Homeಕರ್ನಾಟಕ'ಶಿಕ್ಷಾ ಕೊಪೈಲಟ್' | ಸರ್ಕಾರಿ ಶಾಲಾ ಶಿಕ್ಷಕರಿಗೆ ನೆರವಾಗುವ AI ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ

‘ಶಿಕ್ಷಾ ಕೊಪೈಲಟ್’ | ಸರ್ಕಾರಿ ಶಾಲಾ ಶಿಕ್ಷಕರಿಗೆ ನೆರವಾಗುವ AI ಉದ್ಘಾಟಿಸಿದ ಸಚಿವ ಮಧು ಬಂಗಾರಪ್ಪ

- Advertisement -
- Advertisement -

ಶಿಕ್ಷಕರಿಗೆ ಬೋಧನೆಯಲ್ಲಿ ಸಹಾಯ ಮಾಡುವ ‘ಶಿಕ್ಷಾ ಕೊಪೈಲಟ್(Shiksha Copilot)’ AI ಚಾಲಿತ ಡಿಜಿಟಲ್ ಸಹಾಯಕವನ್ನು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶುಕ್ರವಾರ ಉದ್ಘಾಟಿಸಿದ್ದಾರೆ. ಈ AI ಕಲಿಕೆಯನ್ನು ಸುಧಾರಿಸಲು ಮತ್ತು ಸಮಗ್ರ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷಕರಿಗೆ ಸಹಾಯ ಮಾಡುವ ಗುರಿಯನ್ನು ಹೊಂದಿದೆ.

‘ಶಿಕ್ಷಾ ಕೊಪೈಲಟ್’ AI ಚಾಲಿತ ಡಿಜಿಟಲ್ ಸಹಾಯಕವು ಸಂಶೋಧನಾ ಯೋಜನೆಯಾಗಿದ್ದು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ ನಡುವಿನ ಸಹಯೋಗವಾಗಿದೆ. ಈ ಬಗ್ಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ‘ಸರ್ಕಾರಿ ಶಾಲೆಗಳು ಬೋರ್ಡ್ ಪರೀಕ್ಷೆಗಳಲ್ಲಿ ಕಳಪೆ ಪ್ರದರ್ಶನ ನೀಡುತ್ತಿವೆ ಎಂದು ಟೀಕಿಸಲಾಗುತ್ತದೆ. ಫಲಿತಾಂಶಗಳನ್ನು ಸುಧಾರಿಸಲು, ಶಿಕ್ಷಾ ಕೊಪೈಲಟ್‌ನಂತಹ ಉಪಕ್ರಮಗಳನ್ನು ತರಲಾಗಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಪಾಠ ಯೋಜನೆ ಮತ್ತು ಸಂಪನ್ಮೂಲ ಉತ್ಪಾದನೆಯನ್ನು ಸ್ವಯಂ ಚಾಲಿತವಾಗಿ ನೀಡುವ ಮೂಲಕ, ಶಿಕ್ಷಕರು ತಮ್ಮ ವಿದ್ಯಾರ್ಥಿಗಳ ವೈಯಕ್ತಿಕ ಕಲಿಕೆಯ ಅಗತ್ಯಗಳ ಮೇಲೆ ಕೇಂದ್ರೀಕರಿಸಲು ಹೆಚ್ಚಿನ ಸಮಯವನ್ನು ಕಳೆಯಬಹುದು. ಈ AI ಚಾಲಿತ ವಿಧಾನವು ಕರ್ನಾಟಕದ ಸರ್ಕಾರಿ ಶಾಲಾ ಶಿಕ್ಷಕರು ತಮ್ಮ ತರಗತಿಗಳನ್ನು ನಿರ್ವಹಿಸುವಲ್ಲಿ ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಪರಿಹರಿಸುವಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿದೆ” ಎಂದು ಹೇಳಿದ್ದಾರೆ.

‘ಶಿಕ್ಷಾ ಕೊಪೈಲಟ್’ ಎಂದರೇನು? 

ಇದು ಚಟುವಟಿಕೆಗಳು, ವೀಡಿಯೊಗಳು ಮತ್ತು ರಸಪ್ರಶ್ನೆಗಳು ಸೇರಿದಂತೆ ಪಾಠದ ಯೋಜನೆಗಳನ್ನು ರೂಪಿಸುವ ಜನರೇಟಿವ್ AI ಡಿಜಿಟಲ್ ಅಸಿಸ್ಟೆಂಟ್  ಆಗಿದ್ದು, ನಿಮಿಷಗಳಲ್ಲಿ ಸ್ಥಳೀಯ ಪಠ್ಯಕ್ರಮದಲ್ಲಿ ಆಧಾರಿತವಾದ ಸಂವಾದಾತ್ಮಕ ಕಲಿಕೆಯ ಅನುಭವಗಳನ್ನು ಸೃಷ್ಟಿಸುತ್ತದೆ.

ಈ ಯೋಜನೆಯು ಆರಂಭದಲ್ಲಿ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿನ ಎಲ್ಲಾ ಶಿಕ್ಷಣ ಜಿಲ್ಲೆಗಳಾದ್ಯಂತ ಸರ್ಕಾರಿ ಶಾಲೆಗಳ 1,000 ಶಿಕ್ಷಕರನ್ನು ಒಳಗೊಳ್ಳುತ್ತದೆ. ಮುಂದಿನ ದಿನಗಳಲ್ಲಿ ಈ ಯೋಜನೆಯು ರಾಜ್ಯಾದ್ಯಂತ ಹೆಚ್ಚಿನ ಶಿಕ್ಷಕರು ಮತ್ತು ಶಾಲೆಗಳನ್ನು ತಲುಪಲಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಪ್ರಸ್ತುತ ‘ಶಿಕ್ಷಾ ಕೊಪೈಲಟ್’ 5 ರಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಲಭ್ಯವಿದೆ. ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಗಣಿತ, ವಿಜ್ಞಾನ, ಇಂಗ್ಲಿಷ್ ಮತ್ತು ಸಮಾಜ ವಿಜ್ಞಾನದಂತಹ ವಿಷಯಗಳನ್ನು ಇದು ಒಳಗೊಂಡಿದೆ.

ಇದನ್ನೂ ಓದಿ: ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ಛತ್ತೀಸ್‌ಗಢ | ‘ಹಸ್‌ದೇವ್ ಅರಣ್ಯ’ದಲ್ಲಿ ಮರಗಳನ್ನು ಕಡಿಯಲು ಮುಂದಾದ ಸರ್ಕಾರ : ಪೊಲೀಸರು-ಆದಿವಾಸಿಗಳ ನಡುವೆ ಸಂಘರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ BJP ಗೆಲುವು SIR ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...