Homeಮುಖಪುಟರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ರೈತಸಂಘದ ನೂರಾರು ಕಾರ್ಯಕರ್ತರೊಂದಿಗೆ ಸಾಮೂಹಿಕವಾಗಿ Jio ಸಿಮ್‌ನಿಂದ ಪೋರ್ಟ್ ಆಗಲು ಮುಂದಾದ ಎಚ್‌.ಆರ್ ಬಸವರಾಜಪ್ಪ

ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಬಳಕೆದಾರರಿದ್ದರೆ ಜಿಯೋಗೆ 33.2% ಬಳಕೆದಾರರಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು. ಈಗ ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಲು ನಿರ್ಧರಿಸಿದ್ದಾರೆ.

ಡಿಸೆಂಬರ್ 28 ರಂದು ಶಿವಮೊಗ್ಗದ ಶಿವಮೂರ್ತಿ ಸರ್ಕಲ್‌ನಲ್ಲಿರುವ ಏರ್‌ಟೆಲ್ ಕಚೇರಿ ಮುಂದೆ ಜಮಾವಣೆಗೊಳ್ಳಲಿರುವ ನೂರಾರು ಕಾರ್ಯಕರ್ತರು ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ತಮ್ಮ ಜಿಯೋ ನಂಬರ್‌ನಿಂದ ಹೊರಬಂದು ಏರ್‌ಟೆಲ್ ಚಂದಾದಾರರಾಗಲು ಯೋಜಿಸಿದ್ದಾರೆ. ಈ ಮೂಲಕ ರೈತ ಚಳವಳಿಯನ್ನು ಗಟ್ಟಿಗೊಳಿಸಲು, ಕಾರ್ಪೊರೇಟ್ ಕಂಪನಿಗಳನ್ನು ವಿರೋಧಿಸಲು ಸಜ್ಜಾಗಿದ್ದಾರೆ.

ಈ ಕುರಿತು ನಾನುಗೌರಿ.ಕಾಂನೊಂದಿಗೆ ಮಾತನಾಡಿದ ಬಸರಾಜಪ್ಪನವರು “ಇವತ್ತು ಜಿಯೋ ಕಂಪನಿಯನ್ನು ಅಂಬಾನಿ ಕಂಪನಿಯೆಂದು ಹೇಳುವ ಬದಲು ಮೋದಿ ಕಂಪನಿಯೆಂದು ಹೇಳಬಹುದು. ಈ ಮೋದಿ ಇಂದು ಹೋರಾಟ ನಿರತ ರೈತರ ಹಕ್ಕೊತ್ತಾಯಗಳನ್ನು ಉದಾಸೀನ ಮಾಡುತ್ತಿದ್ದಾರೆ. ಅಲ್ಲದೇ ರೈತರನ್ನು ದೇಶದ್ರೋಹಿಗಳೆಂದು ಹಣೆಪಟ್ಟೆ ಕಟ್ಟಲಾಗುತ್ತಿದೆ. ಆದರೆ ದೇಶಕ್ಕೆ ಅನ್ನ ಕೊಡುವ ರೈತರು ದೇಶದ್ರೋಹಿಗಳಲ್ಲ. ರೈತರನ್ನು ಲೂಟಿ ಹೊಡೆಯುತ್ತಿರುವ ಅಂಬಾನಿ-ಅದಾನಿಗಳೇ ನಿಜವಾದ ದೇಶದ್ರೋಹಿಗಳು. ಹಾಗಾಗಿ ನಾವೆಲ್ಲರೂ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್ ಆಗುತ್ತಿದ್ದೇವೆ. ಇನ್ನು ಏರ್‌ಟೆಲ್‌ನವರೇನು ನಮ್ಮನ್ನು ಕರೆದಿಲ್ಲ. ನಾವೇ ರೈತರ ಶಕ್ತಿ ತೋರಿಸಲು ಈ ನಿರ್ಧಾರ ಕೈಗೊಂಡಿದ್ದೇವೆ. ಹಾಗಾಗಿ ನಾಡಿನ ರೈತರು ಮತ್ತು ಯುವಜನರು ರಿಲೆಯನ್ಸ್ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಮನವಿ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಎಚ್.ಆರ್ ಬಸವರಾಜಪ್ಪ

ಈಗಾಗಲೇ ಕಳೆದೊಂದು ತಿಂಗಳಿನಿಂದ ಬಾಯ್ಕಾಟ್ ಜಿಯೋ ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಜಿಯೋದಿಂದ ಹೊರನಡೆದ 26 ಲಕ್ಷ ಗ್ರಾಹಕರು: ರೈತರ ಬಾಯ್ಕಾಟ್ ಕರೆಗೆ Jio ಕಂಗಾಲು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...