Homeಅಂತರಾಷ್ಟ್ರೀಯಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

ಬಾಂಗ್ಲಾದೇಶ | ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ

- Advertisement -
- Advertisement -

ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ (ನವೆಂಬರ್) ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಮರಣದಂಡನೆ ವಿಧಿಸಿ ಆದೇಶಿಸಿದೆ.

ಹಸೀನಾ ಅವರ ಅವಾಮಿ ಲೀಗ್ ಸರ್ಕಾರದ ಪತನಕ್ಕೆ ಕಾರಣವಾದ, ಕಳೆದ ವರ್ಷದ ವಿದ್ಯಾರ್ಥಿ ನೇತೃತ್ವದ ಆಂದೋಲನದ ಸಂದರ್ಭದಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ಅವರು ದೋಷಿ ಎಂದು ನ್ಯಾಯಮಂಡಳಿ ಹೇಳಿದೆ.

ಮೂವರು ಸದಸ್ಯರ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು ಸಹಾಯಕರಾದ ಮಾಜಿ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ ವಿರುದ್ಧವೂ ಇದೇ ಆರೋಪಗಳ ಮೇಲೆ ತೀರ್ಪು ನೀಡಿದೆ. ಅಲ್-ಮಾಮುನ್ ಅವರನ್ನು ನ್ಯಾಯಮಂಡಳಿಯ ಮುಂದೆ ಹಾಜರುಪಡಿಸಲಾಗಿತ್ತು.

ನ್ಯಾಯವನ್ನು ತಡೆಯುವುದು, ಪ್ರತಿಭಟನಾಕಾರರ ಹತ್ಯೆಗೆ ಆದೇಶಿಸುವುದು ಮತ್ತು ದಂಡನಾತ್ಮಕ ಹತ್ಯೆಗಳನ್ನು ತಡೆಯಲು ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲರಾಗಿರುವುದು ಸೇರಿದಂತೆ ಮೂರು ಆರೋಪಗಳಲ್ಲಿ ಹಸೀನಾ ತಪ್ಪಿತಸ್ಥರೆಂದು ಸಾಬೀತಾಗಿದೆ.

“ನಾವು ಅವರಿಗೆ (ಹಸೀನಾ) ಒಂದೇ ಒಂದು ಶಿಕ್ಷೆಯನ್ನು ವಿಧಿಸಲು ನಿರ್ಧರಿಸಿದ್ದೇವೆ, ಅದು ಮರಣದಂಡನೆ” ಎಂದು ನ್ಯಾಯಾಧೀಶ ಗೋಲಮ್ ಮೊರ್ತುಝಾ ಮೊಜುಂದಾರ್ ಢಾಕಾದ ಕಿಕ್ಕಿರಿದ ನ್ಯಾಯಾಲಯದಲ್ಲಿ ತೀರ್ಪು ಓದುವಾಗ ಹೇಳಿದ್ದಾರೆ. ಅಲ್-ಮಾಮುನ್ ಅವರು ಮರಣದಂಡನೆಯಿಂದ ಪಾರಾಗಿದ್ದಾರೆ.

(ಐಸಿಟಿ-ಬಿಡಿ) ಮುಖ್ಯ ನ್ಯಾಯಾಧೀಶರು, ಹಸೀನಾ ಪ್ರತಿಭಟನಾಕಾರರ ವಿರುದ್ಧ ಹೆಲಿಕಾಪ್ಟರ್‌, ಡ್ರೋನ್‌ ಮತ್ತು ಮಾರಕ ಆಯುಧಗಳನ್ನು ಬಳಸಲು ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ. ದಕ್ಷಿಣ ಢಾಕಾ ಮುನ್ಸಿಪಲ್ ಕಾರ್ಪೊರೇಷನ್‌ನ ಮೇಯರ್ ಅವರೊಂದಿಗಿನ ಸಂಭಾಷಣೆಯಲ್ಲಿ ಈ ನಿರ್ದೇಶನ ಬಹಿರಂಗವಾಗಿದೆ. ವಿಧಿವಿಜ್ಞಾನ ಪರೀಕ್ಷೆಯು ಸಿಡಿ ಮತ್ತು ರೆಕಾರ್ಡಿಂಗ್ ನಿಜವೆಂದು ಪರಿಗಣಿಸಿದೆ ಎಂದು ತಿಳಿಸಿದ್ದಾರೆ.

