Homeಕರ್ನಾಟಕಶಿಕಾರಿಪುರ ಬಂದ್; ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ ಬಿಎಸ್‌ವೈ ಬೆಂಬಲಿಗರು!

ಶಿಕಾರಿಪುರ ಬಂದ್; ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ ಬಿಎಸ್‌ವೈ ಬೆಂಬಲಿಗರು!

- Advertisement -
- Advertisement -

ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ಅಂಗೀಕರಿಸಿರುವುದಾಗಿ ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್ ಘೋಷಿಸಿದ್ದಾರೆ. ಕಳೆದ ಬುಧವಾರವಷ್ಟೇ ತನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ಬಿಎಸ್‌ವೈ ಹೇಳಿದ್ದರೂ, ಅವರ ಸ್ವಕ್ಷೇತ್ರವಾದ ಶಿವಮೊಗ್ಗದ ಶಿಕಾರಿಪುರದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಶಿಕಾರಿಪುರ ಬಾಗಶಃ ಬಂದ್ ಮಾಡಲಾಗಿದ್ದು, ಬೀದಿಗಿಳಿದಿರುವ ಬಿಎಸ್‌ವೈ ಬೆಂಬಲಿಗರು ಹೈಕಮಾಂಡ್ ಸೇರಿದಂತೆ ಪ್ರಧಾನಿ ಮೋದಿಗೆ ಧಿಕ್ಕಾರ ಕೂಗಿದ್ದಾರೆ.

ಸೋಮವಾರ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ 2 ವರ್ಷಗಳ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಊಟದ ನಂತರ ನಾನು ರಾಜ್ಯಪಾಲರನ್ನು ಭೇಟಿಯಾಗುತ್ತೇನೆ, ರಾಜೀನಾಮೆ ಪತ್ರ ಸಲ್ಲಿಸುತ್ತೇವೆ” ಎಂದು ಘೋಷಿಸಿದ್ದರು.

ಇದನ್ನೂ ಓದಿ: ಯಡಿಯೂರಪ್ಪ ರಾಜೀನಾಮೆ; ಮುಂದಿನ ಮುಖ್ಯಮಂತ್ರಿ ಹೆಸರಿನ ಊಹೆಗಿಂತ ಕರ್ನಾಟಕದ ಸ್ಥಿತಿ ಚರ್ಚೆಯಾಗಬೇಕಿದೆ!

ಕಣ್ಣೀರಿಡುತ್ತಾ ಮಾತನಾಡಿದ ಅವರು, “75 ವರ್ಷ ದಾಟಿದ ಯಡಿಯೂರಪ್ಪನವರನ್ನು ಮತ್ತೆ ಎರಡು ವರ್ಷ ಮುಖ್ಯಮಂತ್ರಿ ಮಾಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ, ಅಮಿತ್‌ ಶಾರವರಿಗೆ, ಜೆ.ಪಿ ನಡ್ಡಾರವರಿಗೆ ಧನ್ಯವಾದ ತಿಳಿಸುತ್ತೇನೆ, ಅವರಿಗೆ ನಾನು ಋಣಿಯಾಗಿದ್ದೇನೆ. ಮುಂದೆಯೇ ಪಕ್ಷ ಅಧಿಕಾರಕ್ಕೆ ಬರಬೇಕು ಎಂಬ ಅವರ ನಿರೀಕ್ಷೆಯಂತೆ ಕೆಲಸ ಮಾಡೋಣ. ನಾನು ದುಃಖದಿಂದ ರಾಜೀನಾಮೆ ನೀಡುತ್ತಿಲ್ಲ ಬದಲಿಗೆ ಸಂತೋಷದಿಂದ ರಾಜೀನಾಮೆ ನೀಡುತ್ತಿದ್ದೇನೆ” ಎಂದಿದ್ದರು.

