Homeಮುಖಪುಟಸಾಹಿತ್ಯ, ಸಾಂಸ್ಕೃತಿಕ ಹೆಗ್ಗುರುತಾಗಿದ್ದ ಶಿವಮೊಗ್ಗ ಕರ್ನಾಟಕ ಸಂಘದ ಮಾನ ಬೀದಿಗೆ ಬಂದಿದ್ದೇಕೆ!

ಸಾಹಿತ್ಯ, ಸಾಂಸ್ಕೃತಿಕ ಹೆಗ್ಗುರುತಾಗಿದ್ದ ಶಿವಮೊಗ್ಗ ಕರ್ನಾಟಕ ಸಂಘದ ಮಾನ ಬೀದಿಗೆ ಬಂದಿದ್ದೇಕೆ!

ಕರ್ನಾಟಕ ಸಂಘದ ನಿರಂತರ ಕಾರ್ಯಕ್ರಮಗಳ ಮೂಲಕ ಶಿವಮೊಗ್ಗೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಗಟ್ಟಿಯಾಗಿ ಬೆಳದಿರುವುದಂತೂ ಸತ್ಯ. ಶಿವಮೊಗ್ಗೆಯ ಬಹುಪಾಲು ರಂಗತಂಡಗಳಿಗೆ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಇದು ಆಸರೆಯಾಗಿತ್ತು.

- Advertisement -
- Advertisement -

ರಾಜ್ಯದಾದ್ಯಂತ 65ನೇ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಿಂದ ಅಚರಿಸಲಾಗುತ್ತಿದೆ. ಕರೋನಾ ನಡುವೆಯೂ ಎಲ್ಲೆಡೆ ಕನ್ನಡದ ವಾತಾವರಣ ಸಂಭ್ರಮಿಸುತ್ತಿದೆ. ಆದರೆ, ಕನ್ನಡ ನುಡಿ ಸೇವೆ. ಸಾಂಸ್ಕೃತಿಕ ಹೆಗ್ಗಳಿಕೆಯಾಗಿ 90 ವರ್ಷಗಳ ಇತಿಹಾಸವಿರುವ ನಾಡಿನ ಪ್ರತಿಷ್ಟಿತ ಶಿವಮೊಗ್ಗೆಯ ಕರ್ನಾಟಕ ಸಂಘದ ಘನತೆ ಈಗ ಆಡಳಿತ ಮಂಡಳಿಯೊಳಗಿನ ಕಿತ್ತಾಟದಿಂದ ಬೀದಿಗೆ ಬಂದಿದೆ.

ನಾಡಿನ ಸಾಹಿತ್ಯ, ಸಾಂಸ್ಕೃತಿಕ ವಲಯಕ್ಕೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅನನ್ಯ. ಸಾಮಾಜಿಕ ಚಳವಳಿಯ ಜೊತೆಗೆ ಸಾಹಿತ್ಯ ಚಳವಳಿಯ ಧ್ಯೋತಕ ಈ ಜಿಲ್ಲೆ. ಈ ಹಿನ್ನಲೆಯಲ್ಲೇ ನಾಡಿನ ಆಸ್ತಿಯೆಂದೆ ಕರೆಯಲ್ಪಡುವ ಮಾಸ್ತಿ ವೆಂಕಟೇಶ ಅಯ್ಯಂಗಾರ್, ದ. ರಾ. ಬೇಂದ್ರೆಯವರ ಸಲಹೆಯಂತೆ 8 ನೇ ನವೆಂಬರ್ 1930 ರಲ್ಲಿ ಶಿವಮೊಗ್ಗದಲ್ಲಿ ಕರ್ನಾಟಕ ಸಂಘವನ್ನು ಸ್ಥಾಪಿಸಲಾಯಿತು. ಇದೇ ನವೆಂಬರ್ 08 ಕ್ಕೆ ಬರೋಬ್ಬರಿ 90 ವರ್ಷಗಳು ತುಂಬಲಿದ್ದು, ನಾಡಿನ ಗಮನ ಸೆಳೆಯುವಂತೆ ಶತಮಾನೋತ್ಸವದ ಸಡಗರ, ಸಂಭ್ರಮ ಮನೆ ಮಾಡಬೇಕಿತ್ತು. ಆದರೀಗ ಇದೇ ಕರ್ನಾಟಕ ಸಂಘ, ಸ್ವಾರ್ಥ, ಜಾತಿ ಪಿತೂರಿಗಳಿಗೆ ತುತ್ತಾಗಿ ಸೂತಕದ ಛಾಯೆ ಆವರಿಸಿದೆ.

