Homeಕರ್ನಾಟಕಡೈನಾಮೈಟ್ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದ ಸಿಎಂ, ಮೃತರಿಗೆ ಪ್ರಧಾನಿ ಸಂತಾಪ

ಡೈನಾಮೈಟ್ ಸ್ಫೋಟ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ ಎಂದ ಸಿಎಂ, ಮೃತರಿಗೆ ಪ್ರಧಾನಿ ಸಂತಾಪ

ಶಿವಮೊಗ್ಗದ ಹುಣಸೋಡಿನ ರೈಲ್ವೆ ಕ್ರಷರ್ ನಲ್ಲಿ ಉಂಟಾದ ಡೈನಾಮೈಟ್ ಸ್ಪೋಟದಿಂದಾಗಿ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿದ್ದು, ಸ್ಫೋಟದ ಶಬ್ದವನ್ನು ಕೇಳಿದ ಜನರು ಭೂಕಂಪ ಉಂಟಾಗಿದೆ ಎಂದು ಬೆದರಿ ಮನೆಯಿಂದ ಹೊರಬಂದಿರುವ ಘಟನೆ ನಡೆದಿದೆ

- Advertisement -
- Advertisement -

ಶಿವಮೊಗ್ಗದಲ್ಲಿ ಉಂಟಾದ ಡೈನಾಮೈಟ್ ಸ್ಫೋಟದಿಂದ ಸಾವನ್ನಪಿರುವ ಕಾರ್ಮಿಕರಿಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, “ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಯಡಿಯೂರಪ್ಪ, “ಶಿವಮೊಗ್ಗದ ಹುಣಸೋಡು ಬಳಿ ನಿನ್ನೆ ರಾತ್ರಿ ಸಂಭವಿಸಿದ ಭಾರೀ ಅನಾಹುತದಲ್ಲಿ ಅನೇಕ ಮಂದಿ ಸಾವನ್ನಪ್ಪಿದ್ದ ಸುದ್ದಿ ತೀವ್ರ ಆಘಾತಕಾರಿ ಹಾಗೂ ದುರದೃಷ್ಟಕರ. ಹಿರಿಯ ಅಧಿಕಾರಿಗಳೊಂದಿಗೆ ನಿನ್ನೆ ತಡರಾತ್ರಿಯಿಂದಲೇ ಸಂಪರ್ಕದಲ್ಲಿದ್ದು, ಅಗತ್ಯ ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಈಗಾಗಲೇ ರವಾನಿಸಲಾಗಿದೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಅರುಣಾಚಲ ಪ್ರದೇಶ: ನಮ್ಮ ಭೂ ಪ್ರದೇಶದಲ್ಲಿ ಗ್ರಾಮ ನಿರ್ಮಿಸಿದ್ದೇವೆ ಎಂದ ಚೀನಾ!

ಇದನ್ನೂ ಓದಿ: ಖಾತೆ ಬದಲಾವಣೆ: ಯಡಿಯೂರಪ್ಪಗೆ ಸೆಡ್ಡು ಹೊಡೆದು ಶೆಟ್ಟರ್ ಪಾಳಯಕ್ಕೆ ಜಿಗಿದರೆ ಮಾಧುಸ್ವಾಮಿ?

“ಮೃತರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತಾ, ಅವರ ಕುಟುಂಬದವರಲ್ಲಿ ತೀವ್ರ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ. ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರೆಲ್ಲರೂ ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಈ ದುರ್ಘಟನೆಯ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ನಿಶ್ಚಿತ” ಎಂದು ಸ್ಪಷ್ಟಪಡಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, “ಜೆಲಾಟಿನ್ ಸಾಗಿಸುತ್ತಿದ್ದ ಟ್ರಕ್ ಸ್ಫೋಟದಿಂದಾಗಿ ಶಿವಮೊಗ್ಗದಲ್ಲಿ ಸಂಭವಿಸಿದ ಕಾರ್ಮಿಕರ ಸಾವಿನ ಬಗ್ಗೆ ತಿಳಿದು ತುಂಬಾ ನೋವಾಗಿದೆ. ಘಟನೆಯ ಬಗ್ಗೆ ನಿಷ್ಪಕ್ಷಪಾತ ಮತ್ತು ಕಠಿಣ ತನಿಖೆ ಪ್ರಾರಂಭಿಸಲು ಮತ್ತು ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸಬೇಕು ಎಂದು ಮುಖ್ಯಮಂತ್ರಿಯವರನ್ನು ಒತ್ತಾಯಿಸುತ್ತೇನೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪಗಳು” ಎಂದು ಟ್ವೀಟ್ ಮಾಡಿದ್ದಾರೆ.

ಪ್ರಧಾನ ಮಂತ್ರಿಯವರ ಕಛೇರಿ, “ಶಿವಮೊಗ್ಗದಲ್ಲಿ ಜೀವಗಳು ಬಲಿಗಿರುವುದು ನೋವು ತಂದಿದೆ. ಅವರ ಕುಟುಂಬಗಳಿಗೆ ಸಂತಾಪ ತಿಳಿಸುವೆ. ಗಾಯಗೊಂಡಿರುವವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರ್ಕಾರವು ಸಾಧ್ಯವಾಗುವ ಎಲ್ಲ ರೀತಿಯ ಸಹಕಾರಗಳನ್ನೂ ನೀಡುತ್ತಿದೆ- ಪ್ರಧಾನಿ ಮೋದಿ” ಎಂದು ಟ್ವೀಟ್ ಮಾಡಿದೆ.

ಶಿವಮೊಗ್ಗದ ಹುಣಸೋಡಿನ ರೈಲ್ವೆ ಕ್ರಷರ್ ನಲ್ಲಿ ಉಂಟಾದ ಡೈನಾಮೈಟ್ ಸ್ಪೋಟದಿಂದಾಗಿ ಬಿಹಾರ ಮೂಲದ 15 ಕಾರ್ಮಿಕರು ಮೃತಪಟ್ಟಿದ್ದು, ಸ್ಫೋಟದ ಶಬ್ದವನ್ನು ಕೇಳಿದ ಜನರು ಭೂಕಂಪ ಉಂಟಾಗಿದೆ ಎಂದು ಬೆದರಿ ಮನೆಯಿಂದ ಹೊರಬಂದಿರುವ ಘಟನೆ ನಡೆದಿದೆ.

ಈ ಮುಂಚೆ ಶಿವಮೊಗ್ಗ ಜಿಲ್ಲೆಯಾದ್ಯಂದ ಭೂಕಂಪದ ಅನುಭವಾಗಿತ್ತು. ಈಗ ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯಲ್ಲಿ ರೈಲ್ವೆ ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಪೋಟದ ಪರಿಣಾಮ ಕಂಪನ ಸಂಭವಿಸಿದೆ. 50 ಡೈನಾಮೆಟ್ ಏಕಕಾಲದಲ್ಲಿ ಸ್ಫೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ.


ಇದನ್ನೂ ಓದಿ: ಇರಾಕ್‌ನಲ್ಲಿ ಅವಳಿ ಆತ್ಮಾಹುತಿ ಬಾಂಬ್ ದಾಳಿ: 28 ಸಾವು, 73 ಜನರ ಸ್ಥಿತಿ ಗಂಭೀರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...