ಢಾಕಾ ವಿಶ್ವವಿದ್ಯಾಲಯದ ಕುಲಪತಿಯೊಂದಿಗಿನ ಅವರ ಸಂಭಾಷಣೆಯ ದಾಖಲೆಗಳು ಲಭ್ಯವಿರುವುದನ್ನು ತಿಳಿಸಿದ ನ್ಯಾಯಮಂಡಳಿ, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕೊಲ್ಲಲು ಹಸೀನಾ ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ.

ಹಸೀನಾ ವಿದ್ಯಾರ್ಥಿ ಚಳವಳಿಯನ್ನು ದುರ್ಬಲಗೊಳಿಸಿದ್ದಾರೆ. ಅವರು ಢಾಕಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ‘ರಜಾಕರು’ ಎಂದು ಉಲ್ಲೇಖಿಸಿದ್ದಾರೆ. ಅವರ ಹೇಳಿಕೆಗಳು ಪ್ರತಿಭಟನಾಕಾರರನ್ನು ಮತ್ತಷ್ಟು ಕೆರಳಿಸಿದೆ ಎಂದು ತಿಳಿಸಿದ್ದಾರೆ.

ಜುಲೈ 14, 2024ರ ರಾತ್ರಿ, ಢಾಕಾ ವಿಶ್ವವಿದ್ಯಾಲಯದ ಉಪಕುಲಪತಿಯೊಂದಿಗೆ ಮಾತನಾಡಿ ಹಸೀನಾ, “ನಾನು ರಜಾಕಾರರನ್ನು ಗಲ್ಲಿಗೇರಿಸಿದ್ದೇನೆ, ಅವರನ್ನು [ಪ್ರತಿಭಟನಾಕಾರರನ್ನು] ಕೂಡ ಗಲ್ಲಿಗೇರಿಸಲಾಗುವುದು. ಅವರಲ್ಲಿ ಯಾರನ್ನೂ ಬಿಡುವುದಿಲ್ಲ” ಎಂದು ಹೇಳಿದ್ದಾರೆ. “ನಾನು ಅವರ ಬಂಧನ ಮತ್ತು ಕ್ರಮಕ್ಕೆ ಆದೇಶಿಸುತ್ತಿದ್ದೇನೆ” ಎಂದು ತಿಳಿಸಿದ್ದಾರೆ ಎಂದು ನ್ಯಾಯಾಧೀಶರು ವಿವರಿಸಿದ್ದಾರೆ.

ಹಸೀನಾ, ಮಾಜಿ ಗೃಹ ಸಚಿವ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥರು ಪ್ರತಿಭಟನಾಕಾರರನ್ನು ಕೊಲ್ಲಲು ಮತ್ತು ನಿಗ್ರಹಿಸಲು ಜಂಟಿಯಾಗಿ ಕೆಲಸ ಮಾಡಿದ್ದಾರೆ. ಹಸೀನಾ ದ್ವೇಷ ಭಾಷಣಗಳನ್ನು ಮಾಡಿದ್ದಾರೆ. ಶಕೀಲ್ ಎಂಬ ಸಹಾಯಕನಿಗೆ ಫೋನ್ ಕರೆ ಮಾಡಿ, ಅವರ ವಿರುದ್ಧ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದ 226 ಜನರನ್ನು ಕೊಲ್ಲುವಂತೆ ಕೇಳಿಕೊಂಡಿದ್ದಾರೆ ಎಂದು ನ್ಯಾಯಮಂಡಳಿ ತಿಳಿಸಿದೆ.

ಮಾನವೀಯತೆಯ ವಿರುದ್ಧದ ಅಪರಾಧ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೋಷಿ ಎಂದ ಬಾಂಗ್ಲಾ ನ್ಯಾಯಮಂಡಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...