Homeಕರ್ನಾಟಕಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಟೀಕಿಸಿದ ಬಿಜೆಪಿಗೆ ತಿರುಗೇಟು ಕೊಟ್ಟ ಶೆಟ್ಟರ್, ಸವದಿ

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಟೀಕಿಸಿದ ಬಿಜೆಪಿಗೆ ತಿರುಗೇಟು ಕೊಟ್ಟ ಶೆಟ್ಟರ್, ಸವದಿ

- Advertisement -
- Advertisement -

ರಾಜ್ಯ ವಿಧಾನಸಭಾ ಚುನಾವಣೆ ಸಮಯದಲ್ಲಿ ಬಿಜೆಪಿಯ ಪ್ರಬಲ ನಾಯಕರಾಗಿದ್ದ ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಅವರು ಪಕ್ಷ ತೊರೆದು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಸಧ್ಯ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಇಬ್ಬರಿಗೂ ಸಚಿವ ಸ್ಥಾನ ನೀಡಬಹುದು ಎನ್ನುವ ಮಾತುಗಳು ಕೇಳಿಬಂದಿದ್ದವು ಆದರೆ ಇಬ್ಬರಿಗೂ ಸಚಿವ ಸ್ಥಾನ ಕೈತಪ್ಪಿದೆ. ಈ ಬಗ್ಗೆ ಬಿಜೆಪಿ ಟೀಕೆ ಮಾಡಿದ್ದು, ಅದಕ್ಕೆ ಶೆಟ್ಟರ್ ಹಾಗೂ ಸವದಿ ಅವರು ತಿರುಗೇಟು ನೀಡಿದ್ದಾರೆ.

ಅಥಣಿ​ ಶಾಸಕ ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ಕೈತಪ್ಪಿದ ವಿಚಾರವಾಗಿ ಬಿಜೆಪಿ ನಾಯಕರ ಟೀಕೆಗೆ ಲಕ್ಷ್ಮಣ ಸವದಿ ಅವರು ತಿರುಗೇಟು ನೀಡಿದ್ದಾರೆ. ”ರಾಜಕಾರಣದಲ್ಲಿ ಮನುಷ್ಯನಿಗೆ ದೂರದೃಷ್ಟಿ, ತಾಳ್ಮೆ ಬಹಳ ಮುಖ್ಯ. ನನಗೆ ನಿರಾಸೆಯಾಗಿಲ್ಲ, ಒಳ್ಳೆಯ ದಿನಗಳು ಬರುತ್ತವೆ” ಎಂದಿದ್ದಾರೆ.

ಸಚಿವಸ್ಥಾನ ಸಿಗುವ ನಿರೀಕ್ಷಯಲ್ಲಿದ್ರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ನಿರೀಕ್ಷೆಗಳು ಯಾರಿಗೆ ಇರಲ್ಲ ಹೇಳಿ, ಎಲ್ಲರಿಗೂ ನಿರೀಕ್ಷೆಗಳಿರುತ್ತೆ. ರಾಜಕಾರಣದಲ್ಲಿ ಯಾರೂ ಸನ್ಯಾಸಿಗಳಲ್ಲ. ಎಲ್ಲರೂ ಸಚಿವರಾಗಬೇಕು, ನಂತರ ಡಿಸಿಎಂ ಆಗಬೇಕು, ತದನಂತರ ಸಿಎಂ ಆಗಬೇಕೆಂದು ಎಲ್ಲರೂ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆಸೆಗಳಿಗೆ ಕೊನೆ ಇರುವುದಿಲ್ಲ, ಅದು ಮನುಷ್ಯನ ಸಹಜ ಗುಣ” ಎಂದು ಪ್ರತಿಕ್ರಿಯಿಸಿದ್ದಾರೆ.

