Homeಕರ್ನಾಟಕಶಿವಮೊಗ್ಗ ಹಿಂಸಾಚಾರ ನಷ್ಟವನ್ನು ಈಶ್ವರಪ್ಪನವರಿಂದ ವಸೂಲಿ ಮಾಡಿ- ಹರಿಪ್ರಸಾದ್

ಶಿವಮೊಗ್ಗ ಹಿಂಸಾಚಾರ ನಷ್ಟವನ್ನು ಈಶ್ವರಪ್ಪನವರಿಂದ ವಸೂಲಿ ಮಾಡಿ- ಹರಿಪ್ರಸಾದ್

- Advertisement -
- Advertisement -

ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಶವದ ಮೆರವಣಿಗೆ ಸಂದರ್ಭದಲ್ಲಿ ಆದ ಸಾರ್ವಜನಿಕ ಆಸ್ತಿ ನಷ್ಟವನ್ನು ಸಚಿವ ಕೆ.ಎಸ್‌.ಈಶ್ವರಪ್ಪನವರಿಂದ ವಸೂಲಿ ಮಾಡಬೇಕು ಎಂದು ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ.

“ಕೊಲೆಯಾದ ಬಜರಂಗದಳದ ಕಾರ್ಯಕರ್ತನ ಶವದ ಮೆರವಣಿಗೆಯನ್ನು ಮುನ್ನಡೆಸಿದ ಈಶ್ವರಪ್ಪನವರಿಂದಾಗಿ ಹಿಂಸಾಚಾರ ನಡೆದಿದೆ” ಎಂದು ಹರಿಪ್ರಸಾದ್ ಆರೋಪಿಸಿದ್ದಾರೆ.

“ಗಲಭೆಯಿಂದಾದ ಸಾರ್ವಜನಿಕ ಆಸ್ತಿಗೆ ಉಂಟಾದ ಹಾನಿಯನ್ನು ಪಡೆಯಲು ಬಿಜೆಪಿ ಹೆಮ್ಮೆಪಡುತ್ತದೆ. ಅದೇ ಅಳತೆಗೋಲನ್ನು ಅನುಸರಿಸಿ ಸರ್ಕಾರವು ಮೆರವಣಿಗೆಯ ಮುಂದಾಳತ್ವ ವಹಿಸಿದ್ದ ಈಶ್ವರಪ್ಪನವರಿಂದ ಪರಿಹಾರವನ್ನು ವಸೂಲಿ ಮಾಡಬೇಕು” ಎಂದು ಹರಿಪ್ರಸಾದ್ ಟ್ವೀಟ್ ಮಾಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪ್ರತಿಭಟನಾಕಾರರಿಂದಾಗಿ ಸಾರ್ವಜನಿಕ ಆಸ್ತಿಗೆ ಹಾನಿಯಾಗಿದೆ ಎಂದು ಆರೋಪಿಸಿದ್ದ ಉತ್ತರ ಪ್ರದೇಶ ಯುಪಿ ಸರ್ಕಾರ ವಸೂಲಿಗೆ ಮುಂದಾಗಿತ್ತು. ಆದರೆ ವಸೂಲಿ ಮಾಡಲಾದ ಕೋಟ್ಯಂತರ ರೂಪಾಯಿಗಳನ್ನು ಮರುಪಾವತಿ ಮಾಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ನಿರ್ದೇಶಿಸಿದೆ.

ಕೆ.ಎಸ್.ಈಶ್ವರಪ್ಪ ಮತ್ತು ಪ್ರತಿಪಕ್ಷ ಕಾಂಗ್ರೆಸ್ ನಡುವೆ ಇತ್ತೀಚಿನ ಮಾತಿನ ಸಮರಕ್ಕೆ ಕಾರಣವಾದ ಎರಡನೇ ವಿಷಯ ಇದಾಗಿದೆ. ‘ಕೇಸರಿ ಧ್ವಜವು ರಾಷ್ಟ್ರಧ್ವಜವಾಗಬಹುದು’ ಎಂದು ಈಶ್ವರಪ್ಪ ಅವರು ಹೇಳಿದ್ದು ವಿವಾದಕ್ಕೆ ಕಾರಣವಾಗಿದೆ.

