Homeಕರ್ನಾಟಕಶಿವಮೊಗ್ಗ: ಹರ್ಷನ ಸಹೋದರಿ ವಿರುದ್ಧ ಎಫ್‌ಐಆರ್‌; ಮತ್ತೊಂದೆಡೆ ಹಿಂದುತ್ವ ಕಾರ್ಯಕರ್ತನ ಮೇಲೆ ಹಲ್ಲೆ

ಶಿವಮೊಗ್ಗ: ಹರ್ಷನ ಸಹೋದರಿ ವಿರುದ್ಧ ಎಫ್‌ಐಆರ್‌; ಮತ್ತೊಂದೆಡೆ ಹಿಂದುತ್ವ ಕಾರ್ಯಕರ್ತನ ಮೇಲೆ ಹಲ್ಲೆ

- Advertisement -
- Advertisement -

ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಸಹೋದರಿಯ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಮತ್ತೊಂದು ಅಹಿತಕರ ಘಟನೆಗೆ ಶಿವಮೊಗ್ಗ ಸಾಕ್ಷಿಯಾಗಿದೆ.

ಸೋಮವಾರ ರಾತ್ರಿ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಹಿಂದುತ್ವ ಕಾರ್ಯಕರ್ತನ ಮೇಲೆ ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

25 ವರ್ಷದ ಪ್ರಕಾಶ್ ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ಆರೋಪಿಗಳು ಆತನನ್ನು ತಡೆದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ. “ಆರೋಪಿಗಳು ಹಿಂದೂ ಸಮುದಾಯದ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಕಲ್ಲು ತೂರಿದ್ದಾರೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಲೆಗೆ ಗಾಯವಾಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು” ಎಂದು ಮಿಥುನ್‌ ತಿಳಿಸಿದ್ದಾರೆ. ಪ್ರಕಾಶ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, “ಅವರು ಅಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ” ಎಂದು ತಿಳಿಸಿದ್ದಾರೆ. ಆರೋಪಿಗಳನ್ನು ಹಿಡಿಯಲು ಮೂರು ತಂಡಗಳನ್ನು ಪೊಲೀಸರು ರಚಿಸಿದ್ದಾರೆ.

ಹಿಂದುತ್ವ ಕಾರ್ಯಕರ್ತನಿಗೆ ಶಿವಮೊಗ್ಗ ನಗರದ ಮೆಕ್‌ಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿಯ ಕೆಲವು ನಿಮಿಷಗಳ ಮೊದಲು, ಮೂರು ಬೈಕ್‌ಗಳಲ್ಲಿ ಬಂದ ಒಂಬತ್ತು ಮಂದಿ ಹಿಂದೂ ಸಮುದಾಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕಾಶ್ ಮೇಲಿನ ಹಲ್ಲೆಗೂ ಫೆಬ್ರವರಿಯಲ್ಲಿ ನಡೆದ ಹಿಂದುತ್ವವಾದಿ ಬಜರಂಗದಳದ ಸದಸ್ಯನ ಹತ್ಯೆಗೂ ಏನಾದರೂ ಸಂಬಂಧವಿದೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಫೆಬ್ರವರಿ 20ರಂದು ಶಿವಮೊಗ್ಗದ ಭಾರತಿ ಕಾಲೋನಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.

ಹರ್ಷನ ಅಕ್ಕನ ಮೇಲೆ ಎಫ್‌ಐಆರ್‌

ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಸೇರಿದ ವಾಹನವನ್ನು ಜಖಂ ಮಾಡಿದ ಆರೋಪದ ಮೇಲೆ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಇತ್ತೀಚೆಗೆ ಪ್ರಕರಣ ದಾಖಲಿಸಲಾಗಿದೆ.

ಮನೆ ಎದುರು ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಿದ ಪ್ರಕರಣ ಸಂಬಂಧ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ಆಗಿದೆ.

ಇದನ್ನೂ ಓದಿರಿ: ಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ, ದಲಿತ ವಿದ್ಯಾರ್ಥಿಗಳು!

ಆಝಾದ್ ನಗರದ ನಿವಾಸಿ ಸೈಯದ್ ಪರ್ವೀಜ್‌ ಎಂಬುವವರು ದೊಡ್ಡಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, “ಹರ್ಷನ ಸಹೋದರಿ ಅಶ್ವಿನಿ ಮತ್ತು ಅವರ ತಂಡ ನನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಿದೆ” ಎಂದು ಆರೋಪಿಸಿದ್ದಾರೆ.

“ತಮ್ಮ ಇನ್ನೋವಾ ಕಾರಿನ ಮೇಲೆ ಸೀಗೆಹಟ್ಟಿ ನಿವಾಸಿ ಅಶ್ವಿನಿ ಮತ್ತು ಅವರ ತಂಡ ದಾಳಿ ನಡೆಸಿದೆ. ಕಲ್ಲಪ್ಪನ ಕೇರಿಯಿಂದ ಕೇಸರಿ ಬಾವುಟ ಕೈಯ್ಯಲ್ಲಿಡಿದು ಜೈ ಶ್ರೀರಾಮ್‌ ಎಂದು ಕೂಗುತ್ತಾ ಬೈಕ್‌ನಲ್ಲಿ ಬಂದ ಮಂದಿ, ಕಾರಿನ ಎಡಭಾಗದ ಹೆಡ್‌ಲೈಟ್‌, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್‌ ಒಡೆದು ಹಾಕಿದ್ದಾರೆ” ಎಂದು ಪರ್ವೀಜ್ ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...