Homeಕರ್ನಾಟಕಉತ್ತರ ಕನ್ನಡದ ರಾಜಕೀಯ ಜಗಲಿಯಲ್ಲಿ ಅದಲು ಬದಲು

ಉತ್ತರ ಕನ್ನಡದ ರಾಜಕೀಯ ಜಗಲಿಯಲ್ಲಿ ಅದಲು ಬದಲು

- Advertisement -
- Advertisement -

ಉತ್ತರ ಕನ್ನಡದ ರಾಜಕಾರಣದ ಸೂತ್ರ ಸಮೀಕರಣ ನಿಧಾನಕ್ಕೆ ಬದಲಾಗತೊಡಗಿದೆ. ಕಳೆದ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಹೊನ್ನಾವರದ ಕೆರೆಯಲ್ಲಿ ಬಿದ್ದು ಅಸುನೀಗಿದ ಮೀನುಗಾರರ ಪರೇಶ್ ಮೇಸ್ತನನ್ನು ಸಾಬರೇ ಕೊಂದೆಸೆದಿದ್ದಾರೆಂದು ಹುಯಿಲೆಬ್ಬಿಸಿ ಬಿಜೆಪಿ ಭೂಪರು ಭರ್ಜರಿ ಗೆಲವು ಸಾಧಿಸಿದ್ದರು! ಆದರೆ ಬಿಜೆಪಿ ಬುಡವೀಗ ಮೊದಲಿನಷ್ಟು ಭದ್ರವಾಗುಳಿದಿಲ್ಲ. ಯಲ್ಲಾಪುರದ ಕಾಂಗ್ರೆಸ್ ಶಾಸಕನಾಗಿದ್ದ ಶಿವರಾಮ ಹೆಬ್ಬಾರ್ ಬಿಜೆಪಿ ಪಾರ್ಟಿಗೆ ನೆಗೆದು ಉಸ್ತುವಾರಿ ಮಂತ್ರಿಯಾದ ಬಳಿಕವಂತೂ ಜಿಲ್ಲೆಯ ಕೇಸರಿ ಪಾಳೆಯ ಬಣ್ಣಗೆಡುತ್ತಿದೆ. ಮುಗಿದ ಗ್ರಾಪಂ ಇಲೆಕ್ಷನ್‌ನಲ್ಲಿ ಬಿಜೆಪಿ ಬೀಗುವಂಥ ದಿಗ್ವಿಜಯವೂ ಸಾಧ್ಯವಾಗಿಲ್ಲ!!

