Homeಅಂತರಾಷ್ಟ್ರೀಯಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

ಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

- Advertisement -
- Advertisement -

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ (ನವೆಂಬರ್) ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ.

ಹಸೀನಾ ಅವರ ಅವಾಮಿ ಲೀಗ್ ಸರ್ಕಾರದ ಪತನಕ್ಕೆ ಕಾರಣವಾದ, ಕಳೆದ ವರ್ಷದ ವಿದ್ಯಾರ್ಥಿ ನೇತೃತ್ವದ ಆಂದೋಲನದ ಸಂದರ್ಭದಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ಅವರು ದೋಷಿ ಎಂದು ನ್ಯಾಯಮಂಡಳಿ ಹೇಳಿದೆ.

ಮೂವರು ಸದಸ್ಯರ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು ಸಹಾಯಕರಾದ ಮಾಜಿ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ವಿರುದ್ಧವೂ ಇದೇ ಆರೋಪಗಳ ಮೇಲೆ ತೀರ್ಪು ನೀಡಿದೆ. ಅಲ್-ಮಾಮುನ್ ಅವರನ್ನು ನ್ಯಾಯಮಂಡಳಿಯ ಮುಂದೆ ಹಾಜರುಪಡಿಸಲಾಗಿತ್ತು.

ನ್ಯಾಯವನ್ನು ತಡೆಯುವುದು, ಪ್ರತಿಭಟನಾಕಾರರ ಹತ್ಯೆಗೆ ಆದೇಶಿಸುವುದು ಮತ್ತು ದಂಡನಾತ್ಮಕ ಹತ್ಯೆಗಳನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿರುವುದು ಸೇರಿದಂತೆ ಮೂರು ಆರೋಪಗಳಲ್ಲಿ ಹಸೀನಾ ತಪ್ಪಿತಸ್ಥರೆಂದು ಸಾಬೀತಾಗಿದೆ.

“ನಾವು ಅವರಿಗೆ (ಹಸೀನಾ) ಒಂದೇ ಒಂದು ಶಿಕ್ಷೆಯನ್ನು ವಿಧಿಸಲು ನಿರ್ಧರಿಸಿದ್ದೇವೆ, ಅದು ಮರಣದಂಡನೆ” ಎಂದು ನ್ಯಾಯಾಧೀಶ ಗೋಲಮ್ ಮೊರ್ತುಝಾ ಮೊಜುಂದಾರ್ ಢಾಕಾದ ಕಿಕ್ಕಿರಿದ ನ್ಯಾಯಾಲಯದಲ್ಲಿ ತೀರ್ಪು ಓದುವಾಗ ಹೇಳಿದ್ದಾರೆ. ಅಲ್-ಮಾಮುನ್ ಅವರು ಮರಣದಂಡನೆಯಿಂದ ಪಾರಾಗಿದ್ದಾರೆ.

(ಐಸಿಟಿ-ಬಿಡಿ) ಮುಖ್ಯ ನ್ಯಾಯಾಧೀಶರು, ಹಸೀನಾ ಪ್ರತಿಭಟನಾಕಾರರ ವಿರುದ್ಧ ಹೆಲಿಕಾಪ್ಟರ್‌, ಡ್ರೋನ್‌ ಮತ್ತು ಮಾರಕ ಆಯುಧಗಳನ್ನು ಬಳಸಲು ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ. ದಕ್ಷಿಣ ಢಾಕಾ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್ ಅವರೊಂದಿಗಿನ ಸಂಭಾಷಣೆಯಲ್ಲಿ ಈ ನಿರ್ದೇಶನ ಬಹಿರಂಗವಾಗಿದೆ. ವಿಧಿವಿಜ್ಞಾನ ಪರೀಕ್ಷೆಯು ಸಿಡಿ ಮತ್ತು ರೆಕಾರ್ಡಿಂಗ್ ನಿಜವೆಂದು ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಢಾಕಾ ವಿಶ್ವವಿದ್ಯಾಲಯದ ಕುಲಪತಿಯೊಂದಿಗಿನ ಅವರ ಸಂಭಾಷಣೆಯ ದಾಖಲೆಗಳು ಲಭ್ಯವಿರುವುದನ್ನು ತಿಳಿಸಿದ ನ್ಯಾಯಮಂಡಳಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕೊಲ್ಲಲು ಹಸೀನಾ ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ.

ಹಸೀನಾ ವಿದ್ಯಾರ್ಥಿ ಚಳವಳಿಯನ್ನು ದುರ್ಬಲಗೊಳಿಸಿದ್ದಾರೆ. ಅವರು ಢಾಕಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ‘ರಜಾಕರು’ ಎಂದು ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಗಳು ಪ್ರತಿಭಟನಾಕಾರರನ್ನು ಮತ್ತಷ್ಟು ಕೆರಳಿಸಿದೆ ಎಂದು ತಿಳಿಸಿದ್ದಾರೆ.

ಜುಲೈ 14, 2024ರ ರಾತ್ರಿ, ಢಾಕಾ ವಿಶ್ವವಿದ್ಯಾಲಯದ ಉಪಕುಲಪತಿಯೊಂದಿಗೆ ಮಾತನಾಡಿ ಹಸೀನಾ, “ನಾನು ರಜಾಕಾರರನ್ನು ಗಲ್ಲಿಗೇರಿಸಿದ್ದೇನೆ, ಅವರನ್ನು [ಪ್ರತಿಭಟನಾಕಾರರನ್ನು] ಕೂಡ ಗಲ್ಲಿಗೇರಿಸಲಾಗುವುದು. ಅವರಲ್ಲಿ ಯಾರನ್ನೂ ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಾನು ಅವರ ಬಂಧನ ಮತ್ತು ಕ್ರಮಕ್ಕೆ ಆದೇಶಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ ಎಂದು ನ್ಯಾಯಾಧೀಶರು ವಿವರಿಸಿದ್ದಾರೆ.

ಹಸೀನಾ, ಮಾಜಿ ಗೃಹ ಸಚಿವ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥರು ಪ್ರತಿಭಟನಾಕಾರರನ್ನು ಕೊಲ್ಲಲು ಮತ್ತು ನಿಗ್ರಹಿಸಲು ಜಂಟಿಯಾಗಿ ಕೆಲಸ ಮಾಡಿದ್ದಾರೆ. ಹಸೀನಾ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಶಕೀಲ್ ಎಂಬ ಸಹಾಯಕನಿಗೆ ಫೋನ್ ಕರೆ ಮಾಡಿ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದ 226 ಜನರನ್ನು ಕೊಲ್ಲುವಂತೆ ಕೇಳಿಕೊಂಡಿದ್ದಾರೆ ಎಂದು ನ್ಯಾಯಮಂಡಳಿ ತಿಳಿಸಿದೆ.

ಮಾನವೀಯತೆಯ ವಿರುದ್ಧದ ಅಪರಾಧ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೋಷಿ ಎಂದ ಬಾಂಗ್ಲಾ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...