1936 ರವರೆಗೆ ಬಾಡಿಗೆ ಕಟ್ಟಡಗಳಲ್ಲಿ ನುಡಿ ಸೇವೆಯ ಕಾರ್ಯನಿರ್ವಹಿಸುತ್ತಿದ್ದ ಈ ಕರ್ನಾಟಕ ಸಂಘಕ್ಕೆ ಒಂದು ಸುಸಜ್ಜಿತವಾದ ಕಟ್ಟಡವನ್ನು ಒದಗಿಸಿಕೊಟ್ಟವರು ಹಸೂಡಿ ವೆಂಕಟ ಶಾಸ್ತ್ರಿಯವರು.

ಅಂದಿನ ಪುರಸಭೆ ಒದಗಿಸಿದ ಜಾಗದಲ್ಲಿ, 40 ರ ದಶಕದಲ್ಲಿ, 30 ಸಾವಿರ ರೂಪಾಯಿಗಳನ್ನು ವ್ಯಯಿಸಿ, ಈ ಕಟ್ಟಡವನ್ನು ಕಟ್ಟಿಸಿಕೊಟ್ಟಿದ್ದರು. ಈ ಕಟ್ಟಡಕ್ಕೆ ಬಿ. ಎಂ. ಶ್ರೀಕಂಠಯ್ಯರವರು 1942 ರಲ್ಲಿ ಶಿಲಾನ್ಯಾಸ ಮಾಡಿದ್ದರು. 11 ನೇ ಡಿಸೆಂಬರ್ 1943 ರಂದು ಅಂದಿನ ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದ ಶ್ರೀ ಜಯಚಾಮರಾಜ ಒಡೆಯರ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿದ್ದರು.

ದ. ರಾ. ಬೇಂದ್ರೆಯವರು ಸಲಹೆಯಂತೆ, ಈ ಕಟ್ಟಡಕ್ಕೆ ದಾನಿಗಳಾದ ‘ಹಸೂಡಿ ವೆಂಕಟ ಶಾಸ್ತ್ರಿ ಸಾಹಿತ್ಯ ಭವನ’ ಎಂದು ಹೆಸರಿಡಲಾಗಿದ್ದರೂ, ಕರ್ನಾಟಕ ಸಂಘ ಎಂದೇ ಜನಜನಿತ.

ಈ ಕರ್ನಾಟಕ ಸಂಘಕ್ಕೆ 1942 ರಲ್ಲಿ ದ. ರಾ. ಬೇಂದ್ರೆಯವರ ಅಧ್ಯಕ್ಷತೆಯಲ್ಲಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ಮುಂದೆ 1979 ರಲ್ಲಿ ಡಾ. ಎಸ್. ವಿ. ರಂಗಣ್ಣರವರ ಅಧ್ಯಕ್ಷತೆಯಲ್ಲಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ 1989 ರಲ್ಲಿ ಡಾ. ಎಸ್. ತಿಪ್ಪೇರುದ್ರ ಸ್ವಾಮಿಯವರ ಅಧ್ಯಕ್ಷತೆಯಲ್ಲಿನ ಮೂರನೇ ಶಿವಮೊಗ್ಗ ಜಿಲ್ಲಾ ಸಮ್ಮೇಳನವನ್ನು ಯಶಸ್ವಿಯಾಗಿ ನಡೆಸಿದ ಹೆಗ್ಗಳಿಕೆಯೂ ಇದೆ.

