಲಮ್ ಮೊರ್ತುಝಾ ಮೊಜುಂದಾರ್ ಢಾಕಾದ ಕಿಕ್ಕಿರಿದ ನ್ಯಾಯಾಲಯದಲ್ಲಿ ತೀರ್ಪು ಓದುವಾಗ ಹೇಳಿದ್ದಾರೆ. ಅಲ್-ಮಾಮುನ್ ಅವರು ಮರಣದಂಡನೆಯಿಂದ ಪಾರಾಗಿದ್ದಾರೆ.

(ಐಸಿಟಿ-ಬಿಡಿ) ಮುಖ್ಯ ನ್ಯಾಯಾಧೀಶರು, ಹಸೀನಾ ಪ್ರತಿಭಟನಾಕಾರರ ವಿರುದ್ಧ ಹೆಲಿಕಾಪ್ಟರ್‌, ಡ್ರೋನ್‌ ಮತ್ತು ಮಾರಕ ಆಯುಧಗಳನ್ನು ಬಳಸಲು ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ. ದಕ್ಷಿಣ ಢಾಕಾ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್ ಅವರೊಂದಿಗಿನ ಸಂಭಾಷಣೆಯಲ್ಲಿ ಈ ನಿರ್ದೇಶನ ಬಹಿರಂಗವಾಗಿದೆ. ವಿಧಿವಿಜ್ಞಾನ ಪರೀಕ್ಷೆಯು ಸಿಡಿ ಮತ್ತು ರೆಕಾರ್ಡಿಂಗ್ ನಿಜವೆಂದು ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಢಾಕಾ ವಿಶ್ವವಿದ್ಯಾಲಯದ ಕುಲಪತಿಯೊಂದಿಗಿನ ಅವರ ಸಂಭಾಷಣೆಯ ದಾಖಲೆಗಳು ಲಭ್ಯವಿರುವುದನ್ನು ತಿಳಿಸಿದ ನ್ಯಾಯಮಂಡಳಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕೊಲ್ಲಲು ಹಸೀನಾ ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ.

ಹಸೀನಾ ವಿದ್ಯಾರ್ಥಿ ಚಳವಳಿಯನ್ನು ದುರ್ಬಲಗೊಳಿಸಿದ್ದಾರೆ. ಅವರು ಢಾಕಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ‘ರಜಾಕರು’ ಎಂದು ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಗಳು ಪ್ರತಿಭಟನಾಕಾರರನ್ನು ಮತ್ತಷ್ಟು ಕೆರಳಿಸಿದೆ ಎಂದು ತಿಳಿಸಿದ್ದಾರೆ.

ಜುಲೈ 14, 2024ರ ರಾತ್ರಿ, ಢಾಕಾ ವಿಶ್ವವಿದ್ಯಾಲಯದ ಉಪಕುಲಪತಿಯೊಂದಿಗೆ ಮಾತನಾಡಿ ಹಸೀನಾ, “ನಾನು ರಜಾಕಾರರನ್ನು ಗಲ್ಲಿಗೇರಿಸಿದ್ದೇನೆ, ಅವರನ್ನು [ಪ್ರತಿಭಟನಾಕಾರರನ್ನು] ಕೂಡ ಗಲ್ಲಿಗೇರಿಸಲಾಗುವುದು. ಅವರಲ್ಲಿ ಯಾರನ್ನೂ ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಾನು ಅವರ ಬಂಧನ ಮತ್ತು ಕ್ರಮಕ್ಕೆ ಆದೇಶಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ ಎಂದು ನ್ಯಾಯಾಧೀಶರು ವಿವರಿಸಿದ್ದಾರೆ.

ಹಸೀನಾ, ಮಾಜಿ ಗೃಹ ಸಚಿವ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥರು ಪ್ರತಿಭಟನಾಕಾರರನ್ನು ಕೊಲ್ಲಲು ಮತ್ತು ನಿಗ್ರಹಿಸಲು ಜಂಟಿಯಾಗಿ ಕೆಲಸ ಮಾಡಿದ್ದಾರೆ. ಹಸೀನಾ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಶಕೀಲ್ ಎಂಬ ಸಹಾಯಕನಿಗೆ ಫೋನ್ ಕರೆ ಮಾಡಿ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದ 226 ಜನರನ್ನು ಕೊಲ್ಲುವಂತೆ ಕೇಳಿಕೊಂಡಿದ್ದಾರೆ ಎಂದು ನ್ಯಾಯಮಂಡಳಿ ತಿಳಿಸಿದೆ.

ಮಾನವೀಯತೆಯ ವಿರುದ್ಧದ ಅಪರಾಧ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೋಷಿ ಎಂದ ಬಾಂಗ್ಲಾ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...