Homeಕರ್ನಾಟಕಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

ಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

- Advertisement -
- Advertisement -

ಶಿಕಾರಿಪುರ ತಾಲ್ಲೂಕಿನ ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಿರೇಕೆರೂರಿನ ವಕೀಲರಾದ ಜಯದೇವ ಬಿ.ಕೆರೂಡಿ ಅವರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್‌ ಅಧಿಕಾರಿ ಗುರುರಾಜ ಮೈಲಾರಿಯವರನ್ನು ಪೊಲೀಸ್‌ ಇಲಾಖೆ ಅಮಾನತು ಮಾಡಿದೆ.

ಪೊಲೀಸರು ಹಲ್ಲೆ ಮಾಡಿದ್ದಲ್ಲದೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಹಿರೇಕೆರೂರು ನ್ಯಾಯವಾದಿಗಳ ಸಂಘ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿತ್ತು.

ಮಾರ್ಚ್ 13ರಂದು ಮಲ್ಲಿಕಾರ್ಜುನ ದೇವರ ರಥೋತ್ಸವ ಪ್ರಯುಕ್ತ ದರ್ಶನಕ್ಕೆಂದು ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದ ವಕೀಲರಾದ ಜಯದೇವ ಬಿ. ಕೆರೂಡಿ ತೆರಳಿದ್ದರು. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಜನ ಸಂದಣಿ ಹೆಚ್ಚಾಗಿದ್ದು, ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ದೇವರ ದರ್ಶನಕ್ಕೆಂದು ಹರಸಾಹಸ ಪಡುತ್ತಿದ್ದರು. ನೂಕುನುಗ್ಗಲನ್ನು ತಡೆಯುವಂತೆ ಪೊಲೀಸರಿಗೆ ಜಯದೇವ ಅವರು ಕೋರಿದಾಗ ಪೊಲೀಸರು ದರ್ಪ ತೋರಿದ್ದಲ್ಲದೆ ಹಲ್ಲೆ ನಡೆಸಿದ್ದರು. ದೇವಾಲಯದ ಸಿಸಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿತ್ತು.

ಸರತಿ ಸಾಲನ್ನು ಸರಿಪಡಿಸಲು ಕೋರಿದಾಗ ಅಲ್ಲಿದ್ದ ಸಿಪಿಐ ಗುರುರಾಜ ಮೈಲಾರಿ ಹಾಗೂ ಸಿಬ್ಬಂದಿ ಅವ್ಯಾಚ್ಯವಾಗಿ ನಿಂದಿಸಿದ್ದು, ವಕೀಲಿ ವೃತ್ತಿಗೂ ಅವಹೇಳನ ಮಾಡಿದ್ದಾರೆ. ಈ ವೇಳೆ ಸಿಪಿಐ ಹಾಗೂ ಹೆಡ್‌ಕಾನ್‌ಸ್ಟೇಬಲ್‌ ಇಬ್ಬರೂ ವಕೀಲರಿಗೆ ಥಳಿಸಿದ್ದಾರೆ. ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಠಾಣೆಗೆ ಕರೆದೊಯ್ದು ಅಲ್ಲಿಯೂ ಮೃಗೀಯ ವರ್ತನೆ ತೋರಿಸಿದ್ದಾರೆ. ಜಯದೇವ ಅವರು ಮಹಿಳಾ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದಾರೆ. ಸದರಿ ವಕೀಲರಿಗೆ ಕಾನೂನು ಬಾಹಿರವಾಗಿ ಕೈಗೆ ಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ ಎಂದು ವಕೀಲರು ಆಕ್ರೋಶ ಹೊರಹಾಕಿದ್ದರು. ಘಟನೆ ಹಿನ್ನೆಲೆಯಲ್ಲಿ ಕ್ರಮ ಜರುಗಿಸಿರುವ ದಾವಣಗೆರೆ ಪೂರ್ವ ವಲಯದ ಪೊಲೀಸ್‌ ಮಹಾನಿರೀಕ್ಷಕರು, ಶಿಕಾರಿಪುರ ನಗರ ಸಿಪಿಐ ಗುರುರಾ‌ಜ್‌ ಎನ್‌.ಮೈಲಾರಿ ಅವರನ್ನು ಅಮಾನತು ಮಾಡಿದ್ದಾರೆ.

ಅಮಾನತು ಆದೇಶದಲ್ಲಿ ಏನಿದೆ?

“ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರನ್ನು ಬಿಡುವಂತೆ ಜೋರು ದನಿಯಲ್ಲಿ ವಕೀಲ ಜಯದೇವ ಅವರು ಇಲಾಖೆಯ ಬಂದೋಬಸ್ತ್‌ನಲ್ಲಿದ್ದ ಸಿಬ್ಬಂದಿಯೊಂದಿಗೆ ವಾಗ್ವಾದ ಮಾಡುತ್ತಿರುವಾಗ ಸ್ಥಳದಲ್ಲಿಯೇ ಇದ್ದ ನೀವು ಪರಿಸ್ಥಿತಿಯನ್ನು ತಿಳಿಗೊಳಿಸಿ ಜನಸಂದಣಿಯನ್ನು ನಿಭಾಯಿಸದೆ ತೀವ್ರವಾಗಿ ಉದ್ವೇಗಕ್ಕೊಳಗಾಗಿದ್ದೀರಿ. ದೇವಸ್ಥಾನಕ್ಕೆ ಆಗಮಿಸಿದ್ದ ಸಾರ್ವಜನಿಕರ ಮುಂದೆಯೇ ಲಾಯರ್‌ ಜೊತೆಯಲ್ಲಿ ವಾಗ್ವಾದಕ್ಕಿಳಿದು, ನೂಕಾಟ ನಡೆಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದೀರಿ. ಒಂದು ವೇಳೆ ಸದರಿಯವರು ಅನುಚಿತವಾಗಿ ವರ್ತಿಸಿದ್ದಕ್ಕೆ ಅವರ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಜರುಗಿಸಬಹುದಿತ್ತು…”

“ನೀವು ಬಂದೋಬಸ್ತ್‌ ಕರ್ತವ್ಯದಲ್ಲಿದ್ದ ಇತರೆ ಸಿಬ್ಬಂದಿಗಳ ಸಹಾಯದೊಂದಿಗೆ ಅವರನ್ನು ಪಕ್ಕಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ಮಾಡುವ ಮೂಲಕ, ಶಿಸ್ತಿನ ಇಲಾಖೆಯ ಸಿಪಿಐ ಹುದ್ದೆಯಂತಹ ಜವಾಬ್ದಾರಿ ಸ್ಥಾನದಲ್ಲಿದ್ದು, ಬೇಜವಾಬ್ದಾರಿತನದ ಮತ್ತು ಕರ್ತವ್ಯದಲ್ಲಿ ಘೋರ ನಿರ್ಲಕ್ಷ್ಯ ತೋರಿದ್ದಲ್ಲದೇ ಇಲಾಖೆಯ ಘನತೆಗೆ ಸಾರ್ವಜನಿಕವಾಗಿ ಮುಜುಗರವುಂಟಾಗುವಂತೆ ದುರ್ವರ್ತನೆ ತೋರಿದ್ದೀರಿ. ಇದು ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳಿಂದ ಮತ್ತು ಶಿವಮೊಗ್ಗ ಪೊಲೀಸ್‌ ಅಧೀಕ್ಷಕರ ಉಲ್ಲೇಖಿತ ವರದಿಯ ಪರಿಶೀಲನೆಯಿಂದ ಮನವರಿಕೆಯಾಗಿದೆ. ಹೀಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಮ್ಮನ್ನು ಸೇವೆಯಿಂದ ಅಮಾನತು ಮಾಡಲಾಗಿದೆ” ಎಂದು ಮಾರ್ಚ್ 20ರಂದು ಆದೇಶ ಹೊರಡಿಸಲಾಗಿದೆ.

“ಅಮಾನತಿನ ಅವಧಿಯಲ್ಲಿ ಮೊದಲನೇ ಆರು ತಿಂಗಳ ಅವಧಿಯಲ್ಲಿ ಕೆಸಿಎಸ್‌ಆರ್‌ 1958ರ ನಿಯಮ 96ರಂತೆ ಅರ್ಧ ಸಂಬಳ ನೀಡಲಾಗುತ್ತದೆ…. ಅಮಾನತಿ ಅವಧಿಯಲ್ಲಿ ಯಾವುದೇ ಇತರೆ ವ್ಯಾಪಾರದಲ್ಲಿ ತೊಡಗಿಸಿಕೊಂಡರೆ ಪ್ರತ್ಯೇಕವಾದ ಶಿಸ್ತಿನ ಕ್ರಮ ಜರುಗಿಸಲಾಗುವುದು…” ಎಂದು ಎಚ್ಚರಿಸಲಾಗಿದೆ.


ಇದನ್ನೂ ಓದಿರಿ: ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....