Homeಮುಖಪುಟಸಾಹಿತ್ಯ, ಸಾಂಸ್ಕೃತಿಕ ಹೆಗ್ಗುರುತಾಗಿದ್ದ ಶಿವಮೊಗ್ಗ ಕರ್ನಾಟಕ ಸಂಘದ ಮಾನ ಬೀದಿಗೆ ಬಂದಿದ್ದೇಕೆ!

ಸಾಹಿತ್ಯ, ಸಾಂಸ್ಕೃತಿಕ ಹೆಗ್ಗುರುತಾಗಿದ್ದ ಶಿವಮೊಗ್ಗ ಕರ್ನಾಟಕ ಸಂಘದ ಮಾನ ಬೀದಿಗೆ ಬಂದಿದ್ದೇಕೆ!

ಕರ್ನಾಟಕ ಸಂಘದ ನಿರಂತರ ಕಾರ್ಯಕ್ರಮಗಳ ಮೂಲಕ ಶಿವಮೊಗ್ಗೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಗಟ್ಟಿಯಾಗಿ ಬೆಳದಿರುವುದಂತೂ ಸತ್ಯ. ಶಿವಮೊಗ್ಗೆಯ ಬಹುಪಾಲು ರಂಗತಂಡಗಳಿಗೆ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಇದು ಆಸರೆಯಾಗಿತ್ತು.

- Advertisement -
- Advertisement -

ರಾಜ್ಯದಾದ್ಯಂತ 65ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಿಂದ ಅಚರಿಸಲಾಗುತ್ತಿದೆ. ಕರೋನಾ ನಡುವೆಯೂ ಎಲ್ಲೆಡೆ ಕನ್ನಡದ ವಾತಾವರಣ ಸಂಭ್ರಮಿಸುತ್ತಿದೆ. ಆದರೆ, ಕನ್ನಡ ನುಡಿ ಸೇವೆ. ಸಾಂಸ್ಕೃತಿಕ ಹೆಗ್ಗಳಿಕೆಯಾಗಿ 90 ವರ್ಷಗಳ ಇತಿಹಾಸವಿರುವ ನಾಡಿನ ಪ್ರತಿಷ್ಟಿತ ಶಿವಮೊಗ್ಗೆಯ ಕರ್ನಾಟಕ ಸಂಘದ ಘನತೆ ಈಗ ಆಡಳಿತ ಮಂಡಳಿಯೊಳಗಿನ ಕಿತ್ತಾಟದಿಂದ ಬೀದಿಗೆ ಬಂದಿದೆ.

ನಾಡಿನ ಸಾಹಿತ್ಯ, ಸಾಂಸ್ಕೃತಿಕ ವಲಯಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅನನ್ಯ. ಸಾಮಾಜಿಕ ಚಳವಳಿಯ ಜೊತೆಗೆ ಸಾಹಿತ್ಯ ಚಳವಳಿಯ ಧ್ಯೋತಕ ಈ ಜಿಲ್ಲೆ. ಈ ಹಿನ್ನಲೆಯಲ್ಲೇ ನಾಡಿನ ಆಸ್ತಿಯೆಂದೆ ಕರೆಯಲ್ಪಡುವ ಮಾಸ್ತಿ ವೆಂಕಟೇಶ ಅಯ್ಯಂಗಾರ್, ದ. ರಾ. ಬೇಂದ್ರೆಯವರ ಸಲಹೆಯಂತೆ 8 ನೇ ನವೆಂಬರ್ 1930 ರಲ್ಲಿ ಶಿವಮೊಗ್ಗದಲ್ಲಿ ಕರ್ನಾಟಕ ಸಂಘವನ್ನು ಸ್ಥಾಪಿಸಲಾಯಿತು. ಇದೇ ನವೆಂಬರ್ 08 ಕ್ಕೆ ಬರೋಬ್ಬರಿ 90 ವರ್ಷಗಳು ತುಂಬಲಿದ್ದು, ನಾಡಿನ ಗಮನ ಸೆಳೆಯುವಂತೆ ಶತಮಾನೋತ್ಸವದ ಸಡಗರ, ಸಂಭ್ರಮ ಮನೆ ಮಾಡಬೇಕಿತ್ತು. ಆದರೀಗ ಇದೇ ಕರ್ನಾಟಕ ಸಂಘ, ಸ್ವಾರ್ಥ, ಜಾತಿ ಪಿತೂರಿಗಳಿಗೆ ತುತ್ತಾಗಿ ಸೂತಕದ ಛಾಯೆ ಆವರಿಸಿದೆ.

