Homeಕರ್ನಾಟಕಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಟೀಕಿಸಿದ ಬಿಜೆಪಿಗೆ ತಿರುಗೇಟು ಕೊಟ್ಟ ಶೆಟ್ಟರ್, ಸವದಿ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಟೀಕಿಸಿದ ಬಿಜೆಪಿಗೆ ತಿರುಗೇಟು ಕೊಟ್ಟ ಶೆಟ್ಟರ್, ಸವದಿ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲಿ ಬಿಜೆಪಿಯ ಪ್ರಬಲ ನಾಯಕರಾಗಿದ್ದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರು ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಸಧ್ಯ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಇಬ್ಬರಿಗೂ ಸಚಿವ ಸ್ಥಾನ ನೀಡಬಹುದು ಎನ್ನುವ ಮಾತುಗಳು ಕೇಳಿಬಂದಿದ್ದವು ಆದರೆ ಇಬ್ಬರಿಗೂ ಸಚಿವ ಸ್ಥಾನ ಕೈತಪ್ಪಿದೆ. ಈ ಬಗ್ಗೆ ಬಿಜೆಪಿ ಟೀಕೆ ಮಾಡಿದ್ದು, ಅದಕ್ಕೆ ಶೆಟ್ಟರ್ ಹಾಗೂ ಸವದಿ ಅವರು ತಿರುಗೇಟು ನೀಡಿದ್ದಾರೆ.

ಅಥಣಿ​ ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಬಿಜೆಪಿ ನಾಯಕರ ಟೀಕೆಗೆ ಲಕ್ಷ್ಮಣ ಸವದಿ ಅವರು ತಿರುಗೇಟು ನೀಡಿದ್ದಾರೆ. ”ರಾಜಕಾರಣದಲ್ಲಿ ಮನುಷ್ಯನಿಗೆ ದೂರದೃಷ್ಟಿ, ತಾಳ್ಮೆ ಬಹಳ ಮುಖ್ಯ. ನನಗೆ ನಿರಾಸೆಯಾಗಿಲ್ಲ, ಒಳ್ಳೆಯ ದಿನಗಳು ಬರುತ್ತವೆ” ಎಂದಿದ್ದಾರೆ.

ಸಚಿವಸ್ಥಾನ ಸಿಗುವ ನಿರೀಕ್ಷಯಲ್ಲಿದ್ರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ನಿರೀಕ್ಷೆಗಳು ಯಾರಿಗೆ ಇರಲ್ಲ ಹೇಳಿ, ಎಲ್ಲರಿಗೂ ನಿರೀಕ್ಷೆಗಳಿರುತ್ತೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ತದನಂತರ ಸಿಎಂ ಆಗಬೇಕೆಂದು ಎಲ್ಲರೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆಸೆಗಳಿಗೆ ಕೊನೆ ಇರುವುದಿಲ್ಲ, ಅದು ಮನುಷ್ಯನ ಸಹಜ ಗುಣ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದೇವೇಳೆ ಅಧಿಕಾರ ಹಂಚಿಕೆ ಪ್ರಶ್ನೆಗೆ ಉತ್ತರಿಸಿದ ಸವದಿ, ”ಅದನ್ನ ಸಿದ್ದರಾಮಯ್ಯ ಅವರನ್ನೇ ಕೇಳಬೇಕು ಹೈಕಮಾಂಡ್​ದಲ್ಲಿ ಯಾವ ರೀತಿ ಚರ್ಚೆ ಆಗಿದೆ ಗೊತ್ತಿಲ್ಲ. ಅವು ನಾಲ್ಕು ಗೋಡೆಗಳ ಮಧ್ಯೆ ನಡೆದಿರುವಂತದ್ದು. ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡುವೆ ನಡೆದ ಚರ್ಚೆಯನ್ನು ಬಹಿರಂಗ ಪಡಿಸಿಲ್ಲ. ಹೊರಗಡೆ ಕೇವಲ ಊಹಾಪೂಹಗಳು ಮಾತ್ರ ಇವೆ. ಅವುಗಳಿಗೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಕೆಲ ಜನ ಮಾಡುತ್ತಿದ್ದಾರೆ” ಎಂದು ಉತ್ತರಿಸಿದರು.

ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ  ಗೊಂದಲ ಸೃಷ್ಟಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ”ಮೊದಲು ಸರ್ವ ಕಾರ್ಯ ಮುಗಿಯಲಿ, ಸರ್ವೆ ಆದ ಮೇಲೆ ಗೈಡ್ ಲೈನ್ಸ್ ಬರುತ್ತೆ. ಅದರ ಮೇಲೆ ಎಲ್ಲವೂ ನಿರ್ಧಾರ ಆಗುತ್ತೆ” ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ:

ಸಚಿವ ಸ್ಥಾನ ಕೈತಪ್ಪಿದ್ದರ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆ ಉತ್ತರಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆವರು, ”ಕಾಂಗ್ರೆಸ್ ಪಾರ್ಟಿಗೆ ಅನ್ ಕಂಡೀಷನ್​ ಆಗಿ ಬಂದಿದ್ದೇನೆ” ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ”ಕ್ಯಾಬಿನೆಟ್​ನಲ್ಲಿ ನಾನು ಮಿನಿಸ್ಟರ್ ಆಗಬೇಕು ಅನ್ನೋದು ಜನರ ಅಭಿಲಾಷೆ ಇತ್ತು. ಹಲವು ಕಾರಣದಿಂದ ಆಗಿಲ್ಲ. ಇನ್ನು ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ. ಈಗಿನ ಸಂಪುಟ ರಚನೆ ನಂತರ ಕೂತು ಚರ್ಚಿಸುವ ಬಗ್ಗೆ ಮಾತಾಗಿದೆ. ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ” ಎಂದು ತಿಳಿಸಿದರು.

ಈ ವೇಳೆ ಪರೋಕ್ಷವಾಗಿ ಬಿಎಲ್ ಸಂತೋಷ್ ಅವರಿಗೆ ಟಾಂಗ್ ಕೊಟ್ಟಿದ್ದು, ”ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ನಾನು ಕಾಂಗ್ರೆಸ್ ಸೇರೋ ಸಮಯದಲ್ಲಿ ಹೇಳಿರೋ ಪ್ರಶ್ನೆಗೆ ಇದುವರೆಗೂ ಬಿಜೆಪಿ‌ಯವರು ಯಾರೂ ಉತ್ತರ ಕೊಟ್ಟಿಲ್ಲ. ಬಿಜೆಪಿಯವರು ಎಲ್ಲಿದಾರೆ? ಗೊತ್ತಿಲ್ಲ” ಎಂದಿದ್ದಾರೆ.

”ಇನ್ನು ನಾನು ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತೆ. ಕಾಂಗ್ರೆಸ್ ಗೆ ಜನ ಬೆಂಬಲ ನೀಡಿದ್ದಾರೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸೀಗುವ ಮೂಲಕ ಸಾಕಷ್ಟು ಅವಕಾಶಗಳಿವೆ. ಮುಂದಿನ ಕ್ಯಾಬಿನೆಟ್ ನಲ್ಲಿ ಒಂದು ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ” ಎಂದರು.

ಇದೇ ವೇಳೆ ನೂತನ ಸಂಸತ್ ಉದ್ಘಾಟನೆ ಬಗ್ಗೆ ಮಾತನಾಡಿದ ಶೆಟ್ಟರ್, ”ಉದ್ಘಾಟನೆಗೆ ರಾಷ್ಟಪತಿಗಳನ್ನು ಕರಿಯಬೇಕಿತ್ತು. ನಾನು ಸುವರ್ಣ ಸೌಧ ಉದ್ಘಾಟನೆ ಮಾಡುವ ಅವಕಾಶ ಬಂದಿತ್ತು. ಆಗ ನಾನು ಅಂದಿನ ರಾಷ್ಟಪತಿಯಾಗಿದ್ದ ಪ್ರಣವ್ ಮುಖರ್ಜಿ ಅವರನ್ನು ಕರದಿದ್ದೇ. ರಾಷ್ಟಪತಿಗಳನ್ನು ಕರೆಯಬೇಕು ಎಂದು ಪ್ರತಿ ಪಕ್ಷಗಳು ಹೇಳುತ್ತಿರುವುದು ಸರಿಯಾಗಿದೆ ಎಂದರು.

”ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ?, ಇದುವರೆಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು” ಎಂದು ವ್ಯಂಗ್ಯವಾಡಿದರು.

ಇನ್ನು ”ಭಜರಂಗದಳ ಬ್ಯಾನ್​ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಯಾರಾದರೂ ಬ್ಯಾನ್ ಮಾಡಿದ್ದಾರ? ನಾನು ಕಾಂಗ್ರೆಸ್ ಸರ್ಕಾರದ ವಕ್ತಾರ ಅಲ್ಲ, ಎಲ್ಲವುದಕ್ಕೂ ಉತ್ತರಿಸಲು…” ಎಂದು ಶೆಟ್ಟರ್ ಗರಂ ಆಗಿ ಉತ್ತರಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ದೆಹಲಿ ಜನರು ನಮಗೆ 56% ಮತ ನೀಡಿದ್ದಾರೆ, ಅವರು ಪಾಕಿಸ್ತಾನಿಗಳೇ..?’; ಅಮಿತ್‌ ಶಾ ವಿರುದ್ಧ...

0
'ಅಮಿತ್ ಶಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ ಕಾರಣ ಅವರು ಅಹಂಕಾರಿಯಾಗಿದ್ದಾರೆ' ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್...