ಕರ್ನಾಟಕ ಸಂಘದ ನಿರಂತರ ಕಾರ್ಯಕ್ರಮಗಳ ಮೂಲಕ ಶಿವಮೊಗ್ಗೆಯಲ್ಲಿ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಗಟ್ಟಿಯಾಗಿ ಬೆಳದಿರುವುದಂತೂ ಸತ್ಯ. ಶಿವಮೊಗ್ಗೆಯ ಬಹುಪಾಲು ರಂಗತಂಡಗಳಿಗೆ, ಸಾಮಾಜಿಕ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಈ ಕರ್ನಾಟಕ ಸಂಘವೇ ಆಸರೆಯಾಗಿತ್ತು.

ಈ ನಾಡಿನ ಸಾಹಿತ್ಯ ದಿಗ್ಗಜರ, ಉದಯೋನ್ಮುಖ ಕವಿ, ಕತೆಗಾರರ ಗ್ರಂಥ ಪ್ರಕಟಣೆ, ಗೌರವ ಸದಸ್ಯತ್ವ ಪ್ರದಾನ, ಪುಸ್ತಕ ಬಹುಮಾನ, ತಿಂಗಳ ಅತಿಥಿ, ನನ್ನ ಪ್ರೀತಿಯ ಪುಸ್ತಕ, ಸುಸಜ್ಜಿತ ಗ್ರಂಥಾಲಯ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಾ, ಕರ್ನಾಟಕ ಸಂಘವು ಇಡೀ ಮಲೆನಾಡು ಅಷ್ಟೇ ಅಲ್ಲ, ರಾಜ್ಯದಲ್ಲಿಯೇ ವಿಶಿಷ್ಟ ಸ್ಥಾನವನ್ನು ಪಡೆದಿದೆ ಎಂದರೆ, ಖಂಡಿತಾ ಉತ್ಪ್ರೇಕ್ಷೆಯಲ್ಲ.

ಇಂತಹ ಕನ್ನಡ ಸೇವೆಯ ಘನತೆಯಾಗಿದ್ದ ಕರ್ನಾಟಕ ಸಂಘ ಇಂದು ವಿವಾದಕ್ಕೆ ತುತ್ತಾಗಿ ಹಿರಿಯ ಚೇತನಗಳ ಆಶಯಗಳನ್ನು ಮಣ್ಣುಪಾಲು ಮಾಡುವತ್ತಾ ಸಾಗಿದೆ. ಕರ್ನಾಟಕ ಸಂಘದ ಆಡಳಿತ ಹಿಡಿತಕ್ಕೆ ನಡೆದ ಹುನ್ನಾರ ದ ಫಲವಾಗಿ ಕರ್ನಾಟಕ ಸಂಘದ ಕಾರ್ಯಕಾರಿ ಸಮಿತಿಯಲ್ಲೇ ಭುಗಿಲೆದ್ದ ಅಸಮಾಧಾನ ಅಧ್ಯಕ್ಷರೂ ಸೇರಿದಂತೆ ಮೂವರು ಪದಾಧಿಕಾರಿಗಳು ಹಾಗೂ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಮೂರು ಸಿಬ್ಬಂದಿಯ ರಾಜೀನಾಮೆಯೊಂದಿಗೆ ಒಳಗೊಳಗೆ ಕುದಿಯುತ್ತಿದ್ದ ಹಗೆ ಸ್ಫೋಟಗೊಂಡಿದೆ.