1936 ರವರೆಗೆ ಬಾಡಿಗೆ ಕಟ್ಟಡಗಳಲ್ಲಿ ನುಡಿ ಸೇವೆಯ ಕಾರ್ಯನಿರ್ವಹಿಸುತ್ತಿದ್ದ ಈ ಕರ್ನಾಟಕ ಸಂಘಕ್ಕೆ ಒಂದು ಸುಸಜ್ಜಿತವಾದ ಕಟ್ಟಡವನ್ನು ಒದಗಿಸಿಕೊಟ್ಟವರು ಹಸೂಡಿ ವೆಂಕಟ ಶಾಸ್ತ್ರಿಯವರು.

ಅಂದಿನ ಪುರಸಭೆ ಒದಗಿಸಿದ ಜಾಗದಲ್ಲಿ, 40 ರ ದಶಕದಲ್ಲಿ, 30 ಸಾವಿರ ರೂಪಾಯಿಗಳನ್ನು ವ್ಯಯಿಸಿ, ಈ ಕಟ್ಟಡವನ್ನು ಕಟ್ಟಿಸಿಕೊಟ್ಟಿದ್ದರು. ಈ ಕಟ್ಟಡಕ್ಕೆ ಬಿ. ಎಂ. ಶ್ರೀಕಂಠಯ್ಯರವರು 1942 ರಲ್ಲಿ ಶಿಲಾನ್ಯಾಸ ಮಾಡಿದ್ದರು. 11 ನೇ ಡಿಸೆಂಬರ್ 1943 ರಂದು ಅಂದಿನ ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ಶ್ರೀ ಜಯಚಾಮರಾಜ ಒಡೆಯರ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ್ದರು.

ದ. ರಾ. ಬೇಂದ್ರೆಯವರು ಸಲಹೆಯಂತೆ, ಈ ಕಟ್ಟಡಕ್ಕೆ ದಾನಿಗಳಾದ ‘ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನ’ ಎಂದು ಹೆಸರಿಡಲಾಗಿದ್ದರೂ, ಕರ್ನಾಟಕ ಸಂಘ ಎಂದೇ ಜನಜನಿತ.

ಈ ಕರ್ನಾಟಕ ಸಂಘಕ್ಕೆ 1942 ರಲ್ಲಿ ದ. ರಾ. ಬೇಂದ್ರೆಯವರ ಅಧ್ಯಕ್ಷತೆಯಲ್ಲಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಮುಂದೆ 1979 ರಲ್ಲಿ ಡಾ. ಎಸ್. ವಿ. ರಂಗಣ್ಣರವರ ಅಧ್ಯಕ್ಷತೆಯಲ್ಲಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ 1989 ರಲ್ಲಿ ಡಾ. ಎಸ್. ತಿಪ್ಪೇರುದ್ರ ಸ್ವಾಮಿಯವರ ಅಧ್ಯಕ್ಷತೆಯಲ್ಲಿನ ಮೂರನೇ ಶಿವಮೊಗ್ಗ ಜಿಲ್ಲಾ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ ಹೆಗ್ಗಳಿಕೆಯೂ ಇದೆ.

ಕರ್ನಾಟಕ ಸಂಘದ ನಿರಂತರ ಕಾರ್ಯಕ್ರಮಗಳ ಮೂಲಕ ಶಿವಮೊಗ್ಗೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಗಟ್ಟಿಯಾಗಿ ಬೆಳದಿರುವುದಂತೂ ಸತ್ಯ. ಶಿವಮೊಗ್ಗೆಯ ಬಹುಪಾಲು ರಂಗತಂಡಗಳಿಗೆ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಈ ಕರ್ನಾಟಕ ಸಂಘವೇ ಆಸರೆಯಾಗಿತ್ತು.

ಈ ನಾಡಿನ ಸಾಹಿತ್ಯ ದಿಗ್ಗಜರ, ಉದಯೋನ್ಮುಖ ಕವಿ, ಕತೆಗಾರರ ಗ್ರಂಥ ಪ್ರಕಟಣೆ, ಗೌರವ ಸದಸ್ಯತ್ವ ಪ್ರದಾನ, ಪುಸ್ತಕ ಬಹುಮಾನ, ತಿಂಗಳ ಅತಿಥಿ, ನನ್ನ ಪ್ರೀತಿಯ ಪುಸ್ತಕ, ಸುಸಜ್ಜಿತ ಗ್ರಂಥಾಲಯ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಾ, ಕರ್ನಾಟಕ ಸಂಘವು ಇಡೀ ಮಲೆನಾಡು ಅಷ್ಟೇ ಅಲ್ಲ, ರಾಜ್ಯದಲ್ಲಿಯೇ ವಿಶಿಷ್ಟ ಸ್ಥಾನವನ್ನು ಪಡೆದಿದೆ ಎಂದರೆ, ಖಂಡಿತಾ ಉತ್ಪ್ರೇಕ್ಷೆಯಲ್ಲ.

