Homeಕರ್ನಾಟಕಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

ಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

- Advertisement -
- Advertisement -

ಶಿಕಾರಿಪುರ ತಾಲ್ಲೂಕಿನ ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಿರೇಕೆರೂರಿನ ವಕೀಲರಾದ ಜಯದೇವ ಬಿ.ಕೆರೂಡಿ ಅವರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್‌ ಅಧಿಕಾರಿ ಗುರುರಾಜ ಮೈಲಾರಿಯವರನ್ನು ಪೊಲೀಸ್‌ ಇಲಾಖೆ ಅಮಾನತು ಮಾಡಿದೆ.

ಪೊಲೀಸರು ಹಲ್ಲೆ ಮಾಡಿದ್ದಲ್ಲದೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಹಿರೇಕೆರೂರು ನ್ಯಾಯವಾದಿಗಳ ಸಂಘ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿತ್ತು.

ಮಾರ್ಚ್ 13ರಂದು ಮಲ್ಲಿಕಾರ್ಜುನ ದೇವರ ರಥೋತ್ಸವ ಪ್ರಯುಕ್ತ ದರ್ಶನಕ್ಕೆಂದು ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದ ವಕೀಲರಾದ ಜಯದೇವ ಬಿ. ಕೆರೂಡಿ ತೆರಳಿದ್ದರು. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಜನ ಸಂದಣಿ ಹೆಚ್ಚಾಗಿದ್ದು, ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ದೇವರ ದರ್ಶನಕ್ಕೆಂದು ಹರಸಾಹಸ ಪಡುತ್ತಿದ್ದರು. ನೂಕುನುಗ್ಗಲನ್ನು ತಡೆಯುವಂತೆ ಪೊಲೀಸರಿಗೆ ಜಯದೇವ ಅವರು ಕೋರಿದಾಗ ಪೊಲೀಸರು ದರ್ಪ ತೋರಿದ್ದಲ್ಲದೆ ಹಲ್ಲೆ ನಡೆಸಿದ್ದರು. ದೇವಾಲಯದ ಸಿಸಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿತ್ತು.

ಸರತಿ ಸಾಲನ್ನು ಸರಿಪಡಿಸಲು ಕೋರಿದಾಗ ಅಲ್ಲಿದ್ದ ಸಿಪಿಐ ಗುರುರಾಜ ಮೈಲಾರಿ ಹಾಗೂ ಸಿಬ್ಬಂದಿ ಅವ್ಯಾಚ್ಯವಾಗಿ ನಿಂದಿಸಿದ್ದು, ವಕೀಲಿ ವೃತ್ತಿಗೂ ಅವಹೇಳನ ಮಾಡಿದ್ದಾರೆ. ಈ ವೇಳೆ ಸಿಪಿಐ ಹಾಗೂ ಹೆಡ್‌ಕಾನ್‌ಸ್ಟೇಬಲ್‌ ಇಬ್ಬರೂ ವಕೀಲರಿಗೆ ಥಳಿಸಿದ್ದಾರೆ. ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಠಾಣೆಗೆ ಕರೆದೊಯ್ದು ಅಲ್ಲಿಯೂ ಮೃಗೀಯ ವರ್ತನೆ ತೋರಿಸಿದ್ದಾರೆ. ಜಯದೇವ ಅವರು ಮಹಿಳಾ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದಾರೆ. ಸದರಿ ವಕೀಲರಿಗೆ ಕಾನೂನು ಬಾಹಿರವಾಗಿ ಕೈಗೆ ಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ ಎಂದು ವಕೀಲರು ಆಕ್ರೋಶ ಹೊರಹಾಕಿದ್ದರು. ಘಟನೆ ಹಿನ್ನೆಲೆಯಲ್ಲಿ ಕ್ರಮ ಜರುಗಿಸಿರುವ ದಾವಣಗೆರೆ ಪೂರ್ವ ವಲಯದ ಪೊಲೀಸ್‌ ಮಹಾನಿರೀಕ್ಷಕರು, ಶಿಕಾರಿಪುರ ನಗರ ಸಿಪಿಐ ಗುರುರಾ‌ಜ್‌ ಎನ್‌.ಮೈಲಾರಿ ಅವರನ್ನು ಅಮಾನತು ಮಾಡಿದ್ದಾರೆ.

ಅಮಾನತು ಆದೇಶದಲ್ಲಿ ಏನಿದೆ?

“ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರನ್ನು ಬಿಡುವಂತೆ ಜೋರು ದನಿಯಲ್ಲಿ ವಕೀಲ ಜಯದೇವ ಅವರು ಇಲಾಖೆಯ ಬಂದೋಬಸ್ತ್‌ನಲ್ಲಿದ್ದ ಸಿಬ್ಬಂದಿಯೊಂದಿಗೆ ವಾಗ್ವಾದ ಮಾಡುತ್ತಿರುವಾಗ ಸ್ಥಳದಲ್ಲಿಯೇ ಇದ್ದ ನೀವು ಪರಿಸ್ಥಿತಿಯನ್ನು ತಿಳಿಗೊಳಿಸಿ ಜನಸಂದಣಿಯನ್ನು ನಿಭಾಯಿಸದೆ ತೀವ್ರವಾಗಿ ಉದ್ವೇಗಕ್ಕೊಳಗಾಗಿದ್ದೀರಿ. ದೇವಸ್ಥಾನಕ್ಕೆ ಆಗಮಿಸಿದ್ದ ಸಾರ್ವಜನಿಕರ ಮುಂದೆಯೇ ಲಾಯರ್‌ ಜೊತೆಯಲ್ಲಿ ವಾಗ್ವಾದಕ್ಕಿಳಿದು, ನೂಕಾಟ ನಡೆಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದೀರಿ. ಒಂದು ವೇಳೆ ಸದರಿಯವರು ಅನುಚಿತವಾಗಿ ವರ್ತಿಸಿದ್ದಕ್ಕೆ ಅವರ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಜರುಗಿಸಬಹುದಿತ್ತು…”

“ನೀವು ಬಂದೋಬಸ್ತ್‌ ಕರ್ತವ್ಯದಲ್ಲಿದ್ದ ಇತರೆ ಸಿಬ್ಬಂದಿಗಳ ಸಹಾಯದೊಂದಿಗೆ ಅವರನ್ನು ಪಕ್ಕಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ಮಾಡುವ ಮೂಲಕ, ಶಿಸ್ತಿನ ಇಲಾಖೆಯ ಸಿಪಿಐ ಹುದ್ದೆಯಂತಹ ಜವಾಬ್ದಾರಿ ಸ್ಥಾನದಲ್ಲಿದ್ದು, ಬೇಜವಾಬ್ದಾರಿತನದ ಮತ್ತು ಕರ್ತವ್ಯದಲ್ಲಿ ಘೋರ ನಿರ್ಲಕ್ಷ್ಯ ತೋರಿದ್ದಲ್ಲದೇ ಇಲಾಖೆಯ ಘನತೆಗೆ ಸಾರ್ವಜನಿಕವಾಗಿ ಮುಜುಗರವುಂಟಾಗುವಂತೆ ದುರ್ವರ್ತನೆ ತೋರಿದ್ದೀರಿ. ಇದು ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳಿಂದ ಮತ್ತು ಶಿವಮೊಗ್ಗ ಪೊಲೀಸ್‌ ಅಧೀಕ್ಷಕರ ಉಲ್ಲೇಖಿತ ವರದಿಯ ಪರಿಶೀಲನೆಯಿಂದ ಮನವರಿಕೆಯಾಗಿದೆ. ಹೀಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಮ್ಮನ್ನು ಸೇವೆಯಿಂದ ಅಮಾನತು ಮಾಡಲಾಗಿದೆ” ಎಂದು ಮಾರ್ಚ್ 20ರಂದು ಆದೇಶ ಹೊರಡಿಸಲಾಗಿದೆ.

“ಅಮಾನತಿನ ಅವಧಿಯಲ್ಲಿ ಮೊದಲನೇ ಆರು ತಿಂಗಳ ಅವಧಿಯಲ್ಲಿ ಕೆಸಿಎಸ್‌ಆರ್‌ 1958ರ ನಿಯಮ 96ರಂತೆ ಅರ್ಧ ಸಂಬಳ ನೀಡಲಾಗುತ್ತದೆ…. ಅಮಾನತಿ ಅವಧಿಯಲ್ಲಿ ಯಾವುದೇ ಇತರೆ ವ್ಯಾಪಾರದಲ್ಲಿ ತೊಡಗಿಸಿಕೊಂಡರೆ ಪ್ರತ್ಯೇಕವಾದ ಶಿಸ್ತಿನ ಕ್ರಮ ಜರುಗಿಸಲಾಗುವುದು…” ಎಂದು ಎಚ್ಚರಿಸಲಾಗಿದೆ.


ಇದನ್ನೂ ಓದಿರಿ: ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....