ಹಿರಿಯ ಸಜ್ಜನ ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಕೆ.ಓಂಕಾರಪ್ಪ ನೇತೃತ್ವದಲ್ಲಿ ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದಿದ್ದ ಸಮಿತಿ ನಿಜಕ್ಕೂ ಕೂಡಾ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲೇ, ನಡೆದಿರುವ ಈ ಅನಿರೀಕ್ಷಿತ ಬೆಳವಣಿಗೆ ಕರ್ನಾಟಕ ಸಂಘದ ಅಭಿವೃದ್ಧಿಗೆ ಇದುವರೆಗೆ ಬೆವರು ಹರಿಸಿದವರಿಗೆ ಬೇಸರ ಉಂಟು ಮಾಡಿದೆ. ಕರ್ನಾಟಕ ಸಂಘ ಉಪಾಧ್ಯಕ್ಷ ಉದಯಶಂಕರ ಶಾಸ್ತ್ರಿ ಮತ್ತವರ ಪಟಾಲಂನ ಹಿತಾಸಕ್ತಿ ಈಗ ಕರ್ನಾಟಕ ಸಂಘವನ್ನು ಮನಸ್ಸೋಃಇಚ್ಛೆ ಆಡಳಿತಕ್ಕೆ ಅಡ್ಡೆಯನ್ನಾಗಿಸಿಕೊಳ್ಳುವ ಸಂಚು ನಡೆಸಿರುವುದು ಸಾಹಿತ್ಯ ವಲಯದ ಅಸಮಾಧಾನಕ್ಕೆ ಕಾರಣವಾಗಿದೆ.

ಮಳೆಗಾಲದ ಸಂದರ್ಭದಲ್ಲಿ ಸೋರುತ್ತಿದ್ದ ಕರ್ನಾಟಕ ಸಂಘದ ಮೇಲ್ಚಾವಣಿಯ ನವೀಕರಣ ಕಾಮಗಾರಿಯೇ ಸಮಿತಿಯೊಳಗೆ ಭಿನ್ನಾಭಿಪ್ರಾಯ ಸೃಷ್ಟಿಯಾಗಲು ಕಾರಣ ಎನ್ನಲಾಗುತ್ತಿದೆ. ಕರ್ನಾಟಕ ಸಂಘದ ಮೇಲ್ಚಾವಣಿ ಅಷ್ಟೇ ಸೋರುತ್ತಿಲ್ಲ. ಬದಲಾಗಿ ಪಟ್ಟಭದ್ರ ಹಿತಾಸಕ್ತಿಗಳ ಮನಸ್ಸೂ ಕೂಡಾ ಸೋರಲಾರಂಭಿಸಿರುವುದು ನಿಜಕ್ಕೂ ಕೂಡಾ ವಿಪರ್ಯಾಸದ ಸಂಗತಿ. ಈ ನವೀಕರಣ ಕಾಮಗಾರಿಯಲ್ಲಿ ಮಿತಿಮೀರಿದ ಹಣದ ಅಪವ್ಯಯ ತಡೆಗಟ್ಟಲು ಅಧ್ಯಕ್ಷ ಪ್ರೊ.ಕೆ.ಓಂಕಾರಪ್ಪ, ಖಚಾಂಚಿ ಕೆ.ಜಿ.ವೆಂಕಟೇಶ್, ಗೌರವ ಕಾರ್ಯದರ್ಶಿ ಪ್ರೊ.ಎಚ್.ಎಸ್.ನಾಗಭೂಷಣ ಮುಂದಾಗಿದ್ದು, ಇದು ಉಪಾಧ್ಯಕ್ಷ ಉದಯಶಂಕರ ಶಾಸ್ತ್ರಿ ಮತ್ತವರ ಟೀಮ್ ಗೆ ಅಪಥ್ಯವಾಗಿತ್ತು.

