Homeಕರ್ನಾಟಕಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

ಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

- Advertisement -
- Advertisement -

ಶಿಕಾರಿಪುರ ತಾಲ್ಲೂಕಿನ ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಿರೇಕೆರೂರಿನ ವಕೀಲರಾದ ಜಯದೇವ ಬಿ.ಕೆರೂಡಿ ಅವರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್‌ ಅಧಿಕಾರಿ ಗುರುರಾಜ ಮೈಲಾರಿಯವರನ್ನು ಪೊಲೀಸ್‌ ಇಲಾಖೆ ಅಮಾನತು ಮಾಡಿದೆ.

ಪೊಲೀಸರು ಹಲ್ಲೆ ಮಾಡಿದ್ದಲ್ಲದೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಹಿರೇಕೆರೂರು ನ್ಯಾಯವಾದಿಗಳ ಸಂಘ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿತ್ತು.

ಮಾರ್ಚ್ 13ರಂದು ಮಲ್ಲಿಕಾರ್ಜುನ ದೇವರ ರಥೋತ್ಸವ ಪ್ರಯುಕ್ತ ದರ್ಶನಕ್ಕೆಂದು ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದ ವಕೀಲರಾದ ಜಯದೇವ ಬಿ. ಕೆರೂಡಿ ತೆರಳಿದ್ದರು. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಜನ ಸಂದಣಿ ಹೆಚ್ಚಾಗಿದ್ದು, ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ದೇವರ ದರ್ಶನಕ್ಕೆಂದು ಹರಸಾಹಸ ಪಡುತ್ತಿದ್ದರು. ನೂಕುನುಗ್ಗಲನ್ನು ತಡೆಯುವಂತೆ ಪೊಲೀಸರಿಗೆ ಜಯದೇವ ಅವರು ಕೋರಿದಾಗ ಪೊಲೀಸರು ದರ್ಪ ತೋರಿದ್ದಲ್ಲದೆ ಹಲ್ಲೆ ನಡೆಸಿದ್ದರು. ದೇವಾಲಯದ ಸಿಸಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿತ್ತು.

ಸರತಿ ಸಾಲನ್ನು ಸರಿಪಡಿಸಲು ಕೋರಿದಾಗ ಅಲ್ಲಿದ್ದ ಸಿಪಿಐ ಗುರುರಾಜ ಮೈಲಾರಿ ಹಾಗೂ ಸಿಬ್ಬಂದಿ ಅವ್ಯಾಚ್ಯವಾಗಿ ನಿಂದಿಸಿದ್ದು, ವಕೀಲಿ ವೃತ್ತಿಗೂ ಅವಹೇಳನ ಮಾಡಿದ್ದಾರೆ. ಈ ವೇಳೆ ಸಿಪಿಐ ಹಾಗೂ ಹೆಡ್‌ಕಾನ್‌ಸ್ಟೇಬಲ್‌ ಇಬ್ಬರೂ ವಕೀಲರಿಗೆ ಥಳಿಸಿದ್ದಾರೆ. ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಠಾಣೆಗೆ ಕರೆದೊಯ್ದು ಅಲ್ಲಿಯೂ ಮೃಗೀಯ ವರ್ತನೆ ತೋರಿಸಿದ್ದಾರೆ. ಜಯದೇವ ಅವರು ಮಹಿಳಾ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದಾರೆ. ಸದರಿ ವಕೀಲರಿಗೆ ಕಾನೂನು ಬಾಹಿರವಾಗಿ ಕೈಗೆ ಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ ಎಂದು ವಕೀಲರು ಆಕ್ರೋಶ ಹೊರಹಾಕಿದ್ದರು. ಘಟನೆ ಹಿನ್ನೆಲೆಯಲ್ಲಿ ಕ್ರಮ ಜರುಗಿಸಿರುವ ದಾವಣಗೆರೆ ಪೂರ್ವ ವಲಯದ ಪೊಲೀಸ್‌ ಮಹಾನಿರೀಕ್ಷಕರು, ಶಿಕಾರಿಪುರ ನಗರ ಸಿಪಿಐ ಗುರುರಾ‌ಜ್‌ ಎನ್‌.ಮೈಲಾರಿ ಅವರನ್ನು ಅಮಾನತು ಮಾಡಿದ್ದಾರೆ.

ಅಮಾನತು ಆದೇಶದಲ್ಲಿ ಏನಿದೆ?

“ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರನ್ನು ಬಿಡುವಂತೆ ಜೋರು ದನಿಯಲ್ಲಿ ವಕೀಲ ಜಯದೇವ ಅವರು ಇಲಾಖೆಯ ಬಂದೋಬಸ್ತ್‌ನಲ್ಲಿದ್ದ ಸಿಬ್ಬಂದಿಯೊಂದಿಗೆ ವಾಗ್ವಾದ ಮಾಡುತ್ತಿರುವಾಗ ಸ್ಥಳದಲ್ಲಿಯೇ ಇದ್ದ ನೀವು ಪರಿಸ್ಥಿತಿಯನ್ನು ತಿಳಿಗೊಳಿಸಿ ಜನಸಂದಣಿಯನ್ನು ನಿಭಾಯಿಸದೆ ತೀವ್ರವಾಗಿ ಉದ್ವೇಗಕ್ಕೊಳಗಾಗಿದ್ದೀರಿ. ದೇವಸ್ಥಾನಕ್ಕೆ ಆಗಮಿಸಿದ್ದ ಸಾರ್ವಜನಿಕರ ಮುಂದೆಯೇ ಲಾಯರ್‌ ಜೊತೆಯಲ್ಲಿ ವಾಗ್ವಾದಕ್ಕಿಳಿದು, ನೂಕಾಟ ನಡೆಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದೀರಿ. ಒಂದು ವೇಳೆ ಸದರಿಯವರು ಅನುಚಿತವಾಗಿ ವರ್ತಿಸಿದ್ದಕ್ಕೆ ಅವರ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಜರುಗಿಸಬಹುದಿತ್ತು…”

“ನೀವು ಬಂದೋಬಸ್ತ್‌ ಕರ್ತವ್ಯದಲ್ಲಿದ್ದ ಇತರೆ ಸಿಬ್ಬಂದಿಗಳ ಸಹಾಯದೊಂದಿಗೆ ಅವರನ್ನು ಪಕ್ಕಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ಮಾಡುವ ಮೂಲಕ, ಶಿಸ್ತಿನ ಇಲಾಖೆಯ ಸಿಪಿಐ ಹುದ್ದೆಯಂತಹ ಜವಾಬ್ದಾರಿ ಸ್ಥಾನದಲ್ಲಿದ್ದು, ಬೇಜವಾಬ್ದಾರಿತನದ ಮತ್ತು ಕರ್ತವ್ಯದಲ್ಲಿ ಘೋರ ನಿರ್ಲಕ್ಷ್ಯ ತೋರಿದ್ದಲ್ಲದೇ ಇಲಾಖೆಯ ಘನತೆಗೆ ಸಾರ್ವಜನಿಕವಾಗಿ ಮುಜುಗರವುಂಟಾಗುವಂತೆ ದುರ್ವರ್ತನೆ ತೋರಿದ್ದೀರಿ. ಇದು ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳಿಂದ ಮತ್ತು ಶಿವಮೊಗ್ಗ ಪೊಲೀಸ್‌ ಅಧೀಕ್ಷಕರ ಉಲ್ಲೇಖಿತ ವರದಿಯ ಪರಿಶೀಲನೆಯಿಂದ ಮನವರಿಕೆಯಾಗಿದೆ. ಹೀಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಮ್ಮನ್ನು ಸೇವೆಯಿಂದ ಅಮಾನತು ಮಾಡಲಾಗಿದೆ” ಎಂದು ಮಾರ್ಚ್ 20ರಂದು ಆದೇಶ ಹೊರಡಿಸಲಾಗಿದೆ.

“ಅಮಾನತಿನ ಅವಧಿಯಲ್ಲಿ ಮೊದಲನೇ ಆರು ತಿಂಗಳ ಅವಧಿಯಲ್ಲಿ ಕೆಸಿಎಸ್‌ಆರ್‌ 1958ರ ನಿಯಮ 96ರಂತೆ ಅರ್ಧ ಸಂಬಳ ನೀಡಲಾಗುತ್ತದೆ…. ಅಮಾನತಿ ಅವಧಿಯಲ್ಲಿ ಯಾವುದೇ ಇತರೆ ವ್ಯಾಪಾರದಲ್ಲಿ ತೊಡಗಿಸಿಕೊಂಡರೆ ಪ್ರತ್ಯೇಕವಾದ ಶಿಸ್ತಿನ ಕ್ರಮ ಜರುಗಿಸಲಾಗುವುದು…” ಎಂದು ಎಚ್ಚರಿಸಲಾಗಿದೆ.


ಇದನ್ನೂ ಓದಿರಿ: ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ ಬುಡಕಟ್ಟು ಶಾಲೆಯಲ್ಲಿ ಊಟ ಸೇವಿಸಿ 5ನೇ ತರಗತಿ ವಿದ್ಯಾರ್ಥಿನಿ ಸಾವು, 100 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯ ಸರ್ಕಾರಿ ಬುಡಕಟ್ಟು ವಸತಿ ಶಾಲೆಯಲ್ಲಿ ಊಟ ಸೇವಿಸಿದ ನಂತರ 5 ನೇ ತರಗತಿಯ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕಾಕಬಂಧ ​​ಆಶ್ರಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ...

ಡೆಹ್ರಾಡೂನ್‌| ಮುಸ್ಲಿಂ ಯುವಕನ ಮೇಲೆ ಕಾಳಿ ಸೇನಾ ನಾಯಕನಿಂದ ಹಲ್ಲೆ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಆರೋಪಿ

ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮುಸ್ಲಿಂ ಯುವಕನ ಮೇಲೆ ಹಿಂದುತ್ವ ನಾಯಕನೊಬ್ಬ ಹಲ್ಲೆ ನಡೆಸಿದ್ದಾನೆ ಎಂಬ ಆತಂಕಕಾರಿ ಘಟನೆ ವರದಿಯಾಗಿದೆ. ಕಾನೂನು ಮತ್ತು ಸುವ್ಯವಸ್ಥೆ, ಅಲ್ಪಸಂಖ್ಯಾತರ ಸುರಕ್ಷತೆಯ ಬಗ್ಗೆ ಗಂಭೀರ ಕಳವಳ ವ್ಯಕ್ತವಾಗಿದೆ. ಮಾಹಿತಿಯ ಪ್ರಕಾರ, ಕಾಳಿ...

ಎಎಪಿ ಸಂಸದ ಅಶೋಕ್ ಮಿತ್ತಲ್‌ಗೆ ಸೇರಿದ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಲವ್ಲಿ ಸಮೂಹ ಸಂಸ್ಥೆಗಳ ಮೇಲೆ ಇಡಿ ದಾಳಿ

ಜಾರಿ ನಿರ್ದೇಶನಾಲಯ (ಇಡಿ) ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಮತ್ತು ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ (ಎಲ್‌ಪಿಯು) ಸಂಸ್ಥಾಪಕ-ಚಾನ್ಸಲರ್ ಅಶೋಕ್ ಮಿತ್ತಲ್ ಅವರಿಗೆ ಸೇರಿದ ವಿವಿಧ ಆಸ್ತಿಗಳ ಮೇಲೆ ಬುಧವಾರ (ಏ.15) ದಾಳಿ ನಡೆಸಿದೆ ಎಂದು ವರದಿಯಾಗಿದೆ. ವಿದೇಶಿ...

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...