Homeಮುಖಪುಟನೇಪಾಳದ ಪ್ರಧಾನಿಯಾಗಿ 5ನೇ ಬಾರಿ ಶೇರ್ ಬಹದ್ದೂರ್ ದೇವುಬಾ ನೇಮಕ

ನೇಪಾಳದ ಪ್ರಧಾನಿಯಾಗಿ 5ನೇ ಬಾರಿ ಶೇರ್ ಬಹದ್ದೂರ್ ದೇವುಬಾ ನೇಮಕ

- Advertisement -
- Advertisement -

ಶೇರ್ ಬಹದ್ದೂರ್ ದೇವುಬಾ ಅವರನ್ನು ನೇಪಾಳದ ಮುಂದಿನ ಪ್ರಧಾನಿಯಾಗಿ ಮಂಗಳವಾರ ನೇಮಿಸಲಾಗಿದೆ. ನೂತನ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ನೇಪಾಳಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ. ಸಂವಿಧಾನದ 76 (5) ನೇ ವಿಧಿಗೆ ಅನುಗುಣವಾಗಿ ನೇಪಾಳದ ರಾಷ್ಟ್ರಪತಿ ವಿದ್ಯಾದೇವಿ ಭಂಡಾರಿ ಅವರು ದೇವುಬಾ ಅವರನ್ನು ನೇಮಕ ಮಾಡಿದ್ದಾರೆ.

ಸಾಂವಿಧಾನಿಕ ನಿಬಂಧನೆಯ ಪ್ರಕಾರ, ಶೇರ್ ಬಹದ್ದೂರ್ ದೇವುಬಾ ಅವರಿಗೆ ಸಂಸತ್ತಿನ ಉಳಿದ ಅವಧಿಗೆ ಪ್ರಧಾನ ಮಂತ್ರಿಯಾಗಿ ಮುಂದುವರೆಯಲು, ತಮ್ಮ ಬಹುಮತವನ್ನು ಸಾಬೀತುಪಡಿಸಲು 30 ದಿನಗಳ ಕಾಲಾವಕಾಶ ನೀಡಲಾಗಿದೆ.

ನೇಪಾಳದ ಹಂಗಾಮಿ ಪ್ರಧಾನಿಯಾಗಿದ್ದ ಕೆಪಿ ಶರ್ಮಾ ಒಲಿ ಅವರು ಸಂಸತ್ತನ್ನು ವಿಸರ್ಜಿಸುವ ನಿರ್ಧಾರಕ್ಕೆ ಸುಪ್ರೀಂಕೋರ್ಟ್ ತಡೆಯೊಡ್ಡಿತ್ತು. ನೇಪಾಳಿ ಕಾಂಗ್ರೆಸ್ ಅಧ್ಯಕ್ಷ ಶೇರ್ ಬಹದ್ದೂರ್ ದೇವುಬಾ ಅವರನ್ನು ಪುನಃ ಪ್ರಧಾನ ಮಂತ್ರಿಯಾಗಿ ನೇಮಿಸಬೇಕು ಎಂದು ಆದೇಶ ಹೊರಡಿಸಿತ್ತು.

ಇದನ್ನೂ ಓದಿ: ರಾಜಕೀಯಕ್ಕೆ ಬರುವುದಿಲ್ಲ ಎಂದ ಸೂಪರ್ ಸ್ಟಾರ್ ರಜನಿಕಾಂತ್‌!: ಆರ್‌ಎಂಎಂ ವಿಸರ್ಜನೆ

ಹಂಗಾಮಿ ಪ್ರಧಾನಿ ಒಲಿ ವಿರುದ್ಧ ಹೋರಾಡಲು ರೂಪುಗೊಂಡಿದ್ದ ಮೈತ್ರಿಕೂಟದಿಂದ ಸಿಪಿಎನ್-ಯುಎಂಎಲ್‌ ಪ್ರತಿಸ್ಪರ್ಧಿ ಬಣವು ಬೇರ್ಪಟ್ಟಿರುವುದರಿಂದ ದೇವುಬಾ ಅವರಿಗೆ ಬಹುಮತದ ಕೊರತೆಯಿದೆ.

74 ವರ್ಷದ ದೇವುಬಾ ಅವರು ನೇಪಾಳದಲ್ಲಿ ಪ್ರಧಾನಿ ಹುದ್ದೆಯನ್ನು ಅಲಂಕರಿಸುವುದು ಇದು ಐದನೇ ಬಾರಿ. ಜೂನ್ 2017 ರಿಂದ ಫೆಬ್ರವರಿ 2018, ಜೂನ್ 2004 ರಿಂದ ಫೆಬ್ರವರಿ 2005, ಜುಲೈ 2001 ರಿಂದ ಅಕ್ಟೋಬರ್ 2002 ಮತ್ತು ಸೆಪ್ಟೆಂಬರ್ 1995 ರಿಂದ ಮಾರ್ಚ್ 1997 ರ ವರೆಗೆ ಪ್ರಧಾನಿ ಹುದ್ದೆಯನ್ನು ಅಲಂಕರಿಸಿದ್ದರು.

ಸಂಸತ್ತು ಅನ್ನು ವಿಸರ್ಜಿಸುವ ಒಲಿಯವರ ಮೇ 21 ರ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಗೊಳಿಸಿತು ಮತ್ತು ದೇವುಬಾ ಅವರನ್ನು ಪ್ರಧಾನ ಮಂತ್ರಿಯಾಗಿ ನೇಮಕ ಮಾಡಲು ಆದೇಶಿಸಿತ್ತು. ಪ್ರಧಾನಮಂತ್ರಿ ಹುದ್ದೆಯಲ್ಲಿ ಕೆಪಿ ಶರ್ಮಾ ಒಲಿ ಮುಂದುವರೆಯುವುದು ಅಸಂವಿಧಾನಿಕ ಎಂದು ಮುಖ್ಯ ನ್ಯಾಯಮೂರ್ತಿ ಕೋಲೆಂದ್ರ ಸಂಶೀರ್‌ ರಾಣಾ ನೇತೃತ್ವದ ಐದು ಸದಸ್ಯರ ಸಾಂವಿಧಾನಿಕ ಪೀಠ ಅಭಿಪ್ರಾಯಪಟ್ಟಿದೆ.

ಹೊಸ ಸರ್ಕಾರವನ್ನು ರಚಿಸುವ ದೇವುಬಾ ಅವರ ಹೇಳಿಕೆಯನ್ನು ತಿರಸ್ಕರಿಸುವ ಅಧ್ಯಕ್ಷೆ ವಿದ್ಯಾದೇವಿ ಭಂಡಾರಿ ಅವರ ನಿರ್ಧಾರವು ಅಸಂವಿಧಾನಿಕ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.


ಇದನ್ನೂ ಓದಿ: ಉತ್ತರ ಪ್ರದೇಶ ಜನಸಂಖ್ಯಾ ಮಸೂದೆ: ‘ಒನ್-ಚೈಲ್ಡ್‌‌’ ನೀತಿಯನ್ನು ತೆಗೆದು ಹಾಕುವಂತೆ ವಿಹೆಚ್‌‌ಪಿ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...