ಮತ್ತೆ ನಾಲ್ವರ ಬಂಧನ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತೀವ್ರ ನಿಗಾ ವಹಿಸಿದ್ದಾರೆ.

ನಗರದಲ್ಲಿ ಮಂಗಳವಾರವೂ ಬಿಗಿ ಬಂದೋಬಸ್ತ್ ಮಾಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು 1,200 ಪೊಲೀಸ್ ಸಿಬ್ಬಂದಿ ಮತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಆರ್‌ಎಎಫ್) ನಗರದಲ್ಲಿ ಗಸ್ತು ತಿರುಗುತ್ತಿದೆ. ಆದರೆ ಕೆಲ ಕಿಡಿಗೇಡಿಗಳು ಮಂಗಳವಾರ ಮುಂಜಾವಿನಲ್ಲಿ ಮೂರು ಆಟೋರಿಕ್ಷಾ ಹಾಗೂ ಎರಡು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಬಂಧಿತರನ್ನು ಆಸಿಫ್ ಉಲ್ಲಾ ಖಾನ್, ರಿಹಾನ್ ಷರೀಫ್, ನಿಹಾನ್ ಮತ್ತು ಅಬ್ದುಲ್ ಅಫ್ನಾನ್ ಎಂದು ಗುರುತಿಸಲಾಗಿದೆ. ಸೋಮವಾರ ಮೊಹಮ್ಮದ್ ಖಾಸಿಫ್ (30) ಮತ್ತು ಸೈಯದ್ ನದೀಮ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿತ್ತು.

ಮೊಹಮ್ಮದ್ ಖಾಸಿಫ್ ಪ್ರಮುಖ ಆರೋಪಿಯಾಗಿದ್ದು, ನದೀಮ್ ಆರೋಪಿ ನಂ.2 ಎಂದು ಪೊಲೀಸ್ ವರಿಷ್ಠಾಧಿಕಾರಿ ಬಿ.ಎಂ.ಲಕ್ಷ್ಮಿ ಪ್ರಸಾದ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆಸಿಫ್ ಉಲ್ಲಾ ಖಾನ್ – ಆರೋಪಿ ನಂ.3, ರಿಹಾನ್ ಷರೀಫ್- ಆರೋಪಿ ನಂ.4, ನಿಹಾನ್- ಆರೋಪಿ ನಂ.5 ಮತ್ತು ಅಫ್ನಾನ್ -ಆರೋಪಿ ನಂ.6. ಖಾಸಿಫ್ ಹೊರತುಪಡಿಸಿ ಉಳಿದ ಆರೋಪಿಗಳು 21 ರಿಂದ 22 ವರ್ಷ ವಯಸ್ಸಿನವರಾಗಿದ್ದಾರೆ.

“ಎಲ್ಲಾ ಆರೋಪಿಗಳು ಶಿವಮೊಗ್ಗ ನಗರದ ನಿವಾಸಿಗಳು. ನಾವು 12 ಜನರನ್ನು ವಶಕ್ಕೆ ಪಡೆದಿದ್ದೇವೆ. ಅದರಲ್ಲಿ ಆರು ಮಂದಿ ಕೊಲೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಆರು ಮಂದಿಯಲ್ಲಿ ನಾಲ್ವರು ಹಲ್ಲೆ, ಕೊಲೆ ಯತ್ನ ಮತ್ತು ಗಲಭೆ ಸೇರಿದಂತೆ ಅಪರಾಧಗಳಲ್ಲಿ ಭಾಗಿಯಾಗಿದ್ದಾರೆ. ಮೃತ ಹರ್ಷ 2016 ಮತ್ತು 2017ರಲ್ಲಿ ದಾಖಲಾದ ಗಲಭೆ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಎರಡು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ; ಸಂಸದ ಪ್ರಜ್ವಲ್ ರೇವಣ್ಣ ಕಳವಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...