ಇಂತಹ ಕನ್ನಡ ಸೇವೆಯ ಘನತೆಯಾಗಿದ್ದ ಕರ್ನಾಟಕ ಸಂಘ ಇಂದು ವಿವಾದಕ್ಕೆ ತುತ್ತಾಗಿ ಹಿರಿಯ ಚೇತನಗಳ ಆಶಯಗಳನ್ನು ಮಣ್ಣುಪಾಲು ಮಾಡುವತ್ತಾ ಸಾಗಿದೆ. ಕರ್ನಾಟಕ ಸಂಘದ ಆಡಳಿತ ಹಿಡಿತಕ್ಕೆ ನಡೆದ ಹುನ್ನಾರ ದ ಫಲವಾಗಿ ಕರ್ನಾಟಕ ಸಂಘದ ಕಾರ್ಯಕಾರಿ ಸಮಿತಿಯಲ್ಲೇ ಭುಗಿಲೆದ್ದ ಅಸಮಾಧಾನ ಅಧ್ಯಕ್ಷರೂ ಸೇರಿದಂತೆ ಮೂವರು ಪದಾಧಿಕಾರಿಗಳು ಹಾಗೂ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಮೂರು ಸಿಬ್ಬಂದಿಯ ರಾಜೀನಾಮೆಯೊಂದಿಗೆ ಒಳಗೊಳಗೆ ಕುದಿಯುತ್ತಿದ್ದ ಹಗೆ ಸ್ಫೋಟಗೊಂಡಿದೆ.

ಹಿರಿಯ ಸಜ್ಜನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಕೆ.ಓಂಕಾರಪ್ಪ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದ ಸಮಿತಿ ನಿಜಕ್ಕೂ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲೇ, ನಡೆದಿರುವ ಈ ಅನಿರೀಕ್ಷಿತ ಬೆಳವಣಿಗೆ ಕರ್ನಾಟಕ ಸಂಘದ ಅಭಿವೃದ್ಧಿಗೆ ಇದುವರೆಗೆ ಬೆವರು ಹರಿಸಿದವರಿಗೆ ಬೇಸರ ಉಂಟು ಮಾಡಿದೆ. ಕರ್ನಾಟಕ ಸಂಘ ಉಪಾಧ್ಯಕ್ಷ ಉದಯಶಂಕರ ಶಾಸ್ತ್ರಿ ಮತ್ತವರ ಪಟಾಲಂನ ಹಿತಾಸಕ್ತಿ ಈಗ ಕರ್ನಾಟಕ ಸಂಘವನ್ನು ಮನಸ್ಸೋಃಇಚ್ಛೆ ಆಡಳಿತಕ್ಕೆ ಅಡ್ಡೆಯನ್ನಾಗಿಸಿಕೊಳ್ಳುವ ಸಂಚು ನಡೆಸಿರುವುದು ಸಾಹಿತ್ಯ ವಲಯದ ಅಸಮಾಧಾನಕ್ಕೆ ಕಾರಣವಾಗಿದೆ.

ಮಳೆಗಾಲದ ಸಂದರ್ಭದಲ್ಲಿ ಸೋರುತ್ತಿದ್ದ ಕರ್ನಾಟಕ ಸಂಘದ ಮೇಲ್ಚಾವಣಿಯ ನವೀಕರಣ ಕಾಮಗಾರಿಯೇ ಸಮಿತಿಯೊಳಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗಲು ಕಾರಣ ಎನ್ನಲಾಗುತ್ತಿದೆ. ಕರ್ನಾಟಕ ಸಂಘದ ಮೇಲ್ಚಾವಣಿ ಅಷ್ಟೇ ಸೋರುತ್ತಿಲ್ಲ. ಬದಲಾಗಿ ಪಟ್ಟಭದ್ರ ಹಿತಾಸಕ್ತಿಗಳ ಮನಸ್ಸೂ ಕೂಡಾ ಸೋರಲಾರಂಭಿಸಿರುವುದು ನಿಜಕ್ಕೂ ಕೂಡಾ ವಿಪರ್ಯಾಸದ ಸಂಗತಿ. ಈ ನವೀಕರಣ ಕಾಮಗಾರಿಯಲ್ಲಿ ಮಿತಿಮೀರಿದ ಹಣದ ಅಪವ್ಯಯ ತಡೆಗಟ್ಟಲು ಅಧ್ಯಕ್ಷ ಪ್ರೊ.ಕೆ.ಓಂಕಾರಪ್ಪ, ಖಚಾಂಚಿ ಕೆ.ಜಿ.ವೆಂಕಟೇಶ್, ಗೌರವ ಕಾರ್ಯದರ್ಶಿ ಪ್ರೊ.ಎಚ್.ಎಸ್.ನಾಗಭೂಷಣ ಮುಂದಾಗಿದ್ದು, ಇದು ಉಪಾಧ್ಯಕ್ಷ ಉದಯಶಂಕರ ಶಾಸ್ತ್ರಿ ಮತ್ತವರ ಟೀಮ್ ಗೆ ಅಪಥ್ಯವಾಗಿತ್ತು.