ಸತೀಶ್ ಸೈಲ್

ಬಿಜೆಪಿಯ ಎಂಪಿ, ಎಂಎಲ್‌ಎ, ಮಂತ್ರಿಗಳು ಜನರ ವಿಶ್ವಾಸ ಕಳೆದುಕೊಳ್ಳಲು ಎರಡು ಕಾರಣ. ಒಂದು, ಸಿಬಿಐಗೆ ವಹಿಸಲಾಗಿದ್ದರೂ ಪರೇಶ ಮೇಸ್ತನ ಸಾವಿನ ಪ್ರಕರಣದ ತನಿಖೆ ತ್ವರಿತವಾಗಿ, ಪ್ರಾಮಾಣಿಕವಾಗಿ ಮಾಡದಿರುವುದು. ಹಾಗೊಮ್ಮೆ ಸರಿಯಾದ ತನಿಖೆ ನಡೆದರೆ ತಮ್ಮ ಬಂಡವಾಳ ಬಯಲಾಗುತ್ತದೆಂಬ ಆತಂಕ ಕಟ್ಟರ್ ಹಿಂದುತ್ವವಾದಿ ಸೂತ್ರಧಾರರಿಗೆ ಕಾಡುತ್ತಿದೆ ಎಂಬುದು ಜನರಿಗೆ ಖಾತ್ರಿಯಾಗಿಹೋಗಿದೆ. ಮತ್ತೊಂದು ಕಾರಣ, ಕಿಕ್‌ಬ್ಯಾಕ್, ಪರ್ಸೆಂಟೇಜ್ ದಂಧೆಯಿಂದ ಜನಸಾಮಾನ್ಯರು ರೋಸತ್ತು ಹೋಗಿದ್ದಾರೆ. ಜಿಲ್ಲೆಯ ಎಲ್ಲ ಬಿಜೆಪಿ ಶಾಸಕರ ವಿರುದ್ಧ ಆಡಳಿತ ವಿರೋಧಿ ಆಕ್ರೋಶ ಎದ್ದಿದೆ! ಹೀಗಾಗಿಯೇ ಸಂಘಟನೆ, ನಾಯಕತ್ವ ಇಲ್ಲದಿದ್ದರೂ ಕಾಂಗ್ರೆಸ್ ಕಳೆದ ಗ್ರಾಪಂ ಇಲೆಕ್ಷನ್‌ನಲ್ಲಿ ಬಿಜೆಪಿಗೆ ಬೆವರಿಳಿಸಿದೆ. ವಲಸಿಗ ಮಂತ್ರಿ ಹೆಬ್ಬಾರ್‌ನಿಂದ ಬಿಜೆಪಿ ಬೆಳವಣಿಗೆಗೆ ಪೈಸೆ ಪ್ರಯೋಜನವೂ ಆಗುತ್ತಿಲ್ಲ. ಬದಲಿಗೆ ಹೆಬ್ಬಾರರ ಯಲ್ಲಾಪುರ, ಮುಂಡಗೋಡ ಕ್ಷೇತ್ರದಲ್ಲೇ ಮೂಲ ಬಿಜೆಪಿ ಬಸವಳಿದು ಹೆಬ್ಬಾರ್ ಬಿಜೆಪಿ ತಲೆಯೆತ್ತಿರುವುದು ಸಂಘಪರಿವಾರದ ಕಣ್ಣು ಕೆಂಪು ಮಾಡಿಸಿದೆ.

ಪ್ರಶಾಂತ ದೇಶಪಾಂಡೆ

ಕೇಸರಿ ಕೋಟೆ ಕಂಗೆಡುತ್ತಿರುವ ಈ ಕಾಲಘಟ್ಟದಲ್ಲಿ ಕಾಂಗ್ರೆಸ್ ಫಿನಿಕ್ಸ್‌ನಂತೆ ಬೂದಿಯಿಂದ ಮೇಲೇಳುತ್ತಿದೆ. ಕಾಂಗ್ರೆಸ್‌ನ ವಯೋವೃದ್ಧ ಮುಖಂಡ ಆರ್.ವಿ ದೇಶಪಾಂಡೆ ತಮ್ಮ ಕುಲಕಂಠೀರವ ಪ್ರಶಾಂತ ದೇಶಪಾಂಡೆಯನ್ನು ಉತ್ತರಾಧಿಕಾರಿಯಾಗಿಸಿ ಜಿಲ್ಲಾ ರಾಜಕಾರಣ ಆಖಾಡಕ್ಕೆ ಬಿಟ್ಟಿದ್ದಾರೆ. ಒಮ್ಮೆ ಲೋಕಸಭಾ ಇಲೆಕ್ಷನ್‌ಗೆ ಸ್ಪರ್ಧಿಸಿ ಸೋತ ನಂತರ ರಾಜಕಾರಣದ ಉಸಾಬರಿಯೇ ಬೇಡವೆಂಬಂತಿದ್ದ ಪ್ರಶಾಂತ್ ಈಗ ಕಾಂಗ್ರೆಸ್ ಕಟ್ಟಲು ಜಿಲ್ಲೆಯಲ್ಲಿ ಓಡಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ನಲ್ಲಿರುವ ಹಿಂದುತ್ವದ ಸೋಂಕಿಲ್ಲದ ಹಿರಿ-ಮರಿ ನೇತಾಗಳ ಸೆಳೆಯಲು ಸ್ಕೆಚ್ ಹಾಕಿಕೊಂಡು ಹೊರಟಿದ್ದಾರೆ. ಅತ್ತ ಹಳಿಯಾಳದಲ್ಲಿ ದೊಡ್ಡ ದೇಶಪಾಂಡೆ ಸಾಹೇಬರು ಮಗ್ಗಲು ಮುಳ್ಳಾಗಿರುವ ಶಿಷ್ಯ ಕಂ ಎಂಎಲ್‌ಸಿ ಶ್ರೀಕಾಂತ ಘೋಟನೇಕರ್‌ರನ್ನು ಮಟ್ಟಹಾಕಲು ನೋಡುತ್ತಿದ್ದಾರೆ. ತನ್ನಿಂದಲೇ ಎರಡು ಬಾರಿ ಎಂಎಲ್‌ಸಿಯಾದರೂ, ಈಗ ತನ್ನ ಎಂಎಲ್‌ಎ ಕುರ್ಚಿ ಮೇಲೆ ಕಣ್ಣು ಹಾಕಿರುವ ಘೋಟನೇಕರ್ ಬಿಜೆಪಿ ಮಂತ್ರಿಯೂ ಮಾಜಿ ಕಾಂಗ್ರೆಸಿಗನೂ ಆಗಿರುವ ಶಿವರಾಮ ಹೆಬ್ಬಾರ್‌ರ ಗಳಸ್ಯಕಂಠಸ್ಯ ಸಖನಾಗಿರುವುದರಿಂದ, ಮಾತೃ ಪಕ್ಷಕ್ಕೆ ದ್ರೋಹ ಬಗೆಯುತ್ತಾರೆಂದು ಹೈಕಮಾಂಡ್ ಮಟ್ಟಲ್ಲಿ ದೇಶಪಾಂಡೆ ಬಿಂಬಿಸುತ್ತಿದ್ದಾರೆ! ಘೋಟನೇಕರ್‌ರನ್ನು ಖಳನಾಯಕನಾಗಿ ಬಿಂಬಿಸಲು, ಅವರು ಗ್ರಾಪಂ ಇಲೆಕ್ಷನ್ ಸಂದರ್ಭದಲ್ಲಿ ಹೆಬ್ಬಾರರ ಯಲ್ಲಾಪುರ-ಮುಂಡಗೋಡದ ಕಾಂಗ್ರೆಸ್ ಉಸ್ತುವಾರಿಯಿಂದ ನುಣುಚಿಕೊಂಡಿದ್ದು, ದೇಶಪಾಂಡೆಯವರಿಗೆ ನೆರವಾಗಿದೆ.