ಇದೇವೇಳೆ ಅಧಿಕಾರ ಹಂಚಿಕೆ ಪ್ರಶ್ನೆಗೆ ಉತ್ತರಿಸಿದ ಸವದಿ, ”ಅದನ್ನ ಸಿದ್ದರಾಮಯ್ಯ ಅವರನ್ನೇ ಕೇಳಬೇಕು ಹೈಕಮಾಂಡ್​ದಲ್ಲಿ ಯಾವ ರೀತಿ ಚರ್ಚೆ ಆಗಿದೆ ಗೊತ್ತಿಲ್ಲ. ಅವು ನಾಲ್ಕು ಗೋಡೆಗಳ ಮಧ್ಯೆ ನಡೆದಿರುವಂತದ್ದು. ಸಿದ್ದರಾಮಯ್ಯ ಮತ್ತು ಪಕ್ಷದ ವರಿಷ್ಠರ ನಡುವೆ ನಡೆದ ಚರ್ಚೆಯನ್ನು ಬಹಿರಂಗ ಪಡಿಸಿಲ್ಲ. ಹೊರಗಡೆ ಕೇವಲ ಊಹಾಪೂಹಗಳು ಮಾತ್ರ ಇವೆ. ಅವುಗಳಿಗೆ ರೆಕ್ಕೆಪುಕ್ಕ ಕಟ್ಟಿ ಕಾಗೆ ಹಾರಿಸುವ ಕೆಲಸ ಕೆಲ ಜನ ಮಾಡುತ್ತಿದ್ದಾರೆ” ಎಂದು ಉತ್ತರಿಸಿದರು.

ಗ್ಯಾರಂಟಿ ಯೋಜನೆಗಳ ಕುರಿತು ಬಿಜೆಪಿ  ಗೊಂದಲ ಸೃಷ್ಟಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, ”ಮೊದಲು ಸರ್ವ ಕಾರ್ಯ ಮುಗಿಯಲಿ, ಸರ್ವೆ ಆದ ಮೇಲೆ ಗೈಡ್ ಲೈನ್ಸ್ ಬರುತ್ತೆ. ಅದರ ಮೇಲೆ ಎಲ್ಲವೂ ನಿರ್ಧಾರ ಆಗುತ್ತೆ” ಎಂದು ತಿಳಿಸಿದರು.

ಇದನ್ನೂ ಓದಿ: ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ:

ಸಚಿವ ಸ್ಥಾನ ಕೈತಪ್ಪಿದ್ದರ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆ ಉತ್ತರಿಸಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆವರು, ”ಕಾಂಗ್ರೆಸ್ ಪಾರ್ಟಿಗೆ ಅನ್ ಕಂಡೀಷನ್​ ಆಗಿ ಬಂದಿದ್ದೇನೆ” ಎಂದು ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ”ಕ್ಯಾಬಿನೆಟ್​ನಲ್ಲಿ ನಾನು ಮಿನಿಸ್ಟರ್ ಆಗಬೇಕು ಅನ್ನೋದು ಜನರ ಅಭಿಲಾಷೆ ಇತ್ತು. ಹಲವು ಕಾರಣದಿಂದ ಆಗಿಲ್ಲ. ಇನ್ನು ಹಲವಾರು ಸ್ಥಾನಮಾನಗಳಿವೆ. ಯಾವುದೇ ಸ್ಥಾನ ಕೊಟ್ಟರೂ ನಿಭಾಯಿಸಿಕೊಂಡು ಹೋಗುತ್ತೇನೆ. ಈಗಿನ ಸಂಪುಟ ರಚನೆ ನಂತರ ಕೂತು ಚರ್ಚಿಸುವ ಬಗ್ಗೆ ಮಾತಾಗಿದೆ. ವೈಯಕ್ತಿಕವಾಗಿ ನಾನು ಯಾವುದೇ ಆಸೆ ವ್ಯಕ್ತಪಡಿಸಿಲ್ಲ” ಎಂದು ತಿಳಿಸಿದರು.