ಆರ್ಥಿಕ ಶಿಸ್ತನ್ನು ಸಹಿಸದ ಗುಂಪು ಸಿಬ್ಬಂದಿ ಹಾಗೂ ಪದಾಧಿಕಾರಿಗಳ ನಡುವೆ ವೈಮನಸ್ಸು ಬೆಳೆಯುವಂತೆ ನೋಡಿಕೊಂಡಿತಲ್ಲದೆ , ಪದಾಧಿಕಾರಿಗಳ ವಿರುದ್ಧವೆ ಸಿಬ್ಬಂದಿಗಳ ಮೂಲಕ ಜಾತಿ ನಿಂದನೆ ದೂರು ದಾಖಲಿಸುವ ಷಡ್ಯಂತ್ರ ವೂ ನಡೆದು ಜಾತ್ಯಾತೀತವಾಗಿ ಸಾಹಿತ್ಯಿಕ ಕಾರ್ಯಕ್ರಮ ರೂಪಿಸುತ್ತಿದ್ದ ಸಂಸ್ಥೆಯೊಳಗೆ ಜಾತಿಯ ವಿಷ ಬೀಜ ಬಿತ್ತಲಾಯಿತು. ಅಷ್ಟೇ ಅಲ್ಲ, ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಯೋರ್ವರ ಬಗ್ಗೆ ಕೂಡಾ ಅನಗತ್ಯವಾಗಿ ನಿಂದನೆಯ ಪ್ರಸ್ತಾಪ ಮಾಡಲಾಗಿತ್ತು. ಆ ಸಿಬ್ಬಂದಿಯನ್ನು ಸಂಬಂಧ ಇಲ್ಲದಿದ್ದರೂ ಸಹ ಪ್ರಸ್ತಾಪಿಸಲಾಗಿತ್ತು. ಜೊತೆಗೆ ಹಿರಿಯ ಸಿಬ್ಬಂದಿಗಳ ಬಗ್ಗೆ ಅವಾಚ್ಯವಾಗಿ ಬರೆಯಲಾಗಿತ್ತು. ಈ ಎಲ್ಲಾ ಸಂಗತಿಗಳನ್ನು ಸಹ ಪೂರ್ವಾಗ್ರಹ ಪೀಡಿತವಾಗಿಯೇ ಬರೆದಿದ್ದು, ಇದಕ್ಕೆ ಸಂಘದ ಪದಾಧಿಕಾರಿಯೋರ್ವರ ಚಿತಾವಣೆ ಕೂಡಾ ಇದೆ ಎಂದೇ ಹೇಳಲಾಗಿದೆ.