ಎಸ್.ಎಲ್ ಘೋಟನೇಕರ್

ಘೋಟನೇಕರ್ ಮತ್ತು ಕಾರವಾರದ ಕಾಂಗ್ರೆಸ್ ಮಾಜಿ ಶಾಸಕ ಸತೀಶ್ ಸೈಲ್ ಬಿಜೆಪಿ ಸೇರಲು ಸರ್ಕಸ್ ಮಾಡುತ್ತಿರುವುದು ರಹಸ್ಯವಾಗಿ ಉಳಿದಿಲ್ಲ. ಸದ್ಯಕ್ಕೆ ಜೆಡಿಎಸ್‌ನಲ್ಲಿರುವ ಕಾರಾವಾರದ ಮಾಜಿ ಸಚಿವ ಆನಂದ ಅಸ್ನೋಟಿಕರ್ ಇಲ್ಲಿರುವುದು ಸುಮ್ಮನೆ; ಎಲ್ಲಿರುವುದೋ ನನ್ನ ಮನೆ ಎಂದು ಹಾಡುತ್ತಿದ್ದಾರೆ. ಪಾಪ! ಕಳೆದ ಲೋಕಸಭಾ ಇಲೆಕ್ಷನ್‌ನಲ್ಲಿ ಜೆಡಿಎಸ್ ಕಾಂಗ್ರೆಸ್ ಜಂಟೀ ಅಭ್ಯರ್ಥಿಯಾಗಿದ್ದ ಅಸ್ನೋಟಿಕರ್ ಹಿಂದುತ್ವದ ಬೂಟಾಟಿಕೆ ಮತ್ತು ಸಂಸದ ಅನಂತ ಹೆಗಡೆಯ ಸೋಗಲಾಡಿತನ ಬಯಲುಗೊಳಿಸಿದ್ದರು. ಆದರೂ ಬಿಜೆಪಿಗೆ ನುಸುಳಲು ಮಂತ್ರಿ ಈಶ್ವರಪ್ಪರನ್ನು ಹಿಡಿದು ವಿಫಲ ತಿಪ್ಪರಲಾಗ ಹಾಕಿದ್ದಾರೆ. ಅಸ್ನೋಟಿಕರ್‌ಗೆ ಬಿಜೆಪಿ ಸೇರಲು ಅನಂತ್‌ಹೆಗಡೆ ಮತ್ತು ಕಾಂಗ್ರೆಸ್ ಹೊಕ್ಕಲು ದೇಶಪಾಂಡೆ ಅಡ್ಡಗಾಲು ಹಾಕಿ ಕುಂತಿದ್ದಾರೆ. ಒಂದು ಸುದ್ದಿಯ ಪ್ರಕಾರ ದೇಶಪಾಂಡೆಗೆ ಅಸ್ನೋಟಿಕರ್ ಮೇಲಿನ ಸಿಟ್ಟು ಕೊಂಚ ಕಡಿಮೆ ಆಗಿದೆಯಂತೆ. ಹೀಗಾಗಿ ಅಸ್ನೋಟಿಕರ್ ಒಂದು ಕಡೆಯಿಂದ ಪ್ರಶಾಂತ ದೇಶಪಾಂಡೆ ಮತ್ತೊಂದು ಕಡೆಯಿಂದ ಮಧುಬಂಗಾರಪ್ಪರ ಮೂಲಕ ಕಾಂಗ್ರೆಸ್‌ಗೆ ಎಂಟ್ರಿ ಹೊಡಲು ತಿಣುಕಾಡುತ್ತಿದ್ದಾರೆ.