ಈ ವೇಳೆ ಪರೋಕ್ಷವಾಗಿ ಬಿಎಲ್ ಸಂತೋಷ್ ಅವರಿಗೆ ಟಾಂಗ್ ಕೊಟ್ಟಿದ್ದು, ”ನನ್ನೊಬ್ಬನನ್ನ ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ನಾನು ಕಾಂಗ್ರೆಸ್ ಸೇರೋ ಸಮಯದಲ್ಲಿ ಹೇಳಿರೋ ಪ್ರಶ್ನೆಗೆ ಇದುವರೆಗೂ ಬಿಜೆಪಿ‌ಯವರು ಯಾರೂ ಉತ್ತರ ಕೊಟ್ಟಿಲ್ಲ. ಬಿಜೆಪಿಯವರು ಎಲ್ಲಿದಾರೆ? ಗೊತ್ತಿಲ್ಲ” ಎಂದಿದ್ದಾರೆ.

”ಇನ್ನು ನಾನು ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್ ತೀರ್ಮಾನ ಮಾಡುತ್ತೆ. ಕಾಂಗ್ರೆಸ್ ಗೆ ಜನ ಬೆಂಬಲ ನೀಡಿದ್ದಾರೆ. ಒತ್ತಡದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಲೋಕಸಭಾ ಚುನಾವಣೆಗೆ ಇನ್ನು ಒಂದು ವರ್ಷ ಇದೆ. ಕಾಂಗ್ರೆಸ್ ಯಾವ ಜವಾಬ್ದಾರಿ ನೀಡುತ್ತೆ ಅದನ್ನ ನಿಭಾಯಿಸುತ್ತೇನೆ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸೀಗುವ ಮೂಲಕ ಸಾಕಷ್ಟು ಅವಕಾಶಗಳಿವೆ. ಮುಂದಿನ ಕ್ಯಾಬಿನೆಟ್ ನಲ್ಲಿ ಒಂದು ನಿರ್ಧಾರ ಮಾಡುವುದಾಗಿ ಹೇಳಿದ್ದಾರೆ” ಎಂದರು.

ಇದೇ ವೇಳೆ ನೂತನ ಸಂಸತ್ ಉದ್ಘಾಟನೆ ಬಗ್ಗೆ ಮಾತನಾಡಿದ ಶೆಟ್ಟರ್, ”ಉದ್ಘಾಟನೆಗೆ ರಾಷ್ಟಪತಿಗಳನ್ನು ಕರಿಯಬೇಕಿತ್ತು. ನಾನು ಸುವರ್ಣ ಸೌಧ ಉದ್ಘಾಟನೆ ಮಾಡುವ ಅವಕಾಶ ಬಂದಿತ್ತು. ಆಗ ನಾನು ಅಂದಿನ ರಾಷ್ಟಪತಿಯಾಗಿದ್ದ ಪ್ರಣವ್ ಮುಖರ್ಜಿ ಅವರನ್ನು ಕರದಿದ್ದೇ. ರಾಷ್ಟಪತಿಗಳನ್ನು ಕರೆಯಬೇಕು ಎಂದು ಪ್ರತಿ ಪಕ್ಷಗಳು ಹೇಳುತ್ತಿರುವುದು ಸರಿಯಾಗಿದೆ ಎಂದರು.

”ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ?, ಇದುವರೆಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿಲ್ಲ. ರಾಷ್ಟ್ರೀಯ ಪಕ್ಷಕ್ಕೆ ಇಂತಹ ಪರಿಸ್ಥಿತಿ ಬರಬಾರದಿತ್ತು” ಎಂದು ವ್ಯಂಗ್ಯವಾಡಿದರು.

ಇನ್ನು ”ಭಜರಂಗದಳ ಬ್ಯಾನ್​ ವಿಚಾರಕ್ಕೆ ಪ್ರತಿಕ್ರಿಯಿಸಿ, ”ಯಾರಾದರೂ ಬ್ಯಾನ್ ಮಾಡಿದ್ದಾರ? ನಾನು ಕಾಂಗ್ರೆಸ್ ಸರ್ಕಾರದ ವಕ್ತಾರ ಅಲ್ಲ, ಎಲ್ಲವುದಕ್ಕೂ ಉತ್ತರಿಸಲು…” ಎಂದು ಶೆಟ್ಟರ್ ಗರಂ ಆಗಿ ಉತ್ತರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...