ನಂತರ ಟ್ವೀಟ್ ಮಾಡಿದ್ದ ಅವರು, “ನಾನು ಇಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದೇನೆ. ರಾಜ್ಯದ ಜನರ ಬೆಂಬಲದಿಂದ, ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಗೃಹ ಸಚಿವ ಅಮಿತ್‌ ಶಾ ಅವರ ಸಹಕಾರದಿಂದ, ಎಲ್ಲಾ ಶಾಸಕರು, ಪಕ್ಷದ ನೆರವಿನಿಂದ 2 ವರ್ಷ ಅಭಿವೃದ್ಧಿ ಪರ ಆಡಳಿತ ನೀಡಲು ಶಕ್ತಿಮೀರಿ ಪ್ರಯತ್ನ ನಡೆಸಿದ ತೃಪ್ತಿ ನನಗಿದೆ” ಎಂದು ಹೇಳಿದ್ದರು.

ಅದರಂತೆ ಅವರು ರಾಜೀನಾಮೆಯನ್ನೂ ಕೂಡಾ ನೀಡಿದ್ದರು. ಕಳೆದೊಂದು ವಾರದಿಂದ ರಾಜೀನಾಮೆ ಚರ್ಚೆ ಗರಿಗೆದರುತ್ತಿದ್ದಾಗಲೇ ಅವರು, “ರಾಜಕೀಯ ಬೆಳವಣಿಗೆಗಳನ್ನಾಧರಿಸಿ ನನ್ನ ಪರವಾಗಿ ಹೇಳಿಕೆ, ಪ್ರತಿಭಟನೆಗಳಿಗೆ ಯಾರೂ ಮುಂದಾಗಬಾರದೆಂದು ವಿನಂತಿಸುತ್ತೇನೆ. ಅಭಿಮಾನ ಶಿಸ್ತಿನ ವ್ಯಾಪ್ತಿ ಮೀರಬಾರದು. ಪಕ್ಷ ನನಗೆ ಮಾತೃ ಸಮಾನ,ಅದರ ಗೌರವಕ್ಕೆ ಚ್ಯುತಿ ತರುವ ಘಟನೆಗಳು ನನಗೆ ಅತೀವ ನೋವು ತರುತ್ತದೆ. ನಿಜವಾದ ಹಿತೈಷಿಗಳು ಈ ನಿಟ್ಟಿನಲ್ಲಿ ನನ್ನ ಭಾವನೆಗೆ ಸ್ಪಂದಿಸುತ್ತಾರೆಂದು ನಂಬಿರುವೆ” ಎಂದು ಹೇಳಿದ್ದರು.

ಇದನ್ನೂ ಓದಿ: ಒಬ್ಬ ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ: ಸಿಎಂ ಬದಲಾವಣೆ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ಆದರೆ ಅವರ ಹೇಳಿಕೆಯ ಹೊರತಾಗಿಯೂ ಅವರ ಸ್ವಕ್ಷೇತ್ರವಾದ ಶಿಕಾರಿಪುರ ಇಂದು ಭಾಗಶಃ ಬಂದ್ ಆಗಿದೆ. ಅವರ ಬೆಂಗಲಿಗರು ರಸ್ತೆಯಲ್ಲಿ ನೆರೆದು ಬಿಜೆಪಿ ಹೈಕಮಾಂಡ್, ಪ್ರಧಾನಿ ಮೋದಿ ಹಾಗೂ ‘ಬಿಎಸ್‌ವೈಯ ಬೆನ್ನಿಗೆ ಚೂರಿ ಹಾಕಿದವರಿಗೆ’ ಧಿಕ್ಕಾರ ಎಂದು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರ ರಾಜೀನಾಮೆ ಶಿಕಾರಿಪುರಕ್ಕೆ ಮಾತ್ರವಲ್ಲ, ಇಡೀ ರಾಜ್ಯಕ್ಕೆ ಮಾಡಿದ ಅನ್ಯಾಯ ಎಂದು ಬೆಂಬಲಿಗರು ಪ್ರತಿಪಾದಿಸಿದ್ದಾರೆ.

