Homeಕರ್ನಾಟಕಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

ಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

- Advertisement -
- Advertisement -

ಶಿಕಾರಿಪುರ ತಾಲ್ಲೂಕಿನ ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಿರೇಕೆರೂರಿನ ವಕೀಲರಾದ ಜಯದೇವ ಬಿ.ಕೆರೂಡಿ ಅವರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್‌ ಅಧಿಕಾರಿ ಗುರುರಾಜ ಮೈಲಾರಿಯವರನ್ನು ಪೊಲೀಸ್‌ ಇಲಾಖೆ ಅಮಾನತು ಮಾಡಿದೆ.

ಪೊಲೀಸರು ಹಲ್ಲೆ ಮಾಡಿದ್ದಲ್ಲದೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಹಿರೇಕೆರೂರು ನ್ಯಾಯವಾದಿಗಳ ಸಂಘ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿತ್ತು.

ಮಾರ್ಚ್ 13ರಂದು ಮಲ್ಲಿಕಾರ್ಜುನ ದೇವರ ರಥೋತ್ಸವ ಪ್ರಯುಕ್ತ ದರ್ಶನಕ್ಕೆಂದು ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದ ವಕೀಲರಾದ ಜಯದೇವ ಬಿ. ಕೆರೂಡಿ ತೆರಳಿದ್ದರು. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಜನ ಸಂದಣಿ ಹೆಚ್ಚಾಗಿದ್ದು, ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ದೇವರ ದರ್ಶನಕ್ಕೆಂದು ಹರಸಾಹಸ ಪಡುತ್ತಿದ್ದರು. ನೂಕುನುಗ್ಗಲನ್ನು ತಡೆಯುವಂತೆ ಪೊಲೀಸರಿಗೆ ಜಯದೇವ ಅವರು ಕೋರಿದಾಗ ಪೊಲೀಸರು ದರ್ಪ ತೋರಿದ್ದಲ್ಲದೆ ಹಲ್ಲೆ ನಡೆಸಿದ್ದರು. ದೇವಾಲಯದ ಸಿಸಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿತ್ತು.

ಸರತಿ ಸಾಲನ್ನು ಸರಿಪಡಿಸಲು ಕೋರಿದಾಗ ಅಲ್ಲಿದ್ದ ಸಿಪಿಐ ಗುರುರಾಜ ಮೈಲಾರಿ ಹಾಗೂ ಸಿಬ್ಬಂದಿ ಅವ್ಯಾಚ್ಯವಾಗಿ ನಿಂದಿಸಿದ್ದು, ವಕೀಲಿ ವೃತ್ತಿಗೂ ಅವಹೇಳನ ಮಾಡಿದ್ದಾರೆ. ಈ ವೇಳೆ ಸಿಪಿಐ ಹಾಗೂ ಹೆಡ್‌ಕಾನ್‌ಸ್ಟೇಬಲ್‌ ಇಬ್ಬರೂ ವಕೀಲರಿಗೆ ಥಳಿಸಿದ್ದಾರೆ. ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಠಾಣೆಗೆ ಕರೆದೊಯ್ದು ಅಲ್ಲಿಯೂ ಮೃಗೀಯ ವರ್ತನೆ ತೋರಿಸಿದ್ದಾರೆ. ಜಯದೇವ ಅವರು ಮಹಿಳಾ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದಾರೆ. ಸದರಿ ವಕೀಲರಿಗೆ ಕಾನೂನು ಬಾಹಿರವಾಗಿ ಕೈಗೆ ಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ ಎಂದು ವಕೀಲರು ಆಕ್ರೋಶ ಹೊರಹಾಕಿದ್ದರು. ಘಟನೆ ಹಿನ್ನೆಲೆಯಲ್ಲಿ ಕ್ರಮ ಜರುಗಿಸಿರುವ ದಾವಣಗೆರೆ ಪೂರ್ವ ವಲಯದ ಪೊಲೀಸ್‌ ಮಹಾನಿರೀಕ್ಷಕರು, ಶಿಕಾರಿಪುರ ನಗರ ಸಿಪಿಐ ಗುರುರಾ‌ಜ್‌ ಎನ್‌.ಮೈಲಾರಿ ಅವರನ್ನು ಅಮಾನತು ಮಾಡಿದ್ದಾರೆ.

ಅಮಾನತು ಆದೇಶದಲ್ಲಿ ಏನಿದೆ?

“ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರನ್ನು ಬಿಡುವಂತೆ ಜೋರು ದನಿಯಲ್ಲಿ ವಕೀಲ ಜಯದೇವ ಅವರು ಇಲಾಖೆಯ ಬಂದೋಬಸ್ತ್‌ನಲ್ಲಿದ್ದ ಸಿಬ್ಬಂದಿಯೊಂದಿಗೆ ವಾಗ್ವಾದ ಮಾಡುತ್ತಿರುವಾಗ ಸ್ಥಳದಲ್ಲಿಯೇ ಇದ್ದ ನೀವು ಪರಿಸ್ಥಿತಿಯನ್ನು ತಿಳಿಗೊಳಿಸಿ ಜನಸಂದಣಿಯನ್ನು ನಿಭಾಯಿಸದೆ ತೀವ್ರವಾಗಿ ಉದ್ವೇಗಕ್ಕೊಳಗಾಗಿದ್ದೀರಿ. ದೇವಸ್ಥಾನಕ್ಕೆ ಆಗಮಿಸಿದ್ದ ಸಾರ್ವಜನಿಕರ ಮುಂದೆಯೇ ಲಾಯರ್‌ ಜೊತೆಯಲ್ಲಿ ವಾಗ್ವಾದಕ್ಕಿಳಿದು, ನೂಕಾಟ ನಡೆಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದೀರಿ. ಒಂದು ವೇಳೆ ಸದರಿಯವರು ಅನುಚಿತವಾಗಿ ವರ್ತಿಸಿದ್ದಕ್ಕೆ ಅವರ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಜರುಗಿಸಬಹುದಿತ್ತು…”

“ನೀವು ಬಂದೋಬಸ್ತ್‌ ಕರ್ತವ್ಯದಲ್ಲಿದ್ದ ಇತರೆ ಸಿಬ್ಬಂದಿಗಳ ಸಹಾಯದೊಂದಿಗೆ ಅವರನ್ನು ಪಕ್ಕಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ಮಾಡುವ ಮೂಲಕ, ಶಿಸ್ತಿನ ಇಲಾಖೆಯ ಸಿಪಿಐ ಹುದ್ದೆಯಂತಹ ಜವಾಬ್ದಾರಿ ಸ್ಥಾನದಲ್ಲಿದ್ದು, ಬೇಜವಾಬ್ದಾರಿತನದ ಮತ್ತು ಕರ್ತವ್ಯದಲ್ಲಿ ಘೋರ ನಿರ್ಲಕ್ಷ್ಯ ತೋರಿದ್ದಲ್ಲದೇ ಇಲಾಖೆಯ ಘನತೆಗೆ ಸಾರ್ವಜನಿಕವಾಗಿ ಮುಜುಗರವುಂಟಾಗುವಂತೆ ದುರ್ವರ್ತನೆ ತೋರಿದ್ದೀರಿ. ಇದು ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳಿಂದ ಮತ್ತು ಶಿವಮೊಗ್ಗ ಪೊಲೀಸ್‌ ಅಧೀಕ್ಷಕರ ಉಲ್ಲೇಖಿತ ವರದಿಯ ಪರಿಶೀಲನೆಯಿಂದ ಮನವರಿಕೆಯಾಗಿದೆ. ಹೀಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಮ್ಮನ್ನು ಸೇವೆಯಿಂದ ಅಮಾನತು ಮಾಡಲಾಗಿದೆ” ಎಂದು ಮಾರ್ಚ್ 20ರಂದು ಆದೇಶ ಹೊರಡಿಸಲಾಗಿದೆ.

“ಅಮಾನತಿನ ಅವಧಿಯಲ್ಲಿ ಮೊದಲನೇ ಆರು ತಿಂಗಳ ಅವಧಿಯಲ್ಲಿ ಕೆಸಿಎಸ್‌ಆರ್‌ 1958ರ ನಿಯಮ 96ರಂತೆ ಅರ್ಧ ಸಂಬಳ ನೀಡಲಾಗುತ್ತದೆ…. ಅಮಾನತಿ ಅವಧಿಯಲ್ಲಿ ಯಾವುದೇ ಇತರೆ ವ್ಯಾಪಾರದಲ್ಲಿ ತೊಡಗಿಸಿಕೊಂಡರೆ ಪ್ರತ್ಯೇಕವಾದ ಶಿಸ್ತಿನ ಕ್ರಮ ಜರುಗಿಸಲಾಗುವುದು…” ಎಂದು ಎಚ್ಚರಿಸಲಾಗಿದೆ.


ಇದನ್ನೂ ಓದಿರಿ: ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...