Homeಕರ್ನಾಟಕಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಟೀಕಿಸಿದ ಬಿಜೆಪಿಗೆ ತಿರುಗೇಟು ಕೊಟ್ಟ ಶೆಟ್ಟರ್, ಸವದಿ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಟೀಕಿಸಿದ ಬಿಜೆಪಿಗೆ ತಿರುಗೇಟು ಕೊಟ್ಟ ಶೆಟ್ಟರ್, ಸವದಿ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲಿ ಬಿಜೆಪಿಯ ಪ್ರಬಲ ನಾಯಕರಾಗಿದ್ದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರು ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಸಧ್ಯ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಇಬ್ಬರಿಗೂ ಸಚಿವ ಸ್ಥಾನ ನೀಡಬಹುದು ಎನ್ನುವ ಮಾತುಗಳು ಕೇಳಿಬಂದಿದ್ದವು ಆದರೆ ಇಬ್ಬರಿಗೂ ಸಚಿವ ಸ್ಥಾನ ಕೈತಪ್ಪಿದೆ. ಈ ಬಗ್ಗೆ ಬಿಜೆಪಿ ಟೀಕೆ ಮಾಡಿದ್ದು, ಅದಕ್ಕೆ ಶೆಟ್ಟರ್ ಹಾಗೂ ಸವದಿ ಅವರು ತಿರುಗೇಟು ನೀಡಿದ್ದಾರೆ.

ಅಥಣಿ​ ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಬಿಜೆಪಿ ನಾಯಕರ ಟೀಕೆಗೆ ಲಕ್ಷ್ಮಣ ಸವದಿ ಅವರು ತಿರುಗೇಟು ನೀಡಿದ್ದಾರೆ. ”ರಾಜಕಾರಣದಲ್ಲಿ ಮನುಷ್ಯನಿಗೆ ದೂರದೃಷ್ಟಿ, ತಾಳ್ಮೆ ಬಹಳ ಮುಖ್ಯ. ನನಗೆ ನಿರಾಸೆಯಾಗಿಲ್ಲ, ಒಳ್ಳೆಯ ದಿನಗಳು ಬರುತ್ತವೆ” ಎಂದಿದ್ದಾರೆ.

ಸಚಿವಸ್ಥಾನ ಸಿಗುವ ನಿರೀಕ್ಷಯಲ್ಲಿದ್ರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ನಿರೀಕ್ಷೆಗಳು ಯಾರಿಗೆ ಇರಲ್ಲ ಹೇಳಿ, ಎಲ್ಲರಿಗೂ ನಿರೀಕ್ಷೆಗಳಿರುತ್ತೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ತದನಂತರ ಸಿಎಂ ಆಗಬೇಕೆಂದು ಎಲ್ಲರೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆಸೆಗಳಿಗೆ ಕೊನೆ ಇರುವುದಿಲ್ಲ, ಅದು ಮನುಷ್ಯನ ಸಹಜ ಗುಣ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದೇವೇಳೆ ಅಧಿಕಾರ ಹಂಚಿಕೆ ಪ್ರಶ್ನೆಗೆ ಉತ್ತರಿಸಿದ ಸವದಿ, ”ಅದನ್ನ ಸಿದ್ದರಾಮಯ್ಯ ಅವರನ್ನೇ ಕೇಳಬೇಕು ಹೈಕಮಾಂಡ್​ದಲ್ಲಿ ಯಾವ ರೀತಿ ಚರ್ಚೆ ಆಗಿದೆ ಗೊತ್ತಿಲ್ಲ. ಅವು ನಾಲ್ಕು ಗೋಡೆಗಳ ಮಧ್ಯೆ ನಡೆದಿರುವಂತದ್ದು. ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡುವೆ ನಡೆದ ಚರ್ಚೆಯನ್ನು ಬಹಿರಂಗ ಪಡಿಸಿಲ್ಲ. ಹೊರಗಡೆ ಕೇವಲ ಊಹಾಪೂಹಗಳು ಮಾತ್ರ ಇವೆ. ಅವುಗಳಿಗೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಕೆಲ ಜನ ಮಾಡುತ್ತಿದ್ದಾರೆ” ಎಂದು ಉತ್ತರಿಸಿದರು.

ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ  ಗೊಂದಲ ಸೃಷ್ಟಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ”ಮೊದಲು ಸರ್ವ ಕಾರ್ಯ ಮುಗಿಯಲಿ, ಸರ್ವೆ ಆದ ಮೇಲೆ ಗೈಡ್ ಲೈನ್ಸ್ ಬರುತ್ತೆ. ಅದರ ಮೇಲೆ ಎಲ್ಲವೂ ನಿರ್ಧಾರ ಆಗುತ್ತೆ” ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ:

ಸಚಿವ ಸ್ಥಾನ ಕೈತಪ್ಪಿದ್ದರ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆ ಉತ್ತರಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆವರು, ”ಕಾಂಗ್ರೆಸ್ ಪಾರ್ಟಿಗೆ ಅನ್ ಕಂಡೀಷನ್​ ಆಗಿ ಬಂದಿದ್ದೇನೆ” ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ”ಕ್ಯಾಬಿನೆಟ್​ನಲ್ಲಿ ನಾನು ಮಿನಿಸ್ಟರ್ ಆಗಬೇಕು ಅನ್ನೋದು ಜನರ ಅಭಿಲಾಷೆ ಇತ್ತು. ಹಲವು ಕಾರಣದಿಂದ ಆಗಿಲ್ಲ. ಇನ್ನು ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ. ಈಗಿನ ಸಂಪುಟ ರಚನೆ ನಂತರ ಕೂತು ಚರ್ಚಿಸುವ ಬಗ್ಗೆ ಮಾತಾಗಿದೆ. ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ” ಎಂದು ತಿಳಿಸಿದರು.

ಈ ವೇಳೆ ಪರೋಕ್ಷವಾಗಿ ಬಿಎಲ್ ಸಂತೋಷ್ ಅವರಿಗೆ ಟಾಂಗ್ ಕೊಟ್ಟಿದ್ದು, ”ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ನಾನು ಕಾಂಗ್ರೆಸ್ ಸೇರೋ ಸಮಯದಲ್ಲಿ ಹೇಳಿರೋ ಪ್ರಶ್ನೆಗೆ ಇದುವರೆಗೂ ಬಿಜೆಪಿ‌ಯವರು ಯಾರೂ ಉತ್ತರ ಕೊಟ್ಟಿಲ್ಲ. ಬಿಜೆಪಿಯವರು ಎಲ್ಲಿದಾರೆ? ಗೊತ್ತಿಲ್ಲ” ಎಂದಿದ್ದಾರೆ.

”ಇನ್ನು ನಾನು ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತೆ. ಕಾಂಗ್ರೆಸ್ ಗೆ ಜನ ಬೆಂಬಲ ನೀಡಿದ್ದಾರೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸೀಗುವ ಮೂಲಕ ಸಾಕಷ್ಟು ಅವಕಾಶಗಳಿವೆ. ಮುಂದಿನ ಕ್ಯಾಬಿನೆಟ್ ನಲ್ಲಿ ಒಂದು ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ” ಎಂದರು.

ಇದೇ ವೇಳೆ ನೂತನ ಸಂಸತ್ ಉದ್ಘಾಟನೆ ಬಗ್ಗೆ ಮಾತನಾಡಿದ ಶೆಟ್ಟರ್, ”ಉದ್ಘಾಟನೆಗೆ ರಾಷ್ಟಪತಿಗಳನ್ನು ಕರಿಯಬೇಕಿತ್ತು. ನಾನು ಸುವರ್ಣ ಸೌಧ ಉದ್ಘಾಟನೆ ಮಾಡುವ ಅವಕಾಶ ಬಂದಿತ್ತು. ಆಗ ನಾನು ಅಂದಿನ ರಾಷ್ಟಪತಿಯಾಗಿದ್ದ ಪ್ರಣವ್ ಮುಖರ್ಜಿ ಅವರನ್ನು ಕರದಿದ್ದೇ. ರಾಷ್ಟಪತಿಗಳನ್ನು ಕರೆಯಬೇಕು ಎಂದು ಪ್ರತಿ ಪಕ್ಷಗಳು ಹೇಳುತ್ತಿರುವುದು ಸರಿಯಾಗಿದೆ ಎಂದರು.

”ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ?, ಇದುವರೆಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು” ಎಂದು ವ್ಯಂಗ್ಯವಾಡಿದರು.

ಇನ್ನು ”ಭಜರಂಗದಳ ಬ್ಯಾನ್​ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಯಾರಾದರೂ ಬ್ಯಾನ್ ಮಾಡಿದ್ದಾರ? ನಾನು ಕಾಂಗ್ರೆಸ್ ಸರ್ಕಾರದ ವಕ್ತಾರ ಅಲ್ಲ, ಎಲ್ಲವುದಕ್ಕೂ ಉತ್ತರಿಸಲು…” ಎಂದು ಶೆಟ್ಟರ್ ಗರಂ ಆಗಿ ಉತ್ತರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...