Homeಕರ್ನಾಟಕಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

ಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

- Advertisement -
- Advertisement -

ಶಿಕಾರಿಪುರ ತಾಲ್ಲೂಕಿನ ತೊಗರ್ಸಿ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಹಿರೇಕೆರೂರಿನ ವಕೀಲರಾದ ಜಯದೇವ ಬಿ.ಕೆರೂಡಿ ಅವರ ಮೇಲೆ ಹಲ್ಲೆ ನಡೆಸಿದ್ದ ಪೊಲೀಸ್‌ ಅಧಿಕಾರಿ ಗುರುರಾಜ ಮೈಲಾರಿಯವರನ್ನು ಪೊಲೀಸ್‌ ಇಲಾಖೆ ಅಮಾನತು ಮಾಡಿದೆ.

ಪೊಲೀಸರು ಹಲ್ಲೆ ಮಾಡಿದ್ದಲ್ಲದೆ ಸುಳ್ಳು ಪ್ರಕರಣ ದಾಖಲಿಸಿದ್ದಾರೆಂದು ಹಿರೇಕೆರೂರು ನ್ಯಾಯವಾದಿಗಳ ಸಂಘ ಇತ್ತೀಚೆಗೆ ಆಕ್ರೋಶ ವ್ಯಕ್ತಪಡಿಸಿತ್ತು.

ಮಾರ್ಚ್ 13ರಂದು ಮಲ್ಲಿಕಾರ್ಜುನ ದೇವರ ರಥೋತ್ಸವ ಪ್ರಯುಕ್ತ ದರ್ಶನಕ್ಕೆಂದು ಹಿರೇಕೆರೂರು ತಾಲ್ಲೂಕಿನ ಹಂಸಭಾವಿ ಗ್ರಾಮದ ವಕೀಲರಾದ ಜಯದೇವ ಬಿ. ಕೆರೂಡಿ ತೆರಳಿದ್ದರು. ದೇವಸ್ಥಾನದ ಪ್ರವೇಶ ದ್ವಾರದಲ್ಲಿ ಜನ ಸಂದಣಿ ಹೆಚ್ಚಾಗಿದ್ದು, ಸಣ್ಣ ಮಕ್ಕಳು, ಹೆಣ್ಣು ಮಕ್ಕಳು ದೇವರ ದರ್ಶನಕ್ಕೆಂದು ಹರಸಾಹಸ ಪಡುತ್ತಿದ್ದರು. ನೂಕುನುಗ್ಗಲನ್ನು ತಡೆಯುವಂತೆ ಪೊಲೀಸರಿಗೆ ಜಯದೇವ ಅವರು ಕೋರಿದಾಗ ಪೊಲೀಸರು ದರ್ಪ ತೋರಿದ್ದಲ್ಲದೆ ಹಲ್ಲೆ ನಡೆಸಿದ್ದರು. ದೇವಾಲಯದ ಸಿಸಿ ಕ್ಯಾಮೆರಾದಲ್ಲಿ ಘಟನೆ ಸೆರೆಯಾಗಿತ್ತು.

ಸರತಿ ಸಾಲನ್ನು ಸರಿಪಡಿಸಲು ಕೋರಿದಾಗ ಅಲ್ಲಿದ್ದ ಸಿಪಿಐ ಗುರುರಾಜ ಮೈಲಾರಿ ಹಾಗೂ ಸಿಬ್ಬಂದಿ ಅವ್ಯಾಚ್ಯವಾಗಿ ನಿಂದಿಸಿದ್ದು, ವಕೀಲಿ ವೃತ್ತಿಗೂ ಅವಹೇಳನ ಮಾಡಿದ್ದಾರೆ. ಈ ವೇಳೆ ಸಿಪಿಐ ಹಾಗೂ ಹೆಡ್‌ಕಾನ್‌ಸ್ಟೇಬಲ್‌ ಇಬ್ಬರೂ ವಕೀಲರಿಗೆ ಥಳಿಸಿದ್ದಾರೆ. ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ. ಠಾಣೆಗೆ ಕರೆದೊಯ್ದು ಅಲ್ಲಿಯೂ ಮೃಗೀಯ ವರ್ತನೆ ತೋರಿಸಿದ್ದಾರೆ. ಜಯದೇವ ಅವರು ಮಹಿಳಾ ಸಿಬ್ಬಂದಿ ಮೇಲೆ ಕೈ ಮಾಡಿದ್ದಾರೆ ಎಂದು ಸುಳ್ಳು ಆರೋಪ ಹೊರಿಸಿ ಪ್ರಕರಣ ದಾಖಲಿಸಿದ್ದಾರೆ. ಸದರಿ ವಕೀಲರಿಗೆ ಕಾನೂನು ಬಾಹಿರವಾಗಿ ಕೈಗೆ ಕೋಳ ತೊಡಿಸಿ ನ್ಯಾಯಾಲಯಕ್ಕೆ ಹಾಜರು ಮಾಡಿದ್ದಾರೆ ಎಂದು ವಕೀಲರು ಆಕ್ರೋಶ ಹೊರಹಾಕಿದ್ದರು. ಘಟನೆ ಹಿನ್ನೆಲೆಯಲ್ಲಿ ಕ್ರಮ ಜರುಗಿಸಿರುವ ದಾವಣಗೆರೆ ಪೂರ್ವ ವಲಯದ ಪೊಲೀಸ್‌ ಮಹಾನಿರೀಕ್ಷಕರು, ಶಿಕಾರಿಪುರ ನಗರ ಸಿಪಿಐ ಗುರುರಾ‌ಜ್‌ ಎನ್‌.ಮೈಲಾರಿ ಅವರನ್ನು ಅಮಾನತು ಮಾಡಿದ್ದಾರೆ.

