Homeಕರ್ನಾಟಕಶಿವಮೊಗ್ಗ: ಹರ್ಷನ ಸಹೋದರಿ ವಿರುದ್ಧ ಎಫ್‌ಐಆರ್‌; ಮತ್ತೊಂದೆಡೆ ಹಿಂದುತ್ವ ಕಾರ್ಯಕರ್ತನ ಮೇಲೆ ಹಲ್ಲೆ

ಶಿವಮೊಗ್ಗ: ಹರ್ಷನ ಸಹೋದರಿ ವಿರುದ್ಧ ಎಫ್‌ಐಆರ್‌; ಮತ್ತೊಂದೆಡೆ ಹಿಂದುತ್ವ ಕಾರ್ಯಕರ್ತನ ಮೇಲೆ ಹಲ್ಲೆ

- Advertisement -
- Advertisement -

ಶಿವಮೊಗ್ಗದಲ್ಲಿ ಕೊಲೆಯಾದ ಬಜರಂಗದಳ ಕಾರ್ಯಕರ್ತ ಹರ್ಷನ ಸಹೋದರಿಯ ವಿರುದ್ಧ ಪ್ರಕರಣ ದಾಖಲಾದ ಬೆನ್ನಲ್ಲೇ ಮತ್ತೊಂದು ಅಹಿತಕರ ಘಟನೆಗೆ ಶಿವಮೊಗ್ಗ ಸಾಕ್ಷಿಯಾಗಿದೆ.

ಸೋಮವಾರ ರಾತ್ರಿ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಹಿಂದುತ್ವ ಕಾರ್ಯಕರ್ತನ ಮೇಲೆ ಕಲ್ಲುಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

25 ವರ್ಷದ ಪ್ರಕಾಶ್ ಮನೆಗೆ ಹಿಂದಿರುಗುತ್ತಿದ್ದಾಗ ಮೂವರು ಆರೋಪಿಗಳು ಆತನನ್ನು ತಡೆದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ. “ಆರೋಪಿಗಳು ಹಿಂದೂ ಸಮುದಾಯದ ವಿರುದ್ಧ ಘೋಷಣೆಗಳನ್ನು ಕೂಗಿದ್ದು, ಕಲ್ಲು ತೂರಿದ್ದಾರೆ” ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಅವರಿಗೆ ತಲೆಗೆ ಗಾಯವಾಗಿದೆ. ತಕ್ಷಣ ಹತ್ತಿರದ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು” ಎಂದು ಮಿಥುನ್‌ ತಿಳಿಸಿದ್ದಾರೆ. ಪ್ರಕಾಶ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು, “ಅವರು ಅಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ” ಎಂದು ತಿಳಿಸಿದ್ದಾರೆ. ಆರೋಪಿಗಳನ್ನು ಹಿಡಿಯಲು ಮೂರು ತಂಡಗಳನ್ನು ಪೊಲೀಸರು ರಚಿಸಿದ್ದಾರೆ.

ಹಿಂದುತ್ವ ಕಾರ್ಯಕರ್ತನಿಗೆ ಶಿವಮೊಗ್ಗ ನಗರದ ಮೆಕ್‌ಗನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಾಳಿಯ ಕೆಲವು ನಿಮಿಷಗಳ ಮೊದಲು, ಮೂರು ಬೈಕ್‌ಗಳಲ್ಲಿ ಬಂದ ಒಂಬತ್ತು ಮಂದಿ ಹಿಂದೂ ಸಮುದಾಯದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕಾಶ್ ಮೇಲಿನ ಹಲ್ಲೆಗೂ ಫೆಬ್ರವರಿಯಲ್ಲಿ ನಡೆದ ಹಿಂದುತ್ವವಾದಿ ಬಜರಂಗದಳದ ಸದಸ್ಯನ ಹತ್ಯೆಗೂ ಏನಾದರೂ ಸಂಬಂಧವಿದೆಯೇ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಫೆಬ್ರವರಿ 20ರಂದು ಶಿವಮೊಗ್ಗದ ಭಾರತಿ ಕಾಲೋನಿಯಲ್ಲಿ ಭಜರಂಗದಳ ಕಾರ್ಯಕರ್ತ ಹರ್ಷ ಎಂಬಾತನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿತ್ತು.

ಹರ್ಷನ ಅಕ್ಕನ ಮೇಲೆ ಎಫ್‌ಐಆರ್‌

ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಸೇರಿದ ವಾಹನವನ್ನು ಜಖಂ ಮಾಡಿದ ಆರೋಪದ ಮೇಲೆ ಹರ್ಷ ಸಹೋದರಿ ಅಶ್ವಿನಿ ವಿರುದ್ಧ ಇತ್ತೀಚೆಗೆ ಪ್ರಕರಣ ದಾಖಲಿಸಲಾಗಿದೆ.

ಮನೆ ಎದುರು ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಿದ ಪ್ರಕರಣ ಸಂಬಂಧ ಅಶ್ವಿನಿ ಸೇರಿದಂತೆ 15 ಮಂದಿ ವಿರುದ್ಧ ಶಿವಮೊಗ್ಗ ಜಿಲ್ಲೆಯ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ಆಗಿದೆ.

ಇದನ್ನೂ ಓದಿರಿ: ಮೈಸೂರು: ಒಮ್ಮೆಲೇ ಐದು ಪಟ್ಟು ಹೆಚ್ಚಾದ ಸರ್ಕಾರಿ ಕಾಲೇಜು ಶುಲ್ಕ; ವ್ಯಾಸಂಗ ತೊರೆಯುವ ನಿರ್ಧಾರದಲ್ಲಿ ಬಡ, ದಲಿತ ವಿದ್ಯಾರ್ಥಿಗಳು!

ಆಝಾದ್ ನಗರದ ನಿವಾಸಿ ಸೈಯದ್ ಪರ್ವೀಜ್‌ ಎಂಬುವವರು ದೊಡ್ಡಪೇಟೆ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, “ಹರ್ಷನ ಸಹೋದರಿ ಅಶ್ವಿನಿ ಮತ್ತು ಅವರ ತಂಡ ನನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಜಖಂಗೊಳಿಸಿದೆ” ಎಂದು ಆರೋಪಿಸಿದ್ದಾರೆ.

“ತಮ್ಮ ಇನ್ನೋವಾ ಕಾರಿನ ಮೇಲೆ ಸೀಗೆಹಟ್ಟಿ ನಿವಾಸಿ ಅಶ್ವಿನಿ ಮತ್ತು ಅವರ ತಂಡ ದಾಳಿ ನಡೆಸಿದೆ. ಕಲ್ಲಪ್ಪನ ಕೇರಿಯಿಂದ ಕೇಸರಿ ಬಾವುಟ ಕೈಯ್ಯಲ್ಲಿಡಿದು ಜೈ ಶ್ರೀರಾಮ್‌ ಎಂದು ಕೂಗುತ್ತಾ ಬೈಕ್‌ನಲ್ಲಿ ಬಂದ ಮಂದಿ, ಕಾರಿನ ಎಡಭಾಗದ ಹೆಡ್‌ಲೈಟ್‌, ಸೈಡ್ ಡೋರ್, ಬ್ಯಾಕ್ ಸೈಡ್ ಮಡ್ ಗಾರ್ಡ್‌ ಒಡೆದು ಹಾಕಿದ್ದಾರೆ” ಎಂದು ಪರ್ವೀಜ್ ದೂರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...