ಆರ್ಥಿಕ ಶಿಸ್ತನ್ನು ಸಹಿಸದ ಗುಂಪು ಸಿಬ್ಬಂದಿ ಹಾಗೂ ಪದಾಧಿಕಾರಿಗಳ ನಡುವೆ ವೈಮನಸ್ಸು ಬೆಳೆಯುವಂತೆ ನೋಡಿಕೊಂಡಿತಲ್ಲದೆ , ಪದಾಧಿಕಾರಿಗಳ ವಿರುದ್ಧವೆ ಸಿಬ್ಬಂದಿಗಳ ಮೂಲಕ ಜಾತಿ ನಿಂದನೆ ದೂರು ದಾಖಲಿಸುವ ಷಡ್ಯಂತ್ರ ವೂ ನಡೆದು ಜಾತ್ಯಾತೀತವಾಗಿ ಸಾಹಿತ್ಯಿಕ ಕಾರ್ಯಕ್ರಮ ರೂಪಿಸುತ್ತಿದ್ದ ಸಂಸ್ಥೆಯೊಳಗೆ ಜಾತಿಯ ವಿಷ ಬೀಜ ಬಿತ್ತಲಾಯಿತು. ಅಷ್ಟೇ ಅಲ್ಲ, ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಯೋರ್ವರ ಬಗ್ಗೆ ಕೂಡಾ ಅನಗತ್ಯವಾಗಿ ನಿಂದನೆಯ ಪ್ರಸ್ತಾಪ ಮಾಡಲಾಗಿತ್ತು. ಆ ಸಿಬ್ಬಂದಿಯನ್ನು ಸಂಬಂಧ ಇಲ್ಲದಿದ್ದರೂ ಸಹ ಪ್ರಸ್ತಾಪಿಸಲಾಗಿತ್ತು. ಜೊತೆಗೆ ಹಿರಿಯ ಸಿಬ್ಬಂದಿಗಳ ಬಗ್ಗೆ ಅವಾಚ್ಯವಾಗಿ ಬರೆಯಲಾಗಿತ್ತು. ಈ ಎಲ್ಲಾ ಸಂಗತಿಗಳನ್ನು ಸಹ ಪೂರ್ವಾಗ್ರಹ ಪೀಡಿತವಾಗಿಯೇ ಬರೆದಿದ್ದು, ಇದಕ್ಕೆ ಸಂಘದ ಪದಾಧಿಕಾರಿಯೋರ್ವರ ಚಿತಾವಣೆ ಕೂಡಾ ಇದೆ ಎಂದೇ ಹೇಳಲಾಗಿದೆ.

ಕರ್ನಾಟಕ ಸಂಘದ ಯಾವ ಚಟುವಟಿಕೆಯಲ್ಲೂ ಭಾಗವಹಿಸದ, ನವೀಕರಣ ಸಂದರ್ಭದಲ್ಲೂ ಮೌನವಾಗಿದ್ದ ಸಂಘದ ಉಪಾಧ್ಯಕ್ಷ ಉದಯಶಂಕರ ಶಾಸ್ತ್ರಿ ಏಕಾಏಕಿ ಸಕ್ರಿಯರಾಗಿದ್ದು, ತಮ್ಮ ಪೂರ್ವಿಕರಾದ ಹಸೊಡಿ ವೆಂಕಟಶಾಸ್ತ್ರಿ ಅವರು ಕರ್ನಾಟಕ ಸಂಘ ಭವನ ನಿರ‍್ಮಾಣಕ್ಕೆ ಕಾರಣ ಕರ್ತರು ಎಂಬುದನ್ನೆ ಮುಂದಿಟ್ಟುಕೊಂಡು ಸಂಘದ ಆಡಳಿತದಲ್ಲಿ ಸರ್ವಾಧಿಕಾರಿಧೋರಣೆ ಮೆರೆಯುವ ಆ ಮೂಲಕ ಸಂಘವನ್ನು ತಮ್ಮದೇ ಗುಂಪಿನ ಹಿಡಿತದಲ್ಲಿಟ್ಟುಕೊಳ್ಳುವ ಪ್ರಯತ್ನಗಳು ಮುಂದುವರೆದಿವೆ ಎಂಬ ಆರೋಪಗಳು ಸಾಹಿತ್ಯ ವಲಯದಲ್ಲೇ ಕೇಳಿ ಬರುತ್ತಿದೆ.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಉಪಾಧ್ಯಕ್ಷರಾಗಿರುವ ಉದಯಶಂಕರ ಶಾಸ್ತ್ರಿ ಅವರ ಸರ್ವಾಧಿಕಾರಿ ಧೋರಣೆ ಪ್ರಶ್ನಿಸಿದ್ದರಿಂದಲೇ ಸಂಘದ ಗೌರವ ಕಾರ್ಯದರ್ಶಿ ಡಾ. ಹೆಚ್. ಎಸ್ ನಾಗಭೂಷಣ. ಖಜಾಂಚಿ ಕೆ.ಜಿ ವೆಂಕಟೇಶ್ ಹಾಗೂ ಮೂವರು ಸಿಬ್ಬಂದಿಗಳ ರಾಜೀನಾಮೆಯೊಂದಿಗೆ ಒಂದು ಹಂತ ತಲುಪಿದ್ದು, ಇದನ್ನೆ ಬಯಸಿದ್ದ ಸಾಹಿತ್ಯ, ಸಂಸ್ಕೃತಿಯ ಗಂಧಗಾಳಿ ಗೊತ್ತಿಲ್ಲದ ಉದಯಶಂಕರಶಾಸ್ತ್ರಿ ತಾವೇ ಸಂಘದ ಅಧ್ಯಕ್ಷರೆಂಬುದನ್ನು ಸ್ವಯಂ ಘೋಷಿಸಿಕೊಂಡು ಕಾರ್ಯಕಾರಿ ಸಮಿತಿಯನ್ನು ಪುನರ್ ರಚಿಸಿಕೊಳ್ಳುವ ಮೂಲಕ ಸಂಘವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಈ ನಾಡಿನ ಸಾಹಿತ್ಯ, ಸಾಂಸ್ಕೃತಿಕ ಹೆಗ್ಗುರುತಾಗಿ ಹಿರಿಮೆ ಹೊಂದಿದ್ದ ಶಿವಮೊಗ್ಗ ಕರ್ನಾಟಕ ಸಂಘದ ಮಾನ ಹಾದಿ ಬೀದಿಯಲ್ಲಿ ಹರಾಜಾಗುತ್ತಿದೆ.