ಕರ್ನಾಟಕ ಸಂಘದ ಯಾವ ಚಟುವಟಿಕೆಯಲ್ಲೂ ಭಾಗವಹಿಸದ, ನವೀಕರಣ ಸಂದರ್ಭದಲ್ಲೂ ಮೌನವಾಗಿದ್ದ ಸಂಘದ ಉಪಾಧ್ಯಕ್ಷ ಉದಯಶಂಕರ ಶಾಸ್ತ್ರಿ ಏಕಾಏಕಿ ಸಕ್ರಿಯರಾಗಿದ್ದು, ತಮ್ಮ ಪೂರ್ವಿಕರಾದ ಹಸೊಡಿ ವೆಂಕಟಶಾಸ್ತ್ರಿ ಅವರು ಕರ್ನಾಟಕ ಸಂಘ ಭವನ ನಿರ‍್ಮಾಣಕ್ಕೆ ಕಾರಣ ಕರ್ತರು ಎಂಬುದನ್ನೆ ಮುಂದಿಟ್ಟುಕೊಂಡು ಸಂಘದ ಆಡಳಿತದಲ್ಲಿ ಸರ್ವಾಧಿಕಾರಿಧೋರಣೆ ಮೆರೆಯುವ ಆ ಮೂಲಕ ಸಂಘವನ್ನು ತಮ್ಮದೇ ಗುಂಪಿನ ಹಿಡಿತದಲ್ಲಿಟ್ಟುಕೊಳ್ಳುವ ಪ್ರಯತ್ನಗಳು ಮುಂದುವರೆದಿವೆ ಎಂಬ ಆರೋಪಗಳು ಸಾಹಿತ್ಯ ವಲಯದಲ್ಲೇ ಕೇಳಿ ಬರುತ್ತಿದೆ.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉಪಾಧ್ಯಕ್ಷರಾಗಿರುವ ಉದಯಶಂಕರ ಶಾಸ್ತ್ರಿ ಅವರ ಸರ್ವಾಧಿಕಾರಿ ಧೋರಣೆ ಪ್ರಶ್ನಿಸಿದ್ದರಿಂದಲೇ ಸಂಘದ ಗೌರವ ಕಾರ್ಯದರ್ಶಿ ಡಾ. ಹೆಚ್. ಎಸ್ ನಾಗಭೂಷಣ. ಖಜಾಂಚಿ ಕೆ.ಜಿ ವೆಂಕಟೇಶ್ ಹಾಗೂ ಮೂವರು ಸಿಬ್ಬಂದಿಗಳ ರಾಜೀನಾಮೆಯೊಂದಿಗೆ ಒಂದು ಹಂತ ತಲುಪಿದ್ದು, ಇದನ್ನೆ ಬಯಸಿದ್ದ ಸಾಹಿತ್ಯ, ಸಂಸ್ಕೃತಿಯ ಗಂಧಗಾಳಿ ಗೊತ್ತಿಲ್ಲದ ಉದಯಶಂಕರಶಾಸ್ತ್ರಿ ತಾವೇ ಸಂಘದ ಅಧ್ಯಕ್ಷರೆಂಬುದನ್ನು ಸ್ವಯಂ ಘೋಷಿಸಿಕೊಂಡು ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಿಕೊಳ್ಳುವ ಮೂಲಕ ಸಂಘವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ನಾಡಿನ ಸಾಹಿತ್ಯ, ಸಾಂಸ್ಕೃತಿಕ ಹೆಗ್ಗುರುತಾಗಿ ಹಿರಿಮೆ ಹೊಂದಿದ್ದ ಶಿವಮೊಗ್ಗ ಕರ್ನಾಟಕ ಸಂಘದ ಮಾನ ಹಾದಿ ಬೀದಿಯಲ್ಲಿ ಹರಾಜಾಗುತ್ತಿದೆ.

“ಕರ್ನಾಟಕ ಸಂಘದ ಈಗಿನ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದು ಇಷ್ಟವಿರಲಿಲ್ಲ. ಅಲ್ಲಿನ ವ್ಯವಸ್ಥೆಯಲ್ಲಿ ಮುಕ್ತವಾಗಿ ಕೆಲಸ ಮಾಡಲಾರದ ಸ್ಥಿತಿಯಿದೆ. ಅದೇ ಸಮಯಕ್ಕೆ ನನಗೆ ಆರೋಗ್ಯ ಸಮಸ್ಯೆಯೂ ಇರುವುದಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ.” -ಪ್ರೊ.ಕೆ.ಓಂಕಾರಪ್ಪ, ಸಾಹಿತಿ.
—–

“ಕರ್ನಾಟಕ ಸಂಘದ ನವೀಕರಣ ಸಂದರ್ಭದಲ್ಲಿ ನಮ್ಮ ವಿರುದ್ಧ ಪಿತೂರಿ ಹೆಚ್ಚಾಯಿತು. ಕಳೆದ ಎರಡು ವರ್ಷಗಳಿಂದ ಎಲ್ಲವನ್ನೂ ಸಂಯಮದಿಂದ ನಿಭಾಯಿಸಿದ್ದೇನೆ. ಆದರೆ ಇನ್ನು ಪಿತೂರಿಯನ್ನು ಸಹಿಸುವುದು ಸಾದ್ಯವಿಲ್ಲ. ನಡೆಯುತ್ತಿರುವುದನ್ನು ನೋಡಿಕೊಂಡು ಸುಮ್ಮನಿರಲು ಸಾದ್ಯವಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ.” -ಪ್ರೊ.ಎಚ್.ಎಸ್.ನಾಗಭೂಷಣ.

                                                              —-

  • ವರದಿ: ಎನ್.ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...