ಇಷ್ಟೇ ಅಲ್ಲದೆ ರಾಜ್ಯದಾದ್ಯಂತ ಬಿಎಸ್‌ವೈ ಅವರ ಬೆಂಬಲಿಗರು ರಾಜೀನಾಮೆಗೆ ಆಕ್ರೋಶಗೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ದ ಕಿಡಿಕಾರುತ್ತಿದ್ದಾರೆ. ಅಲ್ಲದೆ ನಿನ್ನೆಯಷ್ಟೇ ಲಿಂಗಾಯತ ಸಮುದಾಯದ ಸ್ವಾಮೀಜಿಗಳು ಯಡಿಯೂರಪ್ಪ ಅವರನ್ನು ಬೆಂಬಲಿಸಿ ಸಭೆಯನ್ನು ನಡೆಸಿ, ಅವರ ರಾಜೀನಾಮೆ ಪಡೆಯಬಾರದು ಎಂದು ಒತ್ತಾಯಿಸಿದ್ದರು. ಅದಾಗ್ಯೂ ಯಡಿಯೂಪಪ್ಪ ಅವರ ರಾಜೀನಾಮೆ ಪಡೆಯಲಾಗಿದೆ.

ರಾಜೀನಾಮೆ ನಂತರ ಬಿಎಸ್‌ವೈ ಅವರಿಗೆ ಯಾವುದಾದರೂ ರಾಜ್ಯದ ರಾಜ್ಯಪಾಲ ಹುದ್ದೆಯನ್ನು ನೀಡುವುದಾಗಿ ಹೇಳಲಾಗಿತ್ತು. ಆದರೆ ಅವರು ತಾನೂ ರಾಜ್ಯದಲ್ಲೇ ಇರುತ್ತೇನೆ, ತನಗೆ ರಾಜ್ಯಪಾಲ ಹುದ್ದೆ ಬೇಡ ಎಂದು ಹೇಳಿದ್ದಾರೆಂದು ವರದಿಯಾಗಿದೆ.

ಇದನ್ನೂ ಓದಿ: ಬಿಎಸ್‌ವೈ ರಾಜೀನಾಮೆ: ಮುಂದಿನ ಮುಖ್ಯಮಂತ್ರಿ ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಜಾಪ್ರಭುತ್ವದಲ್ಲಿ ಕೂಡಾ,
    1. ಪಕ್ಷದ ನಾಯಕನನ್ನು ಆಯ್ಕೆಯಾದ ವಿಧಾನಸಭಾ ಸದಸ್ಯರ ಬದಲು, ಡಿಕ್ ಮತ್ತು ಹ್ಯಾರಿ ಆಯ್ಕೆ ಮಾಡುತ್ತಾರೆ ಎಂದು ನನಗೆ ಗೊತ್ತಿರಲಿಲ್ಲ.
    2. ವಿಧಾನಸಭಾ ಸದಸ್ಯ ತನ್ನನ್ನು ಆಯ್ಕೆ ಮಾಡಿದ ಜನರಿಗಲ್ಲದೆ, ಡಿಕ್ ಮತ್ತು ಹ್ಯಾರಿಗೆ ಋಣಿಯಾಗಿರಬೇಕು ಎಂದು ಗೊತ್ತಿರಲಿಲ್ಲ.
    3. ಒಂದು ಪಕ್ಷದ ನಾಯಕನನ್ನು ಜೋಕರ್ ತರಹ ಬಳಸಬಹುದೆಂದು.

    ಭಾರತದ ಹಿಂದೂ ಧರ್ಮದಂತೆ, ಭಾರತದ ಪ್ರಜಾಪ್ರಭುತ್ವ, ಭೂಮಿಕೆಯಲ್ಲಿ ವಿಶಾಲ ಆದರೆ, ವಾಸ್ತವವಾಗಿ ನಪುಂಸಕ!

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...