“ಕರ್ನಾಟಕ ಸಂಘದ ಈಗಿನ ಸ್ಥಿತಿಯಲ್ಲಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯುವುದು ಇಷ್ಟವಿರಲಿಲ್ಲ. ಅಲ್ಲಿನ ವ್ಯವಸ್ಥೆಯಲ್ಲಿ ಮುಕ್ತವಾಗಿ ಕೆಲಸ ಮಾಡಲಾರದ ಸ್ಥಿತಿಯಿದೆ. ಅದೇ ಸಮಯಕ್ಕೆ ನನಗೆ ಆರೋಗ್ಯ ಸಮಸ್ಯೆಯೂ ಇರುವುದಿಂದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದೇನೆ.” -ಪ್ರೊ.ಕೆ.ಓಂಕಾರಪ್ಪ, ಸಾಹಿತಿ.
—–

“ಕರ್ನಾಟಕ ಸಂಘದ ನವೀಕರಣ ಸಂದರ್ಭದಲ್ಲಿ ನಮ್ಮ ವಿರುದ್ಧ ಪಿತೂರಿ ಹೆಚ್ಚಾಯಿತು. ಕಳೆದ ಎರಡು ವರ್ಷಗಳಿಂದ ಎಲ್ಲವನ್ನೂ ಸಂಯಮದಿಂದ ನಿಭಾಯಿಸಿದ್ದೇನೆ. ಆದರೆ ಇನ್ನು ಪಿತೂರಿಯನ್ನು ಸಹಿಸುವುದು ಸಾದ್ಯವಿಲ್ಲ. ನಡೆಯುತ್ತಿರುವುದನ್ನು ನೋಡಿಕೊಂಡು ಸುಮ್ಮನಿರಲು ಸಾದ್ಯವಿಲ್ಲ ಎಂಬ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ.” -ಪ್ರೊ.ಎಚ್.ಎಸ್.ನಾಗಭೂಷಣ.

                                                              —-

  • ವರದಿ: ಎನ್.ರವಿಕುಮಾರ್ ಟೆಲೆಕ್ಸ್

ಇದನ್ನೂ ಓದಿ: ರಾಜ್ಯೋತ್ಸವದಂದು ಕನ್ನಡ ಧ್ವಜ ಹಾರಿಸದ ಸರ್ಕಾರದ ನಡೆಗೆ ಕನ್ನಡಿಗರ ಆಕ್ರೋಶ: ಟ್ವಿಟರ್ ಆಂದೋಲನಕ್ಕೆ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...