Homeಮುಖಪುಟರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಬಳಕೆದಾರರಿದ್ದರೆ ಜಿಯೋಗೆ 33.2% ಬಳಕೆದಾರರಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು. ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಲು ನಿರ್ಧರಿಸಿದ್ದಾರೆ.

ಡಿಸೆಂಬರ್ 28 ರಂದು ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿರುವ ಏರ್‌ಟೆಲ್ ಕಚೇರಿ ಮುಂದೆ ಜಮಾವಣೆಗೊಳ್ಳಲಿರುವ ನೂರಾರು ಕಾರ್ಯಕರ್ತರು ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ತಮ್ಮ ಜಿಯೋ ನಂಬರ್‌ನಿಂದ ಹೊರಬಂದು ಏರ್‌ಟೆಲ್ ಚಂದಾದಾರರಾಗಲು ಯೋಜಿಸಿದ್ದಾರೆ. ಈ ಮೂಲಕ ರೈತ ಚಳವಳಿಯನ್ನು ಗಟ್ಟಿಗೊಳಿಸಲು, ಕಾರ್ಪೊರೇಟ್ ಕಂಪನಿಗಳನ್ನು ವಿರೋಧಿಸಲು ಸಜ್ಜಾಗಿದ್ದಾರೆ.

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಬಸರಾಜಪ್ಪನವರು “ಇವತ್ತು ಜಿಯೋ ಕಂಪನಿಯನ್ನು ಅಂಬಾನಿ ಕಂಪನಿಯೆಂದು ಹೇಳುವ ಬದಲು ಮೋದಿ ಕಂಪನಿಯೆಂದು ಹೇಳಬಹುದು. ಈ ಮೋದಿ ಇಂದು ಹೋರಾಟ ನಿರತ ರೈತರ ಹಕ್ಕೊತ್ತಾಯಗಳನ್ನು ಉದಾಸೀನ ಮಾಡುತ್ತಿದ್ದಾರೆ. ಅಲ್ಲದೇ ರೈತರನ್ನು ದೇಶದ್ರೋಹಿಗಳೆಂದು ಹಣೆಪಟ್ಟೆ ಕಟ್ಟಲಾಗುತ್ತಿದೆ. ಆದರೆ ದೇಶಕ್ಕೆ ಅನ್ನ ಕೊಡುವ ರೈತರು ದೇಶದ್ರೋಹಿಗಳಲ್ಲ. ರೈತರನ್ನು ಲೂಟಿ ಹೊಡೆಯುತ್ತಿರುವ ಅಂಬಾನಿ-ಅದಾನಿಗಳೇ ನಿಜವಾದ ದೇಶದ್ರೋಹಿಗಳು. ಹಾಗಾಗಿ ನಾವೆಲ್ಲರೂ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್ ಆಗುತ್ತಿದ್ದೇವೆ. ಇನ್ನು ಏರ್‌ಟೆಲ್‌ನವರೇನು ನಮ್ಮನ್ನು ಕರೆದಿಲ್ಲ. ನಾವೇ ರೈತರ ಶಕ್ತಿ ತೋರಿಸಲು ಈ ನಿರ್ಧಾರ ಕೈಗೊಂಡಿದ್ದೇವೆ. ಹಾಗಾಗಿ ನಾಡಿನ ರೈತರು ಮತ್ತು ಯುವಜನರು ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಎಚ್.ಆರ್ ಬಸವರಾಜಪ್ಪ

ಈಗಾಗಲೇ ಕಳೆದೊಂದು ತಿಂಗಳಿನಿಂದ ಬಾಯ್ಕಾಟ್ ಜಿಯೋ ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...