ಬಳ್ಳಾರಿ ರೆಡ್ಡಿ ರಾಮುಲುಗಳ ಸಂಗಡ ನಿಕಟ ನಂಟಿರುವ ಸತೀಶ್ ಸೈಲ್ ಬಿಜೆಪಿಗೆ ಹೋಗಲು ಬಹಳ ದಿನಗಳಿಂದ ಕಾರ್ಯಾಚರಣೆ ನಡೆಸುತ್ತಲೇ ಇದ್ದಾರೆ. ಸಂಘಪರಿವಾರದ ಸೂತ್ರಧಾರರಿಗೆ ಹಾಲಿ ಶಾಸಕಿ ರೂಪಾಲಿನಾಯ್ಕ್ ಬೇಡವಾಗುತ್ತಿದ್ದಾರೆ. ಹೀಗಾಗಿ ಸೈಲ್ ಬಿಜೆಪಿಗೆ ಹೋದರೆ ಆನಂದ ಅಸ್ನೋಟಿಕರ್‌ಗೆ ಕಾಂಗ್ರೆಸ್ ನೆಗೆತ ಸಲೀಸಾಗುತ್ತದೆ! ಕಾಂಗ್ರೆಸ್ ಸೇರಲು ಸನ್ನದ್ಧವಾಗಿರುವ ಜೆಡಿಎಸ್‌ನ ಕಾರ್ಯಾಧ್ಯಕ್ಷ ಮಧುಬಂಗಾರಪ್ಪ ತನ್ನೊಂದಿಗೆ ಈ ಅಸ್ನೋಟಿಕರ್ ಮತ್ತು ಸಿದ್ದಾಪುರದ ಶಶಿಭೂಷಣ ಹೆಗಡೆಯನ್ನು ಕರೆದೊಯ್ದು ತಾಕತ್ತು ತೋರಿಸಲು ಯೋಜನೆ ಹಾಕಿಕೊಂಡಿದ್ದಾರೆ. ಸ್ವಜಾತಿ ದೀವರು ಹೆಚ್ಚಿರುವ ಉತ್ತರಕನ್ನಡದಲ್ಲಿ, ಅವರ ತಂದೆ ದಿವಂಗತ ಬಂಗಾರಪ್ಪನವರ ದೊಡ್ಡ ಅಭಿಮಾನಿ ಬಳಗವಿದೆ. ಹಾಗಾಗಿ ಉತ್ತರಕನ್ನಡದಲ್ಲಿ ಮಧು ವರ್ಚಸ್ಸು ಒಂದು ಲೇವಲ್‌ಗೆ ಬೆಳೆದಿದೆ.

ಶಶಿಭೂಷಣ ಹೆಗಡೆ

ಮಧು ಜತೆಯಲ್ಲಿ ಕಾರವಾರದಲ್ಲಿ ಪ್ರಬಲನಾಗಿರುವ ಆನಂದ ಅಸ್ನೋಟಿಕರ್ ಮತ್ತು ಶಿರಸಿಯ ಪ್ರಭಾವಿ ಯುವ ನಾಯಕ ಶಶಿಭೂಷಣ ಹೆಗಡೆ ಜೆಡಿಎಸ್‌ಗೆ ಬೈಹೇಳಿ ಕಾಂಗ್ರೆಸ್ ಪಾಲಾಗುತ್ತಾರೆಂಬ ಸುದ್ದಿ ಜಿಲ್ಲೆಯಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಶಶಿಭೂಷಣ ಹೆಗಡೆ ಮಾಜಿ ಸಿಎಂ ರಾಮಕೃಷ್ಣ ಹೆಗಡೆ ದಾಯಾದಿ ಮೊಮ್ಮಗ. ಈ ಕಾಣಕ್ಕೆ ಜಿಲ್ಲೆಯ ಬಹುಸಂಖ್ಯಾತ ಹವ್ಯಕ ಬ್ರಾಹ್ಮಣರ ಒಂದು ವರ್ಗ ಶಶಿ ಹಿಂದಿದೆ. ಕ್ರೀಯಾಶೀಲತೆ, ವಿನಯವಂತಿಕೆ ಮತ್ತು ಜಿಲ್ಲೆಯ ಬೇಕು ಬೇಡಗಳ ತಿಳುವಳಿಕೆಯಿರುವ ಶಶಿ ತೀರಾ ಸಣ್ಣ ಅಂತರದಲ್ಲಿ ನಾಲ್ಕು ಬಾರಿ ಸೋತಿರುವುದರಿಂದ ಸಿಂಪಥಿಯೂ ಪಡೆದಿದ್ದಾರೆ. ಅವರು ಎರಡು ಬಾರಿ ಕುಮಟಾದಲ್ಲಿ ಬಿಜೆಪಿಯಿಂದ ಎರಡು ಬಾರಿ ಜೆಡಿಎಸ್‌ನಿಂದ ಶಿರಸಿಯಲ್ಲಿ ಸೋತಿದ್ದಾರೆ. ಶಿರಸಿ ಸಿದ್ದಾಪುರ ಕ್ಷೇತ್ರದಲ್ಲಿ ಬಂ ಮತ್ತು ಹೆಗಡೆಜೀ ನಾಮ ಮಹಿಮೆ ಇವತ್ತಿಗೂ ಇರುವುದರಿಂದ ಶಶಿ ಕಾಂಗ್ರೆಸ್‌ಗೆ ಮಧು ತಂಡದೊಂದಿಗೆ ಬಂದರೆ ಶಾಸಕನಾಗುವ ಛಾನ್ಸ್ ಜಾಸ್ತಿಯೆಂಬುದು ರಾಜಕೀಯ ಪಂಡಿತರ ತರ್ಕ!!

ವಿಶ್ವೇಶ್ವರ ಹೆಗಡೆ ಕಾಗೇರಿ

ದುರಂತ ನಾಯಕ ಎಂದೇ ಜಿಲ್ಲೆಯಲ್ಲಿ ಚಿರಪರಿಚಿತನಾಗಿರುವವರು ಶಶಿ ಹೆಗಡೆ. 2004ರಲ್ಲಿ ಬಿಜೆಪಿ ಪ್ರಭಾವಿ ಮುಖಂಡರಾಗಿದ್ದ ಮಾಜಿ ಶಾಸಕ ಡಾ ಎಂ.ಪಿ ಕರ್ಕಿಯನ್ನು ಮೂಲೆಗೆ ತಳ್ಳುವ ಉದ್ದೇಶದಿಂದ, ಸಂಘಪರಿವಾರದಲ್ಲಿ ಬೇರು ಬಿಟ್ಟಿದ್ದ ಇಂದಿನ ಸ್ಪೀಕರ್ ಕಾಗೇರಿ ನಾಜೂಕಾಗಿ, ಶಶಿ ಕುಮಟಾದಲ್ಲಿ ಬಿಜೆಪಿ ಕ್ಯಾಂಡಿಡೇಟಾಗುವಂತೆ ನೋಡಿಕೊಂಡಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದರೆ ಮಂತ್ರಿಗಿರಿ ಡಾ. ಕರ್ಕಿ ಪಾಲಾಗುತ್ತದೆಂಬ ದೂ(ದು)ರಾಲೋಚನೆಯಿಂದ ಕಾಗೇರಿ ಅವರಿಗೆ ಟಿಕೆಟ್ ಸಿಗದಂತೆ ಮಾಡಿದ್ದರು. ಆ ನಂತರ ಸ್ವಜಾತಿ ಹವ್ಯಕ ವಲಯದಲ್ಲಿ ಶಶಿ ತನಗೆ ಪ್ರತಿಸ್ಪರ್ಧಿಯಾಗುತ್ತಾರೆಂದು ಹೆದರಿ ಆತ ಬಿಜೆಪಿಯಿಂದ ಹೊರಹೋಗುವಂಥ ಸಂದಿಗ್ಧ ಸೃಷ್ಟಿಸಿದ್ದೂ ಇದೇ ಕಾಗೇರಿ! ಇದರಿಂದ ಕೆರಳಿದ ಶಶಿ ತವರು ಕ್ಷೇತ್ರ ಶಿರಸಿಗೇ ಬಂದು ಕಾಗೇರಿ ವಿರುದ್ಧವೇ ಸ್ಪರ್ಧಿಸಿದ್ದರು. ಅದೆಂಥ ರೋಚಕ ಜಿದ್ದಾಜಿದ್ದಿಯಾಗಿತ್ತೆಂದರೆ ಕಾಗೇರಿ ಬರೀ ಎರಡೇ ಸಾವಿರ ಮತದಂತರದಿಂದ ಗೆದ್ದೂ ಸೋತಂತಾಗಿತ್ತು! ಎರಡನೇ ಬಾರಿ ಪರೇಶ್ ಮೇಸ್ತನ ಸಾವಿನ ಧರ್ಮೋನ್ಮಾದ ಅಲೆಯಲ್ಲೂ ಶಶಿ ಶಿರಸಿಯಲ್ಲಿ ಕಾಗೇರಿಗೆ ಬೆವರಿಳಿಸಿದ್ದರು.

ಇಂಥ ಶಶಿ ಕಾಂಗ್ರೆಸ್ ಸೇರಿದರೆ ಸ್ವಜಾತಿ ಹವ್ಯಕ ಮತ ಮತ್ತು ಮಧುಬಂಗಾರಪ್ಪರಿಂದ ದೀವರ ಓಟು ಬಂದು ಕಾಗೇರಿ ಮಾಜಿಯಾಗುತ್ತಾರೆಂಬುದು ಸರಳ ಗಣಿತದ ಲೆಕ್ಕಾಚಾರ. ಆರು ಬಾರಿ ಶಾಸಕನಾದರೂ ಕಾಗೇರಿಯಿಂದ ಅಭಿವೃದ್ಧಿಯೇನೂ ಆಗಿಲ್ಲ. ಒಂದಂತೂ ಖರೆ; ಶಶಿ ಕಾಂಗ್ರೆಸ್ ಪ್ರವೇಶವಾದರೆ ಕ್ಷೇತ್ರದಲ್ಲಿ ಹಿಡಿತ ಕಳಕೊಂಡಿರುವ ಕಾಗೇರಿಗೆ ಗಂಡಾಂತರ ಖಂಡಿತ!!


ಇದನ್ನೂ ಓದಿ: ರಾಜಕೀಯದಲ್ಲೇ ಮುಳುಗಿ ಹೋದವರಿಗೆ ರಾಜ್ಯದ ಹಿತ ನೆನಪಿರುತ್ತದೆಯೇ?- ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...