Homeಅಂತರಾಷ್ಟ್ರೀಯಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

ಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

- Advertisement -
- Advertisement -

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ (ನವೆಂಬರ್) ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ.

ಹಸೀನಾ ಅವರ ಅವಾಮಿ ಲೀಗ್ ಸರ್ಕಾರದ ಪತನಕ್ಕೆ ಕಾರಣವಾದ, ಕಳೆದ ವರ್ಷದ ವಿದ್ಯಾರ್ಥಿ ನೇತೃತ್ವದ ಆಂದೋಲನದ ಸಂದರ್ಭದಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ಅವರು ದೋಷಿ ಎಂದು ನ್ಯಾಯಮಂಡಳಿ ಹೇಳಿದೆ.

ಮೂವರು ಸದಸ್ಯರ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು ಸಹಾಯಕರಾದ ಮಾಜಿ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ವಿರುದ್ಧವೂ ಇದೇ ಆರೋಪಗಳ ಮೇಲೆ ತೀರ್ಪು ನೀಡಿದೆ. ಅಲ್-ಮಾಮುನ್ ಅವರನ್ನು ನ್ಯಾಯಮಂಡಳಿಯ ಮುಂದೆ ಹಾಜರುಪಡಿಸಲಾಗಿತ್ತು.

ನ್ಯಾಯವನ್ನು ತಡೆಯುವುದು, ಪ್ರತಿಭಟನಾಕಾರರ ಹತ್ಯೆಗೆ ಆದೇಶಿಸುವುದು ಮತ್ತು ದಂಡನಾತ್ಮಕ ಹತ್ಯೆಗಳನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿರುವುದು ಸೇರಿದಂತೆ ಮೂರು ಆರೋಪಗಳಲ್ಲಿ ಹಸೀನಾ ತಪ್ಪಿತಸ್ಥರೆಂದು ಸಾಬೀತಾಗಿದೆ.

“ನಾವು ಅವರಿಗೆ (ಹಸೀನಾ) ಒಂದೇ ಒಂದು ಶಿಕ್ಷೆಯನ್ನು ವಿಧಿಸಲು ನಿರ್ಧರಿಸಿದ್ದೇವೆ, ಅದು ಮರಣದಂಡನೆ” ಎಂದು ನ್ಯಾಯಾಧೀಶ ಗೋಲಮ್ ಮೊರ್ತುಝಾ ಮೊಜುಂದಾರ್ ಢಾಕಾದ ಕಿಕ್ಕಿರಿದ ನ್ಯಾಯಾಲಯದಲ್ಲಿ ತೀರ್ಪು ಓದುವಾಗ ಹೇಳಿದ್ದಾರೆ. ಅಲ್-ಮಾಮುನ್ ಅವರು ಮರಣದಂಡನೆಯಿಂದ ಪಾರಾಗಿದ್ದಾರೆ.

(ಐಸಿಟಿ-ಬಿಡಿ) ಮುಖ್ಯ ನ್ಯಾಯಾಧೀಶರು, ಹಸೀನಾ ಪ್ರತಿಭಟನಾಕಾರರ ವಿರುದ್ಧ ಹೆಲಿಕಾಪ್ಟರ್‌, ಡ್ರೋನ್‌ ಮತ್ತು ಮಾರಕ ಆಯುಧಗಳನ್ನು ಬಳಸಲು ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ. ದಕ್ಷಿಣ ಢಾಕಾ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್ ಅವರೊಂದಿಗಿನ ಸಂಭಾಷಣೆಯಲ್ಲಿ ಈ ನಿರ್ದೇಶನ ಬಹಿರಂಗವಾಗಿದೆ. ವಿಧಿವಿಜ್ಞಾನ ಪರೀಕ್ಷೆಯು ಸಿಡಿ ಮತ್ತು ರೆಕಾರ್ಡಿಂಗ್ ನಿಜವೆಂದು ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಢಾಕಾ ವಿಶ್ವವಿದ್ಯಾಲಯದ ಕುಲಪತಿಯೊಂದಿಗಿನ ಅವರ ಸಂಭಾಷಣೆಯ ದಾಖಲೆಗಳು ಲಭ್ಯವಿರುವುದನ್ನು ತಿಳಿಸಿದ ನ್ಯಾಯಮಂಡಳಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕೊಲ್ಲಲು ಹಸೀನಾ ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ.

ಹಸೀನಾ ವಿದ್ಯಾರ್ಥಿ ಚಳವಳಿಯನ್ನು ದುರ್ಬಲಗೊಳಿಸಿದ್ದಾರೆ. ಅವರು ಢಾಕಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ‘ರಜಾಕರು’ ಎಂದು ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಗಳು ಪ್ರತಿಭಟನಾಕಾರರನ್ನು ಮತ್ತಷ್ಟು ಕೆರಳಿಸಿದೆ ಎಂದು ತಿಳಿಸಿದ್ದಾರೆ.

ಜುಲೈ 14, 2024ರ ರಾತ್ರಿ, ಢಾಕಾ ವಿಶ್ವವಿದ್ಯಾಲಯದ ಉಪಕುಲಪತಿಯೊಂದಿಗೆ ಮಾತನಾಡಿ ಹಸೀನಾ, “ನಾನು ರಜಾಕಾರರನ್ನು ಗಲ್ಲಿಗೇರಿಸಿದ್ದೇನೆ, ಅವರನ್ನು [ಪ್ರತಿಭಟನಾಕಾರರನ್ನು] ಕೂಡ ಗಲ್ಲಿಗೇರಿಸಲಾಗುವುದು. ಅವರಲ್ಲಿ ಯಾರನ್ನೂ ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಾನು ಅವರ ಬಂಧನ ಮತ್ತು ಕ್ರಮಕ್ಕೆ ಆದೇಶಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ ಎಂದು ನ್ಯಾಯಾಧೀಶರು ವಿವರಿಸಿದ್ದಾರೆ.

ಹಸೀನಾ, ಮಾಜಿ ಗೃಹ ಸಚಿವ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥರು ಪ್ರತಿಭಟನಾಕಾರರನ್ನು ಕೊಲ್ಲಲು ಮತ್ತು ನಿಗ್ರಹಿಸಲು ಜಂಟಿಯಾಗಿ ಕೆಲಸ ಮಾಡಿದ್ದಾರೆ. ಹಸೀನಾ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಶಕೀಲ್ ಎಂಬ ಸಹಾಯಕನಿಗೆ ಫೋನ್ ಕರೆ ಮಾಡಿ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದ 226 ಜನರನ್ನು ಕೊಲ್ಲುವಂತೆ ಕೇಳಿಕೊಂಡಿದ್ದಾರೆ ಎಂದು ನ್ಯಾಯಮಂಡಳಿ ತಿಳಿಸಿದೆ.

ಮಾನವೀಯತೆಯ ವಿರುದ್ಧದ ಅಪರಾಧ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೋಷಿ ಎಂದ ಬಾಂಗ್ಲಾ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....