Homeಕರ್ನಾಟಕಉತ್ತರ ಕನ್ನಡದ ರಾಜಕೀಯ ಜಗಲಿಯಲ್ಲಿ ಅದಲು ಬದಲು

ಉತ್ತರ ಕನ್ನಡದ ರಾಜಕೀಯ ಜಗಲಿಯಲ್ಲಿ ಅದಲು ಬದಲು

- Advertisement -
- Advertisement -

ಉತ್ತರ ಕನ್ನಡದ ರಾಜಕಾರಣದ ಸೂತ್ರ ಸಮೀಕರಣ ನಿಧಾನಕ್ಕೆ ಬದಲಾಗತೊಡಗಿದೆ. ಕಳೆದ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಹೊನ್ನಾವರದ ಕೆರೆಯಲ್ಲಿ ಬಿದ್ದು ಅಸುನೀಗಿದ ಮೀನುಗಾರರ ಪರೇಶ್ ಮೇಸ್ತನನ್ನು ಸಾಬರೇ ಕೊಂದೆಸೆದಿದ್ದಾರೆಂದು ಹುಯಿಲೆಬ್ಬಿಸಿ ಬಿಜೆಪಿ ಭೂಪರು ಭರ್ಜರಿ ಗೆಲವು ಸಾಧಿಸಿದ್ದರು! ಆದರೆ ಬಿಜೆಪಿ ಬುಡವೀಗ ಮೊದಲಿನಷ್ಟು ಭದ್ರವಾಗುಳಿದಿಲ್ಲ. ಯಲ್ಲಾಪುರದ ಕಾಂಗ್ರೆಸ್ ಶಾಸಕನಾಗಿದ್ದ ಶಿವರಾಮ ಹೆಬ್ಬಾರ್ ಬಿಜೆಪಿ ಪಾರ್ಟಿಗೆ ನೆಗೆದು ಉಸ್ತುವಾರಿ ಮಂತ್ರಿಯಾದ ಬಳಿಕವಂತೂ ಜಿಲ್ಲೆಯ ಕೇಸರಿ ಪಾಳೆಯ ಬಣ್ಣಗೆಡುತ್ತಿದೆ. ಮುಗಿದ ಗ್ರಾಪಂ ಇಲೆಕ್ಷನ್‌ನಲ್ಲಿ ಬಿಜೆಪಿ ಬೀಗುವಂಥ ದಿಗ್ವಿಜಯವೂ ಸಾಧ್ಯವಾಗಿಲ್ಲ!!

ಸತೀಶ್ ಸೈಲ್

ಬಿಜೆಪಿಯ ಎಂಪಿ, ಎಂಎಲ್‌ಎ, ಮಂತ್ರಿಗಳು ಜನರ ವಿಶ್ವಾಸ ಕಳೆದುಕೊಳ್ಳಲು ಎರಡು ಕಾರಣ. ಒಂದು, ಸಿಬಿಐಗೆ ವಹಿಸಲಾಗಿದ್ದರೂ ಪರೇಶ ಮೇಸ್ತನ ಸಾವಿನ ಪ್ರಕರಣದ ತನಿಖೆ ತ್ವರಿತವಾಗಿ, ಪ್ರಾಮಾಣಿಕವಾಗಿ ಮಾಡದಿರುವುದು. ಹಾಗೊಮ್ಮೆ ಸರಿಯಾದ ತನಿಖೆ ನಡೆದರೆ ತಮ್ಮ ಬಂಡವಾಳ ಬಯಲಾಗುತ್ತದೆಂಬ ಆತಂಕ ಕಟ್ಟರ್ ಹಿಂದುತ್ವವಾದಿ ಸೂತ್ರಧಾರರಿಗೆ ಕಾಡುತ್ತಿದೆ ಎಂಬುದು ಜನರಿಗೆ ಖಾತ್ರಿಯಾಗಿಹೋಗಿದೆ. ಮತ್ತೊಂದು ಕಾರಣ, ಕಿಕ್‌ಬ್ಯಾಕ್, ಪರ್ಸೆಂಟೇಜ್ ದಂಧೆಯಿಂದ ಜನಸಾಮಾನ್ಯರು ರೋಸತ್ತು ಹೋಗಿದ್ದಾರೆ. ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರ ವಿರುದ್ಧ ಆಡಳಿತ ವಿರೋಧಿ ಆಕ್ರೋಶ ಎದ್ದಿದೆ! ಹೀಗಾಗಿಯೇ ಸಂಘಟನೆ, ನಾಯಕತ್ವ ಇಲ್ಲದಿದ್ದರೂ ಕಾಂಗ್ರೆಸ್ ಕಳೆದ ಗ್ರಾಪಂ ಇಲೆಕ್ಷನ್‌ನಲ್ಲಿ ಬಿಜೆಪಿಗೆ ಬೆವರಿಳಿಸಿದೆ. ವಲಸಿಗ ಮಂತ್ರಿ ಹೆಬ್ಬಾರ್‌ನಿಂದ ಬಿಜೆಪಿ ಬೆಳವಣಿಗೆಗೆ ಪೈಸೆ ಪ್ರಯೋಜನವೂ ಆಗುತ್ತಿಲ್ಲ. ಬದಲಿಗೆ ಹೆಬ್ಬಾರರ ಯಲ್ಲಾಪುರ, ಮುಂಡಗೋಡ ಕ್ಷೇತ್ರದಲ್ಲೇ ಮೂಲ ಬಿಜೆಪಿ ಬಸವಳಿದು ಹೆಬ್ಬಾರ್ ಬಿಜೆಪಿ ತಲೆಯೆತ್ತಿರುವುದು ಸಂಘಪರಿವಾರದ ಕಣ್ಣು ಕೆಂಪು ಮಾಡಿಸಿದೆ.

ಪ್ರಶಾಂತ ದೇಶಪಾಂಡೆ

ಕೇಸರಿ ಕೋಟೆ ಕಂಗೆಡುತ್ತಿರುವ ಈ ಕಾಲಘಟ್ಟದಲ್ಲಿ ಕಾಂಗ್ರೆಸ್ ಫಿನಿಕ್ಸ್‌ನಂತೆ ಬೂದಿಯಿಂದ ಮೇಲೇಳುತ್ತಿದೆ. ಕಾಂಗ್ರೆಸ್‌ನ ವಯೋವೃದ್ಧ ಮುಖಂಡ ಆರ್.ವಿ ದೇಶಪಾಂಡೆ ತಮ್ಮ ಕುಲಕಂಠೀರವ ಪ್ರಶಾಂತ ದೇಶಪಾಂಡೆಯನ್ನು ಉತ್ತರಾಧಿಕಾರಿಯಾಗಿಸಿ ಜಿಲ್ಲಾ ರಾಜಕಾರಣ ಆಖಾಡಕ್ಕೆ ಬಿಟ್ಟಿದ್ದಾರೆ. ಒಮ್ಮೆ ಲೋಕಸಭಾ ಇಲೆಕ್ಷನ್‌ಗೆ ಸ್ಪರ್ಧಿಸಿ ಸೋತ ನಂತರ ರಾಜಕಾರಣದ ಉಸಾಬರಿಯೇ ಬೇಡವೆಂಬಂತಿದ್ದ ಪ್ರಶಾಂತ್ ಈಗ ಕಾಂಗ್ರೆಸ್ ಕಟ್ಟಲು ಜಿಲ್ಲೆಯಲ್ಲಿ ಓಡಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ನಲ್ಲಿರುವ ಹಿಂದುತ್ವದ ಸೋಂಕಿಲ್ಲದ ಹಿರಿ-ಮರಿ ನೇತಾಗಳ ಸೆಳೆಯಲು ಸ್ಕೆಚ್ ಹಾಕಿಕೊಂಡು ಹೊರಟಿದ್ದಾರೆ. ಅತ್ತ ಹಳಿಯಾಳದಲ್ಲಿ ದೊಡ್ಡ ದೇಶಪಾಂಡೆ ಸಾಹೇಬರು ಮಗ್ಗಲು ಮುಳ್ಳಾಗಿರುವ ಶಿಷ್ಯ ಕಂ ಎಂಎಲ್‌ಸಿ ಶ್ರೀಕಾಂತ ಘೋಟನೇಕರ್‌ರನ್ನು ಮಟ್ಟಹಾಕಲು ನೋಡುತ್ತಿದ್ದಾರೆ. ತನ್ನಿಂದಲೇ ಎರಡು ಬಾರಿ ಎಂಎಲ್‌ಸಿಯಾದರೂ, ಈಗ ತನ್ನ ಎಂಎಲ್‌ಎ ಕುರ್ಚಿ ಮೇಲೆ ಕಣ್ಣು ಹಾಕಿರುವ ಘೋಟನೇಕರ್ ಬಿಜೆಪಿ ಮಂತ್ರಿಯೂ ಮಾಜಿ ಕಾಂಗ್ರೆಸಿಗನೂ ಆಗಿರುವ ಶಿವರಾಮ ಹೆಬ್ಬಾರ್‌ರ ಗಳಸ್ಯಕಂಠಸ್ಯ ಸಖನಾಗಿರುವುದರಿಂದ, ಮಾತೃ ಪಕ್ಷಕ್ಕೆ ದ್ರೋಹ ಬಗೆಯುತ್ತಾರೆಂದು ಹೈಕಮಾಂಡ್ ಮಟ್ಟಲ್ಲಿ ದೇಶಪಾಂಡೆ ಬಿಂಬಿಸುತ್ತಿದ್ದಾರೆ! ಘೋಟನೇಕರ್‌ರನ್ನು ಖಳನಾಯಕನಾಗಿ ಬಿಂಬಿಸಲು, ಅವರು ಗ್ರಾಪಂ ಇಲೆಕ್ಷನ್ ಸಂದರ್ಭದಲ್ಲಿ ಹೆಬ್ಬಾರರ ಯಲ್ಲಾಪುರ-ಮುಂಡಗೋಡದ ಕಾಂಗ್ರೆಸ್ ಉಸ್ತುವಾರಿಯಿಂದ ನುಣುಚಿಕೊಂಡಿದ್ದು, ದೇಶಪಾಂಡೆಯವರಿಗೆ ನೆರವಾಗಿದೆ.

ಎಸ್.ಎಲ್ ಘೋಟನೇಕರ್

ಘೋಟನೇಕರ್ ಮತ್ತು ಕಾರವಾರದ ಕಾಂಗ್ರೆಸ್ ಮಾಜಿ ಶಾಸಕ ಸತೀಶ್ ಸೈಲ್ ಬಿಜೆಪಿ ಸೇರಲು ಸರ್ಕಸ್ ಮಾಡುತ್ತಿರುವುದು ರಹಸ್ಯವಾಗಿ ಉಳಿದಿಲ್ಲ. ಸದ್ಯಕ್ಕೆ ಜೆಡಿಎಸ್‌ನಲ್ಲಿರುವ ಕಾರಾವಾರದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಇಲ್ಲಿರುವುದು ಸುಮ್ಮನೆ; ಎಲ್ಲಿರುವುದೋ ನನ್ನ ಮನೆ ಎಂದು ಹಾಡುತ್ತಿದ್ದಾರೆ. ಪಾಪ! ಕಳೆದ ಲೋಕಸಭಾ ಇಲೆಕ್ಷನ್‌ನಲ್ಲಿ ಜೆಡಿಎಸ್ ಕಾಂಗ್ರೆಸ್ ಜಂಟೀ ಅಭ್ಯರ್ಥಿಯಾಗಿದ್ದ ಅಸ್ನೋಟಿಕರ್ ಹಿಂದುತ್ವದ ಬೂಟಾಟಿಕೆ ಮತ್ತು ಸಂಸದ ಅನಂತ ಹೆಗಡೆಯ ಸೋಗಲಾಡಿತನ ಬಯಲುಗೊಳಿಸಿದ್ದರು. ಆದರೂ ಬಿಜೆಪಿಗೆ ನುಸುಳಲು ಮಂತ್ರಿ ಈಶ್ವರಪ್ಪರನ್ನು ಹಿಡಿದು ವಿಫಲ ತಿಪ್ಪರಲಾಗ ಹಾಕಿದ್ದಾರೆ. ಅಸ್ನೋಟಿಕರ್‌ಗೆ ಬಿಜೆಪಿ ಸೇರಲು ಅನಂತ್‌ಹೆಗಡೆ ಮತ್ತು ಕಾಂಗ್ರೆಸ್ ಹೊಕ್ಕಲು ದೇಶಪಾಂಡೆ ಅಡ್ಡಗಾಲು ಹಾಕಿ ಕುಂತಿದ್ದಾರೆ. ಒಂದು ಸುದ್ದಿಯ ಪ್ರಕಾರ ದೇಶಪಾಂಡೆಗೆ ಅಸ್ನೋಟಿಕರ್ ಮೇಲಿನ ಸಿಟ್ಟು ಕೊಂಚ ಕಡಿಮೆ ಆಗಿದೆಯಂತೆ. ಹೀಗಾಗಿ ಅಸ್ನೋಟಿಕರ್ ಒಂದು ಕಡೆಯಿಂದ ಪ್ರಶಾಂತ ದೇಶಪಾಂಡೆ ಮತ್ತೊಂದು ಕಡೆಯಿಂದ ಮಧುಬಂಗಾರಪ್ಪರ ಮೂಲಕ ಕಾಂಗ್ರೆಸ್‌ಗೆ ಎಂಟ್ರಿ ಹೊಡಲು ತಿಣುಕಾಡುತ್ತಿದ್ದಾರೆ.

ಬಳ್ಳಾರಿ ರೆಡ್ಡಿ ರಾಮುಲುಗಳ ಸಂಗಡ ನಿಕಟ ನಂಟಿರುವ ಸತೀಶ್ ಸೈಲ್ ಬಿಜೆಪಿಗೆ ಹೋಗಲು ಬಹಳ ದಿನಗಳಿಂದ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಸಂಘಪರಿವಾರದ ಸೂತ್ರಧಾರರಿಗೆ ಹಾಲಿ ಶಾಸಕಿ ರೂಪಾಲಿನಾಯ್ಕ್ ಬೇಡವಾಗುತ್ತಿದ್ದಾರೆ. ಹೀಗಾಗಿ ಸೈಲ್ ಬಿಜೆಪಿಗೆ ಹೋದರೆ ಆನಂದ ಅಸ್ನೋಟಿಕರ್‌ಗೆ ಕಾಂಗ್ರೆಸ್ ನೆಗೆತ ಸಲೀಸಾಗುತ್ತದೆ! ಕಾಂಗ್ರೆಸ್ ಸೇರಲು ಸನ್ನದ್ಧವಾಗಿರುವ ಜೆಡಿಎಸ್‌ನ ಕಾರ್ಯಾಧ್ಯಕ್ಷ ಮಧುಬಂಗಾರಪ್ಪ ತನ್ನೊಂದಿಗೆ ಈ ಅಸ್ನೋಟಿಕರ್ ಮತ್ತು ಸಿದ್ದಾಪುರದ ಶಶಿಭೂಷಣ ಹೆಗಡೆಯನ್ನು ಕರೆದೊಯ್ದು ತಾಕತ್ತು ತೋರಿಸಲು ಯೋಜನೆ ಹಾಕಿಕೊಂಡಿದ್ದಾರೆ. ಸ್ವಜಾತಿ ದೀವರು ಹೆಚ್ಚಿರುವ ಉತ್ತರಕನ್ನಡದಲ್ಲಿ, ಅವರ ತಂದೆ ದಿವಂಗತ ಬಂಗಾರಪ್ಪನವರ ದೊಡ್ಡ ಅಭಿಮಾನಿ ಬಳಗವಿದೆ. ಹಾಗಾಗಿ ಉತ್ತರಕನ್ನಡದಲ್ಲಿ ಮಧು ವರ್ಚಸ್ಸು ಒಂದು ಲೇವಲ್‌ಗೆ ಬೆಳೆದಿದೆ.

ಶಶಿಭೂಷಣ ಹೆಗಡೆ

ಮಧು ಜತೆಯಲ್ಲಿ ಕಾರವಾರದಲ್ಲಿ ಪ್ರಬಲನಾಗಿರುವ ಆನಂದ ಅಸ್ನೋಟಿಕರ್ ಮತ್ತು ಶಿರಸಿಯ ಪ್ರಭಾವಿ ಯುವ ನಾಯಕ ಶಶಿಭೂಷಣ ಹೆಗಡೆ ಜೆಡಿಎಸ್‌ಗೆ ಬೈಹೇಳಿ ಕಾಂಗ್ರೆಸ್ ಪಾಲಾಗುತ್ತಾರೆಂಬ ಸುದ್ದಿ ಜಿಲ್ಲೆಯಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಶಶಿಭೂಷಣ ಹೆಗಡೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ದಾಯಾದಿ ಮೊಮ್ಮಗ. ಈ ಕಾಣಕ್ಕೆ ಜಿಲ್ಲೆಯ ಬಹುಸಂಖ್ಯಾತ ಹವ್ಯಕ ಬ್ರಾಹ್ಮಣರ ಒಂದು ವರ್ಗ ಶಶಿ ಹಿಂದಿದೆ. ಕ್ರೀಯಾಶೀಲತೆ, ವಿನಯವಂತಿಕೆ ಮತ್ತು ಜಿಲ್ಲೆಯ ಬೇಕು ಬೇಡಗಳ ತಿಳುವಳಿಕೆಯಿರುವ ಶಶಿ ತೀರಾ ಸಣ್ಣ ಅಂತರದಲ್ಲಿ ನಾಲ್ಕು ಬಾರಿ ಸೋತಿರುವುದರಿಂದ ಸಿಂಪಥಿಯೂ ಪಡೆದಿದ್ದಾರೆ. ಅವರು ಎರಡು ಬಾರಿ ಕುಮಟಾದಲ್ಲಿ ಬಿಜೆಪಿಯಿಂದ ಎರಡು ಬಾರಿ ಜೆಡಿಎಸ್‌ನಿಂದ ಶಿರಸಿಯಲ್ಲಿ ಸೋತಿದ್ದಾರೆ. ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಬಂ ಮತ್ತು ಹೆಗಡೆಜೀ ನಾಮ ಮಹಿಮೆ ಇವತ್ತಿಗೂ ಇರುವುದರಿಂದ ಶಶಿ ಕಾಂಗ್ರೆಸ್‌ಗೆ ಮಧು ತಂಡದೊಂದಿಗೆ ಬಂದರೆ ಶಾಸಕನಾಗುವ ಛಾನ್ಸ್ ಜಾಸ್ತಿಯೆಂಬುದು ರಾಜಕೀಯ ಪಂಡಿತರ ತರ್ಕ!!

ವಿಶ್ವೇಶ್ವರ ಹೆಗಡೆ ಕಾಗೇರಿ

ದುರಂತ ನಾಯಕ ಎಂದೇ ಜಿಲ್ಲೆಯಲ್ಲಿ ಚಿರಪರಿಚಿತನಾಗಿರುವವರು ಶಶಿ ಹೆಗಡೆ. 2004ರಲ್ಲಿ ಬಿಜೆಪಿ ಪ್ರಭಾವಿ ಮುಖಂಡರಾಗಿದ್ದ ಮಾಜಿ ಶಾಸಕ ಡಾ ಎಂ.ಪಿ ಕರ್ಕಿಯನ್ನು ಮೂಲೆಗೆ ತಳ್ಳುವ ಉದ್ದೇಶದಿಂದ, ಸಂಘಪರಿವಾರದಲ್ಲಿ ಬೇರು ಬಿಟ್ಟಿದ್ದ ಇಂದಿನ ಸ್ಪೀಕರ್ ಕಾಗೇರಿ ನಾಜೂಕಾಗಿ, ಶಶಿ ಕುಮಟಾದಲ್ಲಿ ಬಿಜೆಪಿ ಕ್ಯಾಂಡಿಡೇಟಾಗುವಂತೆ ನೋಡಿಕೊಂಡಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಮಂತ್ರಿಗಿರಿ ಡಾ. ಕರ್ಕಿ ಪಾಲಾಗುತ್ತದೆಂಬ ದೂ(ದು)ರಾಲೋಚನೆಯಿಂದ ಕಾಗೇರಿ ಅವರಿಗೆ ಟಿಕೆಟ್ ಸಿಗದಂತೆ ಮಾಡಿದ್ದರು. ಆ ನಂತರ ಸ್ವಜಾತಿ ಹವ್ಯಕ ವಲಯದಲ್ಲಿ ಶಶಿ ತನಗೆ ಪ್ರತಿಸ್ಪರ್ಧಿಯಾಗುತ್ತಾರೆಂದು ಹೆದರಿ ಆತ ಬಿಜೆಪಿಯಿಂದ ಹೊರಹೋಗುವಂಥ ಸಂದಿಗ್ಧ ಸೃಷ್ಟಿಸಿದ್ದೂ ಇದೇ ಕಾಗೇರಿ! ಇದರಿಂದ ಕೆರಳಿದ ಶಶಿ ತವರು ಕ್ಷೇತ್ರ ಶಿರಸಿಗೇ ಬಂದು ಕಾಗೇರಿ ವಿರುದ್ಧವೇ ಸ್ಪರ್ಧಿಸಿದ್ದರು. ಅದೆಂಥ ರೋಚಕ ಜಿದ್ದಾಜಿದ್ದಿಯಾಗಿತ್ತೆಂದರೆ ಕಾಗೇರಿ ಬರೀ ಎರಡೇ ಸಾವಿರ ಮತದಂತರದಿಂದ ಗೆದ್ದೂ ಸೋತಂತಾಗಿತ್ತು! ಎರಡನೇ ಬಾರಿ ಪರೇಶ್ ಮೇಸ್ತನ ಸಾವಿನ ಧರ್ಮೋನ್ಮಾದ ಅಲೆಯಲ್ಲೂ ಶಶಿ ಶಿರಸಿಯಲ್ಲಿ ಕಾಗೇರಿಗೆ ಬೆವರಿಳಿಸಿದ್ದರು.

ಇಂಥ ಶಶಿ ಕಾಂಗ್ರೆಸ್ ಸೇರಿದರೆ ಸ್ವಜಾತಿ ಹವ್ಯಕ ಮತ ಮತ್ತು ಮಧುಬಂಗಾರಪ್ಪರಿಂದ ದೀವರ ಓಟು ಬಂದು ಕಾಗೇರಿ ಮಾಜಿಯಾಗುತ್ತಾರೆಂಬುದು ಸರಳ ಗಣಿತದ ಲೆಕ್ಕಾಚಾರ. ಆರು ಬಾರಿ ಶಾಸಕನಾದರೂ ಕಾಗೇರಿಯಿಂದ ಅಭಿವೃದ್ಧಿಯೇನೂ ಆಗಿಲ್ಲ. ಒಂದಂತೂ ಖರೆ; ಶಶಿ ಕಾಂಗ್ರೆಸ್ ಪ್ರವೇಶವಾದರೆ ಕ್ಷೇತ್ರದಲ್ಲಿ ಹಿಡಿತ ಕಳಕೊಂಡಿರುವ ಕಾಗೇರಿಗೆ ಗಂಡಾಂತರ ಖಂಡಿತ!!


ಇದನ್ನೂ ಓದಿ: ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...