ಅಮಾನತು ಆದೇಶದಲ್ಲಿ ಏನಿದೆ?

“ದೇವಾಲಯದಲ್ಲಿ ಸರತಿ ಸಾಲಿನಲ್ಲಿ ನಿಂತಿರುವ ಭಕ್ತರನ್ನು ಬಿಡುವಂತೆ ಜೋರು ದನಿಯಲ್ಲಿ ವಕೀಲ ಜಯದೇವ ಅವರು ಇಲಾಖೆಯ ಬಂದೋಬಸ್ತ್‌ನಲ್ಲಿದ್ದ ಸಿಬ್ಬಂದಿಯೊಂದಿಗೆ ವಾಗ್ವಾದ ಮಾಡುತ್ತಿರುವಾಗ ಸ್ಥಳದಲ್ಲಿಯೇ ಇದ್ದ ನೀವು ಪರಿಸ್ಥಿತಿಯನ್ನು ತಿಳಿಗೊಳಿಸಿ ಜನಸಂದಣಿಯನ್ನು ನಿಭಾಯಿಸದೆ ತೀವ್ರವಾಗಿ ಉದ್ವೇಗಕ್ಕೊಳಗಾಗಿದ್ದೀರಿ. ದೇವಸ್ಥಾನಕ್ಕೆ ಆಗಮಿಸಿದ್ದ ಸಾರ್ವಜನಿಕರ ಮುಂದೆಯೇ ಲಾಯರ್‌ ಜೊತೆಯಲ್ಲಿ ವಾಗ್ವಾದಕ್ಕಿಳಿದು, ನೂಕಾಟ ನಡೆಸಿ ಅವರೊಂದಿಗೆ ಅನುಚಿತವಾಗಿ ವರ್ತಿಸಿದ್ದೀರಿ. ಒಂದು ವೇಳೆ ಸದರಿಯವರು ಅನುಚಿತವಾಗಿ ವರ್ತಿಸಿದ್ದಕ್ಕೆ ಅವರ ವಿರುದ್ಧ ಸೂಕ್ತ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಜರುಗಿಸಬಹುದಿತ್ತು…”

“ನೀವು ಬಂದೋಬಸ್ತ್‌ ಕರ್ತವ್ಯದಲ್ಲಿದ್ದ ಇತರೆ ಸಿಬ್ಬಂದಿಗಳ ಸಹಾಯದೊಂದಿಗೆ ಅವರನ್ನು ಪಕ್ಕಕ್ಕೆ ಕರೆದೊಯ್ದು ಅವರ ಮೇಲೆ ಹಲ್ಲೆ ಮಾಡುವ ಮೂಲಕ, ಶಿಸ್ತಿನ ಇಲಾಖೆಯ ಸಿಪಿಐ ಹುದ್ದೆಯಂತಹ ಜವಾಬ್ದಾರಿ ಸ್ಥಾನದಲ್ಲಿದ್ದು, ಬೇಜವಾಬ್ದಾರಿತನದ ಮತ್ತು ಕರ್ತವ್ಯದಲ್ಲಿ ಘೋರ ನಿರ್ಲಕ್ಷ್ಯ ತೋರಿದ್ದಲ್ಲದೇ ಇಲಾಖೆಯ ಘನತೆಗೆ ಸಾರ್ವಜನಿಕವಾಗಿ ಮುಜುಗರವುಂಟಾಗುವಂತೆ ದುರ್ವರ್ತನೆ ತೋರಿದ್ದೀರಿ. ಇದು ದೇವಸ್ಥಾನದಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾಗಳ ದೃಶ್ಯಾವಳಿಗಳಿಂದ ಮತ್ತು ಶಿವಮೊಗ್ಗ ಪೊಲೀಸ್‌ ಅಧೀಕ್ಷಕರ ಉಲ್ಲೇಖಿತ ವರದಿಯ ಪರಿಶೀಲನೆಯಿಂದ ಮನವರಿಕೆಯಾಗಿದೆ. ಹೀಗಾಗಿ ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಮ್ಮನ್ನು ಸೇವೆಯಿಂದ ಅಮಾನತು ಮಾಡಲಾಗಿದೆ” ಎಂದು ಮಾರ್ಚ್ 20ರಂದು ಆದೇಶ ಹೊರಡಿಸಲಾಗಿದೆ.

“ಅಮಾನತಿನ ಅವಧಿಯಲ್ಲಿ ಮೊದಲನೇ ಆರು ತಿಂಗಳ ಅವಧಿಯಲ್ಲಿ ಕೆಸಿಎಸ್‌ಆರ್‌ 1958ರ ನಿಯಮ 96ರಂತೆ ಅರ್ಧ ಸಂಬಳ ನೀಡಲಾಗುತ್ತದೆ…. ಅಮಾನತಿ ಅವಧಿಯಲ್ಲಿ ಯಾವುದೇ ಇತರೆ ವ್ಯಾಪಾರದಲ್ಲಿ ತೊಡಗಿಸಿಕೊಂಡರೆ ಪ್ರತ್ಯೇಕವಾದ ಶಿಸ್ತಿನ ಕ್ರಮ ಜರುಗಿಸಲಾಗುವುದು…” ಎಂದು ಎಚ್ಚರಿಸಲಾಗಿದೆ.


ಇದನ್ನೂ ಓದಿರಿ: ಬಜರಂಗದಳ ಮುಖಂಡನಿಂದ ಕೊಲೆಯಾದ ದಲಿತ ವ್ಯಕ್ತಿ ದಿನೇಶ್‌ ಮನೆಗೆ ಸಿದ್ದರಾಮಯ್